Avatar

Shramitha bejja

ಹೈಕೋರ್ಟ್ ಆದೇಶ ಉಲ್ಲಂಘನೆ ಹಿಂದೂ ಮುಖಂಡ ಶರಣ್ ಪಂಪ್‌ವೆಲ್‌ಗೆ ₹2 ಲಕ್ಷ ದಂಡ!

ಚಿತ್ರದುರ್ಗ: ಹೈಕೋರ್ಟ್ ಆದೇಶವನ್ನು ಉಲ್ಲಂಘಿಸಿದ ಕಾರಣ ವಿಶ್ವ ಹಿಂದೂ ಪರಿಷತ್ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್‌ ಅವರಿಗೆ ಹೈಕೋರ್ಟ್ ₹2 ಲಕ್ಷ ರೂ. ದಂಡ ಹಾಕಿದೆ . ಕೋರ್ಟ್ ಬುಧವಾರ ನೀಡಿದ ಆದೇಶದ ಪ್ರಕಾರ, ದಂಡದ ಮೊತ್ತದಲ್ಲಿ ₹1 ಲಕ್ಷ ರಾಜ್ಯ ಲೀಗಲ್ ಸರ್ವೀಸ್ ಅಥಾರಿಟಿಗೆ ಮತ್ತು ₹1 ಲಕ್ಷ ಪೊಲೀಸ್ ಕ್ಷೇಮಾಭಿವೃದ್ಧಿ ನಿಧಿಗೆ ಪಾವತಿಸಬೇಕೆಂದು ನಿರ್ದೇಶಿಸಲಾಗಿದೆ. ಇತ್ತೀಚೆಗೆ ಚಿತ್ರದುರ್ಗದಲ್ಲಿ ನಡೆದ ಹಿಂದೂ ಮಹಾಗಣಪತಿ ಶೋಭಾಯಾತ್ರೆಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಶರಣ್ ಪಂಪ್‌ವೆಲ್ಅವರ ಜಿಲ್ಲೆ ಪ್ರವೇಶದ ಮೇಲೆ ನಿರ್ಬಂಧ…

Read More

ಕರ್ತವ್ಯ ಲೋಪ – ಪೋಕ್ಸೋ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ ರಾಘವೇಂದ್ರ ನೇಮಕಾತಿ ರದ್ದು.

ಉಡುಪಿ: ಜಿಲ್ಲಾ ಪೋಕ್ಸೊ ನ್ಯಾಯಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಕರ್ತವ್ಯದಲ್ಲಿದ್ದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ ರಾಘವೇಂದ್ರ ಅವರನ್ನು ಕರ್ತವ್ಯ ಲೋಪದ ಆರೋಪದಲ್ಲಿ ವಿಶೇಷ ಸರಕಾರಿ ಅಭಿಯೋಜಕ ಹುದ್ದೆಯ ಅವರ ನೇಮಕಾತಿಯನ್ನು ರದ್ದುಗೊಳಿಸಿ ಸೆ.29 ರಂದು ಸರಕಾರ ಆದೇಶ ಹೊರಡಿಸಿದೆ. ವಿಶೇಷ ಸರ್ಕಾರಿ ಅಭಿಯೋಜಕ ವೈ.ಟಿ. ರಾಘವೇಂದ್ರ ಇವರು ನ್ಯಾಯಾಲಯಕ್ಕೆ ಮಾಹಿತಿ ನೀಡದೇ ಮತ್ತು ಪರ್ಯಾಯ ವ್ಯವಸ್ಥೆ ಮಾಡದೆ ನ್ಯಾಯಾಲಯದ ಕಲಾಪದಂದು ಕರ್ತವ್ಯಕ್ಕೆ ಅನಧಿಕೃತ ಗೈರು ಹಾಜರಾಗಿರುತ್ತಾರೆ. ಜೊತೆಗೆ ಉಡುಪಿಯ ಮಹಿಳಾ ಠಾಣೆಯಲ್ಲಿ ಇವರ ವಿರುದ್ದ ಜಾತಿ ನಿಂದನೆ…

Read More

ಮಹೇಶ್ ಶೆಟ್ಟಿ ತಿಮರೋಡಿ ಬಂಧನ ಸಾಧ್ಯತೆ …. !

ಮಂಗಳೂರು: ಅಕ್ರಮ ಶಸ್ತ್ರಾಸ್ತ್ರ ಪ್ರಕರಣದಲ್ಲಿ ಆರೋಪಿ ಮಹೇಶ್ ಶೆಟ್ಟಿ ತಿಮರೋಡಿ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ಕೋರ್ಟ್ ವಜಾಗೊಳಿಸಿದ್ದು, ಅವರಿಗೆ ಬಂಧನ ಭೀತಿ ಎದುರಾಗಿದೆ. ಎರಡೂ ಕಡೆಯ ವಾದಗಳನ್ನು ಆಲಿಸಿದ ಬಳಿಕ ನ್ಯಾಯಾಲಯ ಈ ತೀರ್ಪು ನೀಡಿದೆ. ಕಳೆದ 20 ದಿನಗಳಿಂದ ತಲೆಮರೆಸಿಕೊಂಡಿದ್ದ ತಿಮರೋಡಿ, ಮುಂಚಿತ ಬಂಧನದಿಂದ ತಪ್ಪಿಸಿಕೊಳ್ಳಲು ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯವನ್ನು ಸಂಪರ್ಕಿಸಿದ್ದರು. ಆದರೆ ಕೋರ್ಟ್ ಅರ್ಜಿಯನ್ನು ತಿರಸ್ಕರಿಸಿದ್ದು, ಇದೀಗ ಅವರಿಗೆ ಹೈಕೋರ್ಟ್‌ನಲ್ಲಿ ಮರುಅರ್ಜಿ ಸಲ್ಲಿಸಲು…

Read More

ವಾರಗಳ ಹಿಂದೆ ಪರಾರಿಯಾಗಿದ್ದ ಇಬ್ಬರು ಗಾಂಜಾ ಮಾರಾಟಗಾರರ ಬಂಧನ.

ಬಂಟ್ವಾಳ: ಅಬಕಾರಿ ಪೋಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ವಾರಗಳ ಹಿಂದೆ ಪರಾರಿಯಾಗಿದ್ದ ಇಬ್ಬರು ಗಾಂಜಾ ಮಾರಾಟಗಾರರನ್ನು ಬಂಟ್ವಾಳ ಪೋಲೀಸರು ಬಂಧಿಸಿ, ಬಂಧಿತರಿಂದ ಲಕ್ಷಾಂತರ ರೂ ಮೌಲ್ಯದ ಸೊತ್ತು ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ. ಅಬ್ದುಲ್ ಮಜೀದ್ ಹಾಗೂ ಸಹಸವಾರ ಅಬ್ದುಲ್ ಸಾಧಿಕ್ ಎಂಬವರನ್ನು ಪೋಲೀಸರು ವಶಕ್ಕೆ ಪಡೆದುಕೊಂಡಿದ್ದು, ಬಂಧಿತರಿಂದ ಗಾಂಜಾ ಸಹಿತ ಒಟ್ಟು 2,17,460 ಲಕ್ಷ ರೂ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದಿದ್ಧಾರೆ. ಸೆ. 25 ರಂದು ಈ ಇಬ್ಬರು ಆರೋಪಿಗಳು ಪಿಕಪ್ ವಾಹನದಲ್ಲಿ ನಿಷೇಧಿತ ಗಾಂಜಾವನ್ನು ಸಾಗಿಸುತ್ತಿರುವ…

Read More

ಮಣಿಪಾಲ: ಮನೆಯಲ್ಲಿ ಗಾಂಜಾ ಮಾರಾಟ; ಯುವಕನ ಬಂಧನ

ಉಡುಪಿ: ಮನೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನನ್ನು ಮಣಿಪಾಲ ಪೊಲೀಸರು ಬಂಧಿಸಿದ ಘಟನೆ ಮಣಿಪಾಲ 80 ಬಡಗಬೆಟ್ಟು ಗ್ರಾಮದ ರಾಜೀವನಗರದಲ್ಲಿ ನಡೆದಿದೆ.ಆಂಧ್ರಪ್ರದೇಶ ಮೂಲದ ಸೀತಾರಾಮ ರೆಡ್ಡಿ ತೌಟರೆಡ್ಡಿ (21) ಬಂಧಿತ ಆರೋಪಿ. ಖಚಿತ ಮಾಹಿತಿಯ ಆಧಾರದ ಮೇಲೆ ದಾಳಿ ನಡೆಸಿದ ಮಣಿಪಾಲ ಪೊಲೀಸ್‌ ಉಪನಿರೀಕ್ಷಕಿ ಅಕ್ಷಯಕುಮಾರಿ ಎಸ್.ಎನ್‌. ಅವರ ನೇತೃತ್ವದ ಪೊಲೀಸರ ತಂಡವು ಅ.8ರಂದು ಸಂಜೆ 80 ಬಡಗಬೆಟ್ಟು ಗ್ರಾಮದ ರಾಜೀವನಗರದ ಮಾತಪಿತಾ ಮನೆಯಲ್ಲಿ ಆರೋಪಿಯನ್ನು ಬಂಧಿಸಿದೆ.ಆರೋಪಿ ಮೇಘಾಲಯದಿಂದ ಆನ್‌ಲೈನ್ ಆಪ್ (ರೆಡಿಟ್) ಮುಖಾಂತರ ಗಾಂಜಾ ಖರೀದಿ…

Read More

ಶಿರ್ವ: ಗಾಂಜಾ ಮಾರಾಟಕ್ಕೆ ಯತ್ನ; ಇಬ್ಬರ ಬಂಧನ

ಉಡುಪಿ: ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೊಡವೂರು ಲಕ್ಷ್ಮೀನಗರ ನಿವಾಸಿ ಅಭಿಷೇಕ್ ಪಾಲನ್ (30) ಮತ್ತು ಕೊಳಲಗಿರಿಯ ಆರ್. ಶಾಶ್ವತ್(24) ಬಂಧಿತ ಆರೋಪಿಗಳು. ಬೆಳಪು ಇಂಡಸ್ಟ್ರಿಯಲ್ ಏರಿಯಾ ಕ್ರಾಸ್ ರಸ್ತೆ ಬಳಿ ಗಾಂಜಾ ಮಾರಾಟ ಮಾಡುವ ಬಗ್ಗೆ ದೊರೆತ ಮಾಹಿತಿ ಮೇರೆಗೆ ದಾಳಿ ನಡೆಸಿದ ಶಿರ್ವ ಪೊಲೀಸ್ ಠಾಣಾ ಉಪನಿರೀಕ್ಷಕರಾದ ಮಂಜುನಾಥ ಮರಬದ ನೇತೃತ್ವದ ತಂಡವು ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಬಂಧಿತರಿಂದ 5 ಸಾವಿರ ರೂ. ಮೌಲ್ಯದ 115.44 ಗ್ರಾಂ ಗಾಂಜಾ,…

Read More

ಮಂಗಳೂರು ಜನತೆಗೆ ಸಮಸ್ಯೆ ತಂದೊಡ್ಡಿದ ಅವೈಜ್ಞಾನಿಕ ಸಮೀಕ್ಷೆ :- ಶಾಸಕ ಕಾಮತ್

ರಾಜ್ಯ ಕಾಂಗ್ರೆಸ್ ಸರ್ಕಾರ ಕೈಗೊಂಡಿರುವ ಅವೈಜ್ಞಾನಿಕ ಜಾತಿ ಸಮೀಕ್ಷೆಯಿಂದಾಗಿ ಮಂಗಳೂರಿನ ಜನತೆ ತೀವ್ರ ಸಮಸ್ಯೆ ಅನುಭವಿಸುತ್ತಿದ್ದು ಅಗತ್ಯ ಕೆಲಸಗಳಿಗಾಗಿ ಸಾರ್ವಜನಿಕರು ಪರದಾಡುವಂತಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಮಂಗಳೂರು ಮಹಾನಗರ ಪಾಲಿಕೆ, ತಾಲೂಕು ಕಚೇರಿ ಸೇರಿದಂತೆ ಎಲ್ಲಾ ಇಲಾಖೆಯ ಡಾಟಾ ಎಂಟ್ರಿ ಆಪರೇಟರ್ ಗಳು, ಕಿರಿಯ ಇಂಜಿನಿಯರ್ ಗಳ ಗ್ರಾಮ ಲೆಕ್ಕಾಧಿಕಾರಿಗಳು, ಹೀಗೆ ಬಹುತೇಕ ಸಿಬ್ಬಂದಿಗಳನ್ನು ಹಾಗೂ ಶಾಲಾ ಶಿಕ್ಷಕರನ್ನು ಅವೈಜ್ಞಾನಿಕ ಸಮೀಕ್ಷೆಗೆ ಬಳಸಿಕೊಂಡಿರುವುದು ಇಡೀ ಜಿಲ್ಲೆಯ ವ್ಯವಸ್ಥೆ ಹದಗೆಡಲು ಕಾರಣವಾಗಿದೆ….

Read More

ಗೆಳೆಯರಿಂದಲೇ ಖಾಸಗಿ ವಿಡಿಯೋ ಸೋರಿಕೆ ಬೆದರಿಕೆ- ಬೆಳ್ಮಣ್ ಲಾಡ್ಜ್‌ನಲ್ಲಿ ಮನನೊಂದ ಯುವಕ ಆತ್ಮಹತ್ಯೆಗೆ ಶರಣು .. !

ಕಾರ್ಕಳ: ತನ್ನ ಸ್ನೇಹಿತೆಯೊಂದಿಗೆ ಇರುವ ಖಾಸಗಿ ವಿಡಿಯೋವನ್ನು ಸೋರಿಕೆ ಮಾಡುವುದಾಗಿ ಸ್ನೇಹಿತರು ಬೆದರಿಕೆ ಹಾಕಿದ ಹಿನ್ನಲೆಯಲ್ಲಿ ಯುವಕನೊಬ್ಬ ಲಾಡ್ಜ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ಗುರುವಾರ ಸಂಜೆ ಬೆಳ್ಮಣ್ನ ಖಾಸಗಿ ಲಾಡ್ಜ್‌ನಲ್ಲಿ ನಡೆದಿದೆ. ಮೃತನನ್ನು ನಿಟ್ಟೆ ಗ್ರಾಮದ ಪರಪ್ಪಾಡಿ ನಿವಾಸಿ ಅಭಿಷೇಕ್ ಆಚಾರ್ಯ (23) ಎಂದು ಗುರುತಿಸಲಾಗಿದೆ. ಅಭಿಷೇಕ್ ಮಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದರು ಮತ್ತು ಸ್ಥಳೀಯ ಯುವತಿಯನ್ನು ಪ್ರೀತಿಸುತ್ತಿದ್ದ ಎಂದು ತಿಳಿದು ಬಂದಿದೆ . ಅವರ ಸಂಬಂಧವು ದೈಹಿಕ ಅನ್ಯೋನ್ಯತೆಗೆ ಮುಂದುವರೆದಿದ್ದು, ಇಬ್ಬರೂ…

Read More

ಅ.11 ಮತ್ತು 12ರಂದು ಬ್ರಹ್ಮಾವರದಲ್ಲಿ ಕೃಷಿ ಮೇಳ-2025″

ಉಡುಪಿ: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯದ ಅಂಗ ಸಂಸ್ಥೆಗಳಾದ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಬ್ರಹ್ಮಾವರ, ಕೃಷಿ ವಿಜ್ಞಾನ ಕೇಂದ್ರ ಮತ್ತು ಡಿಪ್ಲೋಮಾ ಕೃಷಿ ಮಹಾವಿದ್ಯಾಲಯ ಬ್ರಹ್ಮಾವರ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಇದೇ ಅ.11 ಮತ್ತು 12ರಂದು ಎರಡು ದಿನಗಳ “ಕೃಷಿ ಮೇಳ-2025″ ಕಾರ್ಯಕ್ರಮವನ್ನು ಬ್ರಹ್ಮಾವರದ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಡಿಪ್ಲೋಮಾ ಕೃಷಿ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಕೆ.ವಿ….

Read More

ಅ.11-12ರಂದು ಉಡುಪಿಯಲ್ಲಿ “ಕೆನರಾ ರಿಟೈಲ್ ಮೇಳ-2025”

ಉಡುಪಿ: ಕೆನರಾ ಬ್ಯಾಂಕ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ “ಕೆನರಾ ರಿಟೈಲ್ ಮೇಳ-2025” ಅನ್ನು ಇದೇ ಅ.11ಮತ್ತು 12ರಂದು ಉಡುಪಿ ಎಂಜಿಎಂ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಕೆನರಾ ಬ್ಯಾಂಕ್ ಮಣಿಪಾಲ ಸರ್ಕಲ್ ಕಚೇರಿಯ ಜನರಲ್ ಮ್ಯಾನೇಜರ್ ಎಚ್.ಕೆ. ಗಂಗಾಧರ್ ತಿಳಿಸಿದರು. ಉಡುಪಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಎರಡು ದಿನಗಳ ಮೇಳವು ಬೆಳಿಗ್ಗೆ 9.30ರಿಂದ ಸಂಜೆ 6.30ರ ವರೆಗೆ ನಡೆಯಲಿದೆ. ಈ ಮೇಳದಲ್ಲಿ ಭಾಗವಹಿಸಲು ಮುಕ್ತ ಅವಕಾಶ ಕಲ್ಪಿಸಲಾಗಿದೆ. ಯಾವುದೇ ಪ್ರವೇಶ ಶುಲ್ಕ…

Read More
error: Content is protected !!