Avatar

Shramitha bejja

“ಪೀಸ್ ಟ್ಯಾಲೆಂಟ್ ಹಂಟ್” ಸಾಂಸ್ಕೃತಿಕ ಕಾರ್ಯಕ್ರಮ.

ಮಂಜೇಶ್ವರ : ಕಳೆದ ಸುಮಾರು 17 ವರ್ಷಗಳಿಂದ ವಿದ್ಯಾಭ್ಯಾಸ ಕ್ಷೇತ್ರದಲ್ಲಿ ವಿಶೇಷ ಗಮನ ಸೆಳೆಯಿತ್ತಿರುವ ಹೊಸಂಗಡಿ ಪೀಸ್ ಕ್ರಿಯೇಟಿವ್ ಆಂಗ್ಲ ಮಾಧ್ಯಮ ಕೇಂದ್ರೀಯ ಶಾಲಾ ವಿದ್ಯಾರ್ಥಿಗಳು ತಮ್ಮ ಅನೇಕ ಪ್ರತಿಭೆಗಳ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ನೂತನ ಮೈಲಿಗಲ್ಲುಗಳನ್ನು ಸೃಷ್ಟಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಗಳವಾರ ನಡೆದ “ಪೀಸ್ ಟ್ಯಾಲೆಂಟ್ ಹಂಟ್” ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ವಿವಿಧ ಕಲೆಗಳನ್ನು ಪ್ರದರ್ಶಿಸಿ ಪ್ರೇಕ್ಷಕರ ಪ್ರಶಂಶೆಗೆ ಪಾತ್ರರಾದರು. ಸಕಲ ಸಿದ್ಧತೆಗಳೊಂದಿಗೆ ಅದ್ದೂರಿಯಾಗಿ ನಡೆದ ಕಾರ್ಯಕ್ರಮಕ್ಕೆ ಶೈಕ್ಷಣಿಕ ಕ್ಷೇತ್ರದ ಶಿಸ್ತು ಪಾಲನೆಯಲ್ಲಿ ಗಿನ್ನೆಸ್ ವರ್ಲ್ಡ್…

Read More

ಡಾ. ಕೆರೆಮನೆ ಮಹಾಬಲ ಹೆಗಡೆ ಸ್ಮಾರಕ ರಂಗ ಪ್ರತಿಷ್ಠಾನ(ರಿ)ದಿಂದ ಎಲ್. ಎಸ್. ಶಾಸ್ತ್ರಿ ಅವರಿಗೆ “ಮಹಾಬಲ ಪ್ರಶಸ್ತಿ”

ಪ್ರಸಿದ್ಧ ಯಕ್ಷಗಾನ ಕಲಾವಿದ ಡಾ. ಕೆರೆಮನೆ ಮಹಾಬಲ ಹೆಗಡೆಯವರ 16ನೆಯ ಸಂಸ್ಮರಣಾ ದಿನ ಮತ್ತು ಕೆರೆಮನೆ ರಾಮ ಹೆಗಡೆಯವರ 6 ನೆಯ ಸಂಸ್ಮರಣಾ ದಿನಗಳ ಅಂಗವಾಗಿ ಇದೇ ಒ.18 ರಂದು ರಂದು ಸಂಜೆ 4 ಗಂಟೆಗೆ ಹೊನ್ನಾವರ ತಾಲೂಕು ಗುಣವಂತೆಯ ಕೆರೆಮನೆ ಶಿವರಾಮ ಹೆಗಡೆ ರಂಗಮಂದಿರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಸಾಹಿತಿ, ರಂಗಚಿಂತಕ ಶ್ರೀ ಲಕ್ಷ್ಮೀನಾರಾಯಣ ಶಾಸ್ತ್ರಿ , ನಾಜಗಾರ ( ಬೆಳಗಾವಿ) ಇವರಿಗೆ ಈ ವರ್ಷದ ” ಮಹಾಬಲ ಪ್ರಶಸ್ತಿ ” ನೀಡಿ ಗೌರವಿಸಲಾಗುವುದು….

Read More

ತುಂಬೆ: ಶ್ರೀ ಶಾರದಾ ಸಮುದಾಯ ಭವನ ಲೋಕಾರ್ಪಣಾ ಕಾರ್ಯಕ್ರಮ.

ಬಂಟ್ವಾಳ: ತುಂಬೆ ರಾಮಲ್ ಕಟ್ಟೆ ಶ್ರೀ ಶಾರದಾ ಸೇವಾ ಪ್ರತಿಷ್ಠಾನ (ರಿ.) ಶ್ರೀ ಶಾರದಾ ರಜತ ಮಹೋತ್ಸವ ಸಮಿತಿ ಇದರ ವತಿಯಿಂದ ತುಂಬೆ ಶ್ರೀರಾಮ ನಗರ ರಾಮಲ್ ಕಟ್ಟೆಯಲ್ಲಿ ಸುಮಾರು 1.5ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ಶಾರದಾ ಸಮುದಾಯ ಭವನವನ್ನು ಸೆ 28ರಂದು ಆದಿತ್ಯವಾರ ಮಂಗಳೂರು ಎಸ್ ಸಿ ಡಿ ಸಿ ಸಿ ಬ್ಯಾಂಕ್ ಅಧ್ಯಕ್ಷರಾದ ಡಾ ಎಂ ಎನ್ ರಾಜೇಂದ್ರ ಕುಮಾರ್ ಉದ್ಘಾಟಿಸಿ ಲೋಕಾರ್ಪಣೆಗೊಳಿಸಿದರು. ಬಳಿಕ ಮಾತನಾಡಿದ ಅವರು, ಶಾಂತಿ ಪ್ರಿಯರಾದ ನಾವು ಎಲ್ಲರನ್ನು…

Read More

ಕನ್ನಡ ಭವನ ಪ್ರಕಾಶನದ “ಮರೆಯಲಾಗದವರು “9ನೇ ಕೃತಿ ಬಿಡುಗಡೆ.

ಕಾಸರಗೋಡು : ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಶ್ರೀ ಸುಬ್ರಮಣ್ಯ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ನಡೆಯುತ್ತಿರುವ “ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವ 2025.ವೇದಿಕೆಯಲ್ಲಿ ಆದರ್ಶ ಮಹಿಳೆ, ಮೇರು ಯಕ್ಷಗಾನ ಕಲಾವಿದೆ, ಉದ್ಯಮಿ, ಸಾಮಾಜಿಕ ಕಾರ್ಯಕರ್ತೆ ದಿ. ಶ್ರೀಮತಿ ಗಾಯತ್ರಿ ನಾಗೇಶ್ ಇವರ ಸಂಸ್ಮರಣೆ -ನುಡಿನಮನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮ ದಲ್ಲಿ ಗಾಯತ್ರಿ ನಾಗೇಶ್ ಇವರ ಬಗ್ಗೆ ಕಾಸರಗೋಡು ಕನ್ನಡ ಭವನ ಪ್ರಕಾಶನದ ಪ್ರಕಾಶಕಿ ಸಂಧ್ಯಾರಾಣಿ ಟೀಚರ್ ರಚಿಸಿದ “ಮರೆಯಲಾಗದವರು “ಎಂಬ ವ್ಯಕ್ತಿ ಚಿತ್ರಣ ಕೃತಿ ಬಿಡುಗಡೆ ಗೊಳಿಸಲಾಯಿತು. ರಾಮರಾಜ…

Read More

ಪೆಟ್ರೋಲ್‌ ಕಳ್ಳತನ ಪ್ರಕರಣ: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ.

ಬೆಳ್ತಂಗಡಿ: ನೆರಿಯ ಪೆಟ್ರೋನೆಟ್ ಪೈಪ್ ಲೈನ್ ನಿಂದ 2010 ರಲ್ಲಿ ಪೆಟ್ರೋಲ್ ಕಳ್ಳತನ ಪ್ರಕರಣದಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.ಬೆಳ್ತಂಗಡಿ ತಾಲೂಕಿನ ಚಿಬಿದ್ರೆ ನಿವಾಸಿ ತಮ್ಮಯ್ಯ(35) ಬಂಧಿತ ಆರೋಪಿ . ಮಂಗಳೂರು ನಗರದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆ.28 ರಂದು ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದವನನ್ನು ನೋಡಿ ಸುರತ್ಕಲ್ ಪೊಲೀಸ್ ಠಾಣೆಯ ಸಿಬ್ಬಂದಿ ಉಮೇಶ್ ಅವರು ವಶಕ್ಕೆ…

Read More

ಕ್ರೀಡೆಗಳು ಮನೋಸ್ಥೈರ್ಯ ಹಾಗೂ ಶಾರೀರಿಕ ದೃಢತೆಯನ್ನು ಹೆಚ್ಚಿಸುತ್ತದೆ : ಶ್ರೀನಿವಾಸ್ ರಾವ್

ಆನೆಕಲ್ಲು: ” ಕ್ರೀಡೆಗಳು ಮಾನಸಿಕ ಸ್ಥೈರ್ಯದೊಂದಿಗೆ ಶಾರೀರಿಕ ದೃಢತೆಯನ್ನು ಹೆಚ್ಚಿಸಲು ಸಹಕಾರಿಯಾಗುತ್ತದೆ.ಆದ್ದರಿಂದ ಪ್ರಾಥಮಿಕ ಹಂತದಲ್ಲೇ ಮಕ್ಕಳಿಗೆ ಕ್ರೀಡಾ ತರಬೇತಿ ಉತ್ತಮ ರೀತಿಯಲ್ಲಿ ಸಿಗುವಂತಾಗಬೇಕು” ಎಂದು ಎ ಯು ಪಿ ಶಾಲೆ ಬಾಕ್ರಬೈಲ್ ನ ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀನಿವಾಸ್ ರಾವ್ ತಿಳಿಸಿದರು.ಅವರು ಎ.ಯು.ಪಿ ಶಾಲೆ ಆನೆಕಲ್ಲಿನಲ್ಲಿ ಜರಗಿದ ಶಾಲಾ ಮಟ್ಟದ ಕ್ರೀಡೋತ್ಸವನ್ನು ಉದ್ಘಾಟಿಸಿ ಮಾತನಾಡಿದರು. ಹಳೆ ವಿದ್ಯಾರ್ಥಿ ಕುಮಾರಿ ಹರಿಣಾಕ್ಷಿ ಟೀಚರ್ ಮಾತನಾಡಿ ,”ಕ್ರೀಡೆಗಳು ಮಾನಸಿಕ ಒತ್ತಡವನ್ನು ನಿಯಂತ್ರಿಸುವುದರೊಂದಿಗೆ ಉತ್ತಮ ಆರೋಗ್ಯವನ್ನು ನೀಡುತ್ತದೆ.ಆದುದರಿಂದ ಶಾಲಾ ಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸಿ…

Read More

ಕಾಸರಗೋಡು: ಡಿವೈಎಫ್‌ಐ ಸಕ್ರಿಯ ನಾಯಕಿ , ಯುವ ವಕೀಲೆ ಆತ್ಮಹತ್ಯೆಗೆ ಶರಣು …. !

ಕಾಸರಗೋಡು: ಡಿವೈಎಫ್‌ಐ ನಾಯಕಿ ಹಾಗು ಯುವ ವಕೀಲೆ ರಂಜಿತಾ ಕುಮಾರಿ (30) ಮಂಗಳವಾರ ಸಂಜೆ ಕುಂಬ್ಳೆಯ ಬಥೇರಿಯಲ್ಲಿರುವ ತಮ್ಮ ಕಚೇರಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಬೆಳಕಿಗೆ ಬಂದಿದೆ. ಪೊಲೀಸರು ಹೇಳುವಂತೆ , ಅವರು ತಮ್ಮ ಕಚೇರಿಯೊಳಗಿನ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸಂಜೆಯಿಂದ ಅವರಿಗೆ ಕರೆ ಮಾಡಲು ಪ್ರಯತ್ನಿಸಿದರೂ ಯಾವುದೇ ಪ್ರತಿಕ್ರಿಯೆ ಬಾರದ ಕುಟುಂಬ ಸದಸ್ಯರು ಅವರ ಕಚೇರಿಗೆ ಹೋದಾಗ ಬಾಗಿಲು ಒಳಗಿನಿಂದ ಚಿಲಕ ಹಾಕಿರುವುದನ್ನು ಕಂಡುಕೊಂಡರು. ಅವರು ಪೊಲೀಸರಿಗೆ ಮಾಹಿತಿ…

Read More

ಜೆಪ್ಪು ಮಹಾಕಾಳಿಪಡ್ಡು ಅಂಡರ್ಬ್ರಿಜ್ ಕಾಮಗಾರಿ ಪೂರ್ಣಗೊಳ್ಳದೇ ಉಂಟಾಗಿರುವ ತೊಂದರೆಯ ಬಗ್ಗೆ ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ರೈಲ್ವೆ ಇಲಾಖೆಯ ನಿಧಾನಗತಿಯ ಕಾಮಗಾರಿಯನ್ನು ಖಂಡಿಸಿ ಪ್ರತಿಭಟನೆ

ಮಂಗಳೂರು :ಜೆಪ್ಪು ಮಹಾಕಾಳಿಪಡ್ಡು ಅಂಡರ್ಬ್ರಿಜ್ ಕಾಮಗಾರಿ ಪೂರ್ಣಗೊಳ್ಳದೇ ಉಂಟಾಗಿರುವ ತೊಂದರೆಯ ಬಗ್ಗೆ ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ರೈಲ್ವೆ ಇಲಾಖೆಯ ನಿಧಾನಗತಿಯ ಕಾಮಗಾರಿಯನ್ನು ಖಂಡಿಸಿ ಪ್ರತಿಭಟನೆ ನಡೆಸಲಾಯಿತು. ಕಳೆದ 4 ವರ್ಷಗಳ ಹಿಂದೆ ಜೆಪ್ಪು ಮಹಾಕಾಳಿಪಡ್ಡು ಅಂಡರ್ಬ್ರಿಜ್ ಕಾಮಗಾರಿ ಪೂರ್ಣಗೊಂಡಿದ್ದರೂ, ಇನ್ನು ಅದನ್ನು ಸಾರ್ವಜನಿಕರಿಗೆ ಬಿಟ್ಟುಕೊಡದೇ ಇದ್ದು ಇಲ್ಲಿ ನೀರು ತುಂಬಿ ಅವೈಜ್ಞಾನಿಕವಾಗಿ ಕಾಮಗಾರಿ ನಡೆಸಿದ ಬಗ್ಗೆ ದೂರುಗಳು ಇದ್ದರೂ ರೈಲ್ವೆ ಇಲಾಖೆಯವರು ಸಾರ್ವಜನಿಕ ಉಪಯೋಗಕ್ಕೆ ಬಿಟ್ಟುಕೊಡದೇ ಇರುವುದನ್ನು ಖಂಡಿಸಿ ಮಂಗಳೂರು ದಕ್ಷಿಣ ಬ್ಲಾಕ್…

Read More

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು.

ಬೆಂಗಳೂರು:ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ಮಂಗಳವಾರ ಖರ್ಗೆ ಅವರು ಉತ್ಸಾಹದಿಂದ ರಾಜಕೀಯ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು. 83 ರ ಹರೆಯದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಬಳಿಕ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪರೀಕ್ಷಿಸಿದ ವೈದ್ಯರು ಚಿಕಿತ್ಸೆಗಾಗಿ ದಾಖಲಿಸಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Read More

ಕೆಂಪು ಕಲ್ಲಿನ ಸಮಸ್ಯೆಗೆ ಮುಕ್ತಿ ಸಿಕ್ಕಿದೆ – ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ.

ಪುತ್ತೂರು:ಕೆಂಪು ಕಲ್ಲಿನ ವಿಚಾರದಲ್ಲಿ ಜನರಿಗೆ ಗೊಂದಲಗಳಿತ್ತು.ಸರಕಾರದ ಮಟ್ಟದಲ್ಲಿ ಚರ್ಚೆ ಮಾಡಿ, ಕೆಂಪು ಕಲ್ಲು ತೆಗೆಯುವ ಎಲ್ಲಾ ಸಂಘದ ಪ್ರಮುಖ ಮೂರು ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸಿದೆ.ಹೊಸ ಲೈಸನ್ಸ್ ಹಾಗೂ ಲೈಸನ್ಸ್‌ಗಳ ನವೀಕರಣವೂ ಮಾಡಲಾಗುತ್ತಿದೆ.ಇನ್ನು ಮುಂದೆ ಯಾರು ಕೂಡ ಲೈಸನ್ಸ್ ಪಡೆದು ಕೆಂಪು ಕಲ್ಲಿನ ವ್ಯವಹಾರ ನಡೆಸಬಹುದು ಎಂದು ಪುತ್ತೂರು ಶಾಸಕ ಅಶೋಕ್‌ ಕುಮಾರ್ ರೈ ಹೇಳಿದರು. ಕೆಂಪು ಕಲ್ಲಿನ ಸಮಸ್ಯೆ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಿದ ನಂತರ ಕೆಂಪು ಕಲ್ಲು ತೆಗೆಯುವವರ ಸಂಘಗಳ ಸದಸ್ಯರ ಸಭೆಯನ್ನು ಕರೆದಾಗ…

Read More
error: Content is protected !!