Avatar

Shramitha bejja

ಖಾಸಗಿ ಬಸ್ ಸ್ಟೇರಿಂಗ್ ದೋಷದಿಂದ ಜೀಪ್ ಗೆ ಡಿಕ್ಕಿ. ಜೀಪ್ ಚಾಲಕ ಗಾಯ.

ಬಂಟ್ವಾಳ: ಖಾಸಗಿ ಬಸ್ ಒಂದರ ಸ್ಟೇರಿಂಗ್ ನ ದೋಷ ದಿಂದಾಗಿ ಜೀಪ್ ಗೆ ಡಿಕ್ಕಿ ಹೊಡೆದ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಜೀಪ್ ಚಾಲಕನಿಗೆ ಗಾಯವಾಗಿದ್ದು ಮೂಡಬಿದಿರೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಜಗನ್ನಾಥ ಎಂಬವರು ಜೀಪ್ ಚಲಾಯಿಸಿಕೊಂಡು ಬಂಟ್ವಾಳದಿಂದ ಮೂಡಬಿದರೆಗೆ ಹೋಗುತ್ತಿರುವ ವೇಳೆ ವೇಣೂರು ನಮನ ಕ್ಲಿನಿಕ್ ಬಳಿ ಬೆಳ್ತಂಗಡಿ ಕಡೆಯಿಂದ ಮೂಡಬಿದರೆಗೆ ಬರುವ ಬಸ್ ನ ಸ್ಟೇರಿಂಗ್ ನಲ್ಲಿ ತಾಂತ್ರಿಕ ದೋಷಗಳು‌ ಉಂಟಾಗಿ ಚಾಲಕನ ನಿಯಂತ್ರಣ ಬಾರದೆ ಬಸ್ ಎದುರುಕಡೆಯಿಂದ ಬರುತ್ತಿದ್ದ ಜೀಪಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ…

Read More

ರಾಮಕ್ಷತ್ರಿಯ ಸೇವಾ ಸಂಘದಿಂದ ಸೆಪ್ಟೆಂಬರ್ 28ರಂದು “ಅಭಿನಂದನಾ ಸಮಾರಂಭ” ಕಾರ್ಯಕ್ರಮ.

ಮಂಗಳೂರು: ರಾಮಕ್ಷತ್ರಿಯ ಸೇವಾ ಸಂಘ (ರಿ.), ಮಂಗಳೂರು ವತಿಯಿಂದ “ಅಭಿನಂದನಾ ಸಮಾರಂಭ” ಕಾರ್ಯಕ್ರಮವನ್ನು ಸೆಪ್ಟೆಂಬರ್ 28ರಂದು ಆದಿತ್ಯವಾರ ಬೆಳಿಗ್ಗೆ 10 ಗಂಟೆಗೆ ಮೋರ್ಗನ್ಸ್ ಗೇಟ್‌ನ ಪಾಲೆಮಾರ್ ಗಾರ್ಡನ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ತಿಳಿಸಿದರು. ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 75 ವರ್ಷಗಳ ಪರಂಪರೆಯ ಈ ಸಂಘವು ಸಮಾಜಮುಖಿ ಚಟುವಟಿಕೆಗಳ ಮೂಲಕ ವೈದ್ಯಕೀಯ ಸಹಾಯ, ವಿದ್ಯಾಧನ, ರಕ್ತದಾನ, ಪ್ರತಿಭಾ ಪುರಸ್ಕಾರ ಮತ್ತು ಧಾರ್ಮಿಕ-ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ ಎಂದು…

Read More

ಮಂಜೇಶ್ವರ ಗ್ರಾಮ ಪಂಚಾಯತ್ ಮತ್ತು ಕುಟುಂಬಶ್ರೀ ಸಿಡಿಎಸ್ ಸಂಯುಕ್ತ ಆಶ್ರಯದಲ್ಲಿ ‘ಉದ್ಯೋಗ ಮೇಳ’

ಮಂಜೇಶ್ವರ ಗ್ರಾಮ ಪಂಚಾಯತ್ ಮತ್ತು ಕುಟುಂಬಶ್ರೀ ಸಿಡಿಎಸ್ ಸಂಯುಕ್ತವಾಗಿ ವಿಜ್ಞಾನಕೇರಳ ಯೋಜನೆಯ ಭಾಗವಾಗಿ ಉದ್ಯೋಗ ಮೇಳ ಮಂಜೇಶ್ವರದಲ್ಲಿ ಆಯೋಜಿಸಲಾಯಿತು.ಮಂಜೇಶ್ವರ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮೊಹಮ್ಮದ್ ಸಿದ್ಧಿಕ್ ಅವರು ಉದ್ಘಾಟನೆ ನೆರವೇರಿಸಿದರು. ಗ್ರಾಮ ಪಂಚಾಯತ್ ಸದಸ್ಯರಾದ ಮುಂತಾಜ್ ಸಮೀರ, ರಾಜೇಶ್ ಅವರು ಶುಭಾಶಯ ಸಂದೇಶಗಳನ್ನು ನೀಡಿ ಮಾತನಾಡಿದರು. ಅದೇ ರೀತಿ ವಾರ್ಡ್ ಸದಸ್ಯರಾದ ಲಕ್ಷ್ಮಣನ್, ವಿನಯ ಭಾಸ್ಕರ್, ಆದರ್ಶ್, ಮುಸ್ತಫಾ ಅವರು ಸಹ ಪಾಲ್ಗೊಂಡರು.ಸುಮಾರು 200 ಉದ್ಯೋಗಾಕಾಂಕ್ಷಿಗಳು ಮೇಳದಲ್ಲಿ ಭಾಗವಹಿಸಿದರು. 20 ಕ್ಕೂ ಹೆಚ್ಚು ಕಂಪನಿಗಳು ಪಾಲ್ಗೊಂಡ ಈ…

Read More

ಸೆಪ್ಟೆಂಬರ್ 30 ರಂದು ಕುಡ್ಲದ ಪಿಲಿಪರ್ಬ- 4 ನೇ ಆವೃತ್ತಿ:-

ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಮಾಜಿ ಸಂಸದ ಶ್ರೀ ನಳಿನ್ ಕುಮಾ‌ರ್ ಕಟೀಲ್ ಮಾರ್ಗದರ್ಶನದಲ್ಲಿ ಕುಡ್ಲದ ಪಿಲಿಪರ್ಬದ ನಾಲ್ಕನೇ ಆವೃತ್ತಿಯ ಸ್ಪರ್ಧಾಕೂಟವು ಇದೇ ಸಪ್ಟೆಂಬರ್ 30 ರಂದು ಮಂಗಳೂರಿನ ಕೇಂದ್ರ ಮೈದಾನದಲ್ಲಿ ಬೆಳಗ್ಗೆ 9.30 ಕ್ಕೆ ಉದ್ಘಾಟನೆಗೊಳ್ಳಲಿದೆ ಎಂದು ಶಾಸಕ ಶ್ರೀ ಡಿ. ವೇದವ್ಯಾಸ್ ಕಾಮತ್ ರವರು ಹೇಳಿದರು. ನಂತರ ಮಾತನಾಡಿದ ಅವರು, ಬೆಳಿಗ್ಗೆ 10 ಗಂಟೆಗೆ ಸರಿಯಾಗಿ ಭವ್ಯ ವಿಶಾಲ ವೇದಿಕೆಯಲ್ಲಿ ಆರಂಭಗೊಳ್ಳಲಿರುವ ಸ್ಪರ್ಧಾಕೂಟದಲ್ಲಿ ಕರಾವಳಿ ಭಾಗದ ಅತ್ಯಂತ ಜನಪ್ರಿಯ ಎಂಬ ಹೆಗ್ಗಳಿಕೆ ಹೊಂದಿರುವ 10…

Read More

‘ ಟೈಮ್ ಪಾಸ್’ ಕನ್ನಡ ಚಲನಚಿತ್ರ ಅಕ್ಟೋಬರ್ 17 ರಂದು ‌ಕರ್ನಾಟಕದಾದ್ಯಂತ ಬಿಡುಗಡೆ.

ಶ್ರೀ ಚೇತನ ಸರ್ವಿಸಸ್ ಬ್ಯಾನರ್ ಮೂಲಕ ಗುಂಡೂರು ಶೇಖರ್, ಕಿರಣ್ ಕುಮಾರ್ ಶೆಟ್ಟಿ, ಎಂ.ಹೆಚ್‌.ಕೃಷ್ಣಮೂರ್ತಿ ನಿರ್ಮಾಣದ ಇಮ್ರಾನ್ ಪಾಷಾ, ವೈಸಿರಿ ಕೆ.ಗೌಡ, ರಕ್ಷಾರಾಮ್ ನಟನೆಯ’ ಟೈಮ್ ಪಾಸ್’ ಕನ್ನಡ ಚಲನಚಿತ್ರ ಇದೇ ಬರುವ ಅಕ್ಟೋಬರ್ 17 ರಂದು ‌ಕರ್ನಾಟಕದಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರದ ನಿರ್ದೇಶಕರಾದ ಚೇತನ್ ಜೋಡಿದಾರ್ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು . `ಟೈಮ್ ಪಾಸ್’ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಗೊಂಡು ಒಂದಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇತ್ತೀಚೆಗಷ್ಟೇ ಈ ಸಿನಿಮಾದ ಟೀಸರ್ ಬಿಡುಗಡೆಗೊಂಡಿದೆ. ಅದರ ಬಗ್ಗೆಯೂ…

Read More

ಧರ್ಮಸ್ಥಳ ಪ್ರಕರಣ. ನಾವು ಅವರ ಪರ, ಇವರ ಪರ ಇಲ್ಲ. ನಾವು ಸತ್ಯದ ಪರ ಇದ್ದೇವೆ-; ಪ್ರಿಯಾಂಕ್ ಖರ್ಗೆ

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಹತ್ಯೆಗಳ ಆರೋಪದ ಕುರಿತು ತನಿಖೆ ಮಾಡಲೆಂದು ನಾವೇ ಎಸ್‌ಐಟಿ ರಚನೆ ಮಾಡಿದ್ದು. ನಾವು ಅವರ ಪರ, ಇವರ ಪರ ಇಲ್ಲ. ನಾವು ಸತ್ಯದ ಪರ ಇದ್ದೇವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಮಂಗಳೂರಿನಲ್ಲಿ ಟಿಎಂಎ ಪೈ ಕನ್ವೆನ್ಶನಲ್ ಸೆಂಟರ್‌ನಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಇಂದು ಆಗಮಿಸಿದ್ದ ಅವರನ್ನು ಸುದ್ದಿಗಾರರು ಎಸ್‌ಐಟಿ ತನಿಖೆ ಕುರಿತಂತೆ ಪ್ರಶ್ನಿಸಿದಾಗ ಈ ಸ್ಪಷ್ಟನೆ ನೀಡಿದ್ದಾರೆ. ಈ ಪ್ರಕರಣವನ್ನು ತನಿಖೆ…

Read More

ಮಂಗಳೂರು ಚಾಲಕರು ಸಮುದಾಯ ಚಾಲಿತ ಟ್ಯಾಕ್ಸಿ ಪರಿಹಾರವಾಗಿ ಟೌನೆರ್ ಅಪ್ಲಿಕೇಶನ್.

ಮಂಗಳೂರಿನ ಚಾಲಕರ ಸಮುದಾಯ, ಪೂರ್ಣೇಶ್ ಮತ್ತು ಸಂದೀಪ್ ಡಿಸಿಲ್ವಾ ಮತ್ತು ಅವರ ತಂಡದ ಪ್ರತಿನಿಧಿತ್ವದಲ್ಲಿ, ಸ್ಥಳೀಯ ಟ್ಯಾಕ್ಸಿ ಸೇವೆಗಳಿಗೆ ಆದ್ಯತೆಯ ಡಿಜಿಟಲ್ ಪರಿಹಾರವಾಗಿ ಟೌನೆರ್ ಮೊಬೈಲ್ ಟ್ಯಾಕ್ಸಿ ಮೀಟರ್ ಅಪ್ಲಿಕೇಶನ್ ಇಂದು ಅಳವಡಿಸಿಕೊಳ್ಳಲಿದೆ ಎಂದು ಒನ್ ಇಂಡಿಯಾ ಒನ್ ಟ್ಯಾಕ್ಸಿ ಇದರ ಕಾರ್ಯ ನಿರ್ವಹಣಾ ಅಧಿಕಾರಿಯಾದ ರಘು ತಿಳಿಸಿದರು . ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿದ ಅವರು , ಕಳೆದ ಒಂದು ತಿಂಗಳಿಂದ ಅಪ್ಲಿಕೇಶನ್ನನ್ನು ಪರಿಶೀಲಿಸಿದ ಬಳಿಕ, ಚಾಲಕರು ಇದರ ನ್ಯಾಯವಾದ ಬೆಲೆ ನಿಗದಿ, ಪಾರದರ್ಶಕತೆ…

Read More

ಶರಧಿ ಪ್ರತಿಷ್ಠಾನದಿಂದ ಮುದ್ದು ಶಾರದೆ, ನವದುರ್ಗೆ ವೇಷ ಸ್ಪರ್ಧೆ ಸೆಪ್ಟೆಂಬರ್ 28ರಂದು.

ಮಂಗಳೂರು: ಕರಾವಳಿಯಲ್ಲಿ ಆಚರಿಸಲಾಗುವ ನವರಾತ್ರಿ ಉತ್ಸವ ದೇಶ ವಿದೇಶದಲ್ಲಿ ಪ್ರಸಿದ್ಧಿ ಪಡೆದಿದೆ. ಇಂತಹ ಪುಣ್ಯ ಪರ್ವಕಾಲ ನವರಾತ್ರಿಯ ಶುಭ ಸಂದರ್ಭದಲ್ಲಿ ತುಳುವರ ಸಂಸ್ಕೃತಿ, ಕಲೆ ಹಾಗೂ ಹಿಂದುತ್ವದ ಅರಿವು ಮೂಡಿಸುವ ಉದ್ದೇಶದಿಂದ ದಸರಾ ನವರಾತ್ರಿಯ ಸಂದರ್ಭದಲ್ಲಿ ಮಂಗಳೂರಿನ ಶರಧಿ ಪ್ರತಿಷ್ಠಾನವು ಸೆಪ್ಟೆಂಬರ್ 28 ರಂದು ಶಾರದಾ ವಿದ್ಯಾಲಯ,ಮಂಗಳೂರು ಇಲ್ಲಿ ಮೂರನೇ ವರ್ಷದ ಅದ್ದೂರಿ ಮಕ್ಕಳ ಮುದ್ದು ಶಾರದೆ ಮತ್ತು ನವದುರ್ಗೆಯರ ವೇಷ ಸ್ಪರ್ಧೆಯು 1 ರಿಂದ 14 ತನಕದ ವಯೋಮಾನ ಹೊಂದಿರುವ ಮಕ್ಕಳಿಗೆ ಆಯೋಜಿಸಲಾಗುವುದೆಂದು ಆಯೋಜಿಸಲಿದೆ ಎಂದು…

Read More

ಶ್ರೀ ಆದಿಶಕ್ತಿ ದೇವಿ ದೇವಸ್ಥಾನದ ಪುನ‌ರ್ ಪ್ರತಿಷ್ಠೆ ಕಲಶಾಭಿಷೇಕ ಪ್ರಯುಕ್ತ ಹೊರೆಕಾಣಿಕೆ ಮೆರವಣಿಗೆ. ಮುಸ್ಲಿಮ್ ಬಾಂಧವರ ಭಾವೈಕ್ಯತೆ ಯ ಸ್ವಾಗತ.

ಮಂಗಳೂರು: ಬಜಾಲ್ ನಂತೂರಿನ ಅಮೇವು ಶ್ರೀ ಆದಿಶಕ್ತಿ ದೇವಿ ದೇವಸ್ಥಾನದ ಪುನ‌ರ್ ಪ್ರತಿಷ್ಠೆ ಕಲಶಾಭಿಷೇಕ ಪ್ರಯುಕ್ತ ಸಂಜೆ ಇಲ್ಲಿ ನಡೆದ ಹೊರೆ ಕಾಣಿಕೆ ಮೆರವಣಿಗೆಯನ್ನು ಮುಸ್ಲಿಮ್ ಬಾಂಧವರು ಸ್ವಾಗತಿಸಿ ಭಾವೈಕ್ಯತೆ ಮೆರದಿದ್ದಾರೆ. ಶ್ರೀ ಕ್ಷೇತ್ರಕ್ಕೆ ದೇವಸ್ಥಾನದ ಮುಖ್ಯಸ್ಥ ವಿಠಲ್ ಪೂಜಾರಿ ನೇತೃತ್ವದ ಹೊರೆ ಕಾಣಿಕೆ ಮೆರವಣಿಗೆ ಬಜಾಲ್ ನಂತೂರಿನ ಬದ್ರಿಯಾ ಜುಮಾ ಮಸೀದಿ ಎದುರಾಗಿ ಸಾಗುತ್ತಿದ್ದ ವೇಳೆ ಜಮಾಅತ್ ಆಡಳಿತ ಕಮಿಟಿ ಮುಖಂಡರು ಭಕ್ತಾದಿಗಳನ್ನು ಸ್ವಾಗತಿಸಿ ಸಿಹಿ ತಿಂಡಿ,ತಂಪು ಪಾನೀಯ, ಐಸ್ ಕ್ರೀಮ್ ವಿತರಿಸಿ ಸೌಹಾರ್ದತೆ ಸಾರಿದ್ದಾರೆ….

Read More

ನಕಲಿ ಮದ್ಯ ತಯಾರಿಕಾ ಅಡ್ಡೆಗೆ ದಾಳಿ ನಡೆಸಿದ ಅಬಕಾರಿ ಅಧಿಕಾರಿಗಳು.ಆರೋಪಿಯ ವಿರುದ್ಧ ಪ್ರಕರಣ ದಾಖಲು.

ನಕಲಿ ಮದ್ಯ ತಯಾರಿಕಾ ಅಡ್ಡೆಗೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದ ಘಟನೆ ಮಂಗಳೂರು‌ ನಗರದ ಕದ್ರಿ ಲೋಬೊ ಲೇನ್‌ನಲ್ಲಿ ನಡೆದಿದೆ. ಸುಮಾರು 5,57,690 ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.ಮೈಕಲ್ ಬ್ಲೈಸ್ ಮಿನೇಜಸ್ ಎಂಬಾತನ ಮನೆಯಲ್ಲಿ ನಕಲಿ ಮದ್ಯ ತಯಾರಿಸಲಾಗುತ್ತದೆ ಎಂಬ ಖಚಿತ ವರ್ತಮಾನ ಮೇರೆಗೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದರು. ಮೈಕಲ್ ಬ್ಲೈಸ್ ಮಿನೇಜಸ್‌ನ ಮನೆಯಲ್ಲಿ ತಯಾರಿಸಿಟ್ಟಿದ್ದ ನಕಲಿ ವೈನ್ – 238.500 ಲೀಟರ್, ವೈನ್ ತಯಾರಿಸುವ ಕೊಳೆ – 1,500 ಲೀಟರ್ , ಮದ್ಯ –…

Read More
error: Content is protected !!