Avatar

Shramitha bejja

ಮಹಿಳೆಯ ಕುತ್ತಿಗೆಯಿಂದ ಚಿನ್ನದ ಕರಿಮಣಿ ಸರ ಎಳೆದ ಪ್ರಕರಣ.ಆರೋಪಿಗೆ ಮೂರು ವರ್ಷ ಕಠಿಣ ಸಜೆ ಹಾಗೂ ದಂಡ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಕೊಯ್ಯೂರಿನಲ್ಲಿ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಕರಿಮಣಿ ಸರ ಎಳೆದ ಪ್ರಕರಣದ‌ ಆರೋಪಿ ಉಮೇಶ್ ಗೌಡ ಎಂಬುವವರಿಗೆ ಬೆಳ್ತಂಗಡಿ ನ್ಯಾಯಾಲಯವು ಮೂರು ವರ್ಷ ಕಠಿಣ ಸಜೆ ಹಾಗೂ ದಂಡ ವಿಧಿಸಿದೆ. 2024 ಡಿಸೆಂಬರ್ 9ರಂದು ಕೊಯ್ಯೂರು ಗ್ರಾಮದ ಪಾಂಬೇಲು ಎಂಬಲ್ಲಿ ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಕುತ್ತಿಗೆಯಿಂದ ಆರೋಪಿ ಉಮೇಶ್ ಗೌಡ ಚಿನ್ನದ ಸರವನ್ನು ಎಳೆದು ತುಂಡರಿಸಿ ಸರದೊಂದಿಗೆ ತಪ್ಪಿಸಿಕೊಂಡಿದ್ದು ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕೊಳ್ಳಲಾಗಿತ್ತು. ಆರೋಪಿಯನ್ನು ‌ಅದೇ…

Read More

ಕುಂಜತ್ತೂರಿನ ಜಿ.ವಿ.ಎಚ್.ಎಸ್.ಎಸ್ ಶಾಲೆಯಲ್ಲಿ ವಾರ್ಷಿಕ ಶಾಲಾ ಕ್ರೀಡೋತ್ಸವ.

ಮಂಜೇಶ್ವರ : ಕುಂಜತ್ತೂರಿನ ಜಿ.ವಿ.ಎಚ್.ಎಸ್.ಎಸ್ ಶಾಲೆಯಲ್ಲಿ ಶುಕ್ರವಾರದಂದು ವಿಜೃಂಭಣೆಯಿಂದ ವಾರ್ಷಿಕ ಶಾಲಾ ಕ್ರೀಡೋತ್ಸವ ನಡೆಯಿತು. ಶಾಲೆಯ ಆವರಣವೇ ಕ್ರಿಯಾಶೀಲತೆಯಿಂದ ತುಂಬಿ ತುಳುಕುತ್ತಿತ್ತು. ವಿದ್ಯಾರ್ಥಿಗಳು, ಶಿಕ್ಷಕರು, ಪಾಲಕರು ಎಲ್ಲರೂ ಈ ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಭಾಗವಹಿಸಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುನೀತಾ ಕೆ.ಬಿ ಅವರು ಧ್ವಜಾರೋಹಣದ ಮೂಲಕ ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳ ಸಮೂಹ ಗಾಯನದಿಂದ ಉದ್ವೇಗಕಾರಿ ವಾತಾವರಣ ನಿರ್ಮಾಣವಾಯಿತು. ಆತಿಥ್ಯ ವಹಿಸಿದ್ದ ಶ್ರೀನಿವಾಸ್ ಫಿಸಿಕಲ್ ಎಜುಕೇಶನ್ ಡೈರೆಕ್ಟರ್ ಹಾಗೂ ಎಸ್‌ಪಿಸಿ ಘಟಕದ ಶ್ರೀ ರಂಜಿತ್…

Read More

ಕ್ರಿಶ್ಚಿಯನ್ ಬ್ರಾಹ್ಮಣ ಎಂದರೆ ಯಾವ ಜಾತಿ ಹೇಳಿ ಎಂಬ ಶಾಸಕ ಡಾ ಭರತ್ ಶೆಟ್ಟಿ ಪ್ರಶ್ನೆಗೆ ಉತ್ತರ ಹೇಳಲಾಗದೇ ತೊದಲಿದ ಮಂಗಳೂರು ಜಿಲ್ಲಾಧಿಕಾರಿ …. !

ಮಂಗಳೂರು: ಕ್ರಿಶ್ಚಿಯನ್ ಬ್ರಾಹ್ಮಣ ಎಂದರೆ ಯಾವ ಜಾತಿ ಹೇಳಿ ಎಂದು ಮಂಗಳೂರು ನಗರ ಶಾಸಕ ಡಾ ಭರತ್ ಶೆಟ್ಟಿ ಪ್ರಶ್ನೆಗೆ ಡಿಸಿ ಉತ್ತರ ಹೇಳಲಾಗದೇ ತೊದಲಿದ್ದಾರೆ. ಈ ವಿಡಿಯೋವನ್ನು ಖುದ್ದು ಭರತ್ ಶೆಟ್ಟಿ ತಮ್ಮ X ಖಾತೆಯಲ್ಲಿ ಹಂಚಿಕೊಂಡಿದ್ದಾರೆ . ಜಾತಿಗಣತಿ ಬಗ್ಗೆ ನಗರದಲ್ಲಿ ಸಭೆಯಲ್ಲಿ ಸ್ಪೀಕರ್ ಯುಟಿ ಖಾದ‌ರ್, ಮಂಗಳೂರು ಡಿಸಿ ಸೇರಿದಂತೆ ಜನಪ್ರತಿನಿಧಿಗಳು, ನಾಗರಿಕರು ಸೇರಿದ್ದರು. ಈ ವೇಳೆ ಸಭೆಯಲ್ಲಿ ಡಾ ಭರತ್ ಶೆಟ್ಟಿ ಜಾತಿ ಕಾಲಂನಲ್ಲಿ ಕ್ರಿಶ್ಚಿಯನ್ ಬ್ರಾಹ್ಮಣ, ಕ್ರಿಶ್ಚಿಯನ್ ಕುರುಬ ಎಂದೆಲ್ಲಾ…

Read More

ನವರಾತ್ರಿಗೆ ಉಡುಗೆರೆಕೊಟ್ಟ ನಂದಿನಿ ಸಂಸ್ಥೆ ….. !

ಬೆಂಗಳೂರು: ಕೇಂದ್ರ ಸರ್ಕಾರ ಆಹಾರ ಉತ್ಪನ್ನಗಳ ಮೇಲಿನ ಜಿಎಸ್‌ಟಿಯನ್ನು ಶೇಕಡ 12 ರಿಂದ ಶೇ. 5ಕ್ಕೆ ಇಳಿಕೆ ಮಾಡಿದೆ. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 22 ರಿಂದ ಮೊಸರು, ತುಪ್ಪ, ಬೆಣ್ಣೆ, ಲಸ್ಸಿ ಸೇರಿದಂತೆ ಸೇರಿದಂತೆ ನಂದಿನಿ ವಿವಿಧ ಉತ್ಪನ್ನಗಳ ದರ ಕಡಿಮೆಯಾಗಲಿದೆ. ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳಿ(ಕೆಎಂಎಫ್) ನಿಂದ ಕೇಂದ್ರ ಸರ್ಕಾರದ ಸೂಚನೆಯಂತೆ ಉತ್ಪನ್ನಗಳ ಜಿಎಸ್‌ಟಿ ಕಡಿಮೆ ಮಾಡಲು ಮುಂದಾಗಿದೆ.ಹಾಲಿನ ಉತ್ಪನ್ನಗಳ ಜಿಎಸ್ಟಿ ತೆರಿಗೆ ದರ ಕಡಿಮೆ ಮಾಡಿರುವುದರಿಂದ ಸೆ. 22ರಿಂದ ನಂದಿನಿ ಉತ್ಪನ್ನಗಳ ದರ ಶೇಕಡ…

Read More

ಕನಿಲ ಶ್ರೀ ಭಗವತಿ ಕ್ಷೇತ್ರಕ್ಕೆ ನವೀಕರಣಕ್ಕಾಗಿ ಧರ್ಮಸ್ಥಳ ಕ್ಷೇತ್ರದಿಂದ ಆರ್ಥಿಕ ನೆರವು.

ಇತಿಹಾಸ ಪ್ರಸಿದ್ಧ ಕನಿಲ ಶ್ರೀ ಭಗವತಿ ಕ್ಷೇತ್ರದ ನವೀಕರಣ ಕೆಲಸಗಳು ಬರದಿಂದ ಸಾಗುತ್ತಿದ್ದು ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಡೆಯವರು ಆರ್ಥಿಕ ನೆರವನ್ನು ನೀಡಿದ್ದಾರೆ. ಇಂದು ಬೆಳಗ್ಗೆ ಕ್ಷೇತ್ರ ಪರಿಸರದಲ್ಲಿ ನಡೆದ ಸರಳ ಸಮಾರಂಭದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪದಾಧಿಕಾರಿಗಳು ಹಾಗು ಜನಜಾಗ್ರತಿಯ ಪ್ರಮುಖರು ರೂ.5 ಲಕ್ಷ ಡಿ.ಡಿ ಯನ್ನು ಕ್ಷೇತ್ರ ಸಮಿತಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಜನಜಾಗ್ರತಿ ವೇದಿಕೆಯ ಅಧ್ಯಕ್ಷರಾದ ಡಾ.ಜಯಪ್ರಕಾಶ್ ನಾರಾಯಣ್ ತೊಟ್ಟತೋಡಿ ಮಾತನಾಡಿ ನಿವೇದನೆಗಾಗಿ ಕ್ಷೇತ್ರದಿಂದ ಧರ್ಮಸ್ಥಳಕ್ಕೆ ಹೋದಾಗ ಬಹಳ…

Read More

ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವ 2025 ಸೆಪ್ಟೆಂಬರ್ 22 ಕ್ಕೆ ಚಾಲನೆ.

ಕಾಸರಗೋಡು ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ “ಶ್ರೀ ದುರ್ಗಾಂಬ ವೇದಿಕೆ” ಯಲ್ಲಿ 2925 ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 1 ರ ತನಕ ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವ-2025 ಜರುಗಲಿದೆ. ಕನ್ನಡ ಭವನದ ಸಂಸ್ಥಾಪಕ ಶ್ರೀ ವಾಮನ್ ರಾವ್ ಬೇಕಲ್ ಸಾರಥ್ಯದಲ್ಲಿ ಕಳೆದ 12 ವರ್ಷಗಳಿಂದ ನಡೆದುಕೊಂಡು ಬರುತ್ತಿರುವ ದಸರಾ ಸಂಭ್ರಮದ ಈ ಬಾರಿಯ ಉದ್ಘಾಟನೆ ಸೆಪ್ಟೆಂಬರ್ 22 ರಂದು ಬೆಳಿಗ್ಗೆ 11 ಗಂಟೆಗೆ ಪಾಂಗೋಡು ಕ್ಷೇತ್ರ ಸಭಾಂಗಣದಲ್ಲಿ ಧಾರ್ಮಿಕ, ಸಾಮಾಜಿಕ ಮುಂದಾಳು ಡಾl ಕೆ.ಎನ್….

Read More

ಶ್ರೀಮತಿ ಸುಮನ್ ಆರ್. ವಾಲ್ಕೆ ಅವರ ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ನೀಡಿದ ಅತ್ಯುತ್ತಮ ಕೊಡುಗೆಗಳಿಗಾಗಿ ಕೆನರಾ ಸಮೂಹ ಶಿಕ್ಷಣ ಸಂಸ್ಥೆಯ ವತಿಯಿಂದ ಸನ್ಮಾನ .

ಕೆನರಾ ಶಿಕ್ಷಣ ಸಂಸ್ಥೆಯ ಹಳೆಯ ವಿದ್ಯಾರ್ಥಿನಿ ಮತ್ತು ಇಸ್ರೋ ವಿಜ್ಞಾನಿಯಾದ ಶ್ರೀಮತಿ ಸುಮನ್ ಆರ್. ವಾಲ್ಕೆ ಅವರ ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ನೀಡಿದ ಅತ್ಯುತ್ತಮ ಕೊಡುಗೆಗಳಿಗಾಗಿ ಕೆನರಾ ಸಮೂಹ ಶಿಕ್ಷಣ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು ಕೆನರಾದ ಹೆಮ್ಮಯ ಹಳೆಯ ವಿದ್ಯಾರ್ಥಿ ಹಾಗೂ ಪ್ರಸ್ತುತ ಮಂಗಳೂರು ದಕ್ಷಿಣದ ಶಾಸಕರಾದ ಶ್ರೀ ಡಿ. ವೇದವ್ಯಾಸ ಕಾಮತ್ ಅವರು ಈ ಸನ್ಮಾನವನ್ನು ನಡೆಸಿದ್ದು ಶ್ರೀಮತಿ ವಾಲ್ಕೆಯವರನ್ನು ಮರಳಿ ಈ ಸಂಸ್ಥೆಯಡಿ ಸನ್ಮಾನಿಸಲು ಹೆಮ್ಮೆಯಾಗುತ್ತದೆ ಎಂದರು. ಇದೇ ವೇಳೆ ಕೆನರಾ ಹೈಸ್ಕೂಲ್ ಅಸೋಸಿಯೇಷನ್…

Read More

ರಾಜ್ಯದಲ್ಲಿ ಜಾತಿ ಗಣತಿ‌ ನಡೆಸುವ ವಿಚಾರವಾಗಿ ಹಲವಾರು ಗೊಂದಲಗಳಿದ್ದು ಅದನ್ನು ಪರಿಹರಿಸಿದ ಬಳಿಕ ಜಾತಿ ಗಣತಿ ಮಾಡಿದರೆ ಒಳಿತು – ಸತೀಶ್ ಕುಂಪಲ

ಮಂಗಳೂರು:ರಾಜ್ಯದಲ್ಲಿ ಜಾತಿ ಗಣತಿ‌ ನಡೆಸುವ ವಿಚಾರವಾಗಿ ಹಲವಾರು ಗೊಂದಲಗಳಿದ್ದು ಅದನ್ನು ಪರಿಹರಿಸಿದ ಬಳಿಕ ಜಾತಿ ಗಣತಿ ಮಾಡಿದರೆ ಒಳಿತೆಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ತಿಳಿಸಿದರು . ಅವರು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ , ಈಗಾಗಲೇ ಮನೆಗಳಲ್ಲಿ ಜಾತಿ ಗಣತಿಯ ಅಂಗವಾಗಿ ಸ್ಟಿಕ್ಕರ್ ಅಂಟಿಸಲಾಗುತ್ತಿದೆ . ಆದರೆ ಜನರಿಗೆ ಈ ಬಗ್ಗೆ ಹಲವು ಗೊಂದಲಗಳಿವೆ . ಜನಜಾಗೃತಿ ಮೂಡಿಸಿದ ನಂತರ ಈ ಸಮೀಕ್ಷೆಯನ್ನು ಕೈಗೊಂಡರೆ ಒಳ್ಳೆಯದಿತ್ತು . ಜಿಲ್ಲಾ ಪಂಚಾಯತ್ ನಲ್ಲಿ ಈ…

Read More

ವಿಶ್ವ ಹೃದಯ ದಿನದ ಅಂಗವಾಗಿ ಕೆಎಂಸಿ ಆಸ್ಪತ್ರೆ ವತಿಯಿಂದ ‘ವಿಶ್ವ ಹೃದಯ ದಿನದ ವಾಕಥಾನ್’ ಸೆ. 21ಕ್ಕೆ

ಮಂಗಳೂರು: ಮಂಗಳೂರಿನ ಕೆಎಂಸಿ ಆಸ್ಪತ್ರೆಯು ವಿಶ್ವ ಹೃದಯ ದಿನದ ಅಂಗವಾಗಿ ಸೆ.21ರಂದು ‘ವಿಶ್ವ ಹೃದಯ ದಿನದ ವಾಕಥಾನ್-2025’ (“World Heart Day Walkathon 2025”) ಅನ್ನು ಆಯೋಜಿಸುವುದಾಗಿ ಆಸ್ಪತ್ರೆಯ ಡೀನ್ ಡಾ.ಉಣ್ಣಿಕೃಷ್ಣನ್ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಈ ಕುರಿತು ಮಾಹಿತಿ ನೀಡಿದ ಕೆಎಂಸಿ ಹೃದ್ರೋಗ ವಿಭಾಗದ ಮುಖ್ಯಸ್ಥ ಡಾ. ನರಸಿಂಹ ಪೈ ಅವರು, ‘ಒಂದು ಬೀಟ್ ಕೂಡ ತಪ್ಪಿಸಿಕೊಳ್ಳಬೇಡಿ’ ಎನ್ನುವುದು ಈ ವರ್ಷದ ವಿಶ್ವ ಹೃದಯ ದಿನದ ಥೀಮ್ ಆಗಿದೆ. ಹೃದಯ ಕಾಯಿಲೆಗಳ ಪ್ರಮಾಣವು, ವಿಶೇಷವಾಗಿ ಯುವಕರಲ್ಲಿ ಹೆಚ್ಚುತ್ತಿರುವುದು…

Read More

ಕೇರಳ ಸರಕಾರದ ಜನ ವಿರೋಧಿ,ಕಾರ್ಮಿಕ ವಿರೋಧಿ ನೀತಿಗೆದುರಾಗಿ ಕಾಲ್ನಡೆ ಜಾಥಾ.

ಕೇರಳ ಸರಕಾರದ ಜನ ವಿರೋಧಿ, ಕಾರ್ಮಿಕ ವಿರೋಧಿ ನೀತಿಗೆದುರಾಗಿ ಕೇರಳ ರಾಜ್ಯಾದ್ಯಂತ ನಡೆಯುವ ಕಾಲ್ನಡೆ ಜಾಥ ಅಂಗವಾಗಿ ಮಂಜೇಶ್ವರ ಪಂಚಾಯತ್ ವತಿಯಿಂದ ನಡೆದ ಕಾಲ್ನಡೆ ಜಾಥ ವನ್ನು BMS ಜಿಲ್ಲಾ ಅಧ್ಯಕ್ಷರಾದ ಉಪೇಂದ್ರನ್ ಕೋಟೆಕಣಿ ಉದ್ಘಾಟನೆ ಗೆಯ್ದರು. ಜಾಥಾ ಕ್ಯಾಪ್ಟನ್ ಪ್ರಕಾಶ್ ಕೆ. ಪಿ ರವರ ನೇತ್ತ್ವದಲ್ಲಿ ನಡೆದ ಕಾಲ್ನಡೆ ಜಾಥಾದಲ್ಲಿ ಜಿಲ್ಲಾ ಜೊತೆ ಕಾರ್ಯದರ್ಶಿ ದಿನೇಶ್ ಬಂಬ್ರಾಣ. ಯಶವಂತಿ ಬೆಜ್ಜ ,ವಲಯ ಅಧ್ಯಕ್ಷ ರವಿ ಎಂ ಕೆ ಕೊಲ್ಯೂರು,ರವಿ ಮಜಲ್, ಕಿಶೂರ್ ಶೆಟ್ಟಿ ಕುಂಜತ್ತೂರು, ಶ್ರೀಧರ…

Read More
error: Content is protected !!