Avatar

Shramitha bejja

ಜಿ.ವಿ.ಎಚ್.ಎಸ್.ಎಸ್ ಕುಂಜತ್ತೂರು ಶಾಲೆಗೆ ಡೆಸ್ಕ್ ಟಾಪ್ , ಪ್ರಿಂಟರ್ ನೀಡಿದ 24ನ್ಯೂಸ್ ಹಾಗೂ ಕೆ ಚಿಟ್ಟಿಲಪ್ಪಿಲ್ಲಿ ಸಂಸ್ಥೆ.

ಮಂಜೇಶ್ವರ : ಜಿ.ವಿ.ಎಚ್.ಎಸ್.ಎಸ್ ಕುಂಜತ್ತೂರು ಶಾಲೆಯಲ್ಲಿ 24ನ್ಯೂಸ್ ಹಾಗೂ ಕೆ ಚಿಟ್ಟಿಲಪ್ಪಿಲ್ಲಿ ಸಂಸ್ಥೆಯವರು ಶಾಲೆಗೆ ದೇಣಿಗೆಯಾಗಿ ನೀಡಿದ 8 ಡೆಸ್ಕ್ ಟಾಪ್ ಹಾಗೂ ಒಂದು ಪ್ರಿಂಟರ್ ಗಳ ಉದ್ಘಾಟನಾ ಸಮಾರಂಭ ಜರುಗಿತು. ಕಾಸರಗೋಡು ಜಿಲ್ಲಾ ಕ್ರೈಂ ಬ್ರಾಂಚ್ ಡಿ. ವೈ. ಎಸ್. ಪಿ. ಶ್ರೀ ಟಿ. ಉತ್ತಮ್ ದಾಸ್ ಇವರು ಕಂಪ್ಯೂಟರ್‌ಗಳ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿದರು. ಕುಂಜತ್ತೂರು ಶಾಲೆಯ ಪ್ರಾಂಶುಪಾಲರಾದ ಶ್ರೀ ಶಿಶು ಪಾಲನ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ನಂತರ ವಿದ್ಯಾರ್ಥಿಗಳಿಂದ ಲಹರಿ ವಿರುದ್ಧ ಪ್ರತಿಜ್ಞೆ ಕೈಗೊಳ್ಳಲಾಯಿತು. ಈ…

Read More

ಬಾಯಾರು: ಶಾಲಾ ಬಸ್ಸು ಸ್ಕೂಟರ್ ಡಿಕ್ಕಿ .ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ.

ಮಂಜೇಶ್ವರ : ಬಾಯಾರು ಪೆಟ್ರೋಲ್ ಬಂಕ್ ಮುಂಬಾಗದಲ್ಲಿ ಇಂದು ಬೆಳಿಗ್ಗೆ ಶಾಲಾ ಬಸ್ಸೊಂದು ವಿದ್ಯಾರ್ಥಿಗಳು ಸಂಚರಿಸುತ್ತಿದ್ದ ಸ್ಕೂಟರಿಗೆ ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳನ್ನು ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಒಂದು ವಿದ್ಯಾರ್ಥಿ ಸ್ಥಿತಿ ಚಿಂತಾಜನಕವೆಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಬಾಯಾರು ಪೊನ್ನಂಗಳ ಮುಜಮ್ಮ ಸಶಾಫತ್ ಸುನ್ನಿ ಶಾಲಾ ಬಸ್ಸು ಸ್ಕೂಟರಿಗೆ ಡಿಕ್ಕಿ ಹೊಡೆದಿದೆ.ಅಪಘಾತದಲ್ಲಿ ಪೈವಳಿಕೆ ಅಕಾಡೆಮಿಕ್ ಶಾಲೆಯ ಪ್ಲಸ್ 2 ವಿದ್ಯಾರ್ಥಿಗಳಾದ ಸಾದಿಖ್ ಹಾಗೂ ಮೊಯಿನುದ್ದೀನ್ ಅಪಘಾತದಿಂದ ಗಾಯಗೊಂಡಿದ್ದಾರೆ.

Read More

ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಮಂಜೇಶ್ವರ ಉಪ ಜಿಲ್ಲಾ ಸಮಿತಿಯ ರೂಪೀಕರಣ.

ಮೀಯಪದವು:ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಮಂಜೇಶ್ವರ ಉಪ ಜಿಲ್ಲಾ ಸಮ್ಮೇಳನ ಹಾಗೂ ಮಹಾಸಭೆ ವಿದ್ಯಾವರ್ಧಕ ಪ್ರೌಢ ಶಾಲೆ ಮೀಯಪದವು ಶಾಲೆಯಲ್ಲಿ ಜರಗಿತು. ಈ ಸಂದರ್ಭದಲ್ಲಿ 2025-26ನೇ ಸಾಲಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರುಅಶೋಕ್ ಕೊಡ್ಲಮೊಗರು ಉಪಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಬಡಾಜೆ ಇಲ್ಲಿಯ ಶಿಕ್ಷಕರಾದ ಶ್ರೀ ಅಶೋಕ್ ಕುಮಾರ್ ಕೊಡ್ಲಮೊಗರು, ಉಪಾಧ್ಯಕ್ಷರುಗಳಾಗಿ ಶ್ರೀ ಶಿವರಾಮ ಭಟ್ ಮುಖ್ಯ ಶಿಕ್ಷಕರು ಸರಕಾರಿ ಶಾಲೆ ಕಾಯರ್ ಕಟ್ಟೆ , ಶ್ರೀ…

Read More

ಬುರುಡೆ ಪ್ರಕರಣದಲ್ಲಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಚಿನ್ನಯ್ಯನ ಜಾಮೀನು ಅರ್ಜಿ ವಜಾ.

ಬುರುಡೆ ಪ್ರಕರಣದಲ್ಲಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಚಿನ್ನಯ್ಯನ ಜಾಮೀನು ಅರ್ಜಿ ವಜಾಗೊಂಡಿದೆ.ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತುಹಾಕಿರುವುದಾಗಿ ಹೇಳಿ ಬುರುಡೆ ಜೊತೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡಿದ ಬಳಿಕ ಹಲವಾರು ಬೆಳವಣಿಗಳು ನಡೆದಿದ್ದವು. ಬೆಳ್ತಂಗಡಿ ಎಸ್‌‌‌ಐಟಿ ಅಧಿಕಾರಿಗಳು ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆ.23ರಂದು ಚಿನ್ನಯ್ಯನನ್ನು ಬಂಧಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿ, 12 ದಿನಗಳ ಕಾಲ ಕಸ್ಟಡಿಗೆ ಪಡೆದ ತನಿಖೆ ನಡೆಸಿ ಸೆ.3 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿ ಚಿನ್ನಯ್ಯನನ್ನು ಮತ್ತೆ…

Read More

ದ.ಕ-ಉಡುಪಿ ಜಿಲ್ಲೆಗಳ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಸರಕಾರದಿಂದ “ಮಾಸ್ಟರ್ ಪ್ಲಾನ್”!ಶಾಸಕ ಮಂಜುನಾಥ ಭಂಡಾರಿ ಮನವಿಗೆ ಸಚಿವರ ಸ್ಪಂದನೆ.

ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಶಾಸಕ ಮಂಜುನಾಥ ಭಂಡಾರಿಯವರು ಪಶ್ಚಿಮ ಘಟ್ಟದಿಂದ ಹರಿಯುವ ನದಿಗಳು, ಜಲಪಾತಗಳು, ಕಡಲ ತೀರಗಳು ಹಾಗೂ ಧಾರ್ಮಿಕ ಕ್ಷೇತ್ರಗಳನ್ನು ಹೊಂದಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಗಾಗಿ ಈ ಪ್ರದೇಶವನ್ನು“ಟೂರಿಸಂ ಹಬ್” ಆಗಿ ರೂಪಿಸಲು ಮಾಸ್ಟರ್ ಪ್ಲಾನ್ ತಯಾರಿಸುವ ಕುರಿತಂತೆ ಸರ್ಕಾರದ ಗಮನಕ್ಕೆ ತಂದಿದ್ದು ಸರ್ಕಾರವು ಈ ಕುರಿತು ನೀಡಿರುವ ಭರವಸೆಯ ಹಿನ್ನೆಲೆಯಲ್ಲಿ ಇಂದು ನಡೆದ ಸರ್ಕಾರಿ ಭರವಸೆಗಳ ಸಮಿತಿ ಸಭೆಯಲ್ಲಿ ಈ ವಿಷಯವನ್ನು ಚರ್ಚಿಸಲಾಯಿತು. ಈ ಕುರಿತು…

Read More

ಸಾಮ್ರಾಜ್ಯಶಾಹಿ ವಿರುದ್ಧ ಪ್ರತಿಭಟನೆ: ಇಸ್ರೇಯಿಲ್ ನರಮೇಧ ವಿರೋಧಿಸಿ ಸಿಪಿಐಎಂ ನೇತೃತ್ವದಲ್ಲಿ ಮೆರವಣಿಗೆ ಹಾಗೂ ಸಾರ್ವಜನಿಕ ಸಭೆ.

ಮಂಜೇಶ್ವರ: ಇಸ್ರೇಯಿಲ್ ನಡೆಸುತ್ತಿರುವ ನರಮೇಧವನ್ನು ತೀವ್ರವಾಗಿ ಖಂಡಿಸಿ ಹಾಗೂ ಅದರ ವಿರುದ್ಧ ತಕ್ಷಣ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ, ಕುಂಜತೂರಿನಲ್ಲಿ ಸಿಪಿಐಎಂ ನೇತೃತ್ವದಲ್ಲಿ ಸಾಮ್ರಾಜ್ಯಶಾಹಿ ವಿರುದ್ಧ ಬೃಹತ್ ಪ್ರತಿಭಟನೆ, ಮೆರವಣಿಗೆ ಹಾಗೂ ಸಾರ್ವಜನಿಕ ಸಭೆ ಆಯೋಜಿಸಲಾಗಿತ್ತು. ಸಿಪಿಐಎಂ ಮಂಜೇಶ್ವರ ಏರಿಯಾ ಸದಸ್ಯ ಕೆ. ಕಮಲಾಕ್ಷ ಸಭೆಯನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು “ಇಸ್ರೇಯಿಲ್ ನಡೆಸುತ್ತಿರುವ ದಾಳಿಗಳು ಮನುಷ್ಯತ್ವದ ವಿರುದ್ಧದ ಕ್ರೂರ ದಾಳಿಗಳಾಗಿವೆ. ಗಾಜಾ ಮತ್ತು ಪ್ಯಾಲಸ್ತೀನಾ ಜನರ ಮೇಲೆ ನಡೆಯುತ್ತಿರುವ ಹಿಂಸಾಚಾರವನ್ನು ತಕ್ಷಣ ನಿಲ್ಲಿಸಬೇಕು. ಭಾರತ ಸೇರಿದಂತೆ ಎಲ್ಲ…

Read More

ದ. ಕ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಸಮಸ್ಯೆಯನ್ನು‌ ನಿವಾರಿಸಲು ರಾಜ್ಯ ಕಾಂಗ್ರೆಸ್ ಸರಕಾರದ ವೈಫಲ್ಯವಾಗಿದೆ. ಬಿಜೆಪಿ ಪಕ್ಷದ ನೇತೃತ್ವದಲ್ಲಿ ಪ್ರತಿಭಟನಾ ಧರಣಿ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಸಮಸ್ಯೆಯನ್ನು‌ ನಿವಾರಿಸಲು ರಾಜ್ಯ ಕಾಂಗ್ರೆಸ್ ಸರಕಾರದ ವೈಫಲ್ಯವಾಗಿದೆ ಎಂದು ಆರೋಪಿಸಿ ಬಿಜೆಪಿ ಪಕ್ಷದ ನೇತೃತ್ವದಲ್ಲಿ ಪ್ರತಿಭಟನಾ ಧರಣಿ ಮಂಗಳೂರು ಮಿನಿ ವಿಧಾನ ಸೌಧದ ಎದುರು ಇಂದು ನಡೆಯಿತು‌. ಈ ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಶಾಸಕ ವೇದವ್ಯಾಸ ಕಾಮತ್ ಸೇರಿದಂತೆ ಜಿಲ್ಲೆಯ ಬಿಜೆಪಿ ನಾಯಕರು, ಕಾರ್ಯಕರ್ತರು ಭಾಗವಹಿಸಿದ್ದರು. ಇದೇ ವೇಳೆ ‘ಬಾವಾ ಬಂದರೋ’ ಹಾಡಿನ ಶೈಲಿಯಲ್ಲಿ ‘ಗುಂಡೂರಾವ್ ಓಡಿ ಹೋದರು’ ಎಂಬ ಹಾಸ್ಯಸ್ಯದ ಶೈಲಿಯಲ್ಲಿ ಹಾಡನ್ನು…

Read More

ಬನ್ನಂಜೆ ಗೋವಿಂದಾಚಾರ್ಯರ ಜನ್ಮದ 90ನೇ ವರ್ಷದ ಅಂಗವಾಗಿ ‘ವಿಶ್ವ ಬನ್ನಂಜೆ 90ರ ನಮನ’ ಕಾರ್ಯಕ್ರಮ ಸೆಪ್ಟೆಂಬರ್ 21ರಂದು

ಮಂಗಳೂರು:ಬನ್ನಂಜೆ ಗೋವಿಂದಾಚಾರ್ಯರ ಜನ್ಮದ 90ನೇ ವರ್ಷದ ಅಂಗವಾಗಿ ‘ವಿಶ್ವ ಬನ್ನಂಜೆ 90ರ ನಮನ’ ಕಾರ್ಯಕ್ರಮವನ್ನು ಸೆಪ್ಟೆಂಬರ್ 21ರಂದು ಮಂಗಳೂರಿನ ಶ್ರೀರಾಮಕೃಷ್ಣ ಮಠದ ಆವರಣದಲ್ಲಿ ಪೂರ್ಣ ದಿನದ ಕಾರ್ಯಕ್ರಮದೊಂದಿಗೆ ನಡೆಸಲಾಗುವುದು ಎಂದು ತುಳುನಾಡು ಶಿಕ್ಷಣ ಸಂಸ್ಥೆ ಹಾಗೂ ಶಾರದಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಪ್ರೊ. ಎಂ.ಬಿ. ಪುರಾಣಿಕ್ ತಿಳಿಸಿದ್ದಾರೆ. ನಗರದ ಪತ್ರಿಕಾಭನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು “ಬನ್ನಂಜೆಯವರು ಬದುಕಿದ್ದರೆ ಈಗ 90 ವರ್ಷ ಪೂರೈಸುತ್ತಿದ್ದರು. ಆ ನೆನಪಿಗಾಗಿ ಕರ್ನಾಟಕ ಮಾತ್ರವಲ್ಲದೆ ಹೃಷಿಕೇಶ ಮತ್ತು ಅಮೆರಿಕ ಸೇರಿದಂತೆ…

Read More

‘ಬದ್ರಿಯಾ ಅಲುಮಿನಿ ಅಸೋಸಿಯೇಷನ್ ‘ ಬದ್ರಿಯಾ ಹಳೆ ವಿದ್ಯಾರ್ಥಿಗಳ ಸಮಾವೇಶ ಸೆಪ್ಟೆಂಬರ್19 ರಂದು

ಮಂಗಳೂರಿನ ಪ್ರತಿಷ್ಠಿತ ಬದ್ರಿಯಾ ವಿದ್ಯಾಸಂಸ್ಥೆ 1928ರಲ್ಲಿ ಸ್ಥಾಪನೆಗೊಂಡು 2028ರಲ್ಲಿ ಸಂಸ್ಥೆಯು ಶತಮಾನೋತ್ಸವ ಆಚರಿಸಲಿದೆ . ಇದರ ಪೂರ್ವ ತಯಾರಿಯ ಭಾಗವಾಗಿ ಬದ್ರಿಯಾ ವಿದ್ಯಾಸಂಸ್ಥೆಯ ಹಳೆ ವಿದ್ಯಾರ್ಥಿ ಸಂಘ ‘ಬದ್ರಿಯಾ ಅಲುಮಿನಿ ಅಸೋಸಿಯೇಷನ್ ‘ ನನ್ನು ರೂಪಿಸುವ ನಿಟ್ಟಿನಲ್ಲಿ ಸೆಪ್ಟೆಂಬರ್19 ರಂದು ಬದ್ರಿಯಾ ಹಳೆ ವಿದ್ಯಾರ್ಥಿಗಳ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮುಹಮ್ಮದ್ ಕುಂಞ ತಿಳಿಸಿದರು . ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅವರು , ಬದ್ರಿಯಾ ಹಳೆ ವಿದ್ಯಾರ್ಥಿಗಳ ಸಮಾವೇಶವು ಸಂಜೆ 4:00ರಿಂದ 6:00 ಗಂಟೆ ತನಕ…

Read More

ಕರಾವಳಿ ಕೆಂಪುಕಲ್ಲು ಸಮಸ್ಯೆಗೆ ಶಾಶ್ವತ ಪರಿಹಾರ ; ಸ್ಪೀಕ‌ರ್ ಯು.ಟಿ. ಖಾದರ್

ಮಂಗಳೂರು:ಇತ್ತೀಚಿಗೆ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಕೆಂಪು ಕಲ್ಲಿನ ಸಮಸ್ಯೆಗಳೆಲ್ಲವನ್ನೂ ಬಗೆಹರಿಸಲಾಗಿದೆ. ಇನ್ನು ಮುಂದೆ ಕೆಂಪು ಕಲ್ಲಿನ ದರ ಹಿಂದಿನ ದರಕ್ಕಿಂತ ಅಧಿಕವಾಗಲು ಸಾಧ್ಯವಿಲ್ಲ. ಸರ್ಕಾರಕ್ಕೆ ಸಲ್ಲಿಸಬೇಕಾದ ರಾಜಧನವನ್ನು ಕಡಿಮೆಗೊಳಿಸಲಾಗಿದ್ದು ಹಿಂದೆ ಇದ್ದ ನಿಯಮಗಳನ್ನು ಸರಳೀಕರಣಗೊಳಿಸಲಾಗಿದೆ. ಇನ್ನು ಮುಂದೆ ವ್ಯಾಪಾರಸ್ಥರು ಕೆಂಪು ಕಲ್ಲು ವ್ಯಾಪಾರವನ್ನು ಧೈರ್ಯದಿಂದ ಮಾಡಬಹುದು ಎಂದು ವಿಧಾನ ಸಭಾ ಸ್ಪೀಕರ್ ಯು.ಟಿ. ಖಾದರ್ ಫರೀದ್ ತಿಳಿಸಿದರು . ಅವರು ಮಂಗಳೂರಿನ ಸರ್ಕ್ಯೂಟ್ ಹೌಸ್‌ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೊನ್ನೆಯ ಕ್ಯಾಬಿನೆಟ್‌ನಲ್ಲಿ ಅಧಿಕಾರಿಗಳು, ಶಾಸಕರು, ಕೆಂಪು ಕಲ್ಲಿನ…

Read More
error: Content is protected !!