Avatar

Shramitha bejja

ಜನರ ಹೃದಯದಿಂದ ಎಡರಂಗ ಅಸ್ತಮಯ- ಕಾಂಗ್ರೆಸ್.

ಕೋಮುಶಕ್ತಿಗಳ ಬೆಂಬಲದೊಂದಿಗೆ ಕುಟಿಲ ಮತ್ತು ಕೀಳು ತಂತ್ರಗಳ ಮೂಲಕ ಅಧಿಕಾರಕ್ಕೇರಿದ ಎಡರಂಗವು ಜನಹೃದಯಗಳಿಂದ ಶಾಶ್ವತವಾಗಿ ಮರೆಯಾಗುವ ಹಂತದಲ್ಲಿದೆ. ಒಂದು ಕಾಲದಲ್ಲಿ ಶ್ರಮಿಕರು, ಕೃಷಿಕರು, ಭೂರಹಿತರು ಮುಂತಾದ ದಮನಿತ ಜನರಿಗಾಗಿ ಹೋರಾಡುತ್ತಿದ್ದ ಸಿಪಿಎಂ ಇಂದು ಸ್ವತಃ ಶೋಷಕರಾಗಿ ಮಾರ್ಪಟ್ಟದ್ದು ವಿಷಾದಕರ. ಕಂಡ ಕಂಡ ವಿಷಯಗಳಿಗೆ ತೆರಿಗೆ ವಿಧಿಸಿ ಜನರನ್ನು ಚೆನ್ನಾಗಿ ಸುಲಿಗೆ ಮಾಡಿದ ಸಿಪಿಎಂ ಈಗ ಬಹುಕೋಟಿ ವ್ಯವಹಾರಗಳ ಖದೀಮರ ಡಾರ್ಲಿಂಗ್ ಆಗಿ ಮಾರ್ಪಟ್ಟಿದೆ. ಆಡಳಿತದ ಸಕಲ ವಲಯಗಳಲ್ಲೂ ವಿಫಲವಾದ ಎಡರಂಗವು ಇತರರ ಖಾಸಗಿ ಜೀವನಕ್ಕೆ ಇಣುಕಿ ನೋಡುವ…

Read More

ಹಿಪ್ನೋಟಿಸಂ ಹೆಸರಲ್ಲಿ ಕಿರಿಯ ವಿದ್ಯಾರ್ಥಿಳನ್ನು ಹಿಗ್ಗಾಮುಗ್ಗಾ ಥಳಿಸಿ ಪ್ರಜ್ಞೆ ತಪ್ಪಿಸಿದ ಹಿರಿಯ ವಿದ್ಯಾರ್ಥಿಗಳು : ನೂತನ ಶೈಲಿಯ ರಾಗಿಂಗ್

ಮಂಜೇಶ್ವರ : ಶಾಲಾ ವಿದ್ಯಾರ್ಥಿಗಳು ನೂತನ ರೀತಿಯ ರಾಗಿಂಗ್ ಕಂಡು ಹಿಡಿದಿದ್ದು,ಹಿಪ್ನೋಟಿಸಂ ಹೆಸರಲ್ಲಿ ಹೊಸ ರಾಗಿಂಗ್ ಇದೀಗ ಭಾರೀ ಸುದ್ದಿಯಾಗುತ್ತಿದೆ. ಹಿಪ್ನೋಟಿಸಂ ತೋರಿಸಿ ಕೊಡುವುದಾಗಿ ಹೇಳಿ ಕೆಲವೊಂದು ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ಗಂಭೀರ ಹಲ್ಲೆಗೈದು ಅವರ ಪ್ರಜ್ಞೆ ತಪ್ಪಿಸಿರುವುದು ಆತಂಕಕ್ಕೂ ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೂ ಗ್ರಾಸವಾಗಿದೆ. ಈ ವಿಷಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಲು ಆರಂಭವಾಗುತಿದ್ದಂತೆಯೇ ಸಂಬಂಧಪಟ್ಟ ಶಾಲಾ ಅಧಿಕಾಕಸ್ಥರನ್ನು ಹಾಗೂ ಘಟನೆಗೆ ಕಾರಣರಾದ ವಿದ್ಯಾರ್ಥಿಗಳನ್ನು ಹಾಗೂ ಅವರ ಹೆತ್ತವರನ್ನು ಕುಂಬಳೆ ಪೊಲೀಸರು ಠಾಣೆಗೆ ಕರೆಸಿ…

Read More

ಕಟ್ಟೆ ಪ್ರೆಂಡ್ಸ್ ಮತ್ತು ಅಡ್ಕ ಕಟ್ಟೆ sc ಗ್ರಾಮ ಕ್ಷೇಮ ಸಮಿತಿ ನೆತೃತ್ವದಲ್ಲಿ ಓಣಂ ಹಬ್ಬ.

ಕಟ್ಟೆ ಪ್ರೆಂಡ್ಸ್ ಮತ್ತು ಅಡ್ಕ ಕಟ್ಟೆ sc ಗ್ರಾಮ ಕ್ಷೇಮ ಸಮಿತಿ ನೇತೃತ್ವ ದಲ್ಲಿ ಓಣಂ ಹಬ್ಬದ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆಗಳು ಅಡ್ಕ ಶ್ರೀ ಚಕ್ರಪತಿ ಬೀರಮಾರ್ಲರ್ ಮಾಡ ಪರಿಸರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೈವದ ಪಾತ್ರಿ ರಾಧಾಕೃಷ್ಣ ಅಡ್ಕ ದೀಪ ಬೆಳಗಿಸಿ ಉದ್ಘಾಟಿಸಿದರು .ಸಂಸ್ಥೆಯ ಅಧ್ಯಕ್ಷರಾದ ಸಂಜೀವ ವೀರನಗರ ಅಧ್ಯಕ್ಷತೆ ವಹಿಸಿದ್ದರು. ಶಾಂತಾರಾಮ್ ಶೆಟ್ಟಿ,ಭಗವಾನ್ ದಾಸ್ ಶೆಟ್ಟಿ ಉಪಸ್ಥಿತರಿದ್ದರು. ಸ್ಪರ್ಧೆಯ ನಂತರ ಬಹುಮಾನ ವಿತರಣೆಯು ನಡೆಯಿತು .ಕಾರ್ಯಕ್ರಮವನ್ನು ಬಾಲಕೃಷ್ಣ ವಿ ಎನ್ ನಿರೂಪಿಸಿದರು.

Read More

ದಕ್ಷಿಣ ಕನ್ನಡ ಜಿಲ್ಲೆಯ ಅವೈಜ್ಞಾನಿಕ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ತನಿಖೆಗೆ ಕೇಂದ್ರ ಸರಕಾರ ತನಿಖಾ ತಂಡವನ್ನು ರಚಿಸಲಿ ; ವಿಧಾನ ಪರಿಷತ್ ಶಾಸಕ ಐವನ್ ಡಿ’ಸೋಜಾ.

ಕರಾವಳಿ ಭಾಗದಲ್ಲಿ ನಿರ್ಮಾಣವಾದ ರಾಷ್ಟ್ರೀಯ ಹೆದ್ದಾರಿಯು ಅವೈಜ್ಞಾನ ಮತ್ತು ಕಳಪೆ ಕಾಮಗಾರಿಯ ಬಗ್ಗೆ ಸೂಕ್ತವಾದ ತನಿಖೆ ನಡೆಯಬೇಕೆಂದು ಕೇಂದ್ರ ಸರಕಾರಕ್ಕೆ ವಿಧಾನ ಪರಿಷತ್ ಶಾಸಕರಾದ ಐವನ್ ಡಿ’ಸೋಜಾ ಆಗ್ರಹಿಸಿದರು . ಅವರು ಮನಪಾ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ , ಕರಾವಳಿಯ ರಸ್ತೆಗಳು ಅವ್ಯವಸ್ಥೆಗಳ ಆಗರವಾಗಿದೆ . ಮಾರ್ಗಗಳು ಅವೈಜ್ಞಾನಿಕತೆ ಮತ್ತು ಕಳಪೆ ಕಾಮಗಾರಿಯಿಂದ ಕೂಡಿದೆ . ಈ ಬಗ್ಗೆ ತನಿಖೆಗೆ ಆಗ್ರಹಿಸಿ ಕೇಂದ್ರದ ಹೆದ್ದಾರಿ ಇಲಾಖೆಗೆ ಪತ್ರವನ್ನು ಬರೆಯಲಾಗಿದೆ . ಕರಾವಳಿ…

Read More

ಅಬ್ಬಕ್ಕಳ ಕರ್ಮಭೂಮಿ ಉಳ್ಳಾಲದಲ್ಲಿ ಅಬ್ಬಕ್ಕ ರಥಯಾತ್ರೆ ನಾಳೆ ಸಂಪನ್ನ

ಮಂಗಳೂರು: ಎಬಿವಿಪಿ ಕರ್ನಾಟಕ ದಕ್ಷಿಣ ಪ್ರಾಂತದವತಿಯಿಂದ ನಡೆಯುತ್ತಿರುವ ರಾಣಿ ಅಬಕ್ಕೆ ರಥಯಾತ್ರೆಯ ಸಮಾರೋಪ ಸಮಾರಂಭ ಹಾಗೂ ಬೃಹತ್ ಶೋಭಯಾತ್ರೆ ಮಂಗಳೂರಿನಲ್ಲಿ ನಾಳೆ ನಡೆಯಲಿದೆ ಎಂದು ಎ ಬಿ ವಿ ಪಿ ಜಿಲ್ಲಾ ಸಂಚಾಲಕ ಸುವಿತ್ ಶೆಟ್ಟಿ ತಿಳಿಸಿದರು . ಅವರು ಪತ್ರಿಕಾಭನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿ , ವೀರ ರಾಣಿ ಅಬ್ಬಕ್ಕಳ 500ನೇ ಜನ್ಮ ಜಯಂತಿಯ ಪ್ರಯುಕ್ತ ಅಬ್ಬಕ್ಕ ರಥಯಾತ್ರೆಯು ಸೆಪ್ಟೆಂಬರ್ 6 ರಿಂದ ಮೊದಲ್ಗೊಂಡು ರಾಜ್ಯಾದ್ಯಂತ ಬಹಳ ಯಶಸ್ವಿ ಯಾಗಿ ಸಂಚರಿಸುತ್ತಾ…

Read More

ಮೂರು ಸಾವಿರಕ್ಕಿಂತಲೂ ಅಧಿಕ ಪುಸ್ತಕಗಳ ಪ್ರದರ್ಶನ ಹಾಗೂ ಮಾರಾಟವು ಮಿಲಾಗ್ರಿಸ್ ಬುಕ್ ಕ್ವೆಸ್ಟ್’ ಸೆ. 16 ರಿಂದ 21ರ ವರೆಗೆ

ಮಂಗಳೂರು: ಮಿಲಾಗ್ರಿಸ್ ಕಾಲೇಜು ಮಂಗಳೂರು ಹಾಗೂ ಯೂಸ್ಟ್ ಬುಕ್ ಆರ್ ಇದರ ಸಂಯುಕ್ತ ಆಶ್ರಯದಲ್ಲಿ ಸೆಪ್ಟೆಂಬರ್ 16 ರಿಂದ 21ರ ವರೆಗೆ ಮೂರು ಸಾವಿರಕ್ಕಿಂತಲೂ ಅಧಿಕ ಪುಸ್ತಕಗಳ ಪ್ರದರ್ಶನ ಹಾಗೂ ಮಾರಾಟವು ಮಿಲಾಗ್ರಿಸ್ ಬುಕ್ ಕ್ವೆಸ್ಟ್’ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ ಎಂದು ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಆಲ್ವಿನ್ ಸೆರಾವ್ ತಿಳಿಸಿದರು . ಅವರು ಪತ್ರಿಕಾಭನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ , ಮಕ್ಕಳಲ್ಲಿ ಇಂದು ಪುಸ್ತಕವನ್ನು ಓದುವ ಹವ್ಯಾಸ ಕಡಿಮೆ ಆಗ್ತಾ ಇದೆ , ವಿದ್ಯಾರ್ಥಿಗಳಲ್ಲಿ ಓದುವ…

Read More

ಆರ್ಥಿಕವಾಗಿ ಹಿಂದುಳಿದ ವರ್ಗದವರ ಸಮೀಕ್ಷೆಗೆ ಕರಾವಳಿಯ ಸಾರ್ವಜನಿಕರು ಸಂಪೂರ್ಣ ಸಹಕಾರವನ್ನು ನೀಡಬೇಕು- ಐವನ್ ಡಿ’ಸೋಜಾ

ಮಂಗಳೂರು: ಆರ್ಥಿಕವಾಗಿ ಹಿಂದುಳಿದ ವರ್ಗದವರ ಸಮೀಕ್ಷೆಯು ಸೆಪ್ಟೆಂಬರ್ ೨೨ ರಿಂದ ಅಕ್ಟೋಬರ್ ೭ ರ ತನಕ ರಾಜ್ಯದಲ್ಲಿ ನಡೆಯಲಿದ್ದು ಇದಕ್ಕೆ ಕರಾವಳಿಯ ಸಾರ್ವಜನಿಕರು ಸಂಪೂರ್ಣ ಸಹಕಾರವನ್ನು ನೀಡಬೇಕೆಂದು ವಿಧಾನ ಪರಿಷತ್ ಶಾಸಕರಾದ ಐವನ್ ಡಿ’ಸೋಜಾ ಕರೆ ನೀಡಿದರು . ಅವರು ಮನಪಾ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ , ರಾಜ್ಯದಲ್ಲಿ ಇನ್ನೇನೂ ಕೆಲವೇ ದಿನಗಳಲ್ಲಿ ಜಾತಿ ಗಣತಿಯು ನಡೆಯಲಿರುವುದು . ಸಮೀಕ್ಷೆಯಲ್ಲಿ ಸಾರ್ವಜನಿಕರಿಗಾಗಿ ಸುಮಾರು ೬೦ ಪ್ರಶ್ನಾವಳಿಯ ನಮೂನೆಗಳು ಬಿಡುಗಡೆ ಮಾಡಲಾಗಿದೆ.ಈ ಪ್ರಶ್ನೆಗಳಿಗೆ…

Read More

ಯುನೈಟೆಡ್ ಸೀಫುಡ್ ಫ್ಯಾಕ್ಟರಿ ಎಂಬ ಮೀನು ಸಂಸ್ಕರಣಾ ಕೇಂದ್ರದ ವಿರುದ್ಧ ಕಣ್ವತೀರ್ಥ ನಾಗರೀಕ ಹಿತರಕ್ಷಣಾ ಸಮಿತಿ ಆಶ್ರಯದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಧರಣಿ

ಮಂಜೇಶ್ವರ: ಕಣ್ವತೀರ್ಥ ಪರಿಸರದಲ್ಲಿ ಹಲವು ವರ್ಷಗಳಿಂದ ಪರಿಸರ ಮಾಲಿನ್ಯ ಚಟುವಟಿಕೆಗಳಿಗೆ ಕಾರಣವಾಗಿರುವ ಯುನೈಟೆಡ್ ಸೀಫುಡ್ ಫ್ಯಾಕ್ಟರಿ ಎಂಬ ಮೀನು ಸಂಸ್ಕರಣಾ ಕೇಂದ್ರದ ವಿರುದ್ಧ ಕಣ್ವತೀರ್ಥ ನಾಗರೀಕ ಹಿತರಕ್ಷಣಾ ಸಮಿತಿ ಆಶ್ರಯದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಧರಣಿ ನಡೆಯಿತು.ಕಣ್ವತೀರ್ಥ ಗೇಟ್ ನಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆಯನ್ನು ಮಂಜೇಶ್ವರ ಗ್ರಾಮ ಪಂಚಾಯತು ಮುಂಭಾಗದಲ್ಲಿ ಪೊಲೀಸರು ತಡೆದರು. ಬಳಿಕ ಮಂಜೇಶ್ವರ ಗ್ರಾಮಪಂಚಾಯತ್ ಮುಂಭಾಗದಲ್ಲಿ ನಿವೃತ ಸೇನಾಧಿಕಾರಿ ವಿಜಯ ಕುಮಾರ್ ರವರ ಅಧ್ಯಕ್ಷತೆಯಲ್ಲಿ ನಡೆದ ಪ್ರತಿಭಟನಾ ಧರಣಿಯನ್ನು ಮಧುಸೂಧನ್ ಆಚಾರ್ಯ ಉದ್ಘಾಟಿಸಿದರು….

Read More

ಮುಡಿಮಾರು ಪಾವೂರಿನಲ್ಲಿ ಶ್ರೀ ನಾರಾಯಣ ಗುರುಗಳ 171ನೇ ಜನ್ಮ ದಿನಾಚರಣೆಯ ಪ್ರಯುಕ್ತ ಗುರು ಪೂಜೆ.

ಬ್ರಹ್ಮಶ್ರೀ ನಾರಾಯಣ ಗುರು ಯುವ ವೇದಿಕೆ ಮುಡಿಮಾರು ಪಾವೂರು ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜನ್ಮ ದಿನಾಚರಣೆಯ ಪ್ರಯುಕ್ತ ಗುರು ಪೂಜೆಯನ್ನು ಮುಡಿಮಾರ್ ಶ್ರೀ ಮಲರಾಯ ಗುಳಿಗ ದೈವಸ್ಥಾನದ ವಠಾರದಲ್ಲಿ ಏರ್ಪಡಿಸಲಾಗಿತ್ತು. ಈ ಸಭೆಗೆ ಬ್ರಹ್ಮಶ್ರೀ ನಾರಾಯಣ ಗುರು ಯುವ ವೇದಿಕೆ ಜಿಲ್ಲಾಧ್ಯಕ್ಷರಾದ ಕೃಷ್ಣ ಶಿವ ಕೃಪ ಗುರುಗಳ ಸಂದೇಶಗಳನ್ನು ನೀಡಿದರು. ಅರಿಬೈಲು ಬರುವ ಜುಮಾದಿ ದೈವಸ್ಥಾನದ ಅರ್ಚಕರಾದ ಅರಸ ಪೂಜಾರಿ ಕುದುಕೋರಿ, ಮುಡಿಮಾರ್ ಮಲರಾಯ ಕ್ಷೇತ್ರದ ಅರ್ಚಕರಾದ ಚಂದ್ರಹಾಸ ಪೂಜಾರಿ ಮುಡಿಮಾರು,ಜಿಲ್ಲಾ ವೇದಿಕೆ…

Read More

ಶ್ರೀ ರಾಮ್ ಫೈನಾನ್ಸ್ ಮಂಗಳೂರು ಇದರ ವತಿಯಿಂದ 1000 ಕ್ಕೂ ಅಧಿಕ ವಿಧ್ಯಾರ್ಥಿಗಳಿಗೆ ವಿಧ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ.

ಮಂಗಳೂರು: ನಮ್ಕ ದೇಶದಲ್ಲಿ ಶೇ 65% ರಷ್ಣು ಯುವ ಸಮೂಹವೇ ಇದೆ, ಈ ಯುವ ಸಮೂಹದ ಸಮಯಗಳು ದೇಶ ಕಟ್ಟುವ ಕಾರ್ಯಕ್ಕೆ ವಿನಿಯೋಗ ಆಗಬೇಕೆ ಹೊರತು, ದುರುಪಯೋಗವಾದರೆ ದೇಶಕ್ಕೆ ಮಾರಕ. ಹಾಗಾಗಿ ಯುವಕ ಶಕ್ತಿ ಸದ್ಬಳಕೆ, ಸ್ವಾಭಿಮಾನದ ಜೀವನ ನಮ್ಮ ಸಮಾಜದಲ್ಲಿ ಆಗಬೇಕಾದರೆ ಉಳ್ಳವರು ಮುಂದೆ ಬರಬೇಕು, ವಿದ್ಯಾರ್ಜನೆಗೆ, ನೈತಿಕ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಬೇಕು, ವ್ಯವಹಾರದ ತನ್ನ ಪಾಲನ್ನು ಶಿಕ್ಷಣಕ್ಕೆ ನೀಡುತ್ತಿರುವ ಶ್ರೀ ರಾಮ್ ಫೈನಾನ್ಸ್ ನ ಸೇವೆ ನಿಜವಾಗಿಯೂ ಮೆಚ್ಚತಕ್ಕದ್ದು ಎಂದು ದ.ಕ ಜಿಲ್ಲಾ ಸಂಸದರಾದ…

Read More
error: Content is protected !!