Avatar

Shramitha bejja

ಪಾಂಗೋಡು ನವರಾತ್ರಿ ಆಮಂತ್ರಣ ಪತ್ರಿಕೆ ಬಿಡುಗಡೆ.

ಕಾಸರಗೋಡು : ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಶ್ರೀ ಸುಬ್ರಮಣ್ಯ ದೇವಸ್ಥಾನದಲ್ಲಿ ವರ್ಷಮ್ಪ್ರತಿ ನಡೆಯುವ ನವರಾತ್ರಿ ಮಹೋತ್ಸವದ ಆಮಂತ್ರಣ ಪತ್ರಿಕೆ ಶ್ರೀ ಕ್ಷೇತ್ರ ಪಾತ್ರಿಗಳಾದ ಪಾಂಗೋಡು ಪ್ರವೀಣ್ ನಾಯಕ್ ಬಿಡುಗಡೆ ಗೊಳಿಸಿದರು. ಕ್ಷೇತ್ರ ಕುಟುಂಬಸ್ಥರು ಹಾಗೂ ಭಕ್ತ ಭಾಂದವರು ಅಪಾರ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Read More

ಕೇಂದ್ರ ಹಾಗೂ ಕೇರಳ ಸರಕಾರಗಳ ದುರಾಡಳಿತಗಳಿಂದ ಜನಸಾಮಾನ್ಯರು ತೊಂದರೆಯಲ್ಲಿ -ಮುಂದಿನ ಚುನಾವಣೆಯಲ್ಲಿ ಎರಡೂ ಪಕ್ಷಗಳು ನೆಲ ಕಚ್ಚಲಿವೆ- ಶ್ರೀ ಸುಂದರ ಆರಿಕ್ಕಾಡಿ

ಕೇಂದ್ರ ಹಾಗೂ ಕೇರಳ ಸರಕಾರಗಳ ದುರಾಡಳಿತಗಳಿಂದ ಜನಸಾಮಾನ್ಯರು ರೋಸಿ ಹೋಗಿದ್ದು, ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಈ ಎರಡೂ ಪಕ್ಷಗಳು ನೆಲ ಕಚ್ಚಲಿವೆ ಎಂದು ಕಾಸರಗೋಡು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶ್ರೀ ಸುಂದರ ಆರಿಕ್ಕಾಡಿ ಹೇಳಿದ್ದಾರೆ.ವರ್ಕಾಡಿ ಮಂಡಲ ಕಾಂಗ್ರೆಸ್ ವತಿಯಿಂದ ಶ್ರೀ ಉಮ್ಮರ್ ಬೋರ್ಕಳರ ನಿವಾಸದಲ್ಲಿ ನಡೆದ ಮಂಡಲ ಮಟ್ಟದ ಕಾಂಗ್ರೆಸ್ ಗೃಹಸಂದರ್ಶನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮಂಜೇಶ್ವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಮುಹಮ್ಮದ್ ಡಿಎಂಕೆ ಗೃಹಸಂದರ್ಶನ ಕಾರ್ಯಕ್ರಮದ ಉದ್ದೇಶಗಳ ಕುರಿತು ವಿವರಣೆ…

Read More

ಸುಜಾತಾ ಭಟ್‌ಗೆ ಬಿಗ್ ರಿಲೀಫ್ ….. !?

ಮಂಗಳೂರು: ಪ್ರಸ್ತುತ ವಿವಾದದ ಸುಳಿಯಲ್ಲಿ ಸಿಲುಕಿದ್ದ ಸಾಮಾಜಿಕ ಕಾರ್ಯಕರ್ತೆ ಸುಜಾತಾ ಭಟ್ ಗೆ ತಾತ್ಕಾಲಿಕವಾಗಿ ಕಾನೂನು ಕ್ರಮದಿಂದ ಬಿಗ್ ರಿಲೀಫ್ ಸಿಕ್ಕಿದೆ . ಅವರ ವಿರುದ್ಧದ ಕಠಿಣ ಕ್ರಮಗಳನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಆದರೆ, ವಿಚಾರಣೆಗೆ ಹಾಜರಾಗುವುದು ಅನಿವಾರ್ಯ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಾಹಿತಿಯ ಪ್ರಕಾರ, ಸುಜಾತಾ ಭಟ್ ವಿರುದ್ಧ ದಾಖಲಾಗಿದ್ದ ಕೆಲವೊಂದು ದೂರಿನ ಪರಿಶೀಲನೆ ನಡೆದಿದೆ. ಪ್ರಥಮ ದೃಷ್ಟಿಯಿಂದ ಗಂಭೀರ ಕಾನೂನು ಉಲ್ಲಂಘನೆಯ ಲಕ್ಷಣಗಳು ಪತ್ತೆಯಾಗದ ಹಿನ್ನೆಲೆಯಲ್ಲಿ, ತಕ್ಷಣದ ಬಂಧನ ಅಥವಾ ಬಂಧನಾತ್ಮಕ ಕ್ರಮ ಕೈಗೊಳ್ಳುವುದನ್ನು ತಪ್ಪಿಸಲಾಗಿದೆ….

Read More

ತಲಪಾಡಿ ಅಪಘಾತಕ್ಕೆ ಬ್ರೇಕ್ ವೈಫಲ್ಯ ಕಾರಣವಲ್ಲ, ಚಾಲಕನ ಅತೀಯಾದ ವೇಗವೇ ಕಾರಣ ; ಕರ್ನಾಟಕ ಸಾರಿಗೆ ಸ್ಪಷಣೆ

ತಲಪಾಡಿ ಟೋಲ್‌ಗೇಟ್ ಸಮೀಪ ಸಂಭವಿಸಿದ ಬಸ್ ಅಪಘಾತಕ್ಕೆ ಸಂಬಂಧಿಸಿದಂತೆ ಕೆಲವೊಂದು ಸಾಮಾಜಿಕ ಜಾಲತಾಣಗಳು ಹಾಗೂ ಮಾಧ್ಯಮಗಳಲ್ಲಿ ‘ಬ್ರೇಕ್ ವೈಫಲ್ಯ’ ಎಂಬ ವದಂತಿಗಳು ಹರಡುತ್ತಿದ್ದರೂ, ಕೆಎಸ್‌ಆರ್‌ಟಿಸಿ ಈ ಅಪಘಾತಕ್ಕೆ ಬಸ್‌ನ ತಾಂತ್ರಿಕ ದೋಷ ಅಥವಾ ಬ್ರೇಕ್ ವೈಫಲ್ಯ ಕಾರಣವಲ್ಲ ಎಂದು ಸ್ಪಷ್ಟಪಡಿಸಿದೆ. ಇಲಾಖೆಯ ತಾಂತ್ರಿಕ ತಂಡ ಸ್ಥಳ ಪರಿಶೀಲನೆ ನಡೆಸಿದ್ದು, ಬಸ್ ಸಂಪೂರ್ಣವಾಗಿ ಫಿಟ್ ಆಗಿತ್ತು ಹಾಗೂ ಇತ್ತೀಚೆಗೆ ಎಫ್‌ಸಿ ನವೀಕರಣವೂ ಮಾಡಿಕೊಂಡಿತ್ತು ಎಂಬುದು ದೃಢವಾಗಿದೆ. ಬಸ್ ಚಾಲಕನ ಅಜಾಗರೂಕ, ನಿರ್ಲಕ್ಷ್ಯಪೂರ್ಣ ಹಾಗೂ ಅತಿವೇಗದ ಚಾಲನೆಯೇ ಈ ದುರ್ಘಟನೆಗೆ…

Read More

ಎಸ್‌ಸಿಡಿಸಿಸಿ ಬ್ಯಾಂಕ್ ಗೆ ಸತತ ನಾಲ್ಕನೇ ಬಾರಿ ಅಟಲ್ ಪಿಂಚಣಿ ಯೋಜನೆಯ ರಾಷ್ಟ್ರೀಯ ಪ್ರಶಸ್ತಿ ಪುರಸ್ಕಾರ.

ಮಂಗಳೂರು : ಭಾರತ ಸರ್ಕಾರದ ಮಹತ್ವಾಕಾಂಕ್ಷೆಯ ಅಟಲ್ ಪಿಂಚಣಿ ಯೋಜನೆಯನ್ನು ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಮರ್ಪಕವಾಗಿ ಅನುಷ್ಠಾನಕ್ಕೆ ತಂದಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ( ಎಸ್ ಸಿಡಿಸಿಸಿ ಬ್ಯಾಂಕ್) 2024-25ನೇ ಸಾಲಿನಲ್ಲೂ ರಾಷ್ಟ್ರೀಯ ಪ್ರಶಸ್ತಿಗೆ ಪಾತ್ರವಾಗಿದ್ದು, ಈ ಪ್ರಶಸ್ತಿಯನ್ನು ಬ್ಯಾಂಕ್ ಸತತ ನಾಲ್ಕನೇ ಬಾರಿಗೆ ಮುಡಿಗೇರಿಸಿಕೊಂಡಿದೆ.ಅಟಲ್ ಪಿಂಚಣಿ ಯೋಜನೆ ಅಡಿಯಲ್ಲಿ 2024-25ನೇ ಸಾಲಿಗೆ ಎಸ್ ಸಿಡಿಸಿಸಿ ಬ್ಯಾಂಕ್ ಚಂದಾದಾರರ ದಾಖಲಾತಿಯಲ್ಲಿ 3179 ಚಂದಾದಾರರನ್ನು ನೋಂದಾಯಿಸುವ ಮೂಲಕ ಗುರಿ ಮೀರಿದ ಸಾಧನೆ ಮಾಡಿದೆ. ಬ್ಯಾಂಕಿನ…

Read More

ಮಂಗಳೂರು ವಿಶ್ವವಿದ್ಯಾನಿಲಯ ಶುಲ್ಕ ಏರಿಕೆ – ವಿದ್ಯಾರ್ಥಿ ಸಮೂಹದಲ್ಲಿ ಆತಂಕ.

ಮಂಗಳೂರು ವಿವಿ 2025–26ನೇ ಶೈಕ್ಷಣಿಕ ಸಾಲಿನ ಪದವಿಪೂರ್ವ (ಯುಜಿ) ಮತ್ತು ಸ್ನಾತಕೋತ್ತರ (ಪಿಜಿ) ಕೋರ್ಸ್‌ಗಳ ಶುಲ್ಕವನ್ನು ಶೇಕಡಾ 5 ರಿಂದ 10 ರಷ್ಟು ಹೆಚ್ಚಿಸುವುದಾಗಿ ನಿರ್ಧರಿಸಿದೆ .ಈ ಹಿಂದಿನ ಶೈಕ್ಷಣಿಕ ವರ್ಷದಲ್ಲೂ ವಿವಿ ಎಲ್ಲಾ ವಿಷಯಗಳ ಪ್ರವೇಶ ಶುಲ್ಕವನ್ನು ಹೆಚ್ಚಿಸಿ ವಿದ್ಯಾರ್ಥಿಗಳ ಕೆಂಗಣಿಗೆ ಕಾರಣವಾಗಿತ್ತು . ವಿದ್ಯಾರ್ಥಿ ವಲಯಗಳಿಂದ ತೀವ್ರ ಆಕ್ಷೇಪಣೆಗಳು ಮತ್ತು ಪ್ರತಿಭಟನೆಗಳು ವ್ಯಕ್ತವಾಗಿದ್ದವು. ಆದರೂ ವಿವಿ ಪಟ್ಟು ಹಿಡಿದು ಶುಲ್ಕವನ್ನು ಏರಿಸಿತ್ತು . ಇದೀಗ ಮತ್ತೊಮ್ಮೆ ಶುಲ್ಕವನ್ನು ಏರಿಸಿದೆ ಇದಕ್ಕೆ ವಿಶ್ವವಿದ್ಯಾಲಯ ಸಿಂಡಿಕೇಟ್ ಅನುಮೋದನೆ…

Read More

ಸಂಸ್ಕಾರಯುತ ಸಮಾಜ ನಿರ್ಮಾಣ: ನಳಿನ್ ಕುಮಾರ್ ಕಟೀಲ್.ಬಂಟ್ಸ್ ಹಾಸ್ಟೇಲ್ ನಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ.

ಮಂಗಳೂರು: ಸಂಸ್ಕಾರಯುತ ಸಮಾಜ ನಿರ್ಮಾಣಕ್ಕೆ ಗಣೇಶೋತ್ಸವ ಪೂರಕವಾಗಿದ್ದು, ಆಡಂಬರವಿಲ್ಲದೆ ಇಲ್ಲಿ ಕೇವಲ ದೇವರ ಸಂಕೀರ್ತನೆಯ ಭಜನೆಯ ಮೂಲಕ ಗಣಪತಿಯ ಶೋಭಾಯಾತ್ರೆ ಸಾಗುವುದು ಎಲ್ಲರಿಗೂ ಮಾದರಿಯಾಗಿದೆ ಎಂದು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. ಅವರು ಮಂಗಳೂರಿನ ಬಂಟ್ಸ್ ಹಾಸ್ಟೆಲ್ ನಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ ನಡೆಯುತ್ತಿರುವ 19ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಶೋಭಾಯಾತ್ರೆಗೆ ಚಾಲನೆ ನೀಡಿ ಮಾತನಾಡಿದರು.ಶಾಸಕ ವೇದವ್ಯಾಸ ಕಾಮತ್…

Read More

ತಲಪಾಡಿ : ಸಂಚಾರಕ್ಕೆ ಯೋಗ್ಯವಲ್ಲದ KSRTC BUS .ಆರು ಮಂದಿಯ ಸಾವಿಗೆ ಕಾರಣ.

ಗುರುವಾರ ಚಾಲಕನ ಅಜಾಗರೂಕತೆ ಹಾಗೂ ಬಸ್‌ನ ಸವೆದ ಚಕ್ರದಿಂದ ತಲಪಾಡಿಯಲ್ಲಿ ಉಂಟಾದ ಭೀಕರ ಅಪಘಾತದಲ್ಲಿ ಆರು ಮಂದಿ ದುರ್ಮರಣಕ್ಕೀಡಾದ ಘಟನೆ ರಾಜ್ಯಾದ್ಯಂತ ಶೋಕ ಮತ್ತು ಆಕ್ರೋಶಕ್ಕೆ ಕಾರಣವಾಯಿತು. ಈ ಘಟನೆಗೆ ಪ್ರತಿಕ್ರಿಯೆ ನೀಡಿದ ಊರವರು ಇಂದು ಬೆಳಿಗ್ಗೆ ಗಡಿ ಪ್ರದೇಶದಲ್ಲಿರುವ ಮುಖ್ಯ ರಸ್ತೆಯಲ್ಲಿ ಸಾರಿಗೆ ಬಸ್‌ಗಳನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮಸ್ಥರು ಮುಖ್ಯವಾಗಿ ಸವೆದ ಚಕ್ರಗಳುಳ್ಳ ಹಾಗೂ ಸಾರಿ ಹೋಗಿರುವ ಬಸ್‌ಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ತಲುಪಿದ ಪೊಲೀಸರು ಹಾಗೂ ಮೋಟಾರು…

Read More

ದುರಂತಗಳ ಸರಮಾಲೆ…ವಾಹನ ಅಪಘಾತಗಳಲ್ಲಿ ಅಜ್ಜಿನಡ್ಕ ಸಾಮನಿಗೆ ಕುಟುಂಬ ಕಳೆದುಕೊಂಡಿದ್ದು ಒಟ್ಟು 12 ಜೀವಗಳನ್ನು!

ಮಂಜೇಶ್ವರ : ತಲಪಾಡಿ ಕೆ.ಸಿ.ರೋಡು ಸಮೀಪದ ಅಜ್ಜಿನಡ್ಕ ಸಾಮಾನಿಗೆ ಕುಟುಂಬಕ್ಕೆ ದುರಂತಗಳ ಸರಮಾಲೆಯೇ ಇದೆ. ಒಟ್ಟು ನಾಲ್ಕು ಅಪಘಾತಗಳನ್ನಾಗಿ ಈ ಕುಟುಂಬಕ್ಕೆ ಸಂಬಂಧಪಟ್ಟ 12 ಮಂದಿ ಸಾವನ್ನಪ್ಪಿದ್ದಾರೆ.ಗುರುವಾರದಂದು ತಲಪಾಡಿಯಲ್ಲಿ ನಡೆದ ವಾಹನ ಅಪಘಾತದಲ್ಲಿ ತಾರುಣ ಸಾವಿಗೀಡಾದ ಆರು ಮಂದಿ ಪೈಕಿ ಐದು ಮಂದಿ ಇದೇ ಕುಟುಂಬಕ್ಕೆ ಸೇರಿದವರು. ಒಂದರ ಹಿಂದೆ ಒಂದರಂತೆ ರಸ್ತೆ ಅಪಘಾತಕ್ಕೀಡಾಗಿ ಈ ಕುಟುಂಬದ ಸದಸ್ಯರು ಸಾವಿಗೀಡಾಗುವುದು ನಿಜಕ್ಕೂ ದಾರುಣ ಸಂಗತಿ.2018 ಜುಲೈ 9 ರಂದು ಮುಂಜಾನೆ ಉಪ್ಪಳ ಸಮೀಪದ ನಯಾಬಜಾರ್ ಬಳಿ ಅಜ್ಜಿನಡ್ಕ…

Read More

ತುಳುಭಾಷೆಯ 150ನೇ ಚಿತ್ರ “ನೆತ್ತೆರೆಕೆರೆ” ಬೆಳ್ಳಿ ತೆರೆಗೆ

ಮಂಗಳೂರು: “ವಿಭಿನ್ನ ಪರಿಕಲ್ಪನೆಯ * ತುಳುವಲ್ಲಿ ಬರುತ್ತಿದೆ. ನಿರ್ದೇಶಕ ಸ್ವರಾಜ್ ಶೆಟ್ಟಿಯ ಹಲವು ದಿನಗಳ ಕನಸು ‘ನೆತ್ತರೆಕೆರೆ’ ಮೂಲಕ ತುಳುಭಾಷೆಯ 150ನೇ ಚಿತ್ರ ಯಶಸ್ವಿಯಾಗಲಿ“ ಎಂದು ಹಿರಿಯ ರಂಗಭೂಮಿ ನಿರ್ದೇಶಕ ವಿಜಯ ಕುಮಾರ್ ಕೊಡಿಯಾಲ್‌ಬೈಲ್ ಹೇಳಿದರು.ಅವರು ಮಂಗಳೂರಿನ ಬಿಗ್ ಸಿನಿಮಾಸ್ ‌ನಲ್ಲಿ ಅಸ್ತ್ರ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ಲಂಚುಲಾಲ್ ಕೆ.ಎಸ್. ನಿರ್ಮಾಣದ ಸ್ವರಾಜ್ ಶೆಟ್ಟಿ ನಿರ್ದೇಶನದ “ನೆತ್ತರಕೆರೆ”ತುಳು ಚಿತ್ರವನ್ನು ದೀಪ ಬೆಳಗಿಸುವ ಮೂಲಕ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಚಿತ್ರ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ ಮಾತನಾಡಿ, “ಇದುವರೆಗೆ ತುಳುವಲ್ಲಿ…

Read More
error: Content is protected !!