Avatar

Shramitha bejja

ಜಾಗತಿಕ ಮಟ್ಟದಲ್ಲಿ ಗಮನ ಸೆಳೆಯುವಂತೆ ಮಾಡಿದ 8 ರ ಹರೆಯದ ರುಷಬ್ ರಾವ್ ಕರಾವಳಿಗೆ ಹೆಮ್ಮೆ.

ಮಂಗಳೂರು: ಆಗಸ್ಟ್ 13 ರಿಂದ 17 ರ ವರೆಗೆ ವಿಯೆಟ್ನಾಂ ನಲ್ಲಿ ನಡೆದ ಅಂತರಾಷ್ಟ್ರೀಯ ಫ್ಯಾಷನ್ ಶೋ ಸ್ಪರ್ಧೆಯಲ್ಲಿಭಾರತವನ್ನು ಪ್ರತಿನಿಧಿಸಿ Prince Category ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸುವುದರೊಂದಿಗೆ “ಸೂಪರ್ ಟ್ಯಾಲೆಂಟ್ ಪ್ರಶಸ್ತಿಯನ್ನೂ ಮುಡಿಗೇರಿಸಿಕೊಂಡು ಭಾರತವನ್ನು ಜಾಗತಿಕ ಮಟ್ಟದಲ್ಲಿ ಗಮನಸೆಳೆಯುವಂತೆ ಮಾಡಿದ 8 ರ ಹರೆಯದ ರುಷಬ್ ರಾವ್ ಕರಾವಳಿಗೆ ಹೆಮ್ಮೆ ತಂದಿದ್ದಾನೆ ಎಂದು ವಿಜೇತನ ಆಪ್ತರಾದ ರಾಹುಲ್ ಅಮೀನ್ ತಿಳಿಸಿದರು. ಅವರು ನಗರದ ಪತ್ರಿಕಾ ಭವನದಲ್ಲಿ ಮಾತನಾಡಿ, ರುಶಬ್ ಪ್ರತಿಭೆಯನ್ನು ಅತೀ ಹತ್ತಿರದಲ್ಲಿ ಕಂಡವನು ನಾನು,…

Read More

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ದ.ಕ ಜಿಲ್ಲಾ ಶಾಖೆ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ.

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ದಕ್ಷಿಣ ಕನ್ನಡ ಜಿಲ್ಲಾ ಶಾಖೆ ವತಿಯಿಂದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ರಾಜ್ಯ ಸರಕಾರಿ ನೌಕರರ ಎಸೆಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.ದಕ್ಷಿಣ ಕನ್ನಡ ಜಿಲ್ಲೆಯ 133 ಎಸೆಸೆಲ್ಸಿ, 102 ಪಿಯುಸಿ ವಿದ್ಯಾರ್ಥಿಗಳಿಗೆ, ಉಡುಪಿ ಜಿಲ್ಲೆಯ 115 ಮಂದಿ ಎಸೆಸೆಲ್ಸಿ ಮತ್ತು 88 ಮಂದಿ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಸಂಸದ…

Read More

ವಸಂತ್ ಗಿಳಿಯಾರ್ ಹೇಳಿಕೆಗೆ ಜಿಲ್ಲಾ ಕಾಂಗ್ರೆಸ್ ಖಂಡನೆ.

ಪವಿತ್ರ ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅನೇಕರು ಆಧಾರ ರಹಿತ ಆರೋಪ ಮಾಡುತ್ತಿರುವುದು ಇಂದಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಿತ್ಯ ಸುದ್ದಿಯಾಗಿದೆ. ಬುರುಡೆ ಪ್ರಕರಣವನ್ನು ಸರ್ಕಾರ ಎಸ್ಐಟಿ ತನಿಖೆಗೆ ಒಳಪಡಿಸಿದೆ. ಧರ್ಮಾಧಿಕಾರಿಗಳು, ಕ್ಷೇತ್ರದ ಸಿಬ್ಬಂದಿ ರಾಜ್ಯಾದ್ಯಂತ ಎಲ್ಲರೂ ಸ್ವಾಗತಿಸಿದ್ದಾರೆ. ನಿಷ್ಪಕ್ಷಪಾತ ತನಿಖೆಯೂ ನಡೆಯುತ್ತಿದೆ. ಅನಾಮಿಕ ತೋರಿಸಿದ ಎಲ್ಲಾ ಸ್ಥಳಗಳಲ್ಲಿ ಅಗೆದು ತಪಾಸಣೆ ನಡೆಸಲಾಗಿದೆ. ಈ ಕುರಿತಾಗಿ ಯೂಟುಬರ್ ಗಳು, ಸೋಶಿಯಲ್ ಮೀಡಿಯಾ ತಮ್ಮದೇ ಆದ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ತಮ್ಮದೇ ತೀರ್ಪುಗಳನ್ನು ನೀಡುತ್ತಿದ್ದಾರೆ. ತನಿಖೆ ಆದೇಶಿಸಿ 2 ವಾರಗಳ…

Read More

ಎಸ್ಯಾಸಾಫ್ಟ್ ಯುವಕರಿಗೆ ಉದ್ಯೋಗ ಅವಕಾಶವನ್ನು ಕಲ್ಪಿಸಿಕೊಡಲಿದೆ. -ಶಾಸಕ ಉಮಾನಾಥ್ ಕೋಟ್ಯಾನ್

ಮಂಗಳೂರು: ಎಸ್ಯಾಸಾಫ್ಟ್ ಅತ್ಯಾಧುನಿಕ ಕಲಿಕೆ ಮತ್ತು ಅಭಿವೃದ್ಧಿ ಸಾಮರ್ಥ್ಯ ಕೇಂದ್ರ ಮಂಗಳೂರಿನಲ್ಲಿ ಕಾರ್ಯಾಚರಣೆ ನಡೆಸಲಿದ್ದು ಇದು ಸ್ಥಳೀಯ ಯುವಕರಿಗೆ ಉದ್ಯೋಗ ಅವಕಾಶವನ್ನು ಕಲ್ಪಿಸಿಕೊಡಲಿದೆ ಎಂದು ಮೂಡಬಿದರೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಉಮಾನಾಥ್ ಕೋಟ್ಯಾನ್ ಹೇಳಿದರು ಬಜ್ಪೆಯ ಎಸ್ಯಾಸಾಫ್ಟ್ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರತೀ ಹಳ್ಳಿಯೂ ಬೆಳೆದಾಗ ದೇಶ ಬೆಳೆಯುತ್ತದೆ. ಗ್ರಾಮೀಣ ಭಾಗದ ನಿರುದ್ಯೋಗಿಗಳಿಗೆ ಉದ್ಯೋಗ ಅವಕಾಶ ನೀಡುವುದರಿಂದ ನಿರುದ್ಯೋಗ ನಿವಾರಣೆಯ ಜೊತೆಗೆ ಅವರ ಆರ್ಥಿಕ ಸ್ಥಿತಿಯು ಉತ್ತಮವಾಗುತ್ತದೆ. ಇಂಜಿನಿಯರಿನ್, ಸಿ ಎ, ಮೆಡಿಕಲ್ ಕ್ಷೇತ್ರದತ್ತ…

Read More

ಕಾಸರಗೋಡಿನಲ್ಲಿ ಧರ್ಮಸ್ಥಳ ಕ್ಷೇತ್ರ ಭಕ್ತವೃಂದದ ನೇತೃತ್ವದಲ್ಲಿ ಪಂಜಿನ ಮೆರವಣಿಗೆ ಸಂಪನ್ನ.

ಕಾಸರಗೋಡು : ಧರ್ಮಸ್ಥಳ ಕ್ಷೇತ್ರದ ಮೇಲೆ ನಡೆಯುತ್ತಿರುವ ವಿಧ್ವಂಸಕ ಚಟುವಟಿಕೆಗಳ ವಿರುದ್ಧವಾಗಿ ಧರ್ಮಸ್ಥಳ ಕ್ಷೇತ್ರ ಭಕ್ತವೃಂದ, ಕಾಸರಗೋಡು ಇವರ ನೇತೃತ್ವದಲ್ಲಿ ನಿನ್ನೆ ಸಂಜೆ 7 : OO ಗಂಟೆಗೆ ಭವ್ಯವಾದ ಪಂಜಿನ ಮೆರವಣಿಗೆ ಕಾಸರಗೋಡು ಪಟ್ಟಣದಲ್ಲಿ ಜರಗಿತು . ಮೆರವಣಿಗೆ ಕಾಸರಗೋಡು ಶ್ರೀ ಮಲ್ಲಿಕಾರ್ಜುನ ಕ್ಷೇತ್ರದಿಂದ ಪ್ರಾರಂಭವಾಗಿ ಪಟ್ಟಣದ ಪ್ರಮುಖ ಬೀದಿಗಳ ಮೂಲಕ ಸಾಗಿತು. ನೂರಾರು ಭಕ್ತರು, ಯುವಕರು ಹಾಗೂ ಸಾರ್ವಜನಿಕರು ದೀಪಗಳೊಂದಿಗೆ ಭಾಗವಹಿಸಿ ಸಮಗ್ರ ಏಕತೆ ಹಾಗೂ ಭಕ್ತಿ ಭಾವವನ್ನು ತೋರಿಸಿದರು. ನಗರದ ಬೀದಿಗಳಲ್ಲಿ ಮೆರವಣಿಗೆ…

Read More

ಜನಹೃದಯಗಳಲ್ಲಿ ಕಾಂಗ್ರೆಸ್ ಎಂದೆಂದಿಗೂ ಅಮರ- ಸೋಮಶೇಖರ್

ಹಿರಿಯರು ಸರ್ವಸ್ವವನ್ನೂ ತ್ಯಾಗ ಮಾಡಿ ಕಟ್ಟಿ ಬೆಳೆಸಿದ ಕಾಂಗ್ರೆಸ್ ಎಂದೆಂದಿಗೂ ಜನಹೃದಯಗಳಲ್ಲಿ ಜೀವಂತವಾಗಿರುತ್ತದೆ. ಪ್ರತಿಯೋರ್ವ ಭಾರತೀಯನ ಧಮನಿಗಳಲ್ಲಿ ಕಾಂಗ್ರೆಸ್ ರಕ್ತ ಹರಿಯುತ್ತಿದೆ ಎಂದು ಕಾಸರಗೋಡು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶ್ರೀ ಸೋಮಶೇಖರ್ ಜೆ. ಎಸ್. ಹೇಳಿದ್ದಾರೆ. ಅವರು ಮಂಗಲ್ಪಾಡಿ ಮಂಡಲ ಹದಿಮೂರನೇ ಮಲಂದೂರು ವಾರ್ಡ್ ಕಾಂಗ್ರೆಸ್ ರೂಪೀಕರಣ ಸಭೆ ಹಾಗೂ ಮಹಾತ್ಮಾ ಗಾಂಧಿ ಕುಟುಂಬ ಸಂಗಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು. ಮಂಜೇಶ್ವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಮುಹಮ್ಮದ್ ಡಿಎಂಕೆ ಮುಖ್ಯ ಭಾಷಣ ಮಾಡಿದರು.ಶ್ರೀ ಇಬ್ರಾಹಿಂ…

Read More

ಶ್ರೀ ಧೂಮಾವತಿ ಕೋಮರಾಯ ಚಾಮುಂಡೇಶ್ವರಿ ಪರಿವಾರ ದೈವಸ್ಥಾನ ಕಕ್ಕೆಪ್ಪಾಡಿ ಪುತ್ತಿಗೆ ವಿಜ್ಞಾಪನ ಪತ್ರ ಬಿಡುಗಡೆ.

ಕುಂಬಳೆ : ಶ್ರೀ ಧೂಮಾವತಿ ಕೋಮರಾಯ ಚಾಮುಂಡೇಶ್ವರಿ ಪರಿವಾರ ದೈವಸ್ಥಾನ ಕಕ್ಕೆಪ್ಪಾಡಿ ಪುತ್ತಿಗೆ ಇಲ್ಲಿನ ಜೀರ್ಣೋದ್ಧಾರದ ಅಂಗವಾಗಿ ವಿಜ್ಞಾಪನಾ ಪತ್ರ ಬಿಡುಗಡೆ ಮತ್ತು ನಿಧಿ ಸಂಚಯನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ನಡೆದ ಸಭಾಕಾರ್ಯಕ್ರಮವನ್ನು ಪುತ್ತಿಗೆ ಗ್ರಾಮ ಪಂಚಾಯತ್ ನ ಸ್ಥಾಯಿ ಸಮಿತಿ ಅಧ್ಯಕ್ಷ ಪಿ .ಪಾಲಾಕ್ಷ ರೈ ಉಧ್ಘಾಟಿಸಿದರು.ಬಾಕುಡ ಸಮುದಾಯದ 18 ದೈವಸ್ಥಾನದ ದೈವದ ಪಾತ್ರಿಗಳ ಒಕ್ಕೂಟದ ಅಧ್ಯಕ್ಷರಾದ ಶ್ರೀ ಶಂಕರ ಅಡ್ಕ ದೀಪ ಪ್ರಜ್ವಲನೆ ಮಾಡಿದರು. ಮುಗು ಶ್ರೀ ಸುಬ್ರಾಯ ಕ್ಷೇತ್ರದ ಆಡಳಿತ ಮೊಕ್ತೇಸರರಾದ…

Read More

ಶಾಲಾ ಮಿತ್ರ ಮಂಡಳಿ ಗ್ರಂಥಾಲಯ ಮತ್ತು ವಾಚನಾಲಯ ಹಾಗೂ ಮಂಜೇಶ್ವರ ತಾಲೂಕು ಲೈಬ್ರರಿ ಕೌನ್ಸಿಲ್ ನ ಸಂಯುಕ್ತ ಆಶ್ರಯದಲ್ಲಿ ಸಂಸ್ಮರಣಾ ಕಾರ್ಯಕ್ರಮ.

ಮಂಜೇಶ್ವರ: ಶಾಲಾ ಮಿತ್ರ ಮಂಡಳಿ ಗ್ರಂಥಾಲಯ ಮತ್ತು ವಾಚನಾಲಯ ಹಾಗೂ ಮಂಜೇಶ್ವರ ತಾಲೂಕು ಲೈಬ್ರರಿ ಕೌನ್ಸಿಲ್ ನ ಸಂಯುಕ್ತ ಆಶ್ರಯದಲ್ಲಿ ಆದಿತ್ಯವಾರದಂದು ಎಸ್ ನಾರಾಯಣ ಭಟ್ ಅವರ ಸಂಸ್ಮರಣಾ ಕಾರ್ಯಕ್ರಮವು ಬಾಯಾರು ಹೆದ್ದಾರಿ ಶಾಲಾ ಸಭಾಂಗಣದಲ್ಲಿ ಜರುಗಿತು. ಮಂಜೇಶ್ವರ ತಾಲೂಕು ಲೈಬ್ರರಿ ಕೌನ್ಸಿಲ್ ನ ಅಧ್ಯಕ್ಷರಾದ ಶ್ರೀಮತಿ ಶ್ರೀ ಕುಮಾರಿ ಟೀಚರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಾಹಿತಿಗಳಾದ ಶ್ರೀ ಶ್ರೀರಾಮ ಪದಕಣ್ಣಾಯ ಅವರು ಸಂಸ್ಮರಣಾ ಭಾಷಣವನ್ನು ನೆರವೇರಿಸಿದರು. ಶ್ರೀ ರಾಮಕೃಷ್ಣ ಭಟ್ ಪೆಲತ್ತಡ್ಕ, ಗ್ರಂಥಾಲಯದ ಉಪಾಧ್ಯಕ್ಷರಾದ ಶ್ರೀ…

Read More

ಕಾಸರಗೋಡು:ಎಸ್.ನಾರಾಯಣ ಭಟ್ ಸಂಸ್ಮರಣೆ.

ರಾಜ್ಯ ಲೈಬ್ರರಿ ಕೌನ್ಸಿಲ್ ಮಾಜಿ ಸದಸ್ಯರಾಗಿ, ಕೆಎಸ್ ಟಿಎ ರಾಜ್ಯ ಸಮಿತಿ ಸದಸ್ಯರಾಗಿ, ಸೇವಾ ಪಿಂಚಣಿದಾರರ ಸಂಘದ ರಾಜ್ಯ ನಾಯಕರಾಗಿ, ತುಳು ಅಕಾಡೆಮಿ ಸದಸ್ಯರಾಗಿ ಸೇವೆ ಸಲ್ಲಿಸಿದ ಶ್ರೀ ಎಸ್ ನಾರಾಯಣ ಭಟ್ ಅವರನ್ನು ಕಾಸರಗೋಡು ಜಿಲ್ಲಾ ಲೈಬ್ರರಿ ಕೌನ್ಸಿಲ್ ವತಿಯಿಂದ ಸಂಸ್ಕರಣೆ ನಡೆಯಿತು. ಕಾಸರಗೋಡು ಜಿಲ್ಲಾ ಗ್ರಂಥಾಲಯ ಸಭಾಂಗಣದಲ್ಲಿ ನಡೆದ ಸ್ಮರಣಾಂಜಲಿ ಕಾರ್ಯಕ್ರಮವನ್ನು ಕಾಸರಗೋಡು ಶಾಸಕ ಶ್ರೀ ಎನ್. ಎ. ನೆಲ್ಲಿಕುನ್ನು ಅವರು ಶ್ರೀಯುತರ ಭಾವಚಿತ್ರ ಅನಾವರಣಗೊಳಿಸುವ ಮೂಲಕ ಉದ್ಘಾಟಿಸಿದರು. ಅಡ್ವ. ಪಿ ಅಪ್ಪುಕುಟ್ಟನ್ ಅಧ್ಯಕ್ಷತೆ…

Read More

ಕುಂಬಳೆ ರಾ.ಹೆದ್ದಾರಿಯಲ್ಲಿ ಕಾರೊಂದು ಸ್ಕೂಟರಿಗೆ ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಸ್ಕೂಟರ್ ಸವಾರ ದಾರುಣವಾಗಿ ಸಾವು.

ಮಂಜೇಶ್ವರ : ಕುಂಬಳೆ ರಾ.ಹೆದ್ದಾರಿಯಲ್ಲಿ ಕಾರೊಂದು ಸ್ಕೂಟರಿಗೆ ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಸ್ಕೂಟರ್ ಸವಾರ ದಾರುಣವಾಗಿ ಸಾವನ್ನಪ್ಪಿದ್ದಾನೆ. ಉಪ್ಪಳ ಸೋಂಕಾಲು ಪ್ರತಾಪ ನಗರ ನಿವಾಸಿ ನವೀನ (53) ಸಾವನ್ನಪ್ಪಿದ ದುರ್ದೈವಿ. ಶನಿವಾರ ರಾತ್ರಿ ಕುಂಬಳೆಯಲ್ಲಿ ಕೆಲಸ ಮುಗಿಸಿ ಮನೆಯ ಕಡೆ ಹಿಂತಿರುಗುತ್ತಿರುವ ಮಧ್ಯೆ ಕುಂಬಳೆ ಗೋಪಾಲಕೃಷ್ಣ ಕ್ಷೇತ್ರ ಸಮೀಪದ ಷಟ್ಪದ ರಸ್ತೆಯಲ್ಲಿ ಎದುರು ಭಾಗದಿಂದ ಅಮಿತ ವೇಗದಲ್ಲಿ ಆಗಮಿಸಿದ ಕಾರೊಂದು ಸ್ಕೂಟರಿಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.ಹೊಡೆತದ ರಭಸಕ್ಕೆ ರಸ್ತೆಗೆಸೆಯಲ್ಪಟ್ಟು ತಲೆಗೆ ಗಂಭೀರ ಗಾಯಗೊಂಡ…

Read More
error: Content is protected !!