Avatar

Shramitha bejja

ಅಸ್ತ್ರ ಗ್ರೂಪ್ ಮತ್ತು ಶರಧಿ ಪ್ರತಿಷ್ಠಾನದ ಆಶ್ರಯದಲ್ಲಿ ಪುಟಾಣಿ ಮಕ್ಕಳಿಗೆ ಮಣ್ಣಿನ ಗಣಪತಿ ಸ್ಪರ್ಧೆ 2025 . ಆಗಸ್ಟ್ 27 ರಂದು ಮಧ್ಯಾಹ್ನ .

ಅಸ್ತ್ರ ಗ್ರೂಪ್ ಮತ್ತು ಶರಧಿ ಪ್ರತಿಷ್ಠಾನದ ಆಶ್ರಯದಲ್ಲಿ ಪುಟಾಣಿ ಮಕ್ಕಳಿಗೆ ಮಣ್ಣಿನ ಗಣಪತಿ ಸ್ಪರ್ಧೆ 27 ರಂದು ಮಧ್ಯಾಹ್ನ 2 ರಿಂದ 3:30 ಕ್ಕೆ ಲಾಲ್ ಭಾಗ್ ಸ್ಕೌಟ್ ಆಂಡ್ ಗೈಡ್ ಭವನದಲ್ಲಿ ನಡೆಯಲಿದೆ.ಈ ಸ್ಪರ್ಧೆಯಲ್ಲಿ 5 ರಿಂದ 15 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ವಿವಿಧ ವಿಭಾಗಗಳಲ್ಲಿ ಸ್ಪರ್ಧೆಗಳನ್ನು ಆಯೋಜಿಸಲಾಗುವುದು . .ಸ್ಪರ್ಧೆಗಳು ನಿಯಮ ಸೂಚಿ ಮತ್ತು ಮಾನದಂಡದ ಆಧಾರದಲ್ಲಿ ನಡೆಯಲಿದೆ.ಸ್ಪರ್ಧೆಯ ನೋಂದಣಿ ಆಗಸ್ಟ್ 25 ಕ್ಕೆ ಕೊನೆಯ ದಿನ .ಸ್ಪರ್ದಿಗಳು ಮಣ್ಣನ್ನು ತರಲು ಅವಕಾಶವಿದೆ.ರಾಸಾಯನಿಕ ಬಣ್ಣಗಳನ್ನು ಬಳಸುವಂತಿಲ್ಲ…

Read More

ಅಸ್ತ್ರ ಗ್ರೂಪ್ ಮತ್ತು ಶರಧಿ ಪ್ರತಿಷ್ಠಾನದ ಆಶ್ರಯದಲ್ಲಿ ಕೃಷ್ಣಮಯ ಮಕ್ಕಳ ಫೋಟೋ ಸ್ಪರ್ಧೆ 2025 .ಫೋಟೋ ಸಲ್ಲಿಕೆಗೆ ಕೊನೆಯ ದಿನಾಂಕ 25 ಆಗಸ್ಟ್ 2025.

ಅಸ್ತ್ರ ಗ್ರೂಪ್ ಮತ್ತು ಶರಧಿ ಪ್ರತಿಷ್ಠಾನದ ಆಶ್ರಯದಲ್ಲಿ ಕೃಷ್ಣಮಯ ಮಕ್ಕಳ ಫೋಟೋ ಸ್ಪರ್ಧೆ 2025 ಆಯೋಜಿಸಲಾಗಿದೆ.ಭಾಗವಹಿಸುವವರು 1 – 10 ವರ್ಷ ದೊಳಗಿನ ಮಕ್ಕಳಾಗಿರಬೇಕು.ಛಾಯಾಚಿತ್ರ ಸ್ಪಷ್ಟವಾಗಿರಬೇಕು ಹಾಗೂ ಇತ್ತೀಚೆಗಿನದ್ದಾಗಿರಬೇಕು .ಛಾಯಾಚಿತ್ರದ ಹಿಂಭಾಗದಲ್ಲಿ ಮಗುವಿನ ಹೆಸರು ಮತ್ತು ಪೋಷಕರ ಸಂಪರ್ಕ ಸಂಖ್ಯೆ ಇರಬೇಕು .ಭಾಗವಹಿಸಲು ನಿಮ್ಮ ಮಗುವಿನ ಅತ್ಯುತ್ತಮ 1 ಚಿತ್ರವನ್ನು ಕಳುಹಿಸಿ ಒಂದು ಮುದ್ರಿತ ಹಾರ್ಡ್‌ ಕಾಪಿ ಛಾಯಾಚಿತ್ರವನ್ನು (ಗಾತ್ರ: 12X8 ಅಥವಾ 6X9 ಇಂಚು) ಸಲ್ಲಿಸಬೇಕು. ಎಲ್ಲಾ ಫೋಟೋಗಳನ್ನು ಸೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ಪ್ರದರ್ಶಿಸಲಾಗುತ್ತದೆ….

Read More

ಪ್ರತಾಪನಗರ 42 ನೇ ಸಾರ್ವಜನಿಕ ಗೌರಿ ಗಣೇಶೋತ್ಸವ ,8 ನೇ ವರ್ಷದ ಭಜನೋತ್ಸವ , ಸಾಮೂಹಿಕ ಶ್ರೀ ಶನೈಶ್ಚರ ಕಲ್ಪೋಕ್ತ ಪೂಜೆ . ಆಗಸ್ಟ್ 24 ರಿಂದ.

ಉಪ್ಪಳ :ಪ್ರತಾಪನಗರ ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ ಮಂದಿರದಲ್ಲಿ 42 ನೇ ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ ಹಾಗೂ ಸಾಮೂಹಿಕ ಶ್ರೀ ಶನೈಶ್ಚರ ಕಲ್ಪೋಕ್ತ ಪೂಜೆ ಮತ್ತು 8 ನೇ ವರ್ಷದ ಭಜನೋತ್ಸವ ಆಗಸ್ಟ್ 24 ರಿಂದ 28 ರ ವರೆಗೆ ವಿವಿಧ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ದಿನಾಂಕ 24 ರಂದು ಬೆಳಿಗ್ಗೆ 7 ರಿಂದ ಸಾಮೂಹಿಕ ಪ್ರಾರ್ಥನೆ ,ಗಣಹೋಮ .ಸಾಯಂಕಾಲ 3 30 ರಿಂದ ಬಜೆ ಹರಿನಾರಾಯಣ ಮಯ್ಯ ಇವರ ಪೌರೋಹಿತ್ಯದಲ್ಲಿ ಸಾಮೂಹಿಕ ಶ್ರೀ…

Read More

ಕಾರ್ಯನಿರ್ವಹಣಾ ಶ್ರೇಷ್ಠತೆಯಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನಗಳಿಸಿದ ಕಾಸರಗೋಡು ಜಿಲ್ಲಾ ಸಹಕಾರಿ ಆಸ್ಪತ್ರೆ ಕುಂಬಳೆ.

ಕುಂಬಳೆ: ಕಾರ್ಯನಿರ್ವಹಣಾ ಶ್ರೇಷ್ಠತೆಯಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನಗಳಿಸಿದ ಕಾಸರಗೋಡು ಜಿಲ್ಲಾ ಸಹಕಾರಿ ಆಸ್ಪತ್ರೆಯ ಕುಂಬಳೆ ಶಾಖೆ ಪೌರ ಸ್ವಾಗತ ಕಾರ್ಯಕ್ರಮ ನಡೆಯಿತು . ರಾಜ್ಯ ಪರಿಶಿಷ್ಟ ಜಾತಿ,ಪರಿಶಿಷ್ಟ ವರ್ಗ ,ಹಿಂದುಳಿದ ವರ್ಗ ಖಾತೆ ಸಚಿವ ಓ .ಆರ್. ಕೇಳು ಉಧ್ಘಾಟಿಸಿದರು.ಮಂಜೇಶ್ವರ ಶಾಸಕ ಎ ಕೆ ಎಂ ಅಶ್ರಫ್ ಅಧ್ಯಕ್ಷತೆ ವಹಿಸಿದರು. ಕಾರ್ಯಕ್ರಮದಲ್ಲಿ ಕುಂಬಳೆ ಗ್ರಾಮ ಪಂಚಾಯತ್ ಅಧ್ಯಕ್ಷೆ ತಾಯಿರ ಯೂಸುಫ್ , ಸಂಸದ ರಾಜಮೋಹನ್ ಉಣ್ಣಿತಾನ್ ,ತ್ರಿಕರಿಪುರ ಶಾಸಕ ಎಂ ರಾಜಗೋಪಾಲನ್ , ಶಾಸಕ ಇ…

Read More

ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿ, ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ: ಡಿಸಿಎಂ ಡಿ.ಕೆ.ಶಿವಕುಮಾರ್.

ಬೆಂಗಳೂರು: “ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಹಾಗೂ ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ ಮಾಡಬೇಕು ಎಂದು ಆಲೋಚನೆ ಮಾಡಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ಎರಡನೇ ಸಭೆಯನ್ನು ಮಂಗಳೂರಿನಲ್ಲಿ ನಡೆಸಲಾಗುವುದು. ಮುಂದಿನ ಸಭೆಗೆ ಯಾರನ್ನು ಆಹ್ವಾನ ಮಾಡಬೇಕು ಎಂದು ಸಲಹೆ ನೀಡಿದ್ದಾರೆ. ಈ ಸಭೆಯಲ್ಲಿ ಬಂಡವಾಳ ಹೂಡಿಕೆದಾರರು, ಕೇಂದ್ರ ಇಲಾಖೆ ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳನ್ನು ಕರೆಯಲಾಗುತ್ತದೆ. ಕರಾವಳಿ ಭಾಗಕ್ಕೆ ಹೊಸ ರೂಪ ನೀಡಲಾಗುತ್ತದೆ” ಎಂದು ತಿಳಿಸಿದರು. “ಕರಾವಳಿ ಭಾಗದ ಜನಪ್ರತಿನಿಧಿಗಳು…

Read More

ಉಪ್ಪಳದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್‌ನಲ್ಲಿ ಭಾರೀ ಅಗ್ನಿ ಅವಘಡ : ಲಕ್ಷಾಂತರ ರೂ. ಮೌಲ್ಯದ ಸಾಮಾಗ್ರಿಗಳು ಸುಟ್ಟು ಭಸ್ಮ.

ಮಂಜೇಶ್ವರ : ಉಪ್ಪಳ ನಗರದ ರೈಲ್ವೆ ನಿಲ್ದಾಣ ರಸ್ತೆಯಲ್ಲಿ ಶುಕ್ರವಾರ ಮಧ್ಯಾಹ್ನ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಬಹುಮಹಡಿ ಶಾಪಿಂಗ್ ಕಾಂಪ್ಲೆಕ್ಸ್ ಕಟ್ಟಡದ ಪ್ರಥಮ ಮಹಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ “ಮಾಸ್ಟರ್ ಕಂಪ್ಯೂಟರ್ಸ್” ಎಂಬ ಸಂಸ್ಥೆಯಲ್ಲಿ ಬೆಂಕಿ ತಗುಲಿದ್ದು ಲಕ್ಷಾಂತರ ಮೌಲ್ಯದ ಸಾಮಾಗ್ರಿಗಳು ಹೊತ್ತಿ ನಾಶಗೊಂಡಿದೆ.ಮಾಹಿತಿ ಅರಿತು ಸ್ಥಳಕ್ಕೆ ಉಪ್ಪಳ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಅಗ್ನಿ ಅವಘಡದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಬೆಂಕಿ ವ್ಯಾಪಕವಾಗಿ ಹಬ್ಬಿದ ಪರಿಣಾಮ ಸ್ಥಳೀಯರಲ್ಲೂ ಆತಂಕ ಉಂಟಾಗಿದೆ. ಈ ಘಟನೆ ಹಿನ್ನೆಲೆಯಲ್ಲಿ ರೈಲ್ವೆ…

Read More

ಬೀದಿ ನಾಯಿಗಳ ಅಟ್ಟಹಾಸಕ್ಕೆ ನಾಗರಿಕರ ಮುಗಿಲು ಮುಟ್ಟಿದ ಆಕ್ರಂಧನ: ಅಧಿಕಾರಸ್ಥರ ಮಡುಗಟ್ಟಿದ ಮೌನದ ವಿರುದ್ಧ ಮುಸ್ಲಿಂ ಲೀಗ್ ನಿಂದ ಬೃಹತ್ ಪ್ರತಿಭಟನೆ.

ಮಂಜೇಶ್ವರ, ಆಗಸ್ಟ್ 22 – ಬೀದಿ ನಾಯಿಗಳ ಅಟ್ಟಹಾಸದಿಂದ ತತ್ತರಿಸಿರುವ ಮಂಜೇಶ್ವರ ಗ್ರಾಮಸ್ಥರ ಮುಗಿಲು ಮುಟ್ಟಿದ ಆಕ್ರಂಧನಕ್ಕೆ ಕಿಂಚತ್ತೂ ಬೆಲೆ ಕಲ್ಪಿಸಿದ ಮಂಜೇಶ್ವರ ಗ್ರಾಮ ಪಂಚಾಯತು ಅಧಿಕಾರಸ್ಥರ ಮಡುಗಟ್ಟಿದ ಮೌನದ ವಿರುದ್ಧ ನಾಗರಿಕರ ಆಕ್ರೋಶ ದಿನದಿಂದ ದಿನಕ್ಕೆ ಹೆಚ್ಚಿನ ರೀತಿಯಲ್ಲಿ ಸ್ಪೋಟಕಗೊಳ್ಳುತ್ತಿರುವ ದೃಶ್ಯ ಕಂಡು ಬರುತ್ತಿದೆ.ಶುಕ್ರವಾರದಂದು ಪಂಚಾಯತು ಅಧಿಕಾರಸ್ಥರ ವಿರುದ್ಧ ಅವರ ನಿರ್ಲಕ್ಷ್ಯವನ್ನು ವಿರೋಧಿಸಿ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಮಂಜೇಶ್ವರ ಪಂಚಾಯತು ಸಮಿತಿ ವತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಧರಣಿ ನಡೆಯಿತು. ಪಕ್ಷದ…

Read More

ಎಲ್ಲಾ ಅಡೆತಡೆಗಳನ್ನು ನಿವಾರಿಸಲಾಗಿದ್ದು, ಇನ್ನಾದರೂ ಬಡವರಿಗೆ ಸೂರು ಕಲ್ಪಿಸಿ:- ಶಾಸಕ ಕಾಮತ್

ಮಂಗಳೂರಿನ ಶಕ್ತಿನಗರದಲ್ಲಿ ತಮಗೊಂದು ಮನೆ ನಿರ್ಮಾಣವಾಗುತ್ತದೆಂದು 2017ರಿಂದಲೂ ಬಡಜನರು ಹಕ್ಕುಪತ್ರಗಳನ್ನು ಹಿಡಿದುಕೊಂಡು ಆಸೆ ಕಂಗಳಿಂದ ಕಾಯುತ್ತಿದ್ದು, ಇದೀಗ ಎಲ್ಲಾ ಅಡೆತಡೆಗಳನ್ನು ನಿವಾರಿಸಲಾಗಿದ್ದು ಪ್ರಸ್ತುತ ಸಾಲಿನ ಪ್ರಧಾನಮಂತ್ರಿ ಆವಾಸ್ ಯೋಜನೆ 2.0 ದಲ್ಲಾದರೂ ಆ ಬೇಡಿಕೆ ಈಡೇರಿಸಿ ಎಂದು ಶಾಸಕ ವೇದವ್ಯಾಸ ಕಾಮತ್ ರವರು ಅಧಿವೇಶನದಲ್ಲಿ ಸರ್ಕಾರವನ್ನು ಆಗ್ರಹಿಸಿದರು. ಈ ಭಾಗದ ಹಿಂದಿನ ಶಾಸಕರು 2017 ರಲ್ಲೇ 930 ಬಡ ಕುಟುಂಬಗಳಿಗೆ ಹಕ್ಕುಪತ್ರ ಕೊಟ್ಟು ತರಾತುರಿಯಲ್ಲಿ, ಕಾಮಗಾರಿಯ ಗುದ್ದಲಿ ಪೂಜೆ ಸಹ ಮಾಡಿ ಬಿಟ್ಟಿದ್ದರು. ಆದರೆ ಉದ್ದೇಶಿತ ಯೋಜನೆಯ…

Read More

ಬೀದಿ ನಾಯಿಗಳ ಹಾವಳಿಯಿಂದ ತತ್ತರಿಸಿದ ಜನತೆ : ಮಂಜೇಶ್ವರ ಗ್ರಾ. ಪಂ. ಕಚೇರಿಗೆ ಪ್ರತಿಭಟನಾ ಮೆರವಣಿಗೆ ಹಾಗೂ ಧರಣಿ.

ಮಂಜೇಶ್ವರ: ಬೀದಿ ನಾಯಿಗಳ ದಾಳಿಯಿಂದ ಹೈರಾಣಾಗಿರುವ ಮಂಜೇಶ್ವರದ ಜನತೆ ಗುರುವಾರ ಗ್ರಾಮ ಪಂಚಾಯತ್‌ ಕಚೇರಿಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಧರಣಿ ನಡೆಸುವ ಮೂಲಕ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಮಕ್ಕಳಿಂದ ಹಿಡಿದು ಹಿರಿಯರ ತನಕ ಎಲ್ಲರಿಗೂ ಆತಂಕ ಮೂಡಿಸಿರುವ ಈ ಸಮಸ್ಯೆಯ ಬಗ್ಗೆ ವರ್ಷಗಳ ಹಿಂದೆಯಿಂದಲೇ ಹಲವಾರು ಬಾರಿ ದೂರು ನೀಡಿದರೂ ಕೂಡ ಕ್ರಮ ಕೈಗೊಳ್ಳದೆ ಇದ್ದ ಪಂಚಾಯತ್ ಅಧಿಕಾರಿಗಳ ನಿರ್ಲಕ್ಷ್ಯತೆಯ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ಬೆಳಿಗ್ಗೆ ಮಂಜೇಶ್ವರ ರಿಜಿಸ್ಟ್ರಾರ್ ಕಚೇರಿ ಪರಿಸರದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ,…

Read More

ಕೊಂಡೆವೂರ್ ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ಅಖಂಡ ಭಜನೋತ್ಸಹ ,ಸಾಮೂಹಿಕ ವಿಷ್ಣು ಸಹಸ್ರ ನಾಮ ಹವನ ಆಗಸ್ಟ್ 24 ರಂದು.

ಉಪ್ಪಳ : ಕೊಂಡೆವೂರ್ ಶ್ರೀ ನಿತ್ಯಾನಂದ ಯೋಗಾಶ್ರಮದ ಶ್ರೀ ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿಗಳ 22 ನೇ ಚಾತುರ್ಮಾಸ್ಯ ವ್ರತಾಚರಣೆ ಪ್ರಯುಕ್ತ ಅಖಂಡ ಭಜನೋತ್ಸಹ ,ಸಾಮೂಹಿಕ ವಿಷ್ಣು ಸಹಸ್ರ ನಾಮ ಹವನ ಆಗಸ್ಟ್ 24 ಭಾನುವಾರದಂದು ಪರಮಪೂಜ್ಯ ದಿವ್ಯ ಉಪಸ್ಥಿತಿಯಲ್ಲಿ ನಡೆಯಲಿದೆ.ಬೆಳಗ್ಗೆ 7 ಗಂಟೆಗೆ ಗಣಪತಿ ಹೋಮ ,ಬೆಳಗ್ಗೆ 8 ಗಂಟೆಗೆ ಶ್ರೀ ವಿಷ್ಣು ಸಹಸ್ರನಾಮ ಹವನ ಆರಂಭ,ಪೂರ್ವಾಹ್ನ 10 ಕ್ಕೆ ಸಾಮೂಹಿಕ ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ ಆರಂಭ,10.45 ಕ್ಕೆ ಪೂರ್ಣಾಹುತಿ ಮಹಾಪೂಜೆ ,ಮಧ್ಯಾಹ್ನ…

Read More
error: Content is protected !!