Avatar

Shramitha bejja

ಸದನದಲ್ಲಿ ಯಶಸ್ವಿಯಾಗಿ ಕಲಾಪ ನಡೆಸಿಕೊಟ್ಟ ಶಾಸಕ ಮಂಜುನಾಥ ಭಂಡಾರಿ!

ಬೆಂಗಳೂರು: ಇಂದು ವಿಧಾನಸೌಧದಲ್ಲಿ ನಡೆದ ವಿಧಾನ ಮಂಡಲ ಅಧಿವೇಶನದಲ್ಲಿ ವಿಧಾನ ಪರಿಷತ್ ಶಾಸಕರಾದ ಮಂಜುನಾಥ ಭಂಡಾರಿಯವರು ಸಭಾಪತಿ ಪೀಠದಲ್ಲಿ ಕುಳಿತು ಶೂನ್ಯ ವೇಳೆಯ ಚರ್ಚೆಯನ್ನು ಹಾಗೂ ವಿವಿಧ ವಿಧೇಯಕಗಳ ಅಂಗೀಕಾರದ ಮೇಲಿನ ಚರ್ಚೆಯನ್ನು ಬಹಳ ಸುಧೀರ್ಘವಾಗಿ ಹಾಗೂ ಅರ್ಥಗರ್ಭಿತವಾಗಿ ನಡೆಸಿಕೊಟ್ಟರು. ಶಾಸಕ ಭಂಡಾರಿ ಅವರು ಈ ಹಿಂದೆಯೂ ಅನೇಕ ಬಾರಿ ಯಶಸ್ವಿಯಾಗಿ ವಿಧಾನ ಪರಿಷತ್ ಕಲಾಪವನ್ನು ನಿರ್ವಹಿಸುವ ಮೂಲಕ ಸೈ ಅನ್ನಿಸಿಕೊಂಡಿದ್ದಾರೆ.

Read More

ರಿಧಂ ಕಲ್ಚರಲ್ ವಿಂಗ್ ಮಂಜೇಶ್ವರ ಸ್ವಾತಂತ್ರ್ಯ ದಿನಾಚರಣೆಯ ವಿಶೇಷ ವಿಡಿಯೋ ಆಲ್ಬಮ್ ‘ಮಾ ತುಜೆ ಸಲಾಂ’ ಬಿಡುಗಡೆ:

ರಿಧಂ ಕಲ್ಚರಲ್ ವಿಂಗ್ ಮಂಜೇಶ್ವರದ ಸ್ವಾತಂತ್ರ್ಯ ದಿನಾಚರಣೆಯ ವಿಶೇಷ ವಿಡಿಯೋ ಆಲ್ಬಮ್ ‘ಮಾ ತುಜೆ ಸಲಾಂ’ ಬಿಡುಗಡೆ ನಮ್ಮ ಮೀಡಿಯಾ ಕಚೇರಿಯಲ್ಲಿ ಖ್ಯಾತ ಚಲನಚಿತ್ರ ,ನಾಟಕ ಹಾಸ್ಯ ನಟ ಸು ಫ್ರಮ್ ಸೋ ಚಿತ್ರದ ಬಾವ ಬಂದರು ಖ್ಯಾತಿಯ ಪುಷ್ಪರಾಜ್ ಬೊಳ್ಳಾರ್ ಬಿಡುಗಡೆಗೊಳಿಸಿದರು ಈ ಹಾಡಿಗೆ ಸಬಿ ತೆಕ್ಕೆಪುರಂ ,ಅಬ್ದುಲ್ ರಾಫಿ ,ಸತೀಶ್ ಕಯ್ಯಾರ್ ,ನಜೀರ ಎಂ.ಪಿ ಸಾಹಿತ್ಯವನ್ನು ನೀಡಿದ್ದು , ಧ್ವನಿ ಮುದ್ರಣವನ್ನು ರಾಜು ಉಪ್ಪಳ , ದಸ್ತಕೀರ್ ನಿರ್ವಾಹಿದ್ದಾರೆ , ಗಫೂರ್ ಪೆರ್ವಾಡ್ ಛಾಯಾಗ್ರಹಣದಲ್ಲಿ…

Read More

ಶಾರದಾ ಆರ್ಟ್ಸ್ ಕಲಾವಿದರು (ರಿ) ಮಂಜೇಶ್ವರ: ಹೊಚ್ಚ ಹೊಸ ನಾಟಕ “ಜೈ ಭಜರಂಗ ಬಲಿ” ನಾಟಕ ಪ್ರದರ್ಶನ. ಆ.16ರಂದು.

ಶಾರದಾ ಆರ್ಟ್ಸ್ ಕಲಾವಿದರು ಮಂಜೇಶ್ವರ ಐಸಿರಿ ತಂಡದ ಈ ವರ್ಷದ ಹೊಚ್ಚ ಹೊಸ ನಾಟಕ ಜೈ ಭಜರಂಗ ಬಲಿ ಆಗಸ್ಟ್ 16 ರ ಶನಿವಾರದಂದು ರಾತ್ರಿ 8 ಗಂಟೆಗೆ ಶ್ರೀ ಪಾಂಡುರಂಗ ಭಜನಾ ಮಂದಿರ ಮುದಂಗಾರು ಕಟ್ಟೆಯಲ್ಲಿ ಪ್ರಥಮ ಪ್ರದರ್ಶನ ಕಾಣಲಿದೆ. ‘ಸು ಫ್ರಮ್ ಸೊ’ ಚಿತ್ರದ ಭಾವ ಬಂದರು ಖ್ಯಾತಿಯ ಪ್ರಬುದ್ಧ ಕಲಾವಿದ ಪುಷ್ಪರಾಜ್ ಬೊಳ್ಳಾರ್ ,’ತುಳುನಾಡ ರಂಗ ಬೊಳ್ಳಿ’ ರವಿ ರಾಮ ಕುಂಜ ,’ಗಡಿನಾಡ ಅಭಿನಯ ರತ್ನ’ ಅನಿಲ್ ರಾಜ್ ಉಪ್ಪಳ ,’ರಂಗ ಚತುರ’…

Read More

ನಮ್ಮ ಕುಡ್ಲ ವಾಹಿನಿಯ ಬೊಳ್ಳಿ ಪರ್ಬ 2025 ಸಮಾರೋಪ ಮಾತೃಭಾಷೆಯಲ್ಲಿ ತುಳುವಾರ್ತೆ ಬಂದಾಗ ಬಾರೀ ಸಂತೋಷ : ಡಾ. ಡಿ. ವೀರೇಂದ್ರ ಹೆಗ್ಗಡೆ

ಮಂಗಳೂರು, ಆಗಸ್ಟ್ 13: ಧರ್ಮಸ್ಥಳದ ಎಲ್ಲಾ ಕಾರ್ಯಕ್ರಮಗಳಿಗೆ ನಮ್ಮಕುಡ್ಲ ಬೇಕೇ ಬೇಕು. ಶ್ರೀ ಕಾಂತರಾವ್ ರಂಥ ಅದ್ಭುತ ಟೀಮ್ ಇದೆ. ಮಾತೃಭಾಷೆ ನಮಗೆ ಬಹಳ ಪ್ರಿಯವಾದುದು. ಮಾತೃಭಾಷೆಯಲ್ಲಿ ತುಳುವಾರ್ತೆ, ಕಾರ್ಯಕ್ರಮ ಬಂದಾಗ ಭಾರೀ ಸಂತೋಷ ಎಂದು ರಾಜ್ಯಸಭಾ ಸದಸ್ಯ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಹೇಳಿದರು. ಮಂಗಳೂರಿನ ಪುರಭವನದಲ್ಲಿ ಆಗಸ್ಟ್ 12 ರಂದು ನಡೆದ ಪ್ರಥಮ ತುಳು ವಾರ್ತಾವಾಹಿನಿ ‘ನಮ್ಮಕುಡ್ಲ’ದ ಬೊಳ್ಳಿ ಪರ್ಬ 2025 ರ ಸಮಾರೋಪ ಸಮಾರಂಭದಲ್ಲಿ…

Read More

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ ತಿದ್ದುಪಡಿ ಕುರಿತು ಸಚಿವರಿಗೆ ಮನವಿ ಸಲ್ಲಿಸಿದ ಶಾಸಕ ಕಿಶೋರ್ ಕುಮಾರ್ ಪುತ್ತೂರು.

ಬೆಂಗಳೂರು: ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮದ ಸೆಕ್ಷನ್ 64 ಪ್ರಕಾರ, ಗ್ರಾಮ ಪಂಚಾಯತ್ ವ್ಯಾಪ್ತಿಯ ಕಟ್ಟಡ ಪರವಾನಿಗೆ ವಿತರಿಸುವ ಅಧಿಕಾರ ಗ್ರಾಮ ಪಂಚಾಯತಿಗಿದೆ. ಆದರೆ, ಸಬ್-ಸೆಕ್ಷನ್ 5-A ಪ್ರಕಾರ ಲೇಔಟ್ ಅನುಮೋದನೆ ಮತ್ತು ಕಟ್ಟಡ ಪರವಾನಿಗೆ ವಿತರಿಸುವ ಸಂದರ್ಭದಲ್ಲಿ ಗ್ರಾಮ ಪಂಚಾಯತಿಗಳು ಪಟ್ಟಣ ಮತ್ತು ಗ್ರಾಮಾಂತರ ಯೋಜನಾ ಅಧಿನಿಯಮ 1961 ಅನ್ನು ಪಾಲಿಸಬೇಕಾದ ಕಾರಣ, ಗ್ರಾಮ ಪಂಚಾಯತಿಗಳಿಗೆ ತಾಂತ್ರಿಕ ಅನುಮೋದನೆ ನೀಡುವ ಅಧಿಕಾರ ಇಲ್ಲದಂತಾಗಿದೆ. ಈ ಹಿನ್ನೆಲೆಯಲ್ಲಿ, ಶಾಸಕ ಕಿಶೋರ್ ಕುಮಾರ್ ಪುತ್ತೂರು…

Read More

ಅಮೇರಿಕದೊಂದಿಗಿನ ಭಾರತ ಒಪ್ಪಂದವನ್ನು ಹಿಂತೆಗೆಯಬೇಕೆಂದು ಒತ್ತಾಯಿಸಿ,ಕರ್ಷಕ ಸಂಘದ ಪ್ರತಿಭಟನೆ.

ಅಮೇರಿಕದೊಂದಿಗಿನ ಭಾರತ ಒಪ್ಪಂದವನ್ನು ಹಿಂತೆಗೆಯಬೇಕೆಂದು ಒತ್ತಾಯಿಸಿ,ಅಮೇರಿಕ ಅಧ್ಯಕ್ಷರು ಮತ್ತು ಭಾರತ ಪ್ರಧಾನಿ ವಿರುದ್ಧ ಎಡರಂಗ ಕರ್ಷಕ ಸಂಘಟನೆಗಳ ನೇತೃತ್ವದಲ್ಲಿ ಮಂಜೇಶ್ವರ ಹೊಸಂಗಡಿ ಪೇಟೆ ಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಕರ್ಷಕ ಸಂಘದ ಮಂಜೇಶ್ವರ ಏರಿಯಾ ಕಾರ್ಯದರ್ಶಿ ಅಶೋಕ ಭಂಡಾರಿ ಅಧ್ಯಕ್ಷತೆ ವಹಿಸಿದ ಪ್ರತಿಭಟನಾ ಮೆರವಣಿಗೆ ಯನ್ನು ಕಿಸಾನ್ ಸಭಾ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಕೆ. ಕುಂಞಿಕಣ್ಣನ್ ಉದ್ಘಾಟಿಸಿ ಮಾತನಾಡಿದರು. ಸಿ. ಪಿ. ಐ ನೇತಾರ ರಾದ ಜಯರಾಮ ಬಳ್ಳಂಗು ಡೇಲು ಸ್ವಾಗತಿಸಿ, ನಾಯಕರಾದ ಕೆ. ಕಮಲಾಕ್ಷ, ಎಂ.ರಾಮಚಂದ್ರ,…

Read More

ದೇಶದ ಸ್ವಾತಂತ್ರ್ಯ ಸಂರಕ್ಷಣೆ ದೇಶ ಪ್ರೇಮಿಗಳ ಕರ್ತವ್ಯ – ನಿವೃತ್ತ ಸೇನಾನಿ ನಾರಾಯಣ ಶೆಟ್ಟಿ.

ಪೈವಳಿಕೆ: ಭಾರತ ಜಗತ್ತಿನಲ್ಲಿ ವಿಶ್ವ ಗುರು ಆಗುತ್ತಿದೆ, ದೇಶದ ಸೈನಿಕ ಶಕ್ತಿ ಓಪರೇಶನ್ ಸಿಂಧೂರ ಮೂಲಕ ಜಗತ್ತು ಕಂಡಿದೆ. ಉತ್ತರ ನೀಡಲು ಹೊರಟರೆ ಭಾರತದ ಶಕ್ತಿಯನ್ನು ಮನಿಸಲು ಜಗತ್ತಿನ ಯಾವ ಶಕ್ತಿಗೂ ಸಾಧ್ಯವಿಲ್ಲ ಎಂದು ನಿವೃತ್ತ ಸೇನಾನಿ ಕಯ್ಯರ್ ನಾರಾಯಣ ಶೆಟ್ಟಿ ಹೇಳಿದರು. ಬಾಯಿಕಟ್ಟೆ ಯಿಂದ ಪೈವಳಿಕೆ ಪೇಟೆ ತನಕ ಬಿಜೆಪಿ ಮಂಜೇಶ್ವರ ಮಂಡಲ ಸಮಿತಿ ನೇತೃತ್ವ ದಲ್ಲಿ ನಡೆದ ತಿರಂಗ ಯಾತ್ರೆ ಯನ್ನು ನಿವೃತ್ತ ಸೈನಿಕ ರಾದ ವಸಂತ್ ಕೃಷ್ಣ ಶರ್ಮ ಬಿಜೆಪಿ ಮಂಜೇಶ್ವರ ಮಂಡಲ…

Read More

ಕರ್ನಾಟಕದಿಂದ ಕೇರಳಕ್ಕೆ ಅನಧಿಕೃತವಾಗಿ ಸಾಗಾಟ ಮಾಡುತಿದ್ದ ನಿಷೇಧಿತ ತಂಬಾಕು ಉತ್ಪನ್ನಗಳನ್ನು ಸೆರೆ ಹಿಡಿದ ಅಬಕಾರಿ ಪೊಲೀಸರು.ಇಬ್ಬರ ಬಂಧನ .

ಮಂಜೇಶ್ವರ : ಮಂಜೇಶ್ವರ ಅಬಕಾರಿ ಇಲಾಖೆ ಕರ್ನಾಟಕದಿಂದ ಕೇರಳಕ್ಕೆ ಅನಧಿಕೃತವಾಗಿ ಸಾಗಾಟ ಮಾಡುತಿದ್ದ ನಿಷೇಧಿತ ತಂಬಾಕು ಉತ್ಪನ್ನಗಳನ್ನು ಸಾಗಿಸುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ. ಆಫ್ಸಲ್ (32) ಹಾಗೂ ಅಶ್ರಫ್ (30) ಎಂಬ ಇಬ್ಬರನ್ನು ಬುಧವಾರ ಮುಂಜಾನೆ 5 ಗಂಟೆ ಸುಮಾರಿಗೆ ವಾಮಂಜೂರು ಚೆಕ್‌ಪೋಸ್ಟ್ ನಲ್ಲಿ ಕಾರು ತಪಾಸಣೆ ವೇಳೆ ಸೆರೆ ಹಿಡಿಯಲಾಗಿದೆ.. ಸಾಗಾಟ ಮಾಡುತ್ತಿದ್ದ ಕಾರಿನಿಂದ 214 ಕಿಲೋ ತೂಕದ ನಿಷಿದ್ಧ ತಂಬಾಕು ಉತ್ಪನ್ನಗಳು ಪತ್ತೆಯಾಗಿದ್ದು, ಇವುಗಳ ಮೌಲ್ಯ ಸುಮಾರು ರೂ. 2 ಲಕ್ಷ ಎಂದು ಅಂದಾಜಿಸಲಾಗಿದೆ.ಇದೇ ರೀತಿ…

Read More

ಮತಗಳ ಲೂಟಿ ವಿಚಾರ ಪುತ್ತಿಗೆ ಮಂಡಲ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ಹಾಗೂ ಚುನಾವಣಾ ಆಯೋಗಕ್ಕೆ ಪತ್ರ.

ಮತಗಳ ಲೂಟಿ ವಿಷಯದಲ್ಲಿ ಚುನಾವಣಾ ಆಯೋಗದ ಪಾರದರ್ಶಕತೆಯನ್ನು ಕೋರಿ ಲೋಕಸಭೆಯ ವಿರೋಧ ಪಕ್ಷ ನಾಯಕ ಶ್ರೀ ರಾಹುಲ್ ಗಾಂಧಿ ಅವರು ಎತ್ತಿದ ಐದು ಪ್ರಶ್ನೆಗಳಿಗೆ ಉತ್ತರಗಳನ್ನು ಕೋರಿ ಪುತ್ತಿಗೆ ಮಂಡಲಂ ಯುವ ಕಾಂಗ್ರೆಸ್ ಚುನಾವಣಾ ಆಯುಕ್ತರಿಗೆ ಪುತ್ತಿಗೆ ಅಂಚೆ ಕಛೇರಿಯಿಂದ ಪತ್ರ ಕಳುಹಿಸಿ ಪ್ರತಿಭಟನೆ ಮಾಡಿದರು . ಯುವ ಕಾಂಗ್ರೆಸ್ ಪುತ್ತಿಗೆ ಮಂಡಲ ಅಧ್ಯಕ್ಷ ದಯಾನಂದ ಬಾಡೂರು ಅವರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮವನ್ನು ಪಂಚಾಯತ್ ಸದಸ್ಯ ಕೇಶವ SR ಉದ್ಘಾಟಿಸಿದರು.ನೇತಾರರಾದ ಮಂಜೇಶ್ವರ ಮಂಡಲ ಅಧ್ಯಕ್ಷ ಜುನೈದ್ ಉರ್ಮಿ,…

Read More

ಶ್ರೀ ಚಾಮುಂಡೇಶ್ವರಿ ಭಜನಾ ಮಂಡಳಿ (ರಿ) ಪಾವೂರು.ಮೊಸರು ಕುಡಿಕೆ ಉತ್ಸವ 15 ರಂದು.

ಪಾವೂರು: ಶ್ರೀ ಚಾಮುಂಡೇಶ್ವರಿ ಭಜನಾ ಮಂಡಳಿ (ರಿ) ಬಜಾಲ್, ಪಾವೂರು ಹಾಗೂ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಪಾವೂರು ಇದರ ಜಂಟಿ ಆಶ್ರಯದಲ್ಲಿ ತಾರೀಕು 15/೦8/25ರಂದು ಶುಕ್ರವಾರ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ವಠಾರದಲ್ಲಿ ಮೊಸರು ಕುಡಿಕೆ ಉತ್ಸವ ನಡೆಯಲಿರುವುದು. ಬೆಳಿಗ್ಗೆ 10 ಗಂಟೆಗೆ ಮೊಸರು ಕುಡಿಕೆ ಕಾರ್ಯಕ್ರಮವನ್ನು ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಆಡಳಿತ ಸಮಿತಿಯ ಅಧ್ಯಕ್ಷರಾದ ಶ್ರೀ ಮನೋಹರ್ ಶೆಟ್ಟಿ ಕೆದುಂಬಾಡಿ ಉದ್ಘಾಟಿಸಲಿರುವರು. ನಂತರ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿರುವುದು. ಸಂಜೆ 5ಕ್ಕೆ ಸಮರೋಪ ಸಭಾ ಕಾರ್ಯಕ್ರಮದಲ್ಲಿ…

Read More
error: Content is protected !!