Avatar

Shramitha bejja

ದೇಶಾದ್ಯಂತ 1000ಕ್ಕೂ ಹೆಚ್ಚು ವಿಮಾನ ಹಾರಾಟ ರದ್ದು; ಪ್ರಯಾಣಿಕರಲ್ಲಿ ಕ್ಷಮೆಯಾಚಿಸಿದ ಇಂಡಿಗೋ ಸಂಸ್ಥೆ

ನವದೆಹಲಿ: ದೇಶಾದ್ಯಂತ 1000ಕ್ಕೂ ಹೆಚ್ಚು ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ಇಂಡಿಗೋ ಸಂಸ್ಥೆ ಪ್ರಯಾಣಿಕರಲ್ಲಿ ಕ್ಷಮೆಯಾಚಿಸಿದ್ದು, ಫೆಬ್ರವರಿ ವೇಳೆಗೆ ಸಮಸ್ಯೆ ಸರಿಪಡಿಸುವುದಾಗಿ ಭರವಸೆ ನೀಡಿದೆ.ಈ ಕುರಿತು ಮಾಹಿತಿ ಡಿಜಿಸಿಎಗೆ ನೀಡಿರುವ ಇಂಡಿಗೋ ಸಂಸ್ಥೆ, ಸದ್ಯಕ್ಕೆ ಈ ಸಮಸ್ಯೆಗೆ ಪರಿಹಾರ ಸಿಗದಿರಬಹುದು. ಆದರೆ ಫೆಬ್ರವರಿ 10ರ ವೇಳೆಗೆ ವಿಮಾನಗಳ ಹಾರಾಟವನ್ನು ಪುನರಾರಂಭಿಸಲಾಗುವುದು ಎಂದು ಹೇಳಿದೆ. ಇನ್ನೂ ಕಳೆದೆರಡು ದಿನಗಳಿಂದ ಸಮಸ್ಯೆ ಅನುಭವಿಸುತ್ತಿರುವ ಗ್ರಾಹಕರಲ್ಲಿ ಕ್ಷಮೆಯಾಚಿಸಿದೆ. ಇನ್ನೂ ಕಳೆದ ಮೂರು ದಿನಗಳಲ್ಲಿ ಸಾವಿರಕ್ಕೂ ಹೆಚ್ಚು ವಿಮಾನಗಳು ರದ್ದಾಗಿದ್ದು, ಸಿಬ್ಬಂದಿ ಸಮಸ್ಯೆಯಿಂದ ಅಂತಾರಾಷ್ಟ್ರೀಯ…

Read More

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ.ಸಿಜೆ ಜೊತೆ ಚರ್ಚಿಸಿ ಪೀಠ ಸ್ಥಾಪನೆಗೆ ಪ್ರಾಮಾಣಿಕ ಪ್ರಯತ್ನ.ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ಮಂಗಳೂರಿನಲ್ಲಿ ಸಂಚಾರಿ ಹೈಕೋರ್ಟ್ ಪೀಠ ಅತ್ಯವಶ್ಯಕತೆ ಇದೆ ಎಂಬುದು ನನ್ನ ಗಮನಕ್ಕೆ ಬಂದಿದೆ. ಈ ಬಗ್ಗೆ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳ ಜೊತೆಯಲ್ಲಿ ಚರ್ಚಿಸಿ ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.ಮಂಗಳೂರಿನಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಗೆ ಕರಾವಳಿ ಭಾಗದ ವಕೀಲರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಈ ಸಂದರ್ಭದಲ್ಲಿ ಮಾತನಾಡಿದ ಹೈಕೋರ್ಟ್ ಪೀಠ ಹೋರಾಟ ಸಮಿತಿ ಸಂಚಾಲಕರು ಹಾಗೂ ವಿಧಾನ…

Read More

ಅಪಘಾತದ ಹಾಟ್ ಸ್ಪಾಟ್ ಆಗಲಿದೆಯಾ ಉರ್ವ ಮಾರಿಗುಡಿ ಸರ್ಕಲ್ ….. ! ?

ಮಂಗಳೂರು:ನೂತನವಾಗಿ ಉರ್ವ ಮಾರಿಗುಡಿ ಸಮೀಪದ ಆಟೋ ರಿಕ್ಷಾ ನಿಲ್ದಾಣದ ಬಳಿ ನಿರ್ಮಾಣವಾಗುತ್ತಿರುವ ಉರ್ವ ಮಾರಿಗುಡಿ ಸರ್ಕಲ್ ನ ಕಾಮಗಾರಿ ಮನಪಾ ಮತ್ತು ಅದನ್ನು ನಿರ್ಮಿಸಿದ ಇಂಜಿನಿಯರ್ ಅಧಿಕಾರಿಗಳ ಬೇಜವಾಬ್ದಾರಿಗೆ ಉದಾಹರಣೆ ಎಂಬಂತೆ ಇದೆ . ನಿರ್ಮಾಣ ಹಂತದಲ್ಲಿರುವ ಉರ್ವ ಮಾರಿಗುಡಿ ಸರ್ಕಲ್ ನ ಎತ್ತರವು ಹೆಚ್ಚಾಗಿದ್ದು ಇದು ವಾಹನ ಸವಾರರಿಗೆ ಎದುರಿನಿಂದ ಬರುವ ವಾಹನದ ಗೋಚರಕ್ಕೆ ಕಷ್ಟಕರವಾಗಿದೆ . ಇದರಿಂದ ಆ ಭಾಗದಲ್ಲಿ ಅಪಘಾತವಾಗುವ ಸಾಧ್ಯತೆ ಹೆಚ್ಚಿದೆ . ಈ ಸರ್ಕಲ್ ಪ್ರಮುಖವಾಗಿ ಅಶೋಕ ನಗರ ,…

Read More

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪನೆಗೆ ಸರಕಾರ ಸಿದ್ದ : ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಗಳೂರು:ಶ್ರೀ ನಾರಾಯಣ ಗುರು-ಗಾಂಧೀಜಿ ಸಂವಾದ ಶತಮಾನೋತ್ಸವದ ಪ್ರಯುಕ್ತ ಶಿವಗಿರಿ ಮಠ, ವರ್ಕಲ ಮತ್ತು ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠ, ಮಂಗಳೂರು ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಕೊಣಾಜೆಯ ಮಂಗಳೂರು ವಿಶ್ವವಿದ್ಯಾನಿಲಯ ಕ್ಯಾಂಪಸ್ ನಲ್ಲಿ ಶ್ರೀ ಮಹಾಗುರುವಿನ ಮಹಾ ಸಮಾಧಿ ಶತಾಬ್ದಿ ಸರ್ವಮತ ಸಮ್ಮೇಳನ ಶತಮಾನೋತ್ಸವ ಕಾರ್ಯಕ್ರಮ ನಡೆಯಿತು. ಇದೇ ವೇಳೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು ಎಂದರು.ಶಿವಗಿರಿ…

Read More

ಶ್ರೀ ಅಯ್ಯಪ್ಪ ಸ್ವಾಮೀ ಕುಣಿತ ಭಜನಾ ತಂಡ ಬಾಯಿಕಟ್ಟೆ. ನೂತನ ಕುಣಿತ ಭಜನೆಯ ಭಕ್ತಿ ವಿಡಿಯೋ ಆಲ್ಬಮ್ ಸ್ವರ್ಣ ಸನ್ನಿಧಿ -(ಈ ಪುಣ್ಯ ಮಲೆ) ಟೈಟಲ್ ಹಾಗೂ ಟ್ರೈಲರ್ ಬಿಡುಗಡೆ

ಶ್ರೀ ಅಯ್ಯಪ್ಪ ಸ್ವಾಮೀ ಕುಣಿತ ಭಜನಾ ತಂಡ ಬಾಯಿಕಟ್ಟೆ ಪೈವಳಿಕೆ ಇವರ ನೂತನ ಕುಣಿತ ಭಜನೆಯ ಭಕ್ತಿ ವಿಡಿಯೋ ಆಲ್ಬಮ್ ಶೆಟ್ಟಿ ಅಜಯ್ ರಾಜ್ ಅವರ ಸಾಹಿತ್ಯ ಹಾಗೂ ರಾಗಸಂಯೋಜನೆಯಲ್ಲಿ ಸಂದೀಪ್ ಆರ್ ಬಲ್ಲಾಳ್ ಸಂಗೀತ ನೀಡಿರುವ ವಾಣಿ ಮಧ್ವ ,ಪ್ರಾಪ್ತಿ ಆರ್ ಶೆಟ್ಟಿ ಹಾಡಿರುವ ,ರಕ್ಷಿತ್ ಎಸ್.ಎನ್.ಸಿ ಛಾಯಾಗ್ರಹಣ ಮಾಡಿರುವ ಉದಯ ಬೇಕೂರು ,ಮನೋಹರ್ ವಾದ್ಯಪಡ್ಪು ಅವರ ನಿರ್ದೇಶನದಲ್ಲಿ ಮೂಡಿ ಬಂದಿರುವ ಸ್ವರ್ಣ ಸನ್ನಿಧಿ -(ಈ ಪುಣ್ಯ ಮಲೆ) ಟೈಟಲ್ ಹಾಗೂ ಟ್ರೈಲರ್ ಬಾಯಿಕಟ್ಟೆ ಅಯ್ಯಪ್ಪ…

Read More

ಭಟ್ರಕುಮೇರು: ಡಿಸಂಬರ್ 7 ರಂದು ಬಾಲ ತನಿಯನ ವಾರ್ಷಿಕ ಕೋಲ ಸೇವೆ

ಮಂಗಳೂರು : ನಗರದ ಪದವಿನಂಗಡಿ ಸಮೀಪದ ಭಟ್ರಕುಮೇರು ಸ್ವಾಮಿ ಕೊರಗ ತನಿಯ ಸಾನಿಧ್ಯದಲ್ಲಿ ವಾರ್ಷಿಕ ಕೋಲ ಸೇವೆಯು ಇದೇ ಬರುವ ದಿನಾಂಕ 7 -12.-2025 ನೇ ಭಾನುವಾರದಂದು ತಂತ್ರಿಗಳಾದ ಶ್ರೀ ರವಿ ಆನಂದ ಶಾಂತಿ ಅಡುಮರೋಳಿ ಇವರ ಮಾರ್ಗದರ್ಶನದಲ್ಲಿ ಜರುಗಲಿದೆ.ಅಂದು ಬೆಳಿಗ್ಗೆ 7 ಗಂಟೆಯಿಂದ ಮಹಾಗಣಪತಿ ಹೋಮ, ನಂತರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯ ವರೆಗೆ ಸ್ಥಳೀಯ ವಿವಿಧ ಭಜನಾ ತಂಡಗಳಿಂದ ಭಜನೆ ಹಾಗೂ ಹರಿನಾಮ ಸಂಕೀರ್ತನೆ ನಡೆಯಲಿದೆ. ಸಂಜೆ 3 ಗಂಟೆಗೆ ಸಮಾರೋಪ…

Read More

ಅಂಗಡಿಯ ಶಟರ್ ಬೀಗ ಮುರಿದು ನಗದು ಹಾಗೂ ಸಾಮಾಗ್ರಿ ಕಳವು

ಮಂಜೇಶ್ವರ : ಮಂಜೇಶ್ವರ ರಾಗಂ ಜಂಕ್ಷನ್ ನಲ್ಲಿ ಕಾರ್ಯಾಚರಿಸುತ್ತಿರುವ ಅಶ್ರಫ್ ಎಂಬವರ ಮಾಲಕತ್ವದಲ್ಲಿರುವ ಭಾರತ್ ಸೂಪರ್ ಮಾರ್ಕೆಟ್ ಅಂಗಡಿಯ ಶಟರ್ ಬೀಗ ಮುರಿದು ಒಳನುಗ್ಗಿದ ಕಳ್ಳರು ಡ್ರವರಿನೊಳಗಿರಿಸಿದ್ದ 35000 ರೂಪಾಯಿ ನಗದು ಹಾಗೂ ಸುಮಾರು 10 ಸಾವಿರ ರೂಪಾಯಿ ಮೌಲ್ಯದ ಸಾಮಾಗ್ರಿಗಳನ್ನು ಕದ್ದೊಯ್ದಿದ್ದಾರೆ.ಬುಧವಾರ ಬೆಳಿಗ್ಗೆ ಮಾಲಕ ಅಶ್ರಫ್ ಅಂಗಡಿಗೆ ತಲುಪಿದಾಗ ಕಳವಾಗಿರುವುದು ಗಮನಕ್ಕೆ ಬಂದಿದೆ. ಮಂಗಳವಾರ ರಾತ್ರಿ ಕಳವು ನಡೆದಿದೆ.ಇದರ ಸಮೀಪದಲ್ಲಿರುವ ಮೊಬೈಲ್ ಅಂಗಡಿ ಹಾಗೂ ತರಕಾರಿ ಅಂಗಡಿಯ ಬೀಗ ಮುರಿದು ಕಳವಿಗೆ ಯತ್ನ ನಡೆದಿದೆ. ಘಟನಾ…

Read More

ಬಿಸಿಯೂಟ ನೌಕರರ ಅನಿರ್ಧಷ್ಟಾವದಿ ಮುಷ್ಕರ 2ನೇ ದಿನಕ್ಕೆ

ಮಾತೆ ಮಾತೆ ಎನ್ನುತ್ತಾ ಗೋವನ್ನು ಕಡಿದು ಗೋಮಾಂಸ ಮಾರಾಟ ಮಾಡುತ್ತಿರುವ ಕೇಂದ್ರದ ಬಿಜೆಪಿ ಸರಕಾರ ಅಡುಗೆ ಸಿಬ್ಬಂದಿಯರನ್ನೂ ಮಾತೆ ಮಾತೆ ಎನ್ನುತ್ತಾ ಸಂಬಳ ನೀಡದೆ ನಮ್ಮ ದೇಹದಲ್ಲಿ ರಕ್ತ‌ಮಾಂಸವೇ ಇಲ್ಲದಂತೆ ಮಾಡಿ ಅವರ ಬದುಕನ್ನೇ ನಾಶ ಮಾಡುತ್ತಿದೆ ಎಂದು ಸಿಐಟಿಯು ದ.ಕ. ಜಿಲ್ಲಾ ಅಧ್ಯಕ್ಷರಾದ ಬಿ.ಎಂ‌.ಭಟ್ ಹೇಳಿದರು. ಅವರು ಇಂದು ಮಂಗಳೂರು ಕ್ಲಾಕ್ ಟವರ್ ಎದುರು ಸ್ಕೀಮ್ ನೌಕರರಾದ ಬಿಸಿಯೂಟ ತಯಾರಕರ ಸಂಬಳ ಏರಿಕೆ ಕೆಲಸದ ಭದ್ರತೆಗೆ ಆಗ್ರಹಿಸಿ ನಡೆಯುತ್ತಿರುವ ಅನಿರ್ಧಿಷ್ಟ ಹೋರಾಟದ ಎರಡನೇ ದಿನದ ದರಣಿಯನ್ನು…

Read More

ಕರುವಿನ ಶಿರಚ್ಛೇದ ಮಾಡಿ ದೇಹವನ್ನು ಬಿಸಾಡಿ ಹೋದ ಗೋ ಹಂತಕರು

ಗದಗ:ದುಷ್ಕರ್ಮಿಗಳು ಕರುವಿನ ಶಿರಚ್ಛೇದ ಮಾಡಿದ ದೇಹವನ್ನು ಬಿಸಾಡಿ ಹೋಗಿರುವ ಆಘಾತಕಾರಿ ಘಟನೆ ಗದಗ ಎಪಿಎಂಸಿ ಮಾರುಕಟ್ಟೆ ಬಳಿ ನಡೆದಿದೆ.ಸಾರ್ವಜನಿಕರಲ್ಲಿ ಎರಡು ಬಗೆಯ ಚರ್ಚೆಗೆ ಕಾರಣವಾಗಿದೆ. ಅನಾಮಿಕ ದುಷ್ಕರ್ಮಿಗಳು ಉದ್ದೇಶಪೂರ್ವಕವಾಗಿ ಕರುವಿನ ತಲೆ ಕತ್ತರಿಸಿ ಗೋಹತ್ಯೆ ಮಾಡಿ, ದೇಹವನ್ನು ಇಲ್ಲಿ ಬಿಸಾಡಿ ಹೋಗಿರುವ ಸಾಧ್ಯತೆ ಇದೆ. ಕರುವಿನ ತಲೆಯನ್ನು ಚೀಲದಲ್ಲಿ ತುಂಬಿಕೊಂಡು ತಂದು ಬಿಸಾಡಿರುವ ಶಂಕೆ ವ್ಯಕ್ತವಾಗಿದೆ. ಮತ್ತೊಂದು ವಾದದ ಪ್ರಕಾರ, ಇತ್ತೀಚೆಗೆ ಅವಳಿ ನಗರದ ಸುತ್ತಮುತ್ತ ಕಾಣಿಸಿಕೊಂಡಿದ್ದ ಚಿರತೆಯೇ ಈ ಕೃತ್ಯ ಎಸಗಿದೆ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ….

Read More

ಸಹಸ್ರಾರು ಕಣ್ಣುಗಳು ಕಣ್ತುಂಬಿಕೊಂಡ ಚಾಮುಂಡಿಕುನ್ನು ಕಳಿಯಾಟ ಮಹೋತ್ಸವ 2025 …!

ಕಾಸರಗೋಡು ಜಿಲ್ಲೆಯ ಹೊಸದುರ್ಗ ತಾಲೂಕಿನ ಚಿತ್ತಾರಿ ಗ್ರಾಮದಲ್ಲಿರುವ ಚಾಮುಂಡಿಕುನ್ನು ಶ್ರೀ ವಿಷ್ಣು ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಕಳಿಯಾಟ ಮಹೋತ್ಸವ ಸಂಪನ್ನ ಗೊಂಡಿತ್ತು. ಕೊನೆಯ ದಿನವಾದ ನಿನ್ನೆ ಪುಮಾರುತನ್, ರಕ್ತ ಚಾಮುಂಡಿ, ಭಗವತಿ, ವಿಷ್ಣು ಮೂರ್ತಿ, ಧೂಮಾವತಿ, ಗುಳಿಗ ಎಂಬೀ ದೈವಗಳು ಭಕ್ತರಿಗೆ ದರ್ಶನವನ್ನು ನೀಡಿತ್ತು. ಐತಿಹಾಸಿಕ ಜಾತ್ರೆಯನ್ನು ಕಣ್ತುಂಬಿಕೊಳ್ಳಲು ಸಾವಿರಕ್ಕೂ ಅಧಿಕ ಸಂಖ್ಯೆಯ ರಾಜ್ಯ ಅಂತರರಾಜ್ಯದ ಭಕ್ತರು ಶ್ರೀ ಸನ್ನಿಧಿಗೆ ಆಗಮಿಸಿದ್ದರು. ಭಕ್ತರಿಗೆ ದರ್ಶನವನ್ನು ನೀಡಿ ತನು ಮನವನ್ನು ಭಕ್ತಿಯ ಸಾಕ್ಷಾತ್ಕಾರದತ್ತ ಕೊಂಡು ಹೋದ ದಿವ್ಯ ತೇಜಸ್ಸಿನ…

Read More
error: Content is protected !!