Avatar

Shramitha bejja

ಕೆಪಿಟಿಗೆ ಲಭ್ಯವಾಗದ ಫ್ಲೈಓವರ್ ಭಾಗ್ಯ…

ಮಂಗಳೂರು: ದಿನ ನಿತ್ಯವೂ ವಾಹನ ದಟ್ಟಣೆ , ಒಮ್ಮೆ ಸಿಗ್ನಲ್ ನಲ್ಲಿ ಸಿಕ್ಕಿ ಹಾಕಿಕೊಂಡರಂತೂ ತ್ರಿಶಂಕು ಸ್ಥಿತಿ , ನಾಲ್ಕೂ ಮಾರ್ಗಗಳು ಸೇರುವ ವೃತ್ತ ಇದಾಗಿದ್ದರೂ ಇನ್ನು ಫ್ಲೈ ಓವರ್ ಭಾಗ್ಯ ದೊರೆತಿಲ್ಲ. ಕೆ.ಪಿ.ಟಿ. ಜಂಕ್ಷನ್ ಅಥವಾ ವಿಶ್ವೇಶ್ವರಯ್ಯ ವೃತ್ತ ಎಂದು ಕರೆಯಲ್ಪಡುವ ‌ಪ್ರಮುಖ ಜಂಕ್ಷನ್ ಸದಾ ಟ್ರ್ರಾಫಿಕ್ ಜಾಮ್ ನಿಂದ ಬಾಧೆ ಕೊಡುತ್ತಿರುತ್ತದೆ . ಇಲ್ಲಿ ಫ್ರೀ ಲೆಷ್ಟ್ ಇದೆಯಾದರೂ ಅದಕ್ಕೆ ಅಡ್ಡವಾಗಿ ನಿಂತು ವಾಹನ ಸಂಚಾರಕ್ಕೆ ಅಡ್ಡಿಯುಂಟು ಮಾಡದಿದ್ದರೆ ಖಾಸಗಿ ಬಸ್ಸುಗಳ ಚಾಲಕರಿಗೆ ಉಂಡ…

Read More

ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆಯಲ್ಲಿ ಉತ್ತಮ ಫಲಿತಾಂಶ- ಕಾಂಗ್ರೆಸ್ ಆಶಾವಾದ

ವಾರ್ಡ್ ಮರು ನಿರ್ಣಯದಲ್ಲಿ ಸಿಪಿಎಂ ಯಾವ ಕೀಳು ರಾಜಕೀಯ ಆಟವಾಡಿದರೂ ನವೆಂಬರ್ ತಿಂಗಳಲ್ಲಿ ನಡೆಯಲಿರುವ ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ರಾಜ್ಯದಾದ್ಯಂತ ಉತ್ತಮ ಸಾಧನೆಗೈಯಲಿದೆ ಎಂದು ಮಂಜೇಶ್ವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಮುಹಮ್ಮದ್ ಡಿಎಂಕೆ ಆಶಾಭಾವನೆ ವ್ಯಕ್ತಪಡಿಸಿದ್ದಾರೆ. ಎಡರಂಗದ ದುರಾಡಳಿತದಿಂದ ಬೇಸತ್ತ ಜನಸಾಮಾನ್ಯರು ಸಿಪಿಎಂಗೆ ಸರಿಯಾದ ಉತ್ತರ ಕೊಡುವ ಅವಕಾಶಕ್ಕೆ ಕಾಯುತ್ತಿದ್ದಾರೆ. ಜನತೆಯ ರೋಷ ಈ ಚುನಾವಣೆಯಲ್ಲಿ ಪ್ರತಿಫಲಿಸಲಿದೆ ಎಂದು ಅವರು ಹೇಳಿದ್ದಾರೆ. ಮಂಗಲ್ಪಾಡಿ ಮಂಡಲ ಕಾಂಗ್ರೆಸ್ ಸಮಿತಿ ಸಭೆ ಉದ್ಘಾಟಿಸಿ ಅವರು…

Read More

ಪ್ರಶಾಂತಿ ವಿದ್ಯಾಕೇಂದ್ರ, ಬಾಯಾರು: ಕಾರ್ಗಿಲ್ ವಿಜಯ ದಿವಸ ಆಚರಣೆ

ಭಾರತೀಯ ಸೇನೆಯ ವೀರಯೋಧರ ತ್ಯಾಗ ಹಾಗೂ ಬಲಿದಾನಗಳನ್ನು ಸ್ಮರಿಸಿ ಅವರನ್ನು ಗೌರವಿಸಲು ಹಾಗೂ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿಯನ್ನರ್ಪಿಸಿ, ವಿದ್ಯಾರ್ಥಿಗಳಲ್ಲಿ ದೇಶಭಕ್ತಿಯ ಮನೋಭಾವನೆ ಬೆಳೆಸುವ ಉದ್ದೇಶದಿಂದ ಪ್ರಶಾಂತಿ ವಿದ್ಯಾಕೇಂದ್ರ, ಬಾಯಾರು ಮತ್ತು ಇಲ್ಲಿನ ಸಮಾಜ ವಿಜ್ಞಾನ ಸಂಘ ‘ಸಮಷ್ಟಿ’ ಇವರ ಸಂಯುಕ್ತ ಆಶ್ರಯದಲ್ಲಿ ಕಾರ್ಗಿಲ್ ವಿಜಯ ದಿವಸವನ್ನು ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಭಾರತೀಯ ಸೇನೆಯ ನಿವೃತ್ತ ಅಧಿಕಾರಿ ಶ್ರೀ ಸುರೇಶ್ ಕೆ. ಸೇನೆಯಲ್ಲಿನ ತಮ್ಮ ಅನುಭವಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಳ್ಳುತ್ತಾ, ರಾಷ್ಟ್ರ ಸೇವೆಯ ಮಹತ್ತ್ವವನ್ನು ವಿವರಿಸಿದರು. ಪ್ರತಿಯೊಬ್ಬರು…

Read More

ನಮ್ಮ ಮೀಡಿಯಾ 24×7 ವರದಿಗೆ ಫಲ ಶ್ರುತಿ. ಮಂಜೇಶ್ವರ ಸರ್ವಿಸ್ ರಸ್ತೆ ಬಳಿ ಇದ್ದ ಬಸ್ ನಿಲ್ದಾಣದ ಸಮೀಪವಿದ್ದ ವಿದ್ಯುತ್ ಟ್ರಾನ್ಸ್‌ಫಾರ್ಮರ್ ತಡೆ ಬೇಲಿ ನಿರ್ಮಿಸಿದ ವಿದ್ಯುತ್ ಇಲಾಖೆ

ಮಂಜೇಶ್ವರ: ಮಂಜೇಶ್ವರ ರೈಲ್ವೇ ನಿಲ್ದಾಣದ ಎದುರು ರಾಗಂ ಜಂಕ್ಷನ್ ರಾಷ್ಟ್ರೀಯ ಷಟ್ಪಥ ರಸ್ತೆಯ ಸರ್ವೀಸ್ ರಸ್ತೆಯಲ್ಲಿ ಬಸ್ ನಿಲ್ದಾಣಕ್ಕೆ ತಾಗಿಕೊಂಡೇ ತಡಬೇಲಿ ಇಲ್ಲದೆ ಸ್ಥಾಪಿಸಲಾಗಿದ್ದ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಸಾರ್ವಜನಿಕರಲ್ಲಿ ಭೀತಿಯ ವಾತಾವರಣಕ್ಕೆ ಕಾರಣವಾಗಿತ್ತು. ಈ ಸುದ್ದಿ ನಮ್ಮ ಮೀಡಿಯಾ ದೃಶ್ಯ ಮಾಧ್ಯಮದಲ್ಲಿ ಪ್ರಸಾರವಾಗಿ ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾದ ಬಳಿಕ, ವಿದ್ಯುತ್ ಇಲಾಖೆ ತಕ್ಷಣ ಸ್ಪಂಧಿಸಿ ಶನಿವಾರದಂದು ಬೆಳಿಗ್ಗೆ ತಾತ್ಕಾಲಿಕ ತಡೆಬೇಲಿ ಸ್ಥಾಪಿಸುವ ಕಾರ್ಯದಲ್ಲಿ ತೊಡಗಿದೆ. ನಮ್ಮ ಮೀಡಿಯಾ ದೃಶ್ಯ ಮಾಧ್ಯಮದಲ್ಲಿ ಈ ಬಗ್ಗೆ ವರದಿ…

Read More

ಬೈಂದೂರು ತಾಲೂಕಿನ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಳ.

ಉಡುಪಿ ಜಿಲ್ಲೆಯ ಬೈಂದೂರು ಹಾಗೂ ಕುಂದಾಪುರ ತಾಲೂಕಿನಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಬೈಂದೂರು ತಾಲೂಕಿನಲ್ಲಿ ಎಡೆಬಿಡದೆ ಮಳೆಯಾಗುತ್ತಿದ್ದು, ಪ್ರಮುಖ ನದಿಗಳು ತುಂಬಿ ಹರಿಯುತ್ತಿವೆ. ಬೈಂದೂರಿನ ಸೌಪರ್ಣಿಕಾ, ಸುಮನಾವತಿ, ಸಂಕದ ಗುಂಡಿ, ಎಡ ಮಾವಿನ ಹೊಳೆ ತುಂಬಿ ಹರಿಯುತ್ತಿವೆ, ನದಿ ಪಾತ್ರ, ನಾಡ, ನಾವುಂದ, ಮರವಂತೆ, ಬಡಾಕೆರೆ ಚಿಕ್ಕಳ್ಳಿ ಪಡುಕೋಣೆ ಆನಗಳ್ಳಿ ಹಳಗೇರಿ ಜನರು ಎಚ್ಚರ ವಹಿಸುವಂತೆ‌ ಜಿಲ್ಲಾಡಳಿತ ಸೂಚಿಸಿದೆ. ಪಶ್ಚಿಮ ಘಟ್ಟದಲ್ಲಿ ಮಳೆ ಮುಂದುವರಿದರೆ ಪರಿಸ್ಥಿತಿ ಇನ್ನಷ್ಟು ಹದಗೆಡಲಿದೆ.ಪ್ರತಿ ವರ್ಷ ಮಳೆಗಾಲ ಬಂದರೆ ನಮಗೆ ಸಮಸ್ಯೆ ತಪ್ಪಿದ್ದಲ್ಲ….

Read More

ಸೂಕ್ತ ಗಣಿ ನೀತಿ ರೂಪಿಸಿ ಪರಿಹರಿಸದಿದ್ದಲ್ಲಿ ಹೋರಾಟ ಇನ್ನಷ್ಟು ತೀವ್ರಗೊಳ್ಳಲಿದೆ : ಅಶ್ರಫ್ ತಲಪಾಡಿ

ಮಂಗಳೂರು:ಜು. 25 – ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆ ನಿಷೇದಿಂದಾಗಿ ಕಟ್ಟಡದ ಮಾಲೀಕರು, ಗುತ್ತಿಗೆದಾರರು ಹಾಗೂ ಕಾರ್ಮಿಕರು ಸಂಕಷ್ಟದಲ್ಲಿದ್ದಾರೆ. ಇದರಿಂದಾಗಿ ಜಿಲ್ಲೆಯಲ್ಲಿ ಆರ್ಥಿಕತೆಯು ದುರ್ಬಲಗೊಂಡಿದೆ. ದಿನಾ ಕೂಲಿ ಕೆಲಸ ಮಾಡಿ ಸಂಬಳ ಪಡೆದು ಮನೆಗೆ ಹೋಗುತ್ತಿದ್ದ ಕಾರ್ಮಿಕ ಎರಡು ತಿಂಗಳುಗಳಿಂದ ಸಂಜೆ ಹೊತ್ತಿಗೆ ಇಂದು ಬರಿಗೈಯ್ಯಲ್ಲಿ ಮನೆಗೆ ಹೇಗೆ ಹೋಗಲಿ ಎಂಬ ಚಿಂತೆಯಲ್ಲಿದ್ದಾನೆ. ಅಧಿಕಾರಿಗಳು, ಸಂಬಂಧಪಟ್ಟ ಚುನಾಯಿತ ಪ್ರತಿನಿಧಿಗಳು ಸಮಸ್ಯೆ ಪರಿಹರಿಸುವಲ್ಲಿ ವಿಫಲರಾಗಿದ್ದಾರೆ. ಈ ಸಮಸ್ಯೆಗೆ ಸೂಕ್ತ ಗಣಿ ನೀತಿ ರೂಪಿಸಿ ಕೂಡಲೇ ಪರಿಹರಿಸಬೇಕು. ಇಲ್ಲದಿದ್ದಲ್ಲಿ…

Read More

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚಿಸಿದ ಪ್ರಕರಣ, ಆರೋಪಿ ಕೃಷ್ಣ ಜೆ.ರಾವ್ ಜಾಮೀನು ಅರ್ಜಿ ತಿರಸ್ಕೃತ

ಪುತ್ತೂರು : ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿ ವಿದ್ಯಾರ್ಥಿನಿಯನ್ನು ಗರ್ಭವತಿಯನ್ನಾಗಿಸಿ ವಂಚಿಸಿರುವ ಪ್ರಕರಣದ ಆರೋಪಿ ಶ್ರೀಕೃಷ್ಣ ಜೆ ರಾವ್ ನ ಬೇಲ್ ಅರ್ಜಿಯ ವಿಚಾರಣೆ ನಡೆಸಿರುವ ದ.ಕ.ಆರನೇ ನ್ಯಾಯಾಲಯ ಜಾಮೀನು ಅರ್ಜಿ ತಿರಸ್ಕೃತಗೊಳಿಸಿದೆ. ಜು.19 ರಂದು ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು, ಜು. 25 ರಂದು ತೀರ್ಪು ನೀಡುವುದಾಗಿ ಪ್ರಕಟಿಸಿದ್ದರು. 6ನೇ ಜಿಲ್ಲಾ ನ್ಯಾಯಾಲಯದಲ್ಲಿ ಶುಕ್ರವಾರ ಜಾಮೀನು ಅರ್ಜಿ ತಿರಸ್ಕೃತ ಗೊಳಿಸಲಾಗಿದೆ.

Read More

ಸುಬ್ರಹ್ಮಣ್ಯ – ನಾಪತ್ತೆಯಾಗಿದ್ದ ಆಂಬ್ಯುಲೆನ್ಸ್ ಡ್ರೈವರ್ ಮೃತದೇಹ ಪತ್ತೆ

ಕಳೆದ ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯಕೇಂದ್ರದ ಆಂಬ್ಯುಲೆನ್ಸ್ ಡ್ರೈವರ್ ಮೃತದೇಹ ಕುಮಾರಧಾರ ನದಿಯಲ್ಲಿ ನೆನ್ನೆ ಪತ್ತೆಯಾಗಿದೆ.ಮೃತರನ್ನು ಸುಬ್ರಹ್ಮಣ್ಯ ದೇವರಗದ್ದೆ ನಿವಾಸಿ ಹೊನ್ನಪ್ಪ (52) ಎಂದು ಗುರುತಿಸಲಾಗಿದೆ. ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯಕೇಂದ್ರದ ಆಂಬ್ಯುಲೆನ್ಸ್ ಡ್ರೈವರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಹೊನ್ನಪ್ಪ ಅವರು ಮಂಗಳವಾರದಿಂದ ನಾಪತ್ತೆಯಾಗಿದ್ದರು. ಅವರು ಕುಮಾರಧಾರ ನದಿ ಕಡೆಗೆ ಓಡುತ್ತಿರುವ ದೃಶ್ಯ ಸಿಸಿ ಕೆಮರಾದಲ್ಲಿ ಸೆರೆಯಾಗಿತ್ತು. ಈ ಹಿನ್ನಲೆ ನದಿಗೆ ಹಾರಿರಬಹುದು ಎಂಬ ಶಂಕೆ ಮೇರೆಗೆ ಕುಮಾರಧಾರ ನದಿಯಲ್ಲಿ ಅಂದು ರಾತ್ರಿಯಿಂದಲೇ ಹುಡುಕಾಟ…

Read More

ಕರಾವಳಿ ಜಿಲ್ಲೆಗಳಿಗೆ ಅಂತರ್ ರಾಜ್ಯಗಳಿಂದ ಭಾರಿ ಪ್ರಮಾಣದಲ್ಲಿ ಮೀನು ಪೂರೈಕೆ.

ಕರ್ನಾಟಕ ಕರಾವಳಿಯಲ್ಲಿ ಮೀನುಗಾರಿಕೆ ನಿಷೇಧವಿದ್ದರೂ, ತಮಿಳುನಾಡು, ಆಂಧ್ರಪ್ರದೇಶಗಳಿಂದ ಹೇರಳವಾಗಿ ಮೀನು ಮಂಗಳೂರಿಗೆ ಬರುತ್ತಿದೆ. ಕಮಿಷನ್ ಏಜೆಂಟರು ಹೊರ ರಾಜ್ಯಗಳ ವ್ಯಾಪಾರಿಗಳೊಂದಿಗೆ ವ್ಯವಹರಿಸಿ, ಪ್ರತಿದಿನ 40-50 ಲಾರಿಗಳಷ್ಟು ಮೀನು ತರಿಸುತ್ತಿದ್ದಾರೆ. ಆಗಸ್ಟ್ 1ರಿಂದ ಕರ್ನಾಟಕದಲ್ಲಿ ಮೀನುಗಾರಿಕೆ ಆರಂಭವಾಗಲಿದ್ದರೂ, ಹೊರ ರಾಜ್ಯಗಳಿಂದ ಮೀನು ಪೂರೈಕೆ ನಿರಂತರವಾಗಿ ಮುಂದುವರಿಯುತ್ತದೆ. ಕರ್ನಾಟಕ ಕರಾವಳಿಯಲ್ಲಿ ಜೂನ್ ಮತ್ತು ಜುಲೈನಲ್ಲಿಯೇ ಮೀನುಗಾರಿಕೆ ನಿಷೇಧವಿದ್ದು, ತಮಿಳುನಾಡು ಮತ್ತು ಆಂಧ್ರಪ್ರದೇಶದಿಂದ ಕರಾವಳಿ ಪ್ರದೇಶಕ್ಕೆ ಸಾಕಷ್ಟು ಪ್ರಮಾಣದಲ್ಲಿ ಮೀನು ಬರುತ್ತಿದೆ.ಮಂಗಳೂರು, ಮಲ್ಪೆ, ಕುಂದಾಪುರ, ಗಂಗೊಳ್ಳಿ, ಭಟ್ಕಳ, ಕುಮಟಾ, ಕಾರವಾರದಲ್ಲಿ 26…

Read More

ಹೈದರಾಬಾದ್ ,ಮುಂಬೈ,ಬೆಂಗಳೂರು ,ಅಹಮದಾಬಾದ್ ನಡೆದ ಭಯೋತ್ಪಾದನಾ ದಾಳಿಯ ಹಿನ್ನಲೆಯಲ್ಲಿ ಬಂದಿಯಾಗಿದ್ದ ಆರೋಪಿ ಯಾಸೀನ್ ಭಟ್ಕಳ ವಿಚಾರಣೆ ಮತ್ತೆ ಆರಂಭ

ಹೈದರಾಬಾದ್ ,ಮುಂಬೈ,ಬೆಂಗಳೂರು ,ಅಹಮದಾಬಾದ್ ನಡೆದ ಭಯೋತ್ಪಾದನಾ ದಾಳಿಯ ಹಿನ್ನಲೆಯಲ್ಲಿ 04-10-2008 ರಂದು ಬಂಧಿಸಲಾಗಿದ್ದ ಯಾಸೀನ್ ಭಟ್ಕಳ ವಿಚಾರಣೆ ಮತ್ತೆ ಆರಂಭವಾಗಿದೆ ನಿಷೇಧಿತ ಇಂಡಿಯನ್ ಮುಜಾಹಿದ್ದೀನ್ ಸಂಘಟನೆ ಯೊಂದಿಗೆ ನಂಟು ಇಟ್ಟುಕೊಂಡಿದ್ದ ಭಯೋತ್ಪಾದನಾ ಕೃತ್ಯಗಳಲ್ಲಿ ತೊಡಗಿಸಿಕೊಂಡಿದ್ದ ಯಾಸೀನ್ ಭಟ್ಕಳ ವಿರುದ್ಧ ದೇಶದ ವಿವಿಧ ಕಡೆಗಳಲ್ಲಿ ಭಯೋತ್ಪಾದನಾ ಕೃತ್ಯ ಎಸಗಲು ಪೂರ್ವ ತಯಾರಿ ಆರೋಪ ಮತ್ತು ಸ್ಪೋಟಕ ವಸ್ತುಗಳನ್ನು ಹಾಗೂ ಸ್ಪೋಟಕಗಳನ್ನು ತಯಾರಿಸುವ ವಸ್ತುಗಳನ್ನು ತನ್ನ ಬಳಿ ಇಟ್ಟುಕೊಂಡ ಆರೋಪದಲ್ಲಿ ಮಂಗಳೂರಿನ ಉಳ್ಳಾಲ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು, ದಕ್ಷಿಣ ಕನ್ನಡ…

Read More
error: Content is protected !!