Avatar

Shramitha bejja

ಖೇಲೋ ಇಂಡಿಯಾ ಅಸ್ಮಿತಾ ಪೆನ್ಚಕ್ ಸಿಲಾಟ್ ಲೀಗ್ 2025–26 : ಪೀಸ್ ಕ್ರಿಯೇಟಿವ್ ಶಾಲಾ ವಿದ್ಯಾರ್ಥಿಗಳ ಅದ್ಭುತ ಸಾಧನೆ

ಮಂಜೇಶ್ವರ: ಶೈಕ್ಷಣಿಕ ಕ್ಷೇತ್ರದಲ್ಲಿ ವಿವಿಧ ರೀತಿಯ ಚಟುವಟಿಕೆಗಳಲ್ಲಿ ಗಮನ ಸೆಳೆಯುತ್ತಿರುವ ಪೀಸ್ ಕ್ರಿಯೇಟಿವ್ ಕುಂಜತ್ತೂರು ಹಾಗೂ ಹೊಸಂಗಡಿ ಶಾಲೆಗಳ ವಿದ್ಯಾರ್ಥಿಗಳು ಚಿಕ್ಕಮಗಳೂರಿನ ಡಿವೈಇಎಸ್ ಇಂಡೋರ್ ಸ್ಟೇಡಿಯಂನಲ್ಲಿ ಶನಿವಾರ ನಡೆದ ಖೇಲೋ ಇಂಡಿಯಾ ಅಸ್ಮಿತಾ ಪೆನ್ಚಕ್ ಸಿಲಾಟ್ ಲೀಗ್ 2025–26 ಕರಾಟೆ ಸ್ಪರ್ಧೆಯಲ್ಲಿ ತಮ್ಮ ಶೈಲಿಯ ಪ್ರದರ್ಶನದಿಂದ ರಾಜ್ಯ ಮಟ್ಟದಲ್ಲಿ ಕೀರ್ತಿ ತುಂಬಿ ಮತ್ತೊಮ್ಮೆ ಸದ್ದಿಲ್ಲದೆ ಸುದ್ದಿಯಾಗಿದ್ದಾರೆ. ಈ ಪ್ರತಿಷ್ಠಿತ ಸ್ಪರ್ಧೆಯಲ್ಲಿ ಶಾಲೆಯಿಂದ ಒಟ್ಟು 13 ಮಂದಿ ವಿದ್ಯಾರ್ಥಿಗಳು ಭಾಗವಹಿಸಿದ್ದು, ಅದರಲ್ಲಿ 6 ಚಿನ್ನ, 3 ಬೆಳ್ಳಿ ಹಾಗೂ…

Read More

7 ವರ್ಷದಿಂದ ದುಡಿಸಿ ಸಂಬಳ ನೀಡದ ಬೀಡಿ ಮಾಲಕರ ವಿರುದ್ಧ ಮತ್ತು ಕನಿಷ್ಟ ಕೂಲಿ ಜಾರಿ ಮಾಡದ್ದರ ವಿರುದ್ಧ ಬೀಡಿ ಕಾರ್ಮಿಕರ ಪ್ರತಿಭಟನೆ

ಮಂಗಳೂರು: 01.04.2024 ರಿಂದ ಸರಕಾರ ನಿಗದಿ ಪಡಿಸಿ ಆದೇಶ ಮಾಡಿದ ಕನಿಷ್ಠ ಕೂಲಿಯನ್ನು ಕೂಡಾ ಬೀಡಿ ಮಾಲಕರು ನೀಡದೆ ವಂಚಿಸುತ್ತಿರುವುದು ಖಂಡನೀಯ ಎಂದು ಕರ್ನಾಟಕ ರಾಜ್ಯ ಬೀಡಿ ಕಾರ್ಮಿಕರ ಫೆಡರೇಶನ್ ಅಧ್ಯಕ್ಷರಾದ ಜೆ. ಬಾಲಕೃಷ್ಣ ಶೆಟ್ಟಿ ಆರೋಪಿಸಿದರು.ಅವರು ಇಂದು ಮಂಗಳೂರು ಸಹಾಯಕ ಕಾರ್ಮಿಕ ಇಲಾಖೆಯಲ್ಲಿ ನಡೆದ ಬೀಡಿ ಕಾರ್ಮಿಕರ ಬೃಹತ್ ಪ್ರತಿಭಟನೆಯನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಮಿಕರಿಗೆ ಈಗ ಇದ್ದ ವೇತನವನ್ನು ಹಿಮ್ಮುಖ ಗೊಳಿಸಿ, ಸರಕಾರ ಮಾಲಕರ ಪರವಾಗಿ ಆದೇಶ ಮಾಡಿದ್ದರೂ ಬೀಡಿ ಮಾಲಕರು ಆ ಕೂಲಿಯನ್ನೂ ಕೂಡಾ…

Read More

ಗುಜ್ಜರಕೆರೆಯಲ್ಲಿ ಶತಮಾನಂ ಭವತು ಸಂಗೀತ ಸಂಜೆ ಸಂಪನ್ನ

ರಾಷ್ಟ್ರೀಯ ಸ್ವಯಂ ಸೇವಕ ಸಂಘ ಸ್ಥಾಪನೆಯಾಗಿ ನೂರು ವರ್ಷ ಹಾಗೂ ಜಗದ್ಗುರು ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮ ಶತಮಾನೋತ್ಸವದ ಅಂಗವಾಗಿ ಯೋಗ್ ಫೌಂಡೇಶನ್ ಆಶ್ರಯದಲ್ಲಿ ಅಂತರಾಷ್ಟ್ರೀಯ ಖ್ಯಾತಿಯ ಗಾಯಕ ಬಾಲಚಂದ್ರ ಪ್ರಭು ಹಾಗೂ ತಂಡದವರಿಂದ ದೇಶ ಹಾಗೂ ಧರ್ಮ ಭಕ್ತಿಗೀತೆಗಳ ಕಾರ್ಯಕ್ರಮ ನಡೆಯಿತು. ಗುಜ್ಜರಕೆರೆಯನ್ನು ವಿದ್ಯುತ್ ದೀಪಾಲಂಕಾರಗಳಿಂದ ಸಿಂಗರಿಸಲಾಗಿತ್ತು. ವೇದಿಕೆಯ ಎರಡೂ ಭಾಗಗಳಲ್ಲಿ ಹಣತೆಯ ಮಾದರಿಯ ದೀಪಗಳನ್ನು ಉರಿಸಿ ಕಾರ್ಯಕ್ರಮದ ಅಂದವನ್ನು ಹೆಚ್ಚಿಸಲಾಗಿತ್ತು. ಇನ್ನು ಹಣತೆಗಳನ್ನು ಬೆಳಗಿಸಿ ಕೆರೆಯಲ್ಲಿ ತೇಲಿಬಿಡುವ ಮೂಲಕ ಜನರು ಕಾರ್ಯಕ್ರಮಕ್ಕೆ ಮತ್ತಷ್ಟು…

Read More

ಮಂಜೇಶ್ವರ ಇನ್ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 27ನೇ ಶಾಲಾ ವಾರ್ಷಿಕೋತ್ಸವ ಸಂಭ್ರಮ

ಮಂಜೇಶ್ವರ : ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಶೈಲಿಯಲ್ಲಿ ವಿವಿಧ ರೀತಿಯ ಚಟುವಟಿಕೆಗಳಲ್ಲಿ ಜಿಲ್ಲೆಯಲ್ಲೇ ಜನ ಮನ್ನಣೆಯನ್ನು ಪಡೆದಿರುವ ಮಂಜೇಶ್ವರ ಇನ್ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2025 – 26 ನೇ ಅಧ್ಯಯನ ವರ್ಷದ 27ನೇ ಶಾಲಾ ವಾರ್ಷಿಕೋತ್ಸವ ಸಂಭ್ರಮ ಹಾಗೂ ಸಡಗರದೊಂದಿಗೆ ಭಾರೀ ವಿಜೃಂಭಣೆಯಿಂದ ಸಂಪನ್ನಗೊಂಡಿತು. ತಂದೆ ತಾಯಿ ಶಿಕ್ಷಕರನ್ನು ಹೇಗೆ ಯಾವ ರೀತಿಯಲ್ಲಿ ಗೌರವಿಸಬೇಕು ಎಂಬುದರ ಬಗ್ಗೆ ಅರಿವನ್ನು ಮೂಡಿಸುವ ಜೊತೆಯಾಗಿ “ಜ್ಞಾನ ಬೆಳೆದಂತೆ, ವ್ಯಕ್ತಿತ್ವದ ಮಟ್ಟವೂ ಎತ್ತರವಾಗುತ್ತದೆ” ಎಂಬ ಘೋಷಣೆಯೊಂದಿಗೆ ಎಲ್ಲಾ…

Read More

ಚಿತ್ತಾರಿಯಲ್ಲಿರುವ ಚಾಮುಂಡಿಕುನ್ನು ವಿಷ್ಣು ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಕಳಿಯಾಟ ಮಹೋತ್ಸವ … ! ಉಲ್ಪೆ ಸಮರ್ಪಣೆ

ಕಾಸರಗೋಡು: ದಕ್ಷಿಣ ಕನ್ನಡ ಜಿಲ್ಲೆಯ ನೆರೆಯ ಕೇರಳ ಥೆಯ್ಯಮ್ ಆಚರಣೆಗೆ ಪ್ರಸಿದ್ದ. ಕರ್ನಾಟಕದ ಕರಾವಳಿ ಜಿಲ್ಲೆ ಅರ್ಥಾತ್ ತುಳುನಾಡೆಂದು ಪರಿಗಣಿಸಿಲ್ಪಟ್ಟ ಅವಿಭಜಿತ ದಕ್ಷಿಣ ಕನ್ನಡ ಭೂತಾರಾಧನೆ ಗೆ ಪ್ರಸಿದ್ದ, ಕೇರಳದ ಥೆಯ್ಯಮ್ ಕುರಿತು ಒಂದು ನೊಟ ಇಲ್ಲಿದೆ. ಚಂದ್ರಗಿರಿ ನದಿಯ ದಕ್ಷಿಣದ ಪುಣ್ಯ ಕ್ಷೇತ್ರ ,ಕಾವು, ಗುಡಿಗಳಲ್ಲಿ ಕಳಿಯಾಟ ಮಹೋತ್ಸವ ಎಂಬ ವಿಶಿಷ್ಟ ಆರಾಧನೆ ವೃಶ್ಚಿಕ ಮಾಸದಲ್ಲಿ ನಡೆಯುತ್ತದೆ. ನವೆಂಬರ್ – ಡಿಸೆಂಬರ್ ತಿಂಗಳಲ್ಲಿ ನಡೆಯುವ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ದೂರದ ಊರುಗಳಿಂದಲ್ಲು ಭಕ್ತರು ಬಂದು ಹರಕೆ…

Read More

ಕೃಷಿ ಬೆಂಬಲ ಬೆಲೆ ಹೆಚ್ಚಿಸಿ : ಪ್ರಧಾನಿಗೆ ರಾಜ್ಯ ಮುಖ್ಯಮಂತ್ರಿಗಳ ಪತ್ರ

ಮಂಗಳೂರು : ಉಡುಪಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು(ನ.28) ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಅವರು ರೈತರ ಬೆಳೆಗಳಿಗೆ ಬೆಂಬಲ ಬೆಲೆಯಿಲ್ಲದ ತೀವ್ರ ಸಂಕಷ್ಟಕ್ಕೆ ಗುರಿಯಾಗಿರುವುದನ್ನು ತಿಳಿಸಿ, ಬೆಂಬಲ ಬೆಲೆಯಂತೆ ಬೆಳ ಖರೀದಿ ವ್ಯವಸ್ಥೆ ನಿರ್ಮಿಸುವಲ್ಲಿ ಕೇಂದ್ರ ಸರ್ಕಾರ ಇಚ್ಛಾಶಕ್ತಿ ತೋರಿಸಬೇಕೆಂದು ಮನವಿ ಮಾಡಿರುವ ಪತ್ರ ನೀಡಿದ್ದು ಮುಖ್ಯಮಂತ್ರಿಗಳ ಪರವಾಗಿ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಪ್ರಧಾನಿಗೆ ಮನವಿ ಪತ್ರ ನೀಡಿದರು….

Read More

ಪಶ್ಚಿಮ ವರ್ಜೀನಿಯಾ ನ್ಯಾಷನಲ್ ಗಾರ್ಡ್ ಗೆ ಸೇರಿದ್ದ ಇಬ್ಬರು ಸೈನಿಕರ ಪೈಕಿ ಸಾರಾ ಬೆಕ್‌ಸ್ಟೋಮ್ ಕೊನೆಯುಸಿರೆಳೆದಿದ್ದಾರೆ : ಅಧ್ಯಕ್ಷ ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್‌:ಅಮೆರಿಕಾದ ಶ್ವೇತಭವನದ ಬಳಿ ಬುಧವಾರ ಗುಂಡಿನ ದಾಳಿಯಿಂದ ತೀವ್ರ ಗಾಯಗೊಂಡಿದ್ದ ಪಶ್ಚಿಮ ವರ್ಜೀನಿಯಾ ನ್ಯಾಷನಲ್ ಗಾರ್ಡ್ ಗೆ ಸೇರಿದ್ದ ಇಬ್ಬರು ಸೈನಿಕರ ಪೈಕಿ ಸಾರಾ ಬೆಕ್‌ಸ್ಟೋಮ್ ಕೊನೆಯುಸಿರೆಳೆದಿದ್ದಾರೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಹಿರಂಗಪಡಿಸಿದ್ದಾರೆ. “ಗೌರವಾನ್ವಿತ, ಯುವ, ಅದ್ಭುತ ಮಹಿಳೆ ಎನಿಸಿದ ವೆಸ್ಟ್ ವರ್ಜೀನಿಯಾದ ಗಾಡ್ರನ್ ಸರಕ್ ಬೆಕ್ಟೋಮ್ ಅಸು ನೀಗಿದ್ದಾರೆ. ಆಕೆಇನ್ನು ನಮ್ಮೊಂದಿಗೆ ಇಲ್ಲ” ಎಂದು ಟ್ರಂಪ್ ಹೇಳಿದ್ದಾರೆ. ಮತ್ತೊಬ್ಬ ಗಾಯಾಳುವಿನ ಸ್ಥಿತಿ ಕೂಡಾ ಚಿಂತಾಜನಕವಾಗಿದ್ದು,ಜೀವನ್ಮರಣ ಹೋರಾಟ ಮುಂದುವರಿಸಿದ್ದಾರೆ ಎಂದು ಟ್ರಂಪ್ ವಿವರಿಸಿದ್ದಾರೆ. ಆತನಿಗೆ ಸಂಬಂಧಿಸಿದಂತೆ…

Read More

ಕೃಷ್ಣ ನಗರಿ ಸಾಗರ ಕಿನಾರೆಯಲ್ಲಿ ಮೂಡಿದ ಪ್ರಧಾನಿ ನರೇಂದ್ರ ಮೋದಿಯ ವಿಶೇಷ ಮರಳು ಕಲಾಕೃತಿ….. !

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಉಡುಪಿ ಭೇಟಿ ಹಿನ್ನಲೆ . ಕಡಲ ತೀರದಲ್ಲಿ ಕಲಾವಿದರ ಕೈಚಳಕ ಪ್ರತಿಭೆ . ಪ್ರಧಾನಿ ನರೇಂದ್ರ ಮೋದಿ ಸ್ವಾಗತಕ್ಕೆ ವಿಶೇಷ ಕಲಾಕೃತಿ ರಚನೆ . ಮಲ್ಪೆ ಕಡಲ ತೀರದಲ್ಲಿ ಸ್ಯಾಂಡ್ ಥೀಮ್ ಕಲಾವಿದರಿಂದ ಮರಳು ಶಿಲ್ಪ . ಕಡಗೋಲು ಕೃಷ್ಣನ ಜೊತೆ ಪ್ರಧಾನಿ ನರೇಂದ್ರ ಮೋದಿಯ ಚಿತ್ರ ಇದಾಗಿದೆ . ದೇಗುಲದ ಮುಂಭಾಗದಲ್ಲಿ ಕಡಗೋಲು ಹಿಡಿದು ನಿಂತ ಕೃಷ್ಣ. ಕೃಷ್ಣನ ಮುಂದೆ ಪ್ರಧಾನಿ ನರೇಂದ್ರ ಮೋದಿಯ ಚಿತ್ರಣ . ಕಲಾವಿದ ಹರೀಶ್…

Read More

ಪ್ರಧಾನಿ ನರೇಂದ್ರ ಮೋದಿ ಅವಧಿಯಲ್ಲಿ ಮೊದಲಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಗೋಮಾಂಸ ರಫ್ತು ಆಗುತ್ತಿರುವುದು ದುರಂತ : ದಯಾನಂದ ಸ್ವಾಮಿಜಿ

ಉಡುಪಿ :ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಕೇಂದ್ರ ಸರಕಾರದ ಗೋಮಾಂಸ ರಫ್ತು, ಹಾಗೂ ಗೋಹತ್ಯೆ ನಿಷೇಧ ಮಾಡದ ಬಗ್ಗೆ ಟೀಕಿಸಿದ್ದ ನರೇಂದ್ರ ಮೋದಿ, ಮೂರು ಬಾರಿ ಪ್ರಧಾನಿಯಾದರೂ ಇನ್ನೂ ಯಾಕೆ ಗೋಹತ್ಯೆಯನ್ನು ದೇಶದಲ್ಲಿ ನಿಷೇಧ ಮಾಡುತ್ತಿಲ್ಲ. ದುರಂತ ಅಂದರೆ ಮೋದಿ ಅವಧಿಯಲ್ಲಿ ಮೊದಲಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಗೋಮಾಂಸ ರಫ್ತು ಆಗುತ್ತಿದೆ. ಭಾರತ ಗೋಮಾಂಸ ರಫ್ತನಲ್ಲಿ ಇಡೀ ಜಗತ್ತಿನಲ್ಲಿಯೇ ಇಂದು ಎರಡನೇ ಸ್ಥಾನದಲ್ಲಿದೆ ಎಂದು ವಿಶ್ವಪ್ರಾಣಿ ಕಲ್ಯಾಣ ಮಂಡಳಿ ಅಧ್ಯಕ್ಷ, ಬೆಂಗಳೂರು ವಿಶ್ವ ಗೋರಕ್ಷಾ ಮಹಾಪೀಠದ ದಯಾನಂದ ಸ್ವಾಮೀಜಿ ಟೀಕಿಸಿದ್ದಾರೆ. ಉಡುಪಿಯಲ್ಲಿಂದು…

Read More

ಪ್ರಧಾನಿ ಉಡುಪಿ ಭೇಟಿ ಹಿನ್ನಲೆಯಲ್ಲಿ ಕೃಷ್ಣನಗರಿ ಉಡುಪಿಯಲ್ಲಿ ಪೊಲೀಸ್ ಭದ್ರತೆ

ಪ್ರಧಾನಿ ಉಡುಪಿ ಭೇಟಿ ಹಿನ್ನೆಲೆಯಲ್ಲು ಕೃಷ್ಣನಗರಿ ಉಡುಪಿಯಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.ಪ್ರಧಾನಿ ನರೇಂದ್ರ ಮೋದಿ ನವೆಂಬರ್ 28ರಂದು ಉಡುಪಿಗೆ ಆಗಮಿಸುತ್ತಿದ್ದು ಅಕ್ಷರಶಃ ಉಡುಪಿ ಖಾಕಿ ಕೋಟೆಯಾಗಿ ಮಾರ್ಪಾಡಾಗಿದೆ. ಶುಕ್ರವಾರದಂದು ಬನ್ನಂಜೆ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಸಮೀಪದಿಂದ ಕಲ್ಸಂಕದ ವರೆಗೂ ಪ್ರಧಾನಿ ರೋಡ್‌ಶೋ ನಡೆಯಲಿದ್ದು ಇದಕ್ಕಾಗಿ ಎರಡು ಕಡೆಗಳಲ್ಲೂ ಬ್ಯಾರಿಕೇಡ್ ನಿರ್ಮಾಣ ಮಾಡಲಾಗಿದೆ. ಅಲ್ಲದೆ ಈ ರಸ್ತೆಯ ಎರಡೂ ಬದಿಗಳಲ್ಲಿರುವ ಅಂಗಡಿ ಮಾಲಕರಿಗೆ ಅಂದು ಅಂಗಡಿ ತೆರೆಯದಂತೆ ಸೂಚನೆಯನ್ನು ಜಿಲ್ಲಾಡಳಿತ ರವಾನಿಸಿದೆ. ಪ್ರಧಾನಿಯವರ ಆಗಮನದ ಹಿನ್ನೆಲೆಯಲ್ಲಿ ಶಿಷ್ಟಾಚಾರ ಪರಿಪಾಲನೆಗೆ…

Read More
error: Content is protected !!