ಭಾರೀ ಮಳೆಯಿಂದಾಗಿ ವರ್ಕಾಡಿಯ ವಿವಿದೆಡೆ ವ್ಯಾಪಕ ನಾಶನಷ್ಟ:ಬಿಜೆಪಿ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ವಿವಿದೆಡೆ ಬೇಟಿ :
ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ವಿಧಾನಸಭಾ ಕ್ಷೇತ್ರದ ವರ್ಕಾಡಿ ಪಂಚಾಯತ್ ವ್ಯಾಪ್ತಿಯ ವರ್ಕಾಡಿ ಬೊಡೋಡಿ, ಮತ್ತು ಪೊಯ್ಯತ್ ಬಯಲು ಪ್ರದೇಶಗಳಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಭೂಕುಸಿತ ಸಂಭವಿಸಿ ಕೃಷಿ ಮತ್ತು ಆಸ್ತಿಪಾಸ್ತಿಗಳಿಗೆ ವ್ಯಾಪಕ ಹಾನಿಯಾಗಿದೆ. ಅಲ್ಲದೆ, ತಿಮ್ಮಂಗನೂರು ಅಣೆ-ನಡಿಬಯಲು ರಸ್ತೆಯಲ್ಲಿ ಭೂಕುಸಿತದಿಂದಾಗಿ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಬಿಜೆಪಿ ಕಾಸರಗೋಡು ಜಿಲ್ಲಾಧ್ಯಕ್ಷೆ ಅಶ್ವಿನಿ ಎಂ.ಎಲ್., ಮಂಡಲ ಅಧ್ಯಕ್ಷ ಆದರ್ಶ್ ಬಿ.ಎಂ., ವೋರ್ಕಾಡಿ ಪಂಚಾಯತ್ ಸಮಿತಿ ಅಧ್ಯಕ್ಷ ಭಾಸ್ಕರ್ ಪೊಯ್ಯ, ಹಿರಿಯ ಮುಖಂಡ ಧೂಮಪ್ಪ ಶೆಟ್ಟಿ, ಹಾಗೂ…