ಉಪರಾಷ್ಟ್ರಪತಿ ಚುನಾವಣೆ ಸೆಪ್ಟೆಂಬರ್ 9 ರಂದು. CPR V/S BSR. “ದಕ್ಷಿಣಾಸ್ತ್ರಕ್ಕೆ” ವೇದಿಕೆ ಸಜ್ಜು
ಮುಂಬರುವ ಉಪರಾಷ್ಟ್ರಪತಿ ಚುನಾವಣೆಯು ಎರಡು ಒಕ್ಕೂಟಗಳ ಮಧ್ಯೆ ನಡೆಯುವ ಸ್ಪರ್ಧೆಗಿಂತಲೂ ದಕ್ಷಿಣದ ಎರಡು ರಾಜ್ಯಗಳ ಮಧ್ಯೆ ನಡೆಯುವ ಪ್ರತಿಷ್ಠೆಯ ಕಣವಾಗಿ ಮಾರ್ಪಾಡಾಗಿದೆ .NDA ತನ್ನ ಅಭ್ಯರ್ಥಿಯಾಗಿ ಮಹಾರಾಷ್ಟ್ರದ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ನಾಮಪತ್ರ ಸಲ್ಲಿಸಿದ್ದಾರೆ. ಸಿಪಿ ರಾಧಾಕೃಷ್ಣನ್ ತಮಿಳುನಾಡಿನ ಹಿರಿಯ ಬಿಜೆಪಿ ನಾಯಕರಾಗಿದ್ದು ರಾಷ್ಟೀಯ ಸ್ವಯಂ ಸೇವಕ ಸಂಘದ ಹಿರಿಯ ಕಾರ್ಯ ಕರ್ತರಾಗಿದ್ದರೆ. 1974 ರಲ್ಲಿ ಭಾರತೀಯ ಜನ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾಗಿದ್ದರು. ಕೊಯಂಬತ್ತೂರು ಲೋಕ ಸಭಾ ಕ್ಷೇತ್ರದಿಂದ ಎರಡು ಭಾರಿ ಸಂಸದರಾಗಿ ,…