ತುಳುನಾಡಿನ ಆಚರಣೆಗಳಲ್ಲಿ ಮೂಡನಂಬಿಕೆ ವೈಭವೀಕರಣಕ್ಕೆ ಕಳವಳ ವ್ಯಕ್ತಪಡಿಸಿದ ಡಾ. ಸಂತೋಷ್ ಗುರೂಜಿ

ಅರಬ್ ಸಂಯುಕ್ತ ಸಂಸ್ಥಾನದ ವಾಣಿಜ್ಯ ನಗರಿ ದುಬಾಯಿಯಲ್ಲಿ ಯು.ಎ.ಇ. ಬಂಟ್ಸ್ ಮತ್ತು ಯು.ಎ.ಇ.ಯಲ್ಲಿರುವ ಕರ್ನಾಟಕ ಪರ ಸಂಘಟನೆಗಳ ಆಶ್ರಯದಲ್ಲಿ ಫೆಬ್ರವರಿ 8ನೇ ತಾರೀಕಿನಂದು ತುಳುನಾಡ ಸಂಸ್ಕೃತಿಯ ಅನಾವರಣ ಉಪನ್ಯಾಸ ಕಾರ್ಯಕ್ರಮ ಫಾರ್ಚೂನ್ ಪ್ಲಾಝಾ ಹೋಟೆಲ್ ಸಭಾಂಗಣದಲ್ಲಿ ನಡೆಯಿತು. ಶ್ರೀ ಬಾರ್ಕೂರು ಮಹಾ ಸಂಸ್ಥಾನ (ಭಾರ್ಗವಬೀಡು ಬಾರ್ಕೂರು) ಪೀಠಾಧಿಪತಿ ಶ್ರೀ ಶ್ರೀ ಶ್ರೀ ಡಾ|| ವಿದ್ಯಾವಾಚಾಸ್ಪತಿ ವಿಶ್ವಸಂತೋಷ ಭಾರತಿ ಶ್ರೀಪಾದರು ಪ್ರವಚನ ಹಾಗೂ ತುಳುನಾಡಿನ ಆಚಾರ ವಿಚಾರ ಸಂಸ್ಕೃತಿ ಸಂಪ್ರದಾಯಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದರು.ಸುಮಂಗಲೆಯರ ಪೂರ್ಣ ಕುಂಭ…

Read More

ದಿ|| ವಸಂತ ಬೇಕಲ್ ಸ್ಮರಣಾರ್ಥ ಶಾರ್ಜಾದಲ್ಲಿ ಮಾರ್ಗದೀಪ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಮೆಂಟ್

ಮಾರ್ಗ ದೀಪ ಸಾಂಸ್ಕೃತಿಕ ಸಮಿತಿಯ ವತಿಯಿಂದ ದಿ|| ಶ್ರೀ ವಸಂತ ಬೇಕಲ್ ರವರ ಸವಿನೆನಪಿಕಾಗಿ “ಮಾರ್ಗದೀಪ ಪ್ರೀಮಿಯರ್ ಲೀಗ್” ಕ್ರಿಕೆಟ್ ಟೂರ್ನಮೆಂಟ್,ಯು ಎ ಈ ಯ ಶಾರ್ಜಾದ NASS ಕ್ರಿಕೆಟ್ ಸ್ಟೇಡಿಯಂನಲ್ಲಿ ಅದ್ಧೂರಿಯಿಂದ ಜರುಗಿತು. ಟೂರ್ನಮೆಂಟ್ ನಲ್ಲಿ ಶ್ರೀ ಮಂಜುನಾಥ ಕಾಸರಗೋಡು ಹಾಗೂ ಶ್ರೀ ದಾಮೋದರ ರಾವ್ ರವರ ಮಾಲೀಕತ್ವದ “ಗಡಿನಾಡು ಸ್ಟ್ರೈಕರ್”, ಶ್ರೀ ರಘುನಾಥ್ ಎಂ ಹಾಗೂ ಶ್ರೀ ಬಿಪಿನ್ ಚಂದ್ರ ನಾಯಕ ಮಾಲೀಕತ್ವದ “ಬೇಕಲ್ ಫೋರ್ಟ್ ರೈಡರ್ಸ್”, ಶ್ರೀ ಶ್ರೀಪತಿ ಕೆ ಹಾಗೂ ಶ್ರೀ…

Read More

ಅಬುಧಾಬಿಯಲ್ಲಿ ಭೀಕರ ರಸ್ತೆ ಅಪಘಾತ.ಒಂದೇ ತಾಯಿಯ ನಾಲ್ಕು ಮಕ್ಕಳು ಮೃತ್ಯು .ಪೋಷಕರ ಸ್ಥಿತಿ ಗಂಭೀರ

ಅಬುಧಾಬಿಯಲ್ಲಿ ಲಿವಾ ಫೆಸ್ಟಿವಲ್‌ನಲ್ಲಿ ಕೆಲವು ಸಮಯ ಕಳೆದ ಕೇರಳ ಮೂಲದ ಕುಟುಂಬವು ದುಬೈಗೆ ಹಿಂತಿರುಗುತ್ತಿದ್ದ ವೇಳೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ದುರಂತದಲ್ಲಿ ನಾಲ್ವರು ಪುಟ್ಟ ಮಕ್ಕಳ ದುರ್ಮರಣ ಸಂಭವಿಸಿದ್ದು, ಪೋಷಕರು ಮತ್ತು ಸೋದರಿ ಗಂಭೀರವಾಗಿ ಗಾಯಗೊಂಡಿದ್ದಾರೆ.ಮೃತರು ಎಲ್ಲರೂ 14 ವರ್ಷದೊಳಗಿನ ಮಕ್ಕಳು, ಮತ್ತು ಒಂದೇ ಕುಟುಂಬದವರು. ಮೃತ ಮಕ್ಕಳನ್ನು ಅಶಾಝ್ (14 ವರ್ಷ), ಅಮರ್ (12 ವರ್ಷ), ಅಜಾಮ್ (7 ವರ್ಷ) ಮತ್ತು ಅಯ್ಯಾಶ್ (5 ವರ್ಷ) ಎಂದು ಗುರುತಿಸಲಾಗಿದೆ. ಮನೆ ಕೆಲಸದಾಕೆ ಬುಶ್ರಾ…

Read More

ಪಶ್ಚಿಮ ವರ್ಜೀನಿಯಾ ನ್ಯಾಷನಲ್ ಗಾರ್ಡ್ ಗೆ ಸೇರಿದ್ದ ಇಬ್ಬರು ಸೈನಿಕರ ಪೈಕಿ ಸಾರಾ ಬೆಕ್‌ಸ್ಟೋಮ್ ಕೊನೆಯುಸಿರೆಳೆದಿದ್ದಾರೆ : ಅಧ್ಯಕ್ಷ ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್‌:ಅಮೆರಿಕಾದ ಶ್ವೇತಭವನದ ಬಳಿ ಬುಧವಾರ ಗುಂಡಿನ ದಾಳಿಯಿಂದ ತೀವ್ರ ಗಾಯಗೊಂಡಿದ್ದ ಪಶ್ಚಿಮ ವರ್ಜೀನಿಯಾ ನ್ಯಾಷನಲ್ ಗಾರ್ಡ್ ಗೆ ಸೇರಿದ್ದ ಇಬ್ಬರು ಸೈನಿಕರ ಪೈಕಿ ಸಾರಾ ಬೆಕ್‌ಸ್ಟೋಮ್ ಕೊನೆಯುಸಿರೆಳೆದಿದ್ದಾರೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಹಿರಂಗಪಡಿಸಿದ್ದಾರೆ. “ಗೌರವಾನ್ವಿತ, ಯುವ, ಅದ್ಭುತ ಮಹಿಳೆ ಎನಿಸಿದ ವೆಸ್ಟ್ ವರ್ಜೀನಿಯಾದ ಗಾಡ್ರನ್ ಸರಕ್ ಬೆಕ್ಟೋಮ್ ಅಸು ನೀಗಿದ್ದಾರೆ. ಆಕೆಇನ್ನು ನಮ್ಮೊಂದಿಗೆ ಇಲ್ಲ” ಎಂದು ಟ್ರಂಪ್ ಹೇಳಿದ್ದಾರೆ. ಮತ್ತೊಬ್ಬ ಗಾಯಾಳುವಿನ ಸ್ಥಿತಿ ಕೂಡಾ ಚಿಂತಾಜನಕವಾಗಿದ್ದು,ಜೀವನ್ಮರಣ ಹೋರಾಟ ಮುಂದುವರಿಸಿದ್ದಾರೆ ಎಂದು ಟ್ರಂಪ್ ವಿವರಿಸಿದ್ದಾರೆ. ಆತನಿಗೆ ಸಂಬಂಧಿಸಿದಂತೆ…

Read More

ಕೀನ್ಯಾ: ಲಘು ವಿಮಾನ ಪತನ; 12 ಮಂದಿ ಮೃತ್ಯು

ಕೀನ್ಯಾದಲ್ಲಿ ಲಘು ವಿಮಾನ ಪತನಗೊಂಡು ಕನಿಷ್ಠ 12 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಕರಾವಳಿ ಪ್ರದೇಶವಾದ ಕ್ವಾಲೆ ಕೌಂಟಿಯ (Kenya’s Kwale County) ಸಿಂಬಾ ಗೋಲಿನಿ ಪ್ರದೇಶದಲ್ಲಿ ಮಂಗಳವಾರ ಬೆಳಗ್ಗೆ ವಿಮಾನ ಪತನಗೊಂಡಿದೆ. ವಿಮಾನವು 0530Z ನಲ್ಲಿ ಡಯಾನಿಯಿಂದ ಹೊರಟು ಕಿಚ್ವಾ ಟೆಂಬೊಗೆ (Diani to Kichwa Tembo) ಗೆ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದಾಗ ದುರಂತ ಸಂಭವಿಸಿದೆ. ಇಂದು ಬೆಳಗ್ಗೆ 8:30 ರ ಸುಮಾರಿಗೆ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಪತನಗೊಂಡಿದೆ. ಡಯಾನಿ ವಾಯುನೆಲೆಯಿಂದ ಸುಮಾರು 40 ಕಿಲೋಮೀಟರ್…

Read More

4ನೇ ವರ್ಷದ “ದುಬೈ ಗಡಿನಾಡ ಉತ್ಸವ-2025”

ದುಬೈ : ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಮತ್ತು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕರ್ನಾಟಕ ಸರಕಾರ ಜಂಟಿಯಾಗಿ ಆಯೋಜಿಸಿದ್ದ ನಾಲ್ಕನೇ ವರ್ಷದ “ದುಬೈ ಗಡಿನಾಡ ಉತ್ಸವ-2025” ಕಾರ್ಯಕ್ರಮವು ಇತ್ತೀಚೆಗೆ ನಗರದ ಊದು ಮೇಥಾದ ಗ್ಲೆಂಡೇಲ ಅಂತಾರಾಷ್ಟ್ರೀಯ ಶಾಲೆಯ ಸಭಾಂಗಣದಲ್ಲಿ ಸಂಜೆ ನಾಲ್ಕರಿಂದ ರಾತ್ರಿ ಹನ್ನೊಂದರ ವರೆಗೆ ಅದ್ದೂರಿಯಾಗಿ ನಡೆಯಿತು. ಕರ್ನಾಟಕ ಜಾನಪದ ಪರಿಷತ್ ಮಂಗಳೂರಿನ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಕೋಡಿಯಲ್ ಬೈಲ್ ರವರು ಯಕ್ಷಗಾನದ ಚೆಂಡೆ ಬಾರಿಸುವ ಮೂಲಕ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ…

Read More

ಭಾರತೀಯ ನರ್ಸ್‌ಗೆ ಸಿಂಗಾಪುರದಲ್ಲಿ ಜೈಲು ಶಿಕ್ಷೆ

ಸಿಂಗಾಪುರ: ಡೆಹ್ರಾಡೂನ್ ಮೂಲದ 39 ವರ್ಷದ ಭಾರತೀಯ ನರ್ಸ್, ಇಲಿಪಿ ಶಿವ ನಾಗು, ಸಿಂಗಾಪುರದ ಪ್ರತಿಷ್ಠಿತ ರಾಫೆಲ್ ಆಸ್ಪತ್ರೆಯಲ್ಲಿ ಸ್ಟಾಪ್ ನರ್ಸ್ ಆಗಿದ್ದ ವೇಳೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ಈತನಿಗೆ ಒಂದು ವರ್ಷ, ಎರಡು ತಿಂಗಳು ಜೈಲು ಶಿಕ್ಷೆ ನೀಡಲಾಗಿದೆ. ನ್ಯಾಯಾಲಯದ ದಾಖಲೆಗಳ ಪ್ರಕಾರ, ಈ ಘಟನೆ ಕಳೆದ ಜೂನ್ 18 ರಂದು ನಾರ್ತ್ ಬ್ರಿಡ್ಜ್ ರಸ್ತೆಯಲ್ಲಿರುವ ಆಸ್ಪತ್ರೆಯಲ್ಲಿ ನಡೆದಿದೆ. ಸಂತ್ರಸ್ತ ವ್ಯಕ್ತಿ ತನ್ನ ಅಜ್ಜನನ್ನು ಭೇಟಿಗಾಗಿ ಆಸ್ಪತ್ರೆಗೆ ಬಂದಿದ್ದಾಗ,…

Read More

ಅಕ್ಟೋಬರ್ 25 ರಂದು ದುಬೈನಲ್ಲಿ ‘ದುಬೈ ಗಡಿನಾಡ ಉತ್ಸವ’ .ಗಡಿನಾಡ ರತ್ನ ಪ್ರಶಸ್ತಿ ಪ್ರದಾನ, ಸಾಧಕರಿಗೆ ಮತ್ತು ಸಾಧಕ ಸಂಸ್ಥೆಗೆ ಗೌರವ ಸನ್ಮಾನ .

ದುಬೈ : ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ “ಗಡಿನಾಡ ಉತ್ಸವ -2025” ಕಾರ್ಯಕ್ರಮವು ನಗರದ ಊದು ಮೇಥಾದ ಗ್ಲೆಂಡೇಲ ಅಂತಾರಾಷ್ಟ್ರೀಯ ಶಾಲೆಯ ಸಭಾಂಗಣದಲ್ಲಿ ಅಕ್ಟೋಬರ್ 25 ರಂದು ಸಂಜೆ ನಾಲ್ಕರಿಂದ ರಾತ್ರಿ ಹನ್ನೊಂದರ ವರೆಗೆ ನಡೆಯಲಿದೆ.ಸಂಜೆ ನಾಲ್ಕು ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಸಾಧಕರಿಗೆ ಗೌರವ ಸನ್ಮಾನ ನಂತರ ಯುಎಇಯ ಪ್ರಸಿದ್ಧ ನೃತ್ಯ ತಂಡದವರಿಂದ ನೃತ್ಯ ವೈಭವ,ಗಾಯಕ ಗಾಯಕಿಯರಿಂದ ಸಂಗೀತ ಸುಧೆ,ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ ತಂಡದವರಿಂದ…

Read More

ಪಾಕಿಸ್ತಾನದ ವಾಯುದಾಳಿಯಲ್ಲಿ ಮೂವರು ಅಫ್ಘಾನ್‌ ಕ್ರಿಕೆಟಿಗರು ಮೃತ್ಯು

ಕಾಬೂಲ್: ಪಕ್ತಿಕಾ ಪ್ರಾಂತ್ಯದಲ್ಲಿ ಪಾಕಿಸ್ತಾನ ನಡೆಸಿದ ವೈಮಾನಿಕ ದಾಳಿಯಲ್ಲಿ ಮೂವರು ಅಫ್ಘಾನ್ ದೇಶೀಯ ಕ್ರಿಕೆಟಿಗರು ಮೃತಪಟ್ಟಿರುವ ಹಿನ್ನೆಲೆಯಲ್ಲಿ, ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿ (ACB) ಪಾಕಿಸ್ತಾನ ಮತ್ತು ಶ್ರೀಲಂಕಾ ಒಳಗೊಂಡ ಮುಂಬರುವ ತ್ರಿಕೋನ T20 ಸರಣಿಯಿಂದ ಹಿಂದೆ ಸರಿಯುವ ನಿರ್ಧಾರ ಕೈಗೊಂಡಿದೆ. ಘಟನೆಗೆ ತೀವ್ರ ಖಂಡನೆ ವ್ಯಕ್ತಪಡಿಸಿರುವ ACB, ಸಾಮಾಜಿಕ ಮಾಧ್ಯಮದಲ್ಲಿ ಪ್ರಕಟಿಸಿದ ಹೇಳಿಕೆಯಲ್ಲಿ ಈ ದಾಳಿಯನ್ನು “ಪಾಕಿಸ್ತಾನ ಆಡಳಿತದ ಹೇಡಿತನದ ಕೃತ್ಯ” ಎಂದು ಬಣ್ಣಿಸಿದೆ. ಮಾನವೀಯ ಮೌಲ್ಯಗಳ ವಿರುದ್ಧ ನಡೆದ ಈ ಕ್ರಮವು ಕ್ರೀಡಾ ಬಾಂಧವ್ಯದ ಆತ್ಮವನ್ನು…

Read More

“ದುಬೈ ಗಡಿನಾಡ ಉತ್ಸವ -2025” ಅ. 25 ರಂದು

ದುಬೈ : ಯುಎಇಯಲ್ಲಿ ಇರುವ ಎಲ್ಲಾ ಗಡಿನಾಡಿನ ಹಾಗೂ ಕರುನಾಡಿನ ಕನ್ನಡಿಗರನ್ನು ಒಟ್ಟುಗೂಡಿಸಿ “ದುಬೈ ಗಡಿನಾಡ ಉತ್ಸವ -2025″ವನ್ನು ಅದ್ದೂರಿಯಾಗಿ ಆಚರಿಸುವ ಹಾಗೂ ಈ ಕಾರ್ಯಕ್ರಮ ಒಳ್ಳೆಯ ರೀತಿಯಲ್ಲಿ ಮೂಡಿಬರಲಿ ಎಂದು ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ಗಲ್ಫ್ ನ ಅಧ್ಯಕ್ಷರಾದ ಅಶ್ರಫ್ ಶಾ ಮಾಂತುರು ರವರು ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡುತ್ತಾ ಶುಭವನ್ನು ಹಾರೈಸಿದರು. ಅಕ್ಟೋಬರ್ 25 ರಂದು ಸಂಜೆ ನಾಲ್ಕರಿಂದ ರಾತ್ರಿ ಹನ್ನೊಂದರ ವರೆಗೆ ಔದ್ ಮೇಥದ ಗ್ಲೆಂಡೇಲ್ ಅಂತಾರಾಷ್ಟ್ರೀಯ ಶಾಲೆಯ ಸಭಾಂಗಣದಲ್ಲಿ…

Read More
error: Content is protected !!