ಸೆ.20ರಂದು ಯುಎಇಯಲ್ಲಿ ಮಾರ್ಗದೀಪ ಸಾಂಸ್ಕೃತಿಕ ಸಮಿತಿಯ 12ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

ಅಜ್ಮಾನ್: ಮಾರ್ಗದೀಪ ಸಾಂಸ್ಕೃತಿಕ ಸಮಿತಿ ಯುಎಇ ಆಶ್ರಯದಲ್ಲಿ 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆ.20ರಂದು ಅಜ್ಮಾನ್‌ನ ಜುರ್ಫ್‌ನಲ್ಲಿರುವ ಇಂಡಿಯನ್ ಅಸೋಸಿಯೇಷನ್ ಹಾಲ್‌ನಲ್ಲಿ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ವೈಭವದಿಂದ ನಡೆಯಲಿದೆ. ಬೆಳಗ್ಗೆ 8 ಗಂಟೆಗೆ ಗಣಹೋಮದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದ್ದು, 9 ಗಂಟೆಗೆ ಶ್ರೀ ಗಣೇಶ ಮೂರ್ತಿ ಪ್ರತಿಷ್ಠಾಪನೆ ನೆರವೇರಲಿದೆ. ಬಳಿಕ ಭಜನಾ ಕಾರ್ಯಕ್ರಮ, ಸಭಾ ಕಾರ್ಯಕ್ರಮ ಹಾಗೂ ಮಧ್ಯಾಹ್ನ 1 ಗಂಟೆಗೆ ಮಹಾಪೂಜೆ ನಡೆಯಲಿದೆ. ನಂತರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ವಿಶೇಷ…

Read More

2026–27ನೇ ಶೈಕ್ಷಣಿಕ ವರ್ಷಕ್ಕೆ ಗಲ್ಫ್ ಮೆಡಿಕಲ್ ಯೂನಿವರ್ಸಿಟಿ ಚಾಲನೆ

ಅಜ್ಮಾನ್: ಗಲ್ಫ್ ಮೆಡಿಕಲ್ ಯೂನಿವರ್ಸಿಟಿ (GMU) 2026–27ನೇ ಸಾಲಿನ ಶೈಕ್ಷಣಿಕ ವರ್ಷವನ್ನು ಸೋಮವಾರ (ಆ.31) ಅಧಿಕೃತವಾಗಿ ಆರಂಭಿಸಿದ್ದು, ವಿದ್ಯಾರ್ಥಿಗಳು ಹಾಗೂ ಬೋಧಕ ಸಿಬ್ಬಂದಿಯನ್ನು ಹೊಸ ಶೈಕ್ಷಣಿಕ ವರ್ಷದ ಕಲಿಕೆ, ಸಂಶೋಧನೆ, ನವೋದ್ಯಮ ಮತ್ತು ಆರೋಗ್ಯ ವೃತ್ತಿಪರ ಶಿಕ್ಷಣದ ಉನ್ನತಿಯತ್ತ ಬರಮಾಡಿಕೊಂಡಿತು. ಹೊಸ ಶೈಕ್ಷಣಿಕ ವರ್ಷದ ಆರಂಭದೊಂದಿಗೆ ವಿಶ್ವವಿದ್ಯಾಲಯದ ಆವರಣದಲ್ಲಿ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದ್ದು, GMUಯ ಆರೋಗ್ಯ ವೃತ್ತಿಪರ ಶಿಕ್ಷಣದ ವಿವಿಧ ಕೋರ್ಸ್‌ಗಳಿಗೆ ಇರುವ ಬೇಡಿಕೆಯನ್ನು ಇದು ಪ್ರತಿಬಿಂಬಿಸಿದೆ. “2026–27ನೇ ಸಾಲಿಗೆ ವಿದ್ಯಾರ್ಥಿಗಳು ಮತ್ತು ಬೋಧಕ…

Read More

ಇರಾನ್‌ನ ‘ಪಿಕ್ಯಾಕ್ಸ್ ಮೌಂಟನ್’ ಮೇಲೆ ಅಮೆರಿಕ ದಾಳಿ? ಟ್ರಂಪ್ ಎಚ್ಚರಿಕೆ

ವಾಷಿಂಗ್ಟನ್: ಇರಾನ್‌ನ ರಹಸ್ಯ ಭೂಗತ ಪರಮಾಣು ನೆಲೆ ‘ಪಿಕ್ಯಾಕ್ಸ್ ಮೌಂಟನ್’ ಮೇಲೆ ಅಗತ್ಯಬಿದ್ದರೆ ಅಮೆರಿಕ ಶೀಘ್ರದಲ್ಲೇ ದಾಳಿ ನಡೆಸಲಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಸಿದ್ದಾರೆ. ಇರಾನ್ ಪರಮಾಣು ಬಾಂಬ್ ಅಭಿವೃದ್ಧಿಪಡಿಸಲು ಪ್ರಯತ್ನಿಸುತ್ತಿರುವುದು ಪತ್ತೆಯಾದರೆ ಆ ನೆಲೆಯನ್ನು ಧ್ವಂಸಗೊಳಿಸುವುದಾಗಿ ಟ್ರಂಪ್ ಹೇಳಿದ್ದಾರೆ. ಅಮೆರಿಕದ ಗುಪ್ತಚರ ಸಂಸ್ಥೆಗಳು ಪಿಕ್ಯಾಕ್ಸ್ ಮೌಂಟನ್‌ನ ಚಟುವಟಿಕೆಗಳ ಮೇಲೆ ನಿಗಾ ಇರಿಸಿವೆ ಎಂದು ಅವರು ತಿಳಿಸಿದ್ದಾರೆ. ನತಾಂಜ್ ಪರಮಾಣು ಘಟಕದ ಸಮೀಪದಲ್ಲಿರುವ ಈ ಆಳವಾದ ಭೂಗತ ಸಂಕೀರ್ಣದಲ್ಲಿ ಇರಾನ್ ಸಾವಿರಾರು ಸೆಂಟ್ರಿಫ್ಯೂಜ್‌ಗಳನ್ನು ಸ್ಥಳಾಂತರಿಸಿದೆ ಎಂದು…

Read More

‘ಶವ ಸಂಖ್ಯೆ 1003’ ಗುರುತಿಗೆ ಗೊಂದಲ; ಡಿಎನ್‌ಎ ಪರೀಕ್ಷೆಗೆ ಮೊರೆ

ಪೋಖರಾ: ನೇಪಾಳದ ಪೋಖರಾ ಆಸ್ಪತ್ರೆಯಲ್ಲಿರುವ ‘ಶವ ಸಂಖ್ಯೆ 1003’ ತಮ್ಮ ಸಂಬಂಧಿಕರದ್ದೆಂದು ಮೂರು ಕುಟುಂಬಗಳು ಹೇಳಿಕೊಂಡಿರುವುದು ಗೊಂದಲಕ್ಕೆ ಕಾರಣವಾಗಿದೆ. ಆಗಸ್ಟ್ 26ರಂದು ಸಂಭವಿಸಿದ ಭೀಕರ ಪ್ರವಾಹದಲ್ಲಿ ಕಾಣೆಯಾಗಿದ್ದ ಗೋಪಾಲ್ ದಹಿತ್ ಹಾಗೂ ದಾಮೋದರ್ ಬಸ್ಯಲ್ ಅವರ ಕುಟುಂಬಗಳು ಈ ಶವ ತಮ್ಮ ಸಂಬಂಧಿಕರದ್ದೆಂದು ಹೇಳಿಕೊಂಡಿವೆ. ಶವದ ಹಲ್ಲು, ಮುಖ, ತುಟಿ, ಕೈ, ದೇಹದ ರಚನೆ ಹಾಗೂ ಇತರ ದೈಹಿಕ ಗುರುತುಗಳು ತಮ್ಮ ಸಂಬಂಧಿಕರಿಗೆ ಹೊಂದಿಕೆಯಾಗುತ್ತವೆ ಎಂದು ಎರಡೂ ಕುಟುಂಬಗಳು ವಾದಿಸಿವೆ. ಗುರುತಿನ ಗೊಂದಲ ನಿವಾರಿಸಲು ಡಿಎನ್‌ಎ ಪರೀಕ್ಷೆ…

Read More

ನೇಪಾಳ ಭೀಕರ ಪ್ರವಾಹ : ಇನ್ಫೋಸಿಸ್ ಸಿಇಒ ಲಕ್ಷ್ ಗೋಪಿಸೆಟ್ಟಿ ನಾಪತ್ತೆ, ತೀವ್ರ ಶೋಧ.!

ಬೆಂಗಳೂರು: ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್‌ನ ಸಿಇಒ ಲಕ್ಷ್ ಗೋಪಿಸೆಟ್ಟಿ ನಾಪತ್ತೆಯಾಗಿದ್ದಾರೆ. ವೈಯಕ್ತಿಕ ಪ್ರವಾಸದ ಹಿನ್ನೆಲೆಯಲ್ಲಿ ನೇಪಾಳಕ್ಕೆ ತೆರಳಿದ್ದ ಅವರು ಸದ್ಯ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಇನ್ಫೋಸಿಸ್ ಸಂಸ್ಥೆ ದೃಢಪಡಿಸಿದೆ. ಲಕ್ಷ್ ಅವರ ಸುರಕ್ಷತೆ ಮತ್ತು ಆರೋಗ್ಯದ ಬಗ್ಗೆ ಕಂಪನಿ ಕಳವಳ ವ್ಯಕ್ತಪಡಿಸಿದೆ. ಸಂಬಂಧಿತ ಸಂಸ್ಥೆಗಳೊಂದಿಗೆ ಸಂಪರ್ಕದಲ್ಲಿದ್ದು ಅವರ ಕುರಿತು ಮಾಹಿತಿ ಕಲೆಹಾಕಿ ಸಂಪರ್ಕ ಸಾಧಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಹೇಳಿದೆ.ಕುಟುಂಬದವರೊಂದಿಗೂ ನಿರಂತರ ಸಂಪರ್ಕದಲ್ಲಿದ್ದು, ಅಗತ್ಯವಿರುವ ಎಲ್ಲ ನೆರವನ್ನು ನೀಡಲಾಗುತ್ತಿದೆ ಎಂದು ಇನ್ಫೋಸಿಸ್…

Read More

ವೆನೆಜುವೆಲಾ ತೈಲ ನಿಕ್ಷೇಪಗಳ ಮೇಲೆ ಅಮೆರಿಕದ ಹಿಡಿತ: ಬೃಹತ್ ಒಪ್ಪಂದ ಘೋಷಿಸಿದ ಟ್ರಂಪ್

ವಾಷಿಂಗ್ಟನ್: ವೆನೆಜುವೆಲಾದ ಸುಮಾರು 65 ಬಿಲಿಯನ್ ಬ್ಯಾರೆಲ್ ಪೆಟ್ರೋಲಿಯಂ ನಿಕ್ಷೇಪಗಳ ಮೇಲೆ ಅಮೆರಿಕಕ್ಕೆ ಬಹುಪಾಲು ನಿಯಂತ್ರಣ ನೀಡುವ ಬೃಹತ್ ತೈಲ ಒಪ್ಪಂದ ಮಾಡಿಕೊಂಡಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಇದು ವಿಶ್ವ ಇತಿಹಾಸದಲ್ಲೇ ಅತಿದೊಡ್ಡ ತೈಲ ಒಪ್ಪಂದವಾಗಿದ್ದು, ವೆನೆಜುವೆಲಾದಲ್ಲಿ ಸುಮಾರು 100 ಬಿಲಿಯನ್ ಡಾಲರ್ ಖಾಸಗಿ ಹೂಡಿಕೆಗೆ ಅವಕಾಶ ಕಲ್ಪಿಸಲಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ತಿಳಿಸಿದ್ದಾರೆ. 12 ಪ್ರಮುಖ ತೈಲ ಕ್ಷೇತ್ರಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಎರಡೂ ದೇಶಗಳ ನಡುವೆ ಮಾತುಕತೆ ನಡೆದಿದ್ದು,…

Read More

ಗಲ್ಫ್ ಎಜುಕೇಶನ್ ನಿಯತಕಾಲಿಕೆ ಬಿಡುಗಡೆ: ಐದು ಪ್ರಕಟಣೆಗಳೊಂದಿಗೆ ತುಂಬೆ ಮೀಡಿಯಾ ವಿಸ್ತರಣೆ

ದುಬೈ: ತುಂಬೆ ಗ್ರೂಪ್‌ನ ಮಾಧ್ಯಮ ಮತ್ತು ಪ್ರಕಾಶನ ವಿಭಾಗವಾದ ತುಂಬೆ ಮೀಡಿಯಾ, ಗಲ್ಫ್ ಪ್ರದೇಶದ ಶಿಕ್ಷಣ ಕ್ಷೇತ್ರದ ಬೆಳವಣಿಗೆಗಳನ್ನು ಒಳಗೊಂಡ ‘ಗಲ್ಫ್ ಎಜುಕೇಶನ್’ ಎಂಬ ಹೊಸ ಮುದ್ರಣ ಹಾಗೂ ಡಿಜಿಟಲ್ ನಿಯತಕಾಲಿಕವನ್ನು ಬಿಡುಗಡೆ ಮಾಡಿದೆ. ಈ ಹೊಸ ನಿಯತಕಾಲಿಕೆಯೊಂದಿಗೆ ತುಂಬೆ ಮೀಡಿಯಾದ ಪ್ರಕಾಶನ ಪೋರ್ಟ್ಫೋಲಿಯೊ ಐದು ಶೀರ್ಷಿಕೆಗಳಿಗೆ ವಿಸ್ತರಿಸಿದೆ. ಆರೋಗ್ಯ, ಶಿಕ್ಷಣ, ಜೀವನಶೈಲಿ, ಸಾಕುಪ್ರಾಣಿಗಳ ಆರೈಕೆ, ಪಶುವೈದ್ಯಕೀಯ ಸೇವೆ, ಪಾಕಶಾಸ್ತ್ರ ಮತ್ತು ಆತಿಥ್ಯ ಕ್ಷೇತ್ರಗಳನ್ನು ಒಳಗೊಂಡ ವೈವಿಧ್ಯಮಯ ಮಾಧ್ಯಮ ವೇದಿಕೆಯನ್ನು ಸಂಸ್ಥೆ ನಿರ್ಮಿಸುತ್ತಿದೆ. ಗಲ್ಫ್ ಪ್ರದೇಶದ ಶಿಕ್ಷಣ…

Read More

ನೇಪಾಳ-ಚೀನಾ ಗಡಿಯಲ್ಲಿ ಹಿಮ ಕುಸಿತ; ರಕ್ಷಣಾ ಕಾರ್ಯಾಚರಣೆ ಸ್ಥಗಿತ

ಕಠ್ಮಂಡು: ನೇಪಾಳ-ಚೀನಾ ಗಡಿಯಲ್ಲಿ ಸಂಭವಿಸಿದ ಹಿಮ ಕುಸಿತ ಹಾಗೂ ಭೀಕರ ಪ್ರವಾಹದ ಬಳಿಕ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದ್ದು, ನೇಪಾಳ ಸರ್ಕಾರ ರಕ್ಷಣಾ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಟಿಬೆಟ್‌ನಲ್ಲಿ ನೀರಿನ ತಡೆಗೋಡೆ ಒಡೆದಿರುವ ಮಾಹಿತಿ ಹಿನ್ನೆಲೆಯಲ್ಲಿ ಮತ್ತೊಂದು ಭೀಕರ ಪ್ರವಾಹದ ಆತಂಕ ಎದುರಾಗಿದೆ. ಹೀಗಾಗಿ ರಕ್ಷಣಾ ಸಿಬ್ಬಂದಿ ಹಾಗೂ ಭದ್ರತಾ ಪಡೆಗಳು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ. ಈ ದುರಂತದಲ್ಲಿ ಈವರೆಗೆ 472 ಮೃತದೇಹಗಳನ್ನು ಹೊರತೆಗೆಯಲಾಗಿದ್ದು, 1,400ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಹಿಮನದಿ ಕುಸಿತದಿಂದ ಹಿಮ,…

Read More

ಅಮೆರಿಕ–ಇರಾನ್ ಸಂಘರ್ಷ: ಪಾಕ್–ಇರಾನ್ ಮಾತುಕತೆಯಲ್ಲಿ ಮಹತ್ವದ ಪ್ರಗತಿ

ಇಸ್ಲಾಮಾಬಾದ್: ಅಮೆರಿಕ–ಇರಾನ್ ಸಂಘರ್ಷ ನಿಯಂತ್ರಣ ಹಾಗೂ ಜಾಗತಿಕ ಪ್ರಮುಖ ಜಲಮಾರ್ಗವಾಗಿರುವ ಹಾರ್ಮುಜ್ ಜಲಸಂಧಿಯನ್ನು ಮರುಮುಕ್ತಗೊಳಿಸುವ ನಿಟ್ಟಿನಲ್ಲಿ ಪಾಕಿಸ್ತಾನ ಮತ್ತು ಇರಾನ್ ನಡುವೆ ನಡೆದ ಉನ್ನತ ಮಟ್ಟದ ಮಾತುಕತೆಯಲ್ಲಿ ಮಹತ್ವದ ಪ್ರಗತಿ ಸಾಧಿಸಲಾಗಿದೆ. ಪಾಕಿಸ್ತಾನದ ಸೇನಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ಹಾಗೂ ಗೃಹ ಸಚಿವ ಮೊಹ್ಸಿನ್ ನಖ್ವಿ ಅವರು ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯನ್, ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಸೇರಿದಂತೆ ಪ್ರಮುಖ ನಾಯಕರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಸಂಘರ್ಷ ಮತ್ತಷ್ಟು ಉಲ್ಬಣಗೊಳ್ಳದಂತೆ ತಡೆಯುವುದು, ಸ್ಥಗಿತಗೊಂಡಿರುವ…

Read More

ತುಂಬೆ ಮೆಡಿಸಿಟಿಗೆ ಯುಎಇ ಆರ್ಥಿಕತೆ ಮತ್ತು ಪ್ರವಾಸೋದ್ಯಮ ಸಚಿವ ಅಬ್ದುಲ್ಲಾ ಬಿನ್ ತೌಕ್ ಅಲ್ ಮರಿ ಭೇಟಿ

ಅಜ್ಮಾನ್:* ಯುಎಇ ಆರ್ಥಿಕತೆ ಮತ್ತು ಪ್ರವಾಸೋದ್ಯಮ ಸಚಿವ ಹಿಸ್ ಎಕ್ಸಲೆನ್ಸಿ ಅಬ್ದುಲ್ಲಾ ಬಿನ್ ತೌಕ್ ಅಲ್ ಮರಿ ಅವರು ಅಜ್ಮಾನ್‌ನಲ್ಲಿರುವ ತುಂಬೆ ಮೆಡಿಸಿಟಿಗೆ ಭೇಟಿ ನೀಡಿದರು. ತುಂಬೆ ಗ್ರೂಪ್‌ನ ಸಂಸ್ಥಾಪಕ ಹಾಗೂ ಅಧ್ಯಕ್ಷ ಡಾ. ತುಂಬೆ ಮೊಯ್ದೀನ್, ಆರೋಗ್ಯ ವಿಭಾಗದ ಉಪಾಧ್ಯಕ್ಷ ಅಕ್ಬರ್ ಮೊಯ್ದೀನ್ ತುಂಬೆ ಹಾಗೂ ಸಂಸ್ಥೆಯ ಹಿರಿಯ ಶೈಕ್ಷಣಿಕ ಮತ್ತು ವೈದ್ಯಕೀಯ ಅಧಿಕಾರಿಗಳು ಸಚಿವರನ್ನು ಸ್ವಾಗತಿಸಿದರು. ಭೇಟಿ ವೇಳೆ ಮಾತನಾಡಿದ ಅಬ್ದುಲ್ಲಾ ಬಿನ್ ತೌಕ್ ಅಲ್ ಮರಿ, ವೈದ್ಯಕೀಯ ಹಾಗೂ ದೀರ್ಘಾಯುಷ್ಯ ಪ್ರವಾಸೋದ್ಯಮವು ಜಾಗತಿಕವಾಗಿ…

Read More
error: Content is protected !!