ಇರಾನ್ ಮೇಲೆ ಅಮೆರಿಕ ದಾಳಿ ತೀವ್ರ: ಸೇತುವೆ, ರೈಲು ನಿಲ್ದಾಣಗಳ ಧ್ವಂಸ

ಇರಾನ್ ವಿರುದ್ಧ ಅಮೆರಿಕ ನಡೆಸುತ್ತಿರುವ ವೈಮಾನಿಕ ದಾಳಿಗಳು ಮತ್ತಷ್ಟು ತೀವ್ರಗೊಂಡಿದ್ದು, ಸತತ ಆರು ದಿನಗಳಿಂದ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಗುರುವಾರ ರಾತ್ರಿ ಸೇತುವೆಗಳು, ರೈಲು ನಿಲ್ದಾಣಗಳು, ವಿದ್ಯುತ್ ಘಟಕಗಳು ಸೇರಿದಂತೆ ಪ್ರಮುಖ ಮೂಲಸೌಕರ್ಯಗಳನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ ಎಂದು ವರದಿಗಳು ತಿಳಿಸಿವೆ. ಆಗ್ನೇಯ ಇರಾನ್‌ನ ಖಮೀರ್ ಕೌಂಟಿಯಲ್ಲಿ ಬಂದರ್ ಅಬ್ಬಾಸ್–ಶಿರಾಜ್ ಸಂಪರ್ಕ ಕಲ್ಪಿಸುವ ಗೆಬೈಲ್ ಹಾಗೂ ಕಪೂರೆಸ್ತಾನ್ ಸೇತುವೆಗಳು ದಾಳಿಯಲ್ಲಿ ಧ್ವಂಸಗೊಂಡಿವೆ ಎನ್ನಲಾಗಿದೆ. ಇದೇ ವೇಳೆ ರಸ್ತೆ, ರೈಲು ಮಾರ್ಗಗಳು ಹಾಗೂ ವಿದ್ಯುತ್ ಉತ್ಪಾದನಾ ಘಟಕಗಳ ಮೇಲೂ ಅಮೆರಿಕ…

Read More

ಇರಾನ್ ಮೇಲೆ ಅಮೆರಿಕ ದಾಳಿ ತೀವ್ರ; ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚಳ

ವಾಷಿಂಗ್ಟನ್ : ಇರಾನ್ ವಿರುದ್ಧ ಅಮೆರಿಕ ಮಿಲಿಟರಿ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದು, ಸತತ ಆರನೇ ದಿನವೂ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ ಏಳು ಮಂದಿ ಮೃತಪಟ್ಟಿದ್ದಾರೆ. ಇದಕ್ಕೆ ಪ್ರತಿಯಾಗಿ ಇರಾನ್, ಕತಾರ್ ಸೇರಿದಂತೆ ಅಮೆರಿಕದ ಮಿತ್ರ ರಾಷ್ಟ್ರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದ್ದು, ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಭೀತಿ ಮತ್ತಷ್ಟು ಹೆಚ್ಚಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಿರ್ದೇಶನದಂತೆ ಇರಾನ್‌ನ ಸೇತುವೆಗಳು ಹಾಗೂ ಪ್ರಮುಖ ಮೂಲಸೌಕರ್ಯಗಳ ಮೇಲೆ ದಾಳಿ ನಡೆಸಲಾಗಿದೆ. ದಾಳಿಯಲ್ಲಿ ಹಲವು ಸೇತುವೆಗಳು ಹಾನಿಗೊಳಗಾಗಿದ್ದು,…

Read More

ಟ್ರಂಪ್‌ಗೆ ಜೀವ ಬೆದರಿಕೆ ಸಂದೇಶ: ಟೆಹ್ರಾನ್‌ನಲ್ಲಿ ಭಾರೀ ಹೋರ್ಡಿಂಗ್ ವೈರಲ್

ಟೆಹ್ರಾನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಗುರಿಯಾಗಿಸಿಕೊಂಡು ಇರಾನ್‌ನಲ್ಲಿ ಅಳವಡಿಸಲಾದ ದೈತ್ಯಾಕಾರದ ಜಾಹೀರಾತು ಫಲಕವೊಂದು ಜಾಗತಿಕ ಮಟ್ಟದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಟ್ರಂಪ್ ಅವರನ್ನು ಶವಪೆಟ್ಟಿಗೆಯಲ್ಲಿ ಮಲಗಿರುವಂತೆ ಚಿತ್ರಿಸಿರುವ ಈ ಹೋರ್ಡಿಂಗ್‌ನಲ್ಲಿ ಪರ್ಷಿಯನ್ ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ “We Will Kill Trump” ಎಂಬ ಸಂದೇಶ ಪ್ರದರ್ಶಿಸಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ. ಮಧ್ಯ ಟೆಹ್ರಾನ್‌ನ ಎಂಗೆಲಾಬ್ (Enghelab) ಚೌಕದಲ್ಲಿ ಅಳವಡಿಸಲಾದ ಈ ಹೋರ್ಡಿಂಗ್‌ನಲ್ಲಿ ಟ್ರಂಪ್ ಅವರ ಕೂದಲು ಅಸ್ತವ್ಯಸ್ತವಾಗಿರುವುದು, ಕಣ್ಣು ಹಾಗೂ ಬಾಯಿ…

Read More

ಇರಾನ್‌ ವಿರುದ್ಧ ಅಮೆರಿಕದ ನೌಕಾ ನಿರ್ಬಂಧ; ಮೂರು ವಾಣಿಜ್ಯ ಹಡಗುಗಳ ತಡೆ

ವಾಷಿಂಗ್ಟನ್: ಇರಾನ್ ವಿರುದ್ಧ ಜಾರಿಯಲ್ಲಿರುವ ನೌಕಾ ನಿರ್ಬಂಧವನ್ನು ಉಲ್ಲಂಘಿಸಿ ಸಂಚರಿಸಲು ಯತ್ನಿಸಿದ್ದ ಮೂರು ವಾಣಿಜ್ಯ ಹಡಗುಗಳನ್ನು ಅಮೆರಿಕದ ಪಡೆಗಳು ತಡೆದಿವೆ ಎಂದು ಅಮೆರಿಕದ ಕೇಂದ್ರೀಯ ಕಮಾಂಡ್ (CENTCOM) ತಿಳಿಸಿದೆ. ಸಾಮಾಜಿಕ ಜಾಲತಾಣ ಎಕ್ಸ್ (X) ನಲ್ಲಿ ಪ್ರಕಟಣೆ ನೀಡಿರುವ ಸೆಂಟ್‌ಕಾಮ್, ಎರಡು ಹಡಗುಗಳ ಮಾರ್ಗವನ್ನು ಬದಲಾಯಿಸಲಾಗಿದ್ದು, ಆದೇಶ ಪಾಲಿಸದ ಒಂದು ಹಡಗನ್ನು ನಿಷ್ಕ್ರಿಯಗೊಳಿಸಲಾಗಿದೆ. ಮತ್ತೊಂದು ಹಡಗನ್ನು ಪರಿಶೀಲನೆಗಾಗಿ ವಶಕ್ಕೆ ಪಡೆದು ನಿಯಮ ಪಾಲನೆ ಖಚಿತಪಡಿಸಲಾಗಿದೆ ಎಂದು ತಿಳಿಸಿದೆ. ಸೆಂಟ್‌ಕಾಮ್ ಮಾಹಿತಿ ಪ್ರಕಾರ, ಜುಲೈ 16ರಂದು ಒಮಾನ್ ಕೊಲ್ಲಿಯಲ್ಲಿ…

Read More

2050ರ ವೇಳೆಗೆ ಸಮುದ್ರ ಮಟ್ಟ ಏರಿಕೆ: ಕರಾವಳಿ ನಗರಗಳಿಗೆ ಹೆಚ್ಚುತ್ತಿದೆ ಅಪಾಯ, ನಾಸಾ ಅಧ್ಯಯನ ಎಚ್ಚರಿಕೆ

ನ್ಯೂಯಾರ್ಕ್:ಹವಾಮಾನ ಬದಲಾವಣೆಯಿಂದಾಗಿ ಸಮುದ್ರ ಮಟ್ಟ ನಿರಂತರವಾಗಿ ಏರುತ್ತಿದ್ದು, 2050ರ ವೇಳೆಗೆ ವಿಶ್ವದ ಅನೇಕ ಕರಾವಳಿ ನಗರಗಳು ಪ್ರವಾಹ ಮತ್ತು ಕರಾವಳಿ ಸವೆತದ ಗಂಭೀರ ಅಪಾಯವನ್ನು ಎದುರಿಸಬಹುದು ಎಂದು ನಾಸಾ ಹಾಗೂ ಇತರ ವೈಜ್ಞಾನಿಕ ಸಂಸ್ಥೆಗಳ ಅಧ್ಯಯನಗಳು ಎಚ್ಚರಿಸಿವೆ. ನಾಸಾದ ಉಪಗ್ರಹ ದತ್ತಾಂಶದ ಪ್ರಕಾರ, ಜಾಗತಿಕ ತಾಪಮಾನ ಏರಿಕೆ, ಹಿಮನದಿಗಳ ಕರಗುವಿಕೆ ಹಾಗೂ ಸಮುದ್ರದ ನೀರಿನ ಉಷ್ಣ ವಿಸ್ತರಣೆಯಿಂದ ಸಮುದ್ರ ಮಟ್ಟ ಏರಿಕೆಯಾಗುತ್ತಿದೆ. ಇದರಿಂದ ಅಮೆರಿಕದ ಗಲ್ಫ್ ಕರಾವಳಿ ಮತ್ತು ಅಟ್ಲಾಂಟಿಕ್ ಕರಾವಳಿಯ ಹಲವಾರು ನಗರಗಳು ಹೆಚ್ಚು ಅಪಾಯದ…

Read More

ಇರಾನ್‌ಗೆ ಟ್ರಂಪ್ ಮತ್ತೊಮ್ಮೆ ಕಠಿಣ ಎಚ್ಚರಿಕೆ

ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿ ಅಮೆರಿಕ–ಇರಾನ್ ನಡುವಿನ ಉದ್ವಿಗ್ನತೆ ತೀವ್ರಗೊಂಡಿರುವ ಬೆನ್ನಲ್ಲೇ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ಗೆ ಮತ್ತೊಮ್ಮೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಇರಾನ್ ವಿರುದ್ಧದ ಸೇನಾ ಕಾರ್ಯಾಚರಣೆಗೆ ಯಾವುದೇ ಗಡುವು ನಿಗದಿಪಡಿಸಲು ಇಷ್ಟವಿಲ್ಲ ಎಂದು ಹೇಳಿದ ಟ್ರಂಪ್, “ಪರಿಸ್ಥಿತಿ ಅವರಿಗೆ ಚೆನ್ನಾಗಿ ಗೊತ್ತಿದೆ. ಅವರು ಎಚ್ಚರಿಕೆಯಿಂದ ವರ್ತಿಸಬೇಕು” ಎಂದರು. ಇರಾನ್ ಮಾತುಕತೆಗೆ ಮುಂದಾಗದಿದ್ದರೆ ವಿದ್ಯುತ್ ಸ್ಥಾವರಗಳು ಮತ್ತು ಪ್ರಮುಖ ಮೂಲಸೌಕರ್ಯಗಳ ಮೇಲೆ ದಾಳಿ ಮುಂದುವರಿಯಲಿದೆ ಎಂದು ಅವರು ಎಚ್ಚರಿಕೆ ನೀಡಿದರು. ಸೇನಾ ಕಾರ್ಯಾಚರಣೆ ತಾವು ನಿರ್ಧರಿಸುವವರೆಗೆ ಮುಂದುವರಿಯಲಿದೆ…

Read More

ಭಾರತೀಯ ಮೂಲದ ಅನಿಲ್ ಮೆನನ್‌ರ ಮೊದಲ ಬಾಹ್ಯಾಕಾಶ ಯಾತ್ರೆಗೆ ಯಶಸ್ವಿ ಚಾಲನೆ

ಕಝಾಕಿಸ್ತಾನ್: ಭಾರತೀಯ ಮೂಲದ ಗಗನಯಾತ್ರಿ ಅನಿಲ್ ಮೆನನ್ ತಮ್ಮ ಮೊದಲ ಬಾಹ್ಯಾಕಾಶ ಯಾತ್ರೆಯನ್ನು ಯಶಸ್ವಿಯಾಗಿ ಆರಂಭಿಸಿದ್ದಾರೆ. ರಷ್ಯಾದ ಸೋಯುಜ್ ಎಂಎಸ್-29 ರಾಕೆಟ್ ಮೂಲಕ ಬೈಕೊನೂರ್ ಕಾಸ್ಮೊಡ್ರೋಮ್‌ನಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ISS)ದತ್ತ ಅವರು ಪ್ರಯಾಣ ಬೆಳೆಸಿದ್ದಾರೆ. ರಷ್ಯಾದ ಗಗನಯಾತ್ರಿಗಳಾದ ಪಯೋಟರ್ ಡುಬ್ರೊವ್ ಹಾಗೂ ಅನ್ನಾ ಕಿಕಿನಾ ಅವರೊಂದಿಗೆ ಅನಿಲ್ ಮೆನನ್ ಸುಮಾರು ಎಂಟು ತಿಂಗಳು ಐಎಸ್‌ಎಸ್‌ನಲ್ಲಿ ವಾಸ್ತವ್ಯ ಹೂಡಿ ವಿವಿಧ ವೈಜ್ಞಾನಿಕ ಸಂಶೋಧನೆಗಳಲ್ಲಿ ಭಾಗವಹಿಸಲಿದ್ದಾರೆ. ಬಾಹ್ಯಾಕಾಶದಲ್ಲಿ ರಕ್ತ ಪರಿಚಲನೆ ಮತ್ತು ಬಯೋಪ್ರಿಂಟಿಂಗ್ ತಂತ್ರಜ್ಞಾನ ಕುರಿತ ಅಧ್ಯಯನ ನಡೆಸಲಿದ್ದಾರೆ….

Read More

ಯುಎನ್ ಪ್ರಧಾನ ಕಾರ್ಯದರ್ಶಿ ಗುಟೆರಸ್ ಭೇಟಿ ಮಾಡಿದ ಜೈಶಂಕರ್; ಜಾಗತಿಕ ಬೆಳವಣಿಗೆಗಳ ಕುರಿತು ಚರ್ಚೆ

ನ್ಯೂಯಾರ್ಕ್: ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅಂಟೋನಿಯೊ ಗುಟೆರಸ್ ಅವರನ್ನು ನ್ಯೂಯಾರ್ಕ್‌ನಲ್ಲಿ ಭೇಟಿ ಮಾಡಿ ಮಧ್ಯಪ್ರಾಚ್ಯ ಬಿಕ್ಕಟ್ಟು, ಉಕ್ರೇನ್ ಯುದ್ಧ, ಸುಡಾನ್ ಸೇರಿದಂತೆ ಪ್ರಮುಖ ಜಾಗತಿಕ ಬೆಳವಣಿಗೆಗಳ ಕುರಿತು ಮಾತುಕತೆ ನಡೆಸಿದರು. 2028-29ರ ವಿಶ್ವಸಂಸ್ಥೆ ಭದ್ರತಾ ಮಂಡಳಿಯ (ಯುಎನ್‌ಎಸ್‌ಸಿ) ತಾತ್ಕಾಲಿಕ ಸದಸ್ಯತ್ವಕ್ಕಾಗಿ ಭಾರತದ ಅಧಿಕೃತ ಅಭಿಯಾನ ಆರಂಭಿಸಿದ ಬೆನ್ನಲ್ಲೇ ಈ ಭೇಟಿ ನಡೆದಿದೆ. ಮಾತುಕತೆ ವೇಳೆ ವಿಶ್ವಸಂಸ್ಥೆಯಲ್ಲಿ ಪ್ರಜಾಸತ್ತಾತ್ಮಕ ಹಾಗೂ ಸಾಂಸ್ಥಿಕ ಸುಧಾರಣೆಗಳ ಅಗತ್ಯವನ್ನು ಜೈಶಂಕರ್ ಒತ್ತಿ ಹೇಳಿದ್ದು, ಭಾರತ–ವಿಶ್ವಸಂಸ್ಥೆ…

Read More

ಹೋರ್ಮುಜ್ ಜಲಸಂಧಿಯಲ್ಲಿ ಯುಎಇ ಹಡಗುಗಳ ಮೇಲೆ ಇರಾನ್ ದಾಳಿ; ಭಾರತೀಯ ನಾವಿಕ ಸಾವು

ಹೋರ್ಮುಜ್ ಜಲಸಂಧಿಯಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ)ಗೆ ಸೇರಿದ ಹಡಗುಗಳ ಮೇಲೆ ಇರಾನ್ ದಾಳಿ ನಡೆಸಿದೆ. ಈ ದಾಳಿಯಲ್ಲಿ ಒಬ್ಬ ಭಾರತೀಯ ನಾವಿಕ ಮೃತಪಟ್ಟಿದ್ದು, ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಆರು ಮಂದಿ ಭಾರತೀಯರು, ಇಬ್ಬರು ಉಕ್ರೇನ್ ಪ್ರಜೆಗಳೂ ಸೇರಿದ್ದಾರೆ. ಎರಡು ತೈಲ ಟ್ಯಾಂಕರ್‌ಗಳನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ. ಮೊಂಬಾಸ ಮತ್ತು ಅಲ್ ಬಹಿಯಾ ಎಂಬ ಹಡಗುಗಳು ದಾಳಿಗೆ ಒಳಗಾಗಿವೆ. ಯುಎಇ ರಕ್ಷಣಾ ಸಚಿವಾಲಯ ಈ ದಾಳಿಯನ್ನು ತೀವ್ರವಾಗಿ ಖಂಡಿಸಿದೆ. ಇದು ಅಂತರರಾಷ್ಟ್ರೀಯ ಕಾನೂನುಗಳ ಗಂಭೀರ…

Read More

ಹಾರ್ಮುಜ್ ಜಲಸಂಧಿ ವಿವಾದ ತಾರಕಕ್ಕೆ; ಅಮೆರಿಕ–ಇರಾನ್ ನಡುವೆ ಮತ್ತೆ ಭಾರೀ ದಾಳಿ

ವಾಷಿಂಗ್ಟನ್/ಟೆಹ್ರಾನ್: ಹಾರ್ಮುಜ್ ಜಲಸಂಧಿಯ ನಿಯಂತ್ರಣ ವಿಚಾರವಾಗಿ ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಮತ್ತಷ್ಟು ತೀವ್ರಗೊಂಡಿದ್ದು, ಭಾನುವಾರ ಸಂಜೆಯಿಂದ ಇರಾನ್, ಕುವೈತ್ ಹಾಗೂ ಬಹರೇನ್ ಪ್ರದೇಶಗಳಲ್ಲಿ ಹೊಸ ದಾಳಿಗಳು ನಡೆದಿರುವುದಾಗಿ ವರದಿಯಾಗಿದೆ. ಈ ನಡುವೆ ಹಾರ್ಮುಜ್ ಜಲಸಂಧಿ ಹಡಗುಗಳ ಸಂಚಾರಕ್ಕೆ ಮುಕ್ತವಾಗಿದೆಯೇ ಎಂಬ ಪ್ರಶ್ನೆಯಲ್ಲಿ ವಾಷಿಂಗ್ಟನ್ ಮತ್ತು ಟೆಹ್ರಾನ್ ಪರಸ್ಪರ ವಿರುದ್ಧ ಹೇಳಿಕೆಗಳನ್ನು ನೀಡಿವೆ. ಇರಾನ್ ತನ್ನ ದಕ್ಷಿಣ ಭಾಗದ ಎರಡು ದ್ವೀಪಗಳ ಮೇಲೆ ದಾಳಿ ನಡೆದಿರುವುದಾಗಿ ತಿಳಿಸಿದರೆ, ಕುವೈತ್ ತನ್ನ ಗಡಿ ಠಾಣೆಗಳು ಹಾಗೂ ಕಡಲಾಚೆಯ…

Read More
error: Content is protected !!