ಹಿರಿಯ ನಟ ಧರ್ಮೇಂದ ಇನ್ನಿಲ್ಲ

ಮುಂಬೈ: ಹಿರಿಯ ಚಲನಚಿತ್ರ ನಟ ಧರ್ಮೇಂದ್ರ ಸೋಮವಾರ ಬೆಳಿಗೆ, ಅಲ್ಪಕಾಲದ ಅನಾರೋಗ್ಯದಿಂದ ತಮ್ಮ ಮುಂಬೈನ ವಿವಾಸದಲ್ಲಿ ನಿಧನರಾದರು. ಅವರಿಗೆ 89 ವರ್ಷ ವಯಸ್ಸಾಗಿತ್ತು. ಡಿಸೆಂಬ‌ರ್ 8ರಂದು ಆಚರಿಸಲಿದ್ದ 90ನೇ ಹುಟ್ಟುಹಬ್ಬಕ್ಕೆ ಕೆಲವ ದಿನಗಳು ಬಾಕಿ ಇರುವಾಗಲೇ ಅವರ ನಿಧನ ಸಂಭವಿಸಿದೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಧರ್ಮೇಂದ್ರ ಅವರನ್ನು ಅಕ್ಟೋಬರ್ 31ರಂದು ಬ್ರಿಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಅಂತ್ಯಕ್ರಿಯೆಯನ್ನು ಪವನ್ ಹ್ಯಾನ್ಸ್ ಸ್ಮಶಾನದಲ್ಲಿ ನೆರವೇರಿಸಲಾಗುವುದು. ಶ್ರೀರಾಮ್ ರಾಘವನ್ ನಿರ್ದೇಶನದ ಇಕ್ಕಿಸ್ ಧರ್ಮೇಂದ್ರ ಅವರ ಕೊನೆಯ ಚಿತ್ರವಾಗಲಿದ್ದು ಅಮಿತಾಬ್ ಬಚ್ಚನ್…

Read More

ಗಾಯಕಿ ವಾರಿಜಶ್ರೀ ಜೊತೆ ಸಂಗೀತ ನಿರ್ದೇಶಕ ರಘು ದೀಕ್ಷಿತ್ ವಿವಾಹ

ಬೆಂಗಳೂರು: ಖ್ಯಾತ ಗಾಯಕ, ಸಂಗೀತ ನಿರ್ದೇಶಕ ರಘು ದೀಕ್ಷಿತ್ ಅವರು 2ನೇ ಮದುವೆ ಆಗಿದ್ದಾರೆ. ಗಾಯಕಿ ವಾರಿಜಶ್ರೀ ವೇಣುಗೋಪಾಲ್ ಜೊತೆ ಅವರು ವೈವಾಹಿಕ ಜೀವನ ಆರಂಭಿಸಿದ್ದಾರೆ. ರಘು ದೀಕ್ಷಿತ್ ಮತ್ತು ವಾರಿಜಶ್ರೀ ಮದುವೆ ಆಗಲಿದ್ದಾರೆ ಎಂಬ ಬಗ್ಗೆ ಇತ್ತೀಚೆಗಷ್ಟೇ ಸುದ್ದಿ ಹೊರಬಿದ್ದಿತ್ತು. ಆ ಬಗ್ಗೆ ಮಾಧ್ಯಮವೊಂದಕ್ಕೆ ರಘು ದೀಕ್ಷಿತ್ ಅವರು ಪ್ರತಿಕ್ರಿಯೆ ಕೂಡ ನೀಡಿದ್ದರು. ಕುಟುಂಬದವರು ಮತ್ತು ಆಪ್ತರ ಸಮ್ಮುಖದಲ್ಲಿ ಈ ಮದುವೆ ನಡೆದಿದೆ. ಸೋಶಿಯಲ್ ಮೀಡಿಯಾದಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಂಡು ಈ ಜೋಡಿಗೆ ಅಭಿನಂದನೆ ತಿಳಿಸಲಾಗಿದೆ….

Read More

‘ಮಹಾಭಾರತ ಧಾರಾವಾಹಿ ಖ್ಯಾತಿಯ ಕರ್ಣನ ಪಾತ್ರಧಾರಿ ನಟ ಪಂಕಜ್ ಧೀರ್ ಇನಿಲ್ಲ

ಮುಂಬೈ: ಬಿ.ಆರ್. ಚೋಪ್ರಾ ಅವರ ‘ಮಹಾಭಾರತ’ ಧಾರಾವಾಹಿಯಲ್ಲಿ ಯೋಧ ಕರ್ಣನ ಪಾತ್ರಕ್ಕೆ ಹೆಸರುವಾಸಿಯಾಗಿದ್ದ ನಟ ಪಂಕಜ್ ಧೀರ್ ಅಕ್ಟೋಬರ್ 15 ರಂದು ನಿಧನರಾದರು. ಅವರ ಹಳೆಯ ಸ್ನೇಹಿತ, ಸಹೋದ್ಯೋಗಿ ಮತ್ತು ಸಿನ್ಮಾ ಸದಸ್ಯ ಅಮಿತ್ ಬೆಕ್ಸ್ ಈ ಸುದ್ದಿಯನ್ನು ದೃಢಪಡಿಸಿದರು.ಮೂಲಗಳ ಪ್ರಕಾರ, ಪಂಕಜ್ ಕೆಲವು ಸಮಯದಿಂದ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದರು ಎಂದು ವರದಿಯಾಗಿದೆ. ಕೆಲವು ತಿಂಗಳ ಹಿಂದೆ ಆ ಕಾಯಿಲೆ ಮತ್ತೆ ಕಾಣಿಸಿಕೊಂಡಿತು, ಇದರಿಂದಾಗಿ ಅವರು ತೀವು ಅಸ್ವಸ್ಥರಾದರು. ಅವರು ಪ್ರಮುಖ ಶಸ್ತ್ರಚಿಕಿತ್ಸೆಗೂ ಒಳಗಾಗಿದ್ದರು.

Read More

ಉಡುಪಿ ಕೃಷ್ಣಮಠಕ್ಕೆ ಭೇಟಿ ನಟ ಧ್ರುವ ಸರ್ಜಾ ಭೇಟಿ – ದೇವರ ದರ್ಶನ

ಉಡುಪಿ: ಸ್ಯಾಂಡಲ್ ವುಡ್ ನಟ ಧ್ರುವ ಸರ್ಜಾ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಕೃಷ್ಣನ ದರ್ಶನ ಪಡೆದರು. ಮಠದ ವತಿಯಿಂದ ನಟನನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು. ಪರ್ಯಾಯ ಶ್ರೀ ಸುಗುಣೇಂದ್ರತೀರ್ಥ ಶ್ರೀ ಪಾದರನ್ನು ಭೇಟಿಯಾಗಿ ಕೋಟಿಗೀತಾಲೇಖನಯಜ್ಞ ದೀಕ್ಷೆ ಸ್ವೀಕರಿಸಿದರು.ಶ್ರೀಗಳು ಅನುಗ್ರಹ ಮಂತ್ರಾಕ್ಷತೆ ನೀಡಿದ ಬಳಿಕ ಅನ್ನ ಪ್ರಸಾದ ಸೇವಿಸಿ ತೆರಳಿದರು.

Read More

ಪ್ರಥಮ ಹಂತದ ಚಿತ್ರೀಕರಣ ಪೂರ್ಣಗೊಂಡ “ಲೈಫ್ ಈಸ್ ಜಿಂಗಾಲಾಲ”

ಮಂಗಳೂರು : ಎಚ್‌ ಪಿಆರ್ ಫಿಲ್ಟ್ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾಗುತ್ತಿರುವ ಲೈಫ್ ಈಸ್ ಜಿಂಗಾಲಾಲ ತುಳು ಸಿನಿಮಾದ ಮೊದಲ ಹಂತದ ಚಿತ್ರೀಕರಣ ಪೂರ್ಣಗೊಂಡಿದೆ. ಹರಿಪ್ರಸಾದ್ ರೈ ನಿರ್ಮಾಣದಲ್ಲಿ ತ್ರಿಶೂಲ್ ಶೆಟ್ಟಿ ನಿರ್ದೇಶನದಲ್ಲಿ ತಯಾರಾಗುತ್ತಿರುವ ಜಿಂಗಾಲಾಲ ಸಿನಿಮಾಕ್ಕೆ ಕರಾವಳಿ ಭಾಗದಲ್ಲಿ ಚಿತ್ರೀಕರಣಗೊಂಡಿದೆ. ಹರಿಪ್ರಸಾದ್ ರೈ ಮತ್ತು ತ್ರಿಶೂಲ್ ಶೆಟ್ಟಿ ಈ ಹಿಂದೆ ಪುಳಿಮುಂಚಿ ಎನ್ನುವ ಹಾಸ್ಯ ಸಿನಿಮಾ ನಿರ್ಮಿಸಿದ್ದರು. ಈಗ ಹೊಸ ಬಗೆಯ ಸಿನಿಮಾವನ್ನು ತುಳು ಸಿನಿಮಾರಂಗಕ್ಕೆ ನೀಡಲು ಸಿದ್ಧತೆ ನಡೆಸಿದ್ದಾರೆ. ಮಳೆಯ ಕಾರಣದಿಂದ ಜಿಂಗಾಲಾಲ ಸಿನಿಮಾಕ್ಕೆ ಮೊದಲ…

Read More

ರಾಕೇಶ್‌ ಪೂಜಾರಿ ನಿವಾಸಕ್ಕೆ ರಿಷಬ್‌ ಶೆಟ್ಟಿ ದಂಪತಿ ಭೇಟಿ : ತಾಯಿ, ತಂಗಿಗೆ ಸಾಂತ್ವನ ಹೇಳಿದ ನಟ

ಇತ್ತೀಚೆಗಷ್ಟೇ ನಿಧನರಾದ ʻಕಾಮಿಡಿ ಕಿಲಾಡಿʼ ಸೀಸನ್‌ 3 ವಿನ್ನರ್‌, ಕನ್ನಡದ ಕಿರುತೆರೆಯ ಹಾಸ್ಯ ಕಲಾವಿದ ರಾಕೇಶ್ ಪೂಜಾರಿ (Rakesh Poojary) ಅವರ ನಿವಾಸಕ್ಕೆ ಡಿವೈನ್‌ ನಟ ರಿಷಭ್‌ ಶೆಟ್ಟಿ ದಂಪತಿ ಭೇಟಿ ನೀಡಿದ್ದಾರೆ. ರಿಷಬ್ ಶೆಟ್ಟಿ ಹಾಗೂ ಪ್ರಗತಿ ರಿಷಬ್ ಶೆಟ್ಟಿ ಅವರು ಇಂದು ಭೇಟಿ ನೀಡಿ ರಾಕೇಶ್ ಅವರ ತಾಯಿ ಮತ್ತು ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಅಲ್ಲದೇ ರಾಕೇಶ್‌ ತಂಗಿ ಮದುವೆಗೂ ಆರ್ಥಿಕ ಸಹಾಯ ಮಾಡಿದ್ದಾರೆ. ಮುಂದಿನ ದಿನದಲ್ಲಿ ನಿರ್ಮಾಣವಾಗುವ ರಾಕೇಶ್‌ನ ಪುತ್ಥಳಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿಯೂ…

Read More

ಕಟ್ಟೆಮಾರ್ ತುಳು ಸಿನಿಮಾ ತೆರೆ ಕಾಣಲು ಸಿದ್ಧತೆ-ಟೀಸರ್ ಬಿಡುಗಡೆ

ತುಳು ಚಿತ್ರರಂಗದಲ್ಲಿ ಕಟ್ಟೆಮಾರ್ ತುಳು ಸಿನಿಮಾ ತೆರೆ ಕಾಣಲು ಸಿದ್ಧತೆ ಮಾಡಿದೆ.ಅಸ್ತ್ರ ಪ್ರೊಡಕ್ಷನ್ ಲಾಂಛನದಲ್ಲಿ ಲಂಚುಲಾಲ್ ಕೆ .ಎಸ್ ಅವರ ನಿರ್ಮಾಣದ ಕಟ್ಟೆಮಾರ್ ತುಳುಸಿನಿಮಾದ ಅಧಿಕೃತ ಟೀಸರ್ ಯೂಟ್ಯೂಬ್ ನಲ್ಲಿ ರಿಲೀಸ್ ಆಗುವ ಮೂಲಕ ಸಿನಿ ಪ್ರೇಕ್ಷಕರ ಪ್ರಸಂಶೆಗೆ ಪಾತ್ರವಾಗಿದೆ. ಲಂಚುಲಾಲ್ ಕೆ ಎಸ್ ನಿರ್ಮಾಣದ , ಸ್ವರಾಜ್ ಶೆಟ್ಟಿ ಮತ್ತು ಜೆ.ಪಿ ತೂಮಿನಾಡು ಅವರ ಅದ್ಬುತ ನಟನೆಯಲ್ಲಿ ಸಿನಿಮ ತೆರೆಗೆ ಬರಲು ಸಜ್ಜಾಗಿದೆ.. ಇದೊಂದು ವ್ಯತ್ಯಾಸ್ತವಾದ ಸಿನಿಮಾ ಆಗಿದ್ದು ಸ್ವರಾಜ್ ಶೆಟ್ಟಿ ಹಾಗು ಜೆಪಿ ತೂಮಿನಾಡು…

Read More

ಸ್ಯಾಂಡಲ್‌ವುಡ್‌ ನಟ ಅನಂತನಾಗ್‌ಗೆ ಪದ್ಮಭೂಷಣ ಪ್ರಶಸ್ತಿ

ನವದೆಹಲಿ: ಕೇಂದ್ರ ಸರ್ಕಾರ ಶನಿವಾರ ಪ್ರಕಟಿಸಿದ ಈ ಸಾಲಿನ ಅತ್ಯನ್ನತ ನಾಗರಿಕ ಸೇವಾ ಪ್ರಶಸ್ತಿ ಪದ್ಮವಿಭೂಷಣಕ್ಕೆ ಸ್ಯಾಂಡಲ್‌ವುಡ್‌ ಹಿರಿಯ ನಟ ಅನಂತ್‌ನಾಗ್‌ ಭಾಜನರಾಗಿದ್ದಾರೆ. ಅನಂತನಾಗ್ ಭಾರತೀಯ ಚಿತ್ರಲೋಕ ಕಂಡ ಅದ್ಭುತ ಪ್ರತಿಭೆ. ತಮ್ಮ ಸ್ವಾಬಾವಿಕ ನಟನಾಶೈಲಿಯಿಂದಲೇ ಗಮನ ಸೆಳೆಯುವ ಇವರು ಕನ್ನಡ ಮಾತ್ರವಲ್ಲದೇ ಮರಾಠಿ, ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಚಿತ್ರಗಳಲ್ಲೂ ನಟಿಸಿದ್ದಾರೆ. 6 ಫಿಲ್ಮ್ ಫೇರ್ ಮತ್ತು 5 ಕರ್ನಾಟಕ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಕರ್ನಾಟಕ ರಾಜಕೀಯದಲ್ಲಿಯೂ ತಮ್ಮ ಛಾಪನ್ನು ಮೂಡಿಸಿರುವ ಇವರು 1994ರ ಜೆ.ಹೆಚ್.ಪಟೇಲ್…

Read More

ರಾಜಕಾರಣಿಗಳೊಂದಿಗೆ ಡೇಟಿಂಗ್ ಆಫರ್: ಬಹಿರಂಗಪಡಿಸಿದ ನಮ್ರತಾ ಗೌಡ

ಬಿಗ್ ಬಾಸ್ ಕನ್ನಡ 10ರ ಸ್ಪರ್ಧಿ ನಮ್ರತಾ ಗೌಡಗೆ ರಾಜಕಾರಣಿಗಳೊಂದಿಗೆ ಡೇಟಿಂಗ್ ಮಾಡುವಂತೆ ವ್ಯಕ್ತಿಯೊಬ್ಬ ಆನ್ ಲೈನ್ ನಲ್ಲಿ ಡೇಟಿಂಗ್‌ ಆಫರ್‌ ನೀಡಿದ್ದಾನೆ. ಇದನ್ನು ಸ್ಕ್ರೀನ್ ಶಾಟ್ ತೆಗೆದು ತನ್ನ ಇನ್ಸ್ಟಾಗ್ರಾಮ್ ನಲ್ಲಿ ನಮ್ರತಾ ಶೇರ್ ಮಾಡಿದ್ದಾರೆ. ರಾಕಿ ಜಿ43 ಹೆಸರಿನ ಇನ್ಸ್ಟಾಗ್ರಾಂ ಖಾತೆಯಿಂದ ಸಂದೇಶ ಕಳುಹಿಸಿರುವ ರೋಷನ್ ಎಂಬಾತ, ತನಗೆ ಸಾಕಷ್ಟು ರಾಜಕಾರಣಿಗಳ ಜೊತೆಗೆ ನಂಟಿದೆ. ರಾಜಕಾರಣಿಗಳ ಜೊತೆಗೆ ಡೇಟಿಂಗ್ ಮಾಡುವಂತೆ ನಮ್ರತಾರನ್ನು ಕೇಳಿದ್ದಾನೆ. ನಿಮ್ಮ ಫೋನ್ ನಂಬರ್, ಫೋಟೋಗಳನ್ನು ಕಳುಹಿಸುವ ಅಗತ್ಯವಿಲ್ಲ. ಡೇಟಿಂಗ್‌ಗೆ ಬುಕ್…

Read More

‘ಕೊತ್ತಲವಾಡಿ ಚಿತ್ರದ ಪ್ರಚಾರಕ್ಕೆ ಯಶ್ ಸಾತ್ ‘; ‘ರಾಕಿ ಭಾಯ್’ ಅಮ್ಮ ಚಿತ್ರದ ನಿರ್ಮಾಪಕಿ

ಪೃಥ್ವಿ ಅಂಬಾರ್ ಅಭಿನಯದ ‘ಕೊತ್ತಲವಾಡಿ’ ಸಿನಿಮಾದಲ್ಲಿ ಮಂಡ್ಯ ಸೊಗಡಿನ ಕಥೆ ಇದ್ದು, ಪೃಥ್ವಿ ಮೊದಲ ಬಾರಿಗೆ ಆಕ್ಷನ್ ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಯಶ್ ತಾಯಿ ಪುಷ್ಪಾ ಅರುಣ್ ಕುಮಾರ್ ನಿರ್ಮಾಣದ ಈ ಚಿತ್ರವನ್ನು ಶ್ರೀರಾಜ್ ನಿರ್ದೇಶಿಸಿದ್ದಾರೆ. ಈ ಸಿನಿಮಾವು ಕನ್ನಡ ಸೇರಿದಂತೆ ವಿವಿಧ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಕೊತ್ತಲವಾಡಿ…ಚಾಮರಾಜನಗರ ಜಿಲ್ಲೆಯ ಒಂದು ಸಣ್ಣ ಹಳ್ಳಿ. ಹಳ್ಳಿಯ ಯುವಕ, ಹಳ್ಳಿಯ ಲವ್‌ ಸ್ಟೋರಿ, ಹಳ್ಳಿ ರಾಜಕೀಯ, ಹಳ್ಳಿಯ ಹಾಡು ಹಸೆ ಕುರಿತ ಸಾಕಷ್ಟು ಸಿನಿಮಾಗಳು ಬಂದಿವೆ. ಅದರೆ ‘ಕೊತ್ತಲವಾಡಿ’ ಅದಲ್ಲ….

Read More
error: Content is protected !!