ಕಾಸರಗೋಡು :ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನ ಹಿಂಬದಿ ಚಕ್ರ ಸ್ಫೋಟ; 70 ಪ್ರಯಾಣಿಕರು ಪಾರು

ಕಾಸರಗೋಡು : ನೀಲೇಶ್ವರದಿಂದ ಹೊಸದುರ್ಗಕ್ಕೆ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಭೀಕರ ಅವಘಡ ಸಂಭವಿಸಿದೆ. ಬಸ್ ಹೊಸದುರ್ಗ ಸೌತ್ ತಲುಪುತ್ತಿದ್ದಂತೆ ಹಿಂಭಾಗದ ಚಕ್ರ ಭಾರೀ ಶಬ್ದದೊಂದಿಗೆ ದಿಢೀರ್ ಸ್ಫೋಟಗೊಂಡಿದೆ. ಇದರ ತೀವ್ರತೆಗೆ ಬಸ್‌ನ ಅಡಿಭಾಗದ ಪ್ಲಾಟ್‌ಫಾರ್ಮ್ ಕಿತ್ತುಬಂದಿದ್ದು, ಹಿಂಭಾಗದ ಸೀಟಿನಲ್ಲಿದ್ದ ನೀಲೇಶ್ವರ ನಿವಾಸಿ ಎಂ.ಕೆ. ಕುಂಞಾಯಿಷ (39) ಅವರ ಕಾಲಿಗೆ ತೀವ್ರ ಪೆಟ್ಟಾಗಿದೆ. ​ಅಡಿಭಾಗದಲ್ಲಿ ಕಾಲು ಸಿಲುಕಿ ಎಡಕಾಲಿನ ಮೂಳೆ ಮುರಿದಿದ್ದು, ತಕ್ಷಣವೇ ಅವರನ್ನು ಹೊಸದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ನಡೆದಾಗ ಬಸ್‌ನಲ್ಲಿ ಸುಮಾರು 70 ಪ್ರಯಾಣಿಕರಿದ್ದು,…

Read More

ಕುಂಬಳೆಯಲ್ಲಿ ಅಕ್ರಮ ಮಣ್ಣು ಗಣಿಗಾರಿಕೆ: ದಿಢೀರ್ ದಾಳಿ, ಟಿಪ್ಪರ್-ಜೆಸಿಬಿ ವಶ

​ಕುಂಬಳೆ : ಇಲ್ಲಿಯ ಪರಿಸರದಲ್ಲಿ ಕಾನೂನುಬಾಹಿರವಾಗಿ ಮಣ್ಣು ಅಗೆದು ಸಾಗಿಸುವ ದಂಧೆ ಎಡಬಿಡದೆ ಸಾಗುತ್ತಿದ್ದು, ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದಾರೆ. ಬಂದ್ಯೋಡು ಮೀಪ್ರಿ ಎಂಬಲ್ಲಿ ಅಕ್ರಮವಾಗಿ ಮಣ್ಣು ಲೂಟಿ ಮಾಡುತ್ತಿದ್ದ ಜಾಗದ ಮೇಲೆ ಕುಂಬಳೆ ಎಸ್‌ಐ ಹಾಗೂ ಎಎಸ್‌ಐ ನೇತೃತ್ವದ ಪೊಲೀಸ್ ಪಡೆ ದಿಢೀರ್ ದಾಳಿ ನಡೆಸಿದೆ. ​ದಾಳಿ ವೇಳೆ ಮಣ್ಣು ಸಾಗಿಸುತ್ತಿದ್ದ ಒಂದು ಟಿಪ್ಪರ್ ಲಾರಿ ಹಾಗೂ ಜೆಸಿಬಿಯನ್ನು ವಶಪಡಿಸಿಕೊಳ್ಳಲಾಗಿದೆ. ಘಟನಾ ಸ್ಥಳದಲ್ಲಿದ್ದ ಜಾರ್ಖಂಡ್ ಮೂಲದ ಸಹಜಾದ್ (21) ಮತ್ತು ಮೊಹಮ್ಮದ್ ಅರ್ಬಾಸ್ (23) ಅವರನ್ನು ವಶಕ್ಕೆ…

Read More

ಕಾಸರಗೋಡಿನಲ್ಲಿ ತಾಯಿ-ಮಗಳು ನಾಪತ್ತೆ: ವಾರ ಕಳೆದರೂ ಸಿಗದ ಸುಳಿವು

ಕಾಸರಗೋಡು : ಉದುಮ ಪಡಿಞ್ಞಾರ್‌ ಬಳಿಯ ತಚ್ಚರಕುನ್ನಿನ ಹಾರಿಸ್ ಎಂಬವರ ಪತ್ನಿ ಫಾತಿಮತ್ ಬುಶ್ರ (28) ಮತ್ತು ಅವರ ಆರು ವರ್ಷದ ಪುತ್ರಿ ಸೆಪ್ಟಂಬರ್ 8ರ ರಾತ್ರಿಯಿಂದ ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ​ಸಹೋದರಿ ನೀಡಿದ ದೂರಿನನ್ವಯ ಬೇಕಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರಂಭದಲ್ಲಿ ಮೊಬೈಲ್ ಫೋನ್ ಸುಳಿವುಗಳ ಆಧಾರದ ಮೇಲೆ ತನಿಖೆ ನಡೆಸಿದರೂ, ಇಬ್ಬರ ಪತ್ತೆ ಸಾಧ್ಯವಾಗಿಲ್ಲ. ನಾಪತ್ತೆಯಾಗಿ ವಾರ ಕಳೆದರೂ ಯಾವುದೇ ಖಚಿತ ಮಾಹಿತಿ ಸಿಗದ ಹಿನ್ನೆಲೆಯಲ್ಲಿ, ಪೊಲೀಸರು ಈಗ ತನಿಖಾ ಜಾಲವನ್ನು ಮತ್ತಷ್ಟು ವಿಸ್ತರಿಸಿದ್ದಾರೆ.​ಸಾಮಾಜಿಕ…

Read More

ಸೆ.18ಕ್ಕೆ ‘ಅಮರ್ಥ’ ಸಿನಿಮಾ ರಾಜ್ಯಾದ್ಯಂತ ಬಿಡುಗಡೆ; ಕರಾವಳಿಯ ಕಥೆಗೆ ಬೆಳ್ಳಿತೆರೆ ಸಜ್ಜು

ಮಂಗಳೂರು:* ಪಂಚರಂಗಿ ಬ್ಯಾನರ್ ಅಡಿಯಲ್ಲಿ ಕನ್ಯಾನ ಸದಾಶಿವ ಶೆಟ್ಟಿ ಹಾಗೂ ಗುರು ಹೆಗ್ಡೆ ಅವರ ನಿರ್ಮಾಣದಲ್ಲಿ, ಗುರು ಹೆಗ್ಡೆ ಮತ್ತು ವಿನಯ್ ಪ್ರೀತಂ ನಿರ್ದೇಶನದಲ್ಲಿ ಮೂಡಿಬಂದಿರುವ ‘ಅಮರ್ಥ’ ಸಿನಿಮಾ ಸೆಪ್ಟೆಂಬರ್ 18ರಂದು ರಾಜ್ಯಾದ್ಯಂತ ತೆರೆಕಾಣಲಿದೆ ಎಂದು ಗುರು ಹೆಗ್ಡೆ ತಿಳಿಸಿದರು. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರೇಕ್ಷಕರ ಅಭಿರುಚಿಗೆ ತಕ್ಕಂತೆ ಕಥೆ ಮತ್ತು ಚಿತ್ರಕಥೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿದ್ದರಿಂದ ಚಿತ್ರದ ಬಿಡುಗಡೆ ವಿಳಂಬವಾಗಿದೆ. ಸುಮಾರು ಎರಡೂವರೆ ವರ್ಷಗಳ ಅವಧಿಯಲ್ಲಿ ಸಿನಿಮಾ ಪೂರ್ಣಗೊಂಡಿದ್ದು, ಅಂತಿಮ ಹಂತದಲ್ಲಿ…

Read More

ಮಂಜೇಶ್ವರ :ಸೋಮವಾರದಿಂದ ನಾಪತ್ತೆಯಾಗಿದ್ದ ಬಾಬು ಶೆಟ್ಟಿ ಮೃತದೇಹವಾಗಿ ಪತ್ತೆ

ಮಂಜೇಶ್ವರ : ಕುಂಜತ್ತೂರು ಗೋಳಿಯಡಿಯ ನಿವಾಸಿ ಬಾಬು ಶೆಟ್ಟಿ (77) ಎಂಬುವರು ನೇಣು ಬಿಗಿದುಕೊಂಡು ಶವವಾಗಿ ಪತ್ತೆಯಾಗಿದ್ದಾರೆ. ಮನೆಯಲ್ಲಿ ಊಟ ಮಾಡಿ ಮಲಗಿದ್ದ ಇವರು, ಸೋಮವಾರದಿಂದ ಕಾಣೆಯಾಗಿದ್ದರು. ಆತಂಕಗೊಂಡ ಕುಟುಂಬಸ್ಥರು ಸುತ್ತಮುತ್ತ ಹುಡುಕಾಟ ನಡೆಸಿದಾಗ, ಮನೆ ಸಮೀಪದ ದನದ ಕೊಟ್ಟಿಗೆಯಲ್ಲಿ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ. ​ತಕ್ಷಣವೇ ಅವರನ್ನು ಮಂಗಲ್ಪಾಡಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಷ್ಟರಲ್ಲಾಗಲೇ ಅವರು ಕೊನೆಯುಸಿರೆಳೆದಿದ್ದರೆಂದು ವೈದ್ಯರು ದೃಢಪಡಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Read More

​ಕಾಸರಗೋಡಿನಲ್ಲಿ ತಿರುವೋಣಂ ಬಂಪರ್ ಲಾಟರಿ ಟಿಕೆಟ್‌ಗೆ ಭಾರೀ ಬೇಡಿಕೆ: 30 ಕೋಟಿ ರೂ. ಮೊದಲ ಬಹುಮಾನ

​ಕಾಸರಗೋಡು : ತಿರುವೋಣಂ ಬಂಪರ್ ಲಾಟರಿ ಟಿಕೆಟ್‌ಗಳನ್ನು ಖರೀದಿಸಲು ಜನರ ನೂಕುನುಗ್ಗಲು ಹೆಚ್ಚಾಗುತ್ತಿದೆ. ಕೇರಳ ಸರ್ಕಾರವು ತನ್ನ ಇತಿಹಾಸದಲ್ಲೇ ಮೊದಲ ಬಾರಿಗೆ ಅತ್ಯಂತ ದೊಡ್ಡ ಮೊತ್ತದ 30 ಕೋಟಿ ರೂಪಾಯಿಗಳ ತಿರುವೋಣಂ ಬಂಪರ್ ಲಾಟರಿಯನ್ನು ಈ ವರ್ಷ ಮಾರುಕಟ್ಟೆಗೆ ತಂದಿದೆ. ಹಿಂದೆ 6 ಕೋಟಿ, ನಂತರ 10 ಕೋಟಿ ಹಾಗೂ 25 ಕೋಟಿ ರೂಪಾಯಿಗಳ ಬಂಪರ್ ಲಾಟರಿಗಳು ಲಭ್ಯವಿದ್ದವು. ​ಈ ತಿಂಗಳ 26 ರಂದು ಓಣಂ ಬಂಪರ್ ಲಾಟರಿಯ ಡ್ರಾ (ನಿಕಾಲ್) ನಡೆಯಲಿದೆ. ದಿನಾಂಕ ಹತ್ತಿರವಾಗುತ್ತಿದ್ದಂತೆ ಕಾಸರಗೋಡಿನ…

Read More

ಶ್ರೀ ಕಾಡಿಕಾಂಬಾ ದೇವಸ್ಥಾನದಲ್ಲಿ ನಿನಾದದ ಭಕ್ತಿ ಸಂಗೀತ

ಶಿರೂರು: ಶ್ರೀ ಕಾಡಿಕಾಂಬಾ ದೇವಸ್ಥಾನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ೩೫ನೇ ವರ್ಷದ ಶ್ರೀ ಸಾರ್ವಜನಿಕ ಗಣೇಶೋತ್ಸವದ ಅಂಗವಾಗಿ ಭಕ್ತಿಭಾವದ ವಿಶೇಷ ಭಕ್ತಿ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಭಟ್ಕಳದ ನಿನಾದ ಕಲ್ಚರಲ್ ಅಕಾಡೆಮಿ ವತಿಯಿಂದ ಭಕ್ತಿ ಗೀತೆಗಳ ಗಾಯನ ಹಾಗೂ ಸುಮಧುರ ಸಂಗೀತ ಕಾರ್ಯಕ್ರಮ ನಡೆಯಿತು.ರಾಜ್ಯ ಪ್ರಶಸ್ತಿ ಪುರಸ್ಕೃತ ಗಾಯಕ ಉಮೇಶ ಮುಂಡಳ್ಳಿ ಅವರೊಂದಿಗೆ ನಿನಾದ ಉಮೇಶ ಹಾಗೂ ಉತ್ಥಾನ ಉಮೇಶ,ವಾಸುದೇವ ಪೂಜಾರಿ ಗಾಯನದಲ್ಲಿ ಸಾಥ್ ನೀಡಿದರು. ಹಿರಿಯ ಕಲಾವಿದ ಉಮೇಶ ಮೇಸ್ತ ಅವರು…

Read More

ಆರಿಕ್ಕಾಡಿ ಟೋಲ್‌ಬೂತ್ ಶಾಶ್ವತವಾಗಿ ಮುಚ್ಚಲಿ; ಸಾಮಗ್ರಿ ತೆರವಿಗೆ ಶಾಸಕ ಆಗ್ರಹ

ಕುಂಬಳೆ: ಆರಿಕ್ಕಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಟೋಲ್ ಬೂತ್ ಅನ್ನು ಯಾವುದೇ ಕಾರಣಕ್ಕೂ ಮರುಸ್ಥಾಪಿಸಲು ಅವಕಾಶ ನೀಡುವುದಿಲ್ಲ ಎಂದು ಮಂಜೇಶ್ವರ ಶಾಸಕ ಎ.ಕೆ.ಎಂ. ಅಶ್ರಫ್ ಹೇಳಿದ್ದಾರೆ. ಕುಂಬಳೆ ಪ್ರೆಸ್ ಫೋರಂ ಆಯೋಜಿಸಿದ್ದ ‘ಮೀಟ್ ದಿ ಪ್ರೆಸ್’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೊಡ್ಡ ಜನಾಂದೋಲನದ ಮೂಲಕವೇ ಆರಿಕ್ಕಾಡಿಯ ಟೋಲ್ ಬೂತ್ ಮುಚ್ಚಿಸಲಾಗಿದೆ ಎಂದು ತಿಳಿಸಿದರು. ಟೋಲ್ ಬೂತ್‌ನಲ್ಲಿರುವ ಸಾಮಗ್ರಿಗಳನ್ನು ಸಂಪೂರ್ಣವಾಗಿ ತೆರವುಗೊಳಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಈಗಾಗಲೇ ಮನವಿ ಮಾಡಲಾಗಿದೆ. ಆದರೆ, ಸಾಮಗ್ರಿಗಳನ್ನು ತೆರವುಗೊಳಿಸುವ ಕಾಮಗಾರಿಗೆ ಗುತ್ತಿಗೆ ನೀಡುವ ಪ್ರಕ್ರಿಯೆ…

Read More

ಮಂಜೇಶ್ವರ: ಬೀದಿ ನಾಯಿಗಳ ಹಾವಳಿಗೆ ಬೆದರಿದ ಜನತೆ : ವಿದ್ಯಾರ್ಥಿನಿಗೆ ಗಂಭೀರ ಗಾಯ, ತ್ಯಾಜ್ಯ ಮುಕ್ತಿಗೆ ಆಗ್ರಹ

​ಮಂಜೇಶ್ವರ: ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದ್ದು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಮನೆಯಿಂದ ಹೊರಬರಲು ಭೀತಿಪಡುವ ವಾತಾವರಣ ನಿರ್ಮಾಣವಾಗಿದೆ. ​ ಇದೀಗ ಉದ್ಯಾವರ ಬಿ.ಎಸ್. ನಗರದಲ್ಲಿ ಟ್ಯೂಷನ್ ಮುಗಿಸಿ ಮನೆಗೆ ಮರಳುತ್ತಿದ್ದ ಸ್ಥಳೀಯ ನಿವಾಸಿ ಹನೀಫ್ ಎಂಬುವರ ಪುತ್ರಿ, ವಿದ್ಯಾರ್ಥಿನಿ ಹನಾ ಎಂಬಾಕೆಯನ್ನು ಬೀದಿ ನಾಯಿಯೊಂದು ಹಿಂಬಾಲಿಸಿ ದಾಳಿಗೆತ್ನಿಸಿದೆ. ಈ ವೇಳೆ ಭಯದಿಂದ ಕಿರುಚುತ್ತಾ ಓಡಿದ ಆಕೆ ಆಕಸ್ಮಿಕವಾಗಿ ಬಿದ್ದು, ಕಾಲಿಗೆ ಗಂಭೀರ ಗಾಯಗಳಾಗಿವೆ. ಗಾಯಾಳು ವಿದ್ಯಾರ್ಥಿನಿಯನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ…

Read More

ವಿದ್ಯುತ್ ಕಡಿತಕ್ಕೆ ಆಕ್ರೋಶ: ಕುಂಬಳೆಯಲ್ಲಿ ಬಿಜೆಪಿ ಪಂಜಿನ ಮೆರವಣಿಗೆ

ಕಾಸರಗೋಡು: ಅಘೋಷಿತ ವಿದ್ಯುತ್ ಕಡಿತವನ್ನು ಖಂಡಿಸಿ ಬಿಜೆಪಿ ಕುಂಬಳೆ ಮಂಡಲ ಸಮಿತಿಯ ನೇತೃತ್ವದಲ್ಲಿ ಕುಂಬಳೆ ಕೆಎಸ್‌ಇಬಿ ಕಚೇರಿಗೆ ಪಂಜಿನ ಮೆರವಣಿಗೆ ನಡೆಸಲಾಯಿತು. ಬಿಜೆಪಿ ಜಿಲ್ಲಾ ಅಧ್ಯಕ್ಷೆ ಅಶ್ವಿನಿ ಎಂ.ಎಲ್. ಅವರು ಮೇಣದಬತ್ತಿ ಬೆಳಗಿಸುವ ಮೂಲಕ ಪ್ರತಿಭಟನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅಘೋಷಿತ ವಿದ್ಯುತ್ ಕಡಿತದಿಂದ ಸಾರ್ವಜನಿಕರು ಹಾಗೂ ವ್ಯಾಪಾರಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಪ್ರತಿಭಟನಾಕಾರರು ಮುಂದಿಟ್ಟರು. ವಿದ್ಯುತ್ ಪೂರೈಕೆಯಲ್ಲಿ ನಿರಂತರತೆ ಕಾಪಾಡಬೇಕು ಹಾಗೂ ಜನರಿಗೆ ಆಗುತ್ತಿರುವ ತೊಂದರೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಲಾಯಿತು. ಬಿಜೆಪಿ ರಾಜ್ಯ ಸಮಿತಿ…

Read More
error: Content is protected !!