ಮಂಗಳೂರು: ಬೆಂಗಳೂರಿನಲ್ಲಿ ‘ಕರಾವಳಿ ಜಾನಪದ ವೈಭವ’ ಏ.24ರಿಂದ

ಮಂಗಳೂರು: ಕರಾವಳಿ ಪ್ರದೇಶದ ಕಲಾ ಜಗತ್ತಿನ ಸಾಕ್ಷಾತ್ಕಾರ ಮಾಡುವ ಉದ್ದೇಶದಿಂದ ವೈಟ್ ಲೊಟಸ್ ಪೌಂಡೇಶನ್ ಟ್ರಸ್ಟ್ ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಘಟಕದ ಬಂಟ್ವಾಳ ತಾಲೂಕು ಘಟಕದ ಸಹಯೋಗದೊಂದಿಗೆ ಏಪ್ರಿಲ್ 24 ರಿಂದ 26 ರವರೆಗೆ ನೇತಾಜಿ ಸುಭಾಷ್ ಚಂದ್ರ ಬೋಸ್ ಮೈದಾನ ಬಸವೇಶ್ವರ ನಗರ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ದ.ಕ. ಜಿಲ್ಲೆಯ ಕರ್ನಾಟಕ ಜಾನಪದ ಪರಿಷತ್ತು ಇದರ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ…

Read More

ಮಂಗಳೂರು: ಏ.19ರಂದು ಇಸ್ಕಾನ್ ವತಿಯಿಂದ ರಥಯಾತ್ರೆ, ಅಕ್ಷಯ ತೃತೀಯ ಮಹೋತ್ಸವ

ಮಂಗಳೂರಿನ ಪಿವಿಎಸ್ ಕಲಾಕುಂಜದಲ್ಲಿರುವ ಶ್ರೀ ಶ್ರೀ ಕೃಷ್ಣ ಬಲರಾಮ ಮಂದಿರದಲ್ಲಿ ಏಪ್ರಿಲ್ 19ರಂದು ರಥಯಾತ್ರೆ ಹಾಗೂ ಅಕ್ಷಯ ತೃತೀಯ ಮಹೋತ್ಸವವನ್ನು ಭಕ್ತಿಭಾವದಿಂದ ಆಚರಿಸಲಾಗುತ್ತದೆ ಎಂದು ಇಸ್ಕಾನ್ ಮಂಗಳೂರು ಅಧ್ಯಕ್ಷ ಗುಣಾಕಾರ ರಾಮದಾಸ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಥಯಾತ್ರೆ ಮತ್ತು ಅಕ್ಷಯ ತೃತೀಯ ಎರಡೂ ಹಿಂದೂ ಧರ್ಮದಲ್ಲಿ ಅತ್ಯಂತ ಶುಭ ದಿನಗಳಾಗಿದ್ದು, ಈ ದಿನಗಳಲ್ಲಿ ಧಾರ್ಮಿಕ ಚಟುವಟಿಕೆಗಳು ಮತ್ತು ಹೊಸ ಆರಂಭಗಳು ಅತ್ಯಂತ ಫಲಪ್ರದವಾಗುತ್ತವೆ ಎಂಬ ನಂಬಿಕೆ ಇದೆ ಎಂದು ಹೇಳಿದರು. ಕಾರ್ಯಕ್ರಮವು…

Read More

ಮಹಾತ್ಮಗಾಂಧಿ ನಗರ ವಿಕಾಸ ಯೋಜನೆ-2: ಕಾಂಗ್ರೆಸ್ ವಿರುದ್ಧ ಕಾಮತ್ ವಾಗ್ದಾಳಿ

“ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ ಮಾಡಬಾರದು ಎಂದು ಹೇಳುವ ಕಾಂಗ್ರೆಸ್ ನಾಯಕರು, ಮೊದಲು ತಾವೇ ಅದನ್ನು ಪಾಲಿಸುತ್ತಿದ್ದಾರೆಯೇ ಎಂಬುದನ್ನು ಆತ್ಮವಿಮರ್ಶೆ ಮಾಡಿಕೊಳ್ಳಬೇಕು” ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷೇತ್ರದ ಅಭಿವೃದ್ಧಿಗಾಗಿ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ತಂದ ಅನುದಾನಗಳು ಹಾಗೂ ಇಂದಿನ ಕಾಂಗ್ರೆಸ್ ಸರ್ಕಾರದ ಮೂರು ವರ್ಷದ ಅವಧಿಯಲ್ಲಿ ಬಂದ ಅನುದಾನಗಳ ಬಗ್ಗೆ ಶ್ವೇತಪತ್ರ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದರು. ಇದರಿಂದ ಯಾರು ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ…

Read More

ಮಂಗಳೂರು: ‘ಬುರುಡೆ ಗ್ಯಾಂಗ್’ ಪ್ರಹಸನ ವಿಚಾರ—ಕಲಾವಿದರ ವಿರುದ್ಧ ನಿಂದನೆ; ಕ್ರಮಕ್ಕೆ ಆಗ್ರಹ

ಮಂಗಳೂರು: ಸ್ಥಳೀಯ ವಾಹಿನಿಯ ‘ಯಕ್ಷ ತೆಲಿಕೆ’ ಕಾರ್ಯಕ್ರಮ ಸರಣಿಯಲ್ಲಿ ಪ್ರಸಾರವಾದ ‘ಬುರುಡೆ ಗ್ಯಾಂಗ್’ ಯಕ್ಷ ಪ್ರಹಸನಕ್ಕೆ ಸಂಬಂಧಿಸಿ ಕಲಾವಿದರಿಗೆ ಅವಾಚ್ಯವಾಗಿ ನಿಂದನೆ ಮಾಡಿದ ಪ್ರಕರಣದ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಯಕ್ಷಗಾನ ಕಲಾವಿದರು ಒತ್ತಾಯಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುಂದರ ರೈ ಮಂದಾರ, ಮಹೇಶ್ ಶೆಟ್ಟಿ ತಿಮರೋಡಿ ಎಂಬವರು ದೂರವಾಣಿ ಮೂಲಕ ಅವಾಚ್ಯವಾಗಿ ನಿಂದಿಸಿರುವುದಾಗಿ ಆರೋಪಿಸಿದರು. ಈ ಕುರಿತು ಪುತ್ತೂರು ಗ್ರಾಮಾಂತರ ಠಾಣೆ ಹಾಗೂ ಮಹಿಳಾ ಠಾಣೆಗೆ ಈಗಾಗಲೇ ದೂರು ಸಲ್ಲಿಸಲಾಗಿದ್ದು, ಸಂಬಂಧಪಟ್ಟವರ…

Read More

ಮಂಗಳೂರು: ನಿರ್ಮಾಣ ಕ್ಷೇತ್ರಕ್ಕೆ ಕಚ್ಚಾ ವಸ್ತು, ಕಾರ್ಮಿಕರ ಕೊರತೆ—ಸಂಘಗಳ ಆತಂಕ

ಮಂಗಳೂರು ನಗರದಲ್ಲಿ ಕಟ್ಟಡ ನಿರ್ಮಾಣ ಕ್ಷೇತ್ರ ಗಂಭೀರ ಸಂಕಷ್ಟಕ್ಕೆ ಸಿಲುಕಿದ್ದು, ಅಗತ್ಯ ಕಚ್ಚಾ ವಸ್ತುಗಳ ಕೊರತೆ ಹಾಗೂ ಕುಶಲಕರ್ಮಿ ಕಾರ್ಮಿಕರ ಅಭಾವವನ್ನು ತಕ್ಷಣ ಪರಿಹರಿಸಲು ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಸಿವಿಲ್ ಕಾಂಟ್ರಾಕ್ಟರ್ಸ್ ಅಸೋಸಿಯೇಷನ್, ಇಂಜಿನಿಯರ್ಸ್ ಅಸೋಸಿಯೇಷನ್ ಹಾಗೂ ಕೆನರಾ ಬಿಲ್ಡರ್ಸ್ ಅಸೋಸಿಯೇಷನ್ ಜಂಟಿಯಾಗಿ ಆಗ್ರಹಿಸಿವೆ. ನಗರದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿವಿಲ್ ಕಾಂಟ್ರಾಕ್ಟರ್ಸ್ ಅಸೋಸಿಯೇಷನ್ ಮಂಗಳೂರು ಅಧ್ಯಕ್ಷ ಮಹಾಬಲ ಶೆಟ್ಟಿ, ಕೆಂಪುಕಲ್ಲು, ಮರಳು ಹಾಗೂ ಎಂ-ಸ್ಯಾಂಡ್ ಕೊರತೆಯಿಂದ ಕಳೆದ ಕೆಲವು…

Read More

ಸುಲ್ತಾನ್ ಬತ್ತೇರಿ: ಆಟೋರಿಕ್ಷಾ ನಿಲ್ದಾಣಕ್ಕೆ ಕುಡಿಯುವ ನೀರಿನ ಸೌಲಭ್ಯ

ಪಲ್ಗುಣಿ ನದಿ ತೀರದಲ್ಲಿರುವ ಇತಿಹಾಸ ಪ್ರಸಿದ್ಧ ಸುಲ್ತಾನ್ ಬತ್ತೇರಿ ಪ್ರದೇಶದ ಆಟೋರಿಕ್ಷಾ ನಿಲ್ದಾಣಕ್ಕೆ ನೇತ್ರಾವತಿ ಲೈನ್ಸ್ ವತಿಯಿಂದ ಕುಡಿಯುವ ನೀರಿನ ಸೌಲಭ್ಯ ಒದಗಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ರಾಜ್ಯಪಾಲ ಕುಡುಪಿ ಅರವಿಂದ ಶೆಣೈ ಅವರು, ಈ ಸೇವೆಯ ಮೂಲಕ ನದಿ ತೀರದಲ್ಲಿಯೂ ನೇತ್ರಾವತಿ ಮತ್ತು ಪಲ್ಗುಣಿಯ ಸಂಗಮದ ಸಾಂಕೇತಿಕ ಅರ್ಥವನ್ನು ನೆನಪಿಸಲಾಗಿದೆ ಎಂದು ಅಭಿಪ್ರಾಯಪಟ್ಟರು. ರಿಕ್ಷಾ ಚಾಲಕರು ಸಮಾಜಕ್ಕೆ ನೀಡುತ್ತಿರುವ ಸೇವೆ ಅನನ್ಯವಾದದ್ದು ಎಂದು ಅವರು ಹೇಳಿದರು. ನೇತ್ರಾವತಿ ಕ್ಲಬ್ ಅಧ್ಯಕ್ಷ ವಿನಯ ಶೆಟ್ಟಿ ಪ್ರಾಸ್ತಾವಿಕವಾಗಿ…

Read More

​ಸೌಹಾರ್ದತೆಯ ಸಂಭ್ರಮ: ಉದ್ಯಾವರ ಜಮಾ ಹತ್ ಗೆ ಉದ್ಯಾವರ ಶ್ರೀ ಅರಸು ದೈವಗಳ ಭೇಟಿ; ಜಾತ್ರೆಗೆ ಮುಸ್ಲಿಂ ಬಾಂಧವರಿಗೆ ಪ್ರೀತಿಯ ಆಮಂತ್ರಣ

ಮಂಜೇಶ್ವರದಲ್ಲಿ ತುಳುನಾಡಿನ ಸಾಂಸ್ಕೃತಿಕ ಪರಂಪರೆಯ ಪ್ರತಿರೂಪವಾಗಿರುವ ಉದ್ಯಾವರ ಅರಸು ಮಂಜೀಷ್ಣಾರ್ ಕ್ಷೇತ್ರದ ವಾರ್ಷಿಕ ಜಾತ್ರೋತ್ಸವದ ಪೂರ್ವಭಾವಿ ವಿಧಿವಿಧಾನಗಳು ಭಕ್ತಿ ಹಾಗೂ ಸೌಹಾರ್ದತೆಯೊಂದಿಗೆ ನೆರವೇರಿದವು. ಹಿಂದೂ–ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾಗಿರುವ ಈ ಅಪೂರ್ವ ಸಂಪ್ರದಾಯವು ಮತ್ತೆ ಗಮನ ಸೆಳೆದಿದೆ. ಪ್ರಾಚೀನ ಕಾಲದಿಂದ ನಡೆದುಕೊಂಡು ಬರುತ್ತಿರುವ ಪದ್ಧತಿಯಂತೆ, ಕ್ಷೇತ್ರದ ಅರಸು ದೈವಗಳ ಪಾತ್ರಿಗಳು ಶುಕ್ರವಾರ ಮಧ್ಯಾಹ್ನ ಉದ್ಯಾವರ ಸಾವಿರ ಜಮಾತ್ ಮಸೀದಿಗೆ ಭೇಟಿ ನೀಡಿ ಮುಸ್ಲಿಂ ಬಾಂಧವರನ್ನು ಜಾತ್ರೆಗೆ ಆತ್ಮೀಯವಾಗಿ ಆಹ್ವಾನಿಸಿದರು. ಮೇಷ ಸಂಕ್ರಮಣದ ನಂತರದ ಮೊದಲ ಶುಕ್ರವಾರದಂದು ಈ ಭೇಟಿ…

Read More

ಮಂಜೇಶ್ವರಂ ಬೀಚ್‌ನಲ್ಲಿ ಭದ್ರತೆ ಹೆಚ್ಚಿಸಲು ಆಗ್ರಹ

ಮಂಜೇಶ್ವರಂ: ಶಾಲಾ ರಜೆ ಹಿನ್ನೆಲೆಯಲ್ಲಿ ದಿನವೂ ಸಾವಿರಾರು ಮಂದಿ ಪ್ರವಾಸಿಗರು ಹಾಗೂ ಕುಟುಂಬ ಸಮೇತವಾಗಿ ಮಂಜೇಶ್ವರಂ ಬೀಚ್‌ಗೆ ಭೇಟಿ ನೀಡುತ್ತಿರುವುದರಿಂದ, ಇಲ್ಲಿ ತಕ್ಷಣ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಬೇಕೆಂಬ ಬೇಡಿಕೆ ವ್ಯಕ್ತವಾಗಿದೆ. ಇತ್ತೀಚೆಗೆ ಸಮುದ್ರ ಅಲೆಯಲ್ಲಿ ಸಿಲುಕಿ ಮೃತಪಟ್ಟ 18 ವರ್ಷದ ಯುವಕನ ಘಟನೆ ಆತಂಕವನ್ನು ಹೆಚ್ಚಿಸಿದೆ. ಬೀಚ್ ಹಾಗೂ ಸಮುದ್ರ ತೀರ ಪ್ರದೇಶಗಳಲ್ಲಿ ಸಮರ್ಪಕ ಭದ್ರತಾ ವ್ಯವಸ್ಥೆಗಳ ಕೊರತೆ ಇದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸಮುದ್ರಕ್ಕೆ ಇಳಿಯುವವರಿಗೆ ಹಾಗೂ ಮಕ್ಕಳೊಂದಿಗೆ ಬರುವ ಕುಟುಂಬಗಳಿಗೆ ಸುರಕ್ಷತೆ ಒದಗಿಸಲು ಲೈಫ್‌ಗಾರ್ಡ್‌ಗಳು,…

Read More

ಕಾಸರಗೋಡು: ಅಡ್ಕ ಬಂದ್ಯೋಡು ವೀರನಗರದಲ್ಲಿ ಏ.25ರಂದು ಶ್ರೀ ಸಾನಿಧ್ಯದ ವಾರ್ಷಿಕೋತ್ಸವ ಹಾಗೂ ಕೋಲೋತ್ಸವ

ಕಾಸರಗೋಡು : ಅಡ್ಕ ಬಂದ್ಯೋಡು ವೀರನಗರದಲ್ಲಿರುವ ಶ್ರೀ ನಾಗರಾಜ, ನಾಗಕನ್ನಿಕೆ, ರಕ್ತೇಶ್ವರಿ ಹಾಗೂ ಗುಳಿಗಜ್ಜ ಮತ್ತು ಕೊರಗಜ್ಜ ದೈವಗಳ ಸಾನಿಧ್ಯದಲ್ಲಿ ಏಪ್ರಿಲ್ 25ರಂದು ವಾರ್ಷಿಕ ದಿನಾಚರಣೆ ಹಾಗೂ ಕೋಲೋತ್ಸವ ಭಕ್ತಿಶ್ರದ್ದೆಯಿಂದ ನಡೆಯಲಿದೆ.ಪರಮ ಪೂಜ್ಯ ಶ್ರೀ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿ (ಕೊಂಡೆವೂರು) ಅವರ ಮಾರ್ಗದರ್ಶನದಲ್ಲಿ ಹಾಗೂ ಶ್ರೀ ಸಾನಿಧ್ಯದ ತಂತ್ರಿವರ್ಯರಾದ ಬ್ರಹ್ಮಶ್ರೀ ಶಂಕರನಾರಾಯಣ ಕಡಮಣ್ಣಾಯ (ಕರ್ಕುಳಮನೆ ಬಂಬ್ರಾಣ) ಅವರ ನೇತೃತ್ವದಲ್ಲಿ ಕಾರ್ಯಕ್ರಮ ಜರುಗಲಿದೆ. ಈ ಸಂದರ್ಭದಲ್ಲಿ ಶ್ರೀ ಸಾನಿಧ್ಯದ ವಾರ್ಷಿಕೋತ್ಸವದ ಜೊತೆಗೆ ಗುಳಿಗಜ್ಜ ಮತ್ತು ಕೊರಗಜ್ಜ ದೈವಗಳ…

Read More

ಬೇಕಲ್: ವಸಂತ್ ಕೆರೆಮನೆಗೆ ‘ಹತ್ತನೇ ಸವಿ ಸಂಭ್ರಮ’ದಲ್ಲಿ ಗೌರವಾರ್ಪಣೆ

ಕನ್ನಡ ಭವನ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ವಿವಿಧ ಸಂಘಟನೆಗಳಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿರುವ ವಸಂತ್ ಕೆರೆಮನೆ ಅವರಿಗೆ ವಿಶೇಷ ಗೌರವ ಸಲ್ಲಿಸುವ “ಹತ್ತನೇ ಸವಿ ಸಂಭ್ರಮ” ಕಾರ್ಯಕ್ರಮ ಇಂದು ಸಂಜೆ ಬೇಕಲ್ ಬೀಚ್‌ನಲ್ಲಿ ನಡೆಯಲಿದೆ. ವಸಂತ್ ಕೆರೆಮನೆ ಅವರು ಆಲ್ ಕೇರಳ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಕಾಸರಗೋಡು ವೆಸ್ಟ್ ಯೂನಿಟ್ ಅಧ್ಯಕ್ಷರಾಗಿ, ಕೇರಳ–ಕರ್ನಾಟಕ ಕನ್ನಡ ಚುಟುಕು ಸಾಹಿತ್ಯ ಪರಿಷತ್ ಕೇಂದ್ರ ಸಮಿತಿ ಕಾರ್ಯದರ್ಶಿಯಾಗಿ ಹಾಗೂ ಹಲವು ಧಾರ್ಮಿಕ ಕೇಂದ್ರಗಳಲ್ಲಿ ಪದಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಜೊತೆಗೆ ಉತ್ತಮ ಸೇವಾ…

Read More
error: Content is protected !!