ಆ.16: ‘ಸರ್ಚ್ ಫಾರ್ ದಿ ನೆಕ್ಸ್ಟ್ ರಾಮಾನುಜನ್’ ಗಣಿತ ಫಝಲ್ ಲೀಗ್

ಮಂಗಳೂರು:ಸೆಂಟರ್ ಫಾರ್ ಅಡ್ವಾನ್ಸ್ಡ್ ಲರ್ನಿಂಗ್ ಸೆಂಟರ್ (ಸಿಎಫ್‌ಎಎಲ್) ವತಿಯಿಂದ 2026-27ನೇ ಶೈಕ್ಷಣಿಕ ಸಾಲಿನಲ್ಲಿ 7ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ‘ಸರ್ಚ್ ಫಾರ್ ದಿ ನೆಕ್ಸ್ಟ್ ರಾಮಾನುಜನ್’ ಎಂಬ ಏಳು ಹಂತಗಳ ವಿಶೇಷ ಗಣಿತ ಫಝಲ್ ಲೀಗ್ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಗುರುವಾರ ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿಎಫ್‌ಎಎಲ್‌ನ ಅಕಾಡೆಮಿಕ್ ಕೋಆರ್ಡಿನೇಟರ್ ಮಾನಸ್ ಶೆಟ್ಟಿ, ವರ್ಷಪೂರ್ತಿ ನಡೆಯಲಿರುವ ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಶಾಲಾ ಪಠ್ಯಕ್ರಮವನ್ನು ಮೀರಿದ ಗಣಿತ ಸಮಸ್ಯೆಗಳನ್ನು ಪರಿಹರಿಸುವ ಕೌಶಲ್ಯ ಹಾಗೂ ತಾರ್ಕಿಕ ಚಿಂತನಾ ಶಕ್ತಿಯನ್ನು…

Read More

ನಗರದೆಲ್ಲೆಡೆ ಪಾಲಿಕೆ ಆಯುಕ್ತರ ಪರಿಶೀಲನೆ

ಮಂಗಳೂರು, ಆ.13: ನಗರದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿದ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ರತ್ನಂ ಪಾಂಡೆ ಅವರು ರಸ್ತೆ, ರಸ್ತೆ ವಿಭಾಜಕಗಳು ಹಾಗೂ ಕಾಲುದಾರಿಗಳ ಸ್ಥಿತಿಗತಿಯನ್ನು ಪರಿಶೀಲಿಸಿದರು. ಕಾವೂರು, ಕೂಳೂರು, ಬಲ್ಮಠ ಹಾಗೂ ಕಂಕನಾಡಿ ಪ್ರದೇಶಗಳಿಗೆ ಭೇಟಿ ನೀಡಿದ ಆಯುಕ್ತರು, ಮೂಲಸೌಕರ್ಯಗಳ ನಿರ್ವಹಣೆ ಮತ್ತು ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ವೀಕ್ಷಿಸಿದರು. ಇದೇ ವೇಳೆ ನಿರ್ಮಾಣ ಹಂತದಲ್ಲಿರುವ ಕಂಕನಾಡಿ ಮಾರುಕಟ್ಟೆ ಕಾಮಗಾರಿ ಸ್ಥಳಕ್ಕೂ ಭೇಟಿ ನೀಡಿ, ಕಾಮಗಾರಿಯ ಪ್ರಗತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ನಗರಾಭಿವೃದ್ಧಿ…

Read More

ಕಾರ್ಮಿಕರ 11 ಬೇಡಿಕೆಗಳ ಈಡೇರಿಕೆಗೆ ಆಗ್ರಹ: ಆ.18ರಂದು ಮಂಗಳೂರಿನಲ್ಲಿ ಬಿಎಂಎಸ್ ಪ್ರತಿಭಟನೆ ……!

ಮಂಗಳೂರು:ಕಾರ್ಮಿಕರ ನ್ಯಾಯಯುತ ಹಕ್ಕುಗಳು ಹಾಗೂ ರಾಷ್ಟ್ರಮಟ್ಟದ 11 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತೀಯ ಮಜ್ದೂರು ಸಂಘ (ಬಿಎಂಎಸ್) ನೇತೃತ್ವದಲ್ಲಿ ದೇಶವ್ಯಾಪಿ ನಡೆಯಲಿರುವ ಪ್ರತಿಭಟನೆಯ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಬಿಎಂಎಸ್ ವತಿಯಿಂದ ಆ.18ರಂದು ಬೆಳಗ್ಗೆ 11 ಗಂಟೆಗೆ ಮಂಗಳೂರಿನ ಟೌನ್‌ಹಾಲ್‌ ಮುಂಭಾಗ ಪ್ರತಿಭಟನೆ ನಡೆಯಲಿದೆ ಎಂದು ಬಿಎಂಎಸ್ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನಿಲ್‌ ಕುಮಾರ್‌ ಯು. ತಿಳಿಸಿದ್ದಾರೆ. ನಗರದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಕಾರ್ಮಿಕರ ದೀರ್ಘಕಾಲದ ನ್ಯಾಯಯುತ ಬೇಡಿಕೆಗಳ…

Read More

ಮಂಗಳೂರಿನಲ್ಲಿ ಆಗಸ್ಟ್ 16ರಿಂದ 18ರವರೆಗೆ ‘ಪುಸ್ತಕ ಹಬ್ಬ–2026’

ಮಂಗಳೂರು: ಮಂಗಳೂರಿನ ಸಾಹಿತ್ಯ ಕೇಂದ್ರದ ವತಿಯಿಂದ ‘ಪುಸ್ತಕ ಹಬ್ಬ–2026’ ಕಾರ್ಯಕ್ರಮವನ್ನು ಆಗಸ್ಟ್ 16ರಿಂದ 18ರವರೆಗೆ ಮೂರು ದಿನಗಳ ಕಾಲ ನಗರದ ಸಂಘನಿಕೇತನ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಕಾರ್ಯಕ್ರಮದ ಆಯೋಜನಾ ಸಮಿತಿಯ ಸಂಚಾಲಕ ಲತೇಶ್ ಬಾಕ್ರಬೈಲ್ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರಿನ ಜನತೆಯಲ್ಲಿ ಪುಸ್ತಕ ಓದುವ ಸಂಸ್ಕೃತಿಯನ್ನು ಬೆಳೆಸುವುದು ಹಾಗೂ ಯುವಜನರಲ್ಲಿ ಸಾಹಿತ್ಯಾಸಕ್ತಿಯನ್ನು ಹೆಚ್ಚಿಸುವ ಉದ್ದೇಶದಿಂದ ಪುಸ್ತಕ ಹಬ್ಬವನ್ನು ಆಯೋಜಿಸಲಾಗಿದೆ ಎಂದರು. ಆಗಸ್ಟ್ 16ರಂದು ಬೆಳಗ್ಗೆ 10 ಗಂಟೆಗೆ ಖ್ಯಾತ ಲೇಖಕ ಹಾಗೂ…

Read More

ಕುಡ್ಲ:ತುಳುಕೂಟದಿಂದ ಪ್ರತಿಭಾ ಪುರಸ್ಕಾರ ಪ್ರದಾನ

ತುಳು ಭಾಷೆಯ ಬೆಳವಣಿಗೆ, ಸಾಹಿತ್ಯಾಭಿರುಚಿಗಳ ಬಗೆಗೆ ತುಳುವರಾದ ನಾವು ಹೆಮ್ಮೆ ಪಡಬೇಕು. ತುಳು ರಾಜ್ಯ ಸ್ಥಾಪನೆಯಾಗುವಲ್ಲಿ ನಮ್ಮ ಪ್ರಯತ್ನ ನಿರಂತರವಾದುದು. ನಮ್ಮ ಮುಂದಿನ ಪೀಳಿಗೆಯನ್ನು ತುಳು ಭಾಷೆಯತ್ತ ಸೆಳೆಯುವಲ್ಲಿ ನಾವು ಈ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ನಡೆಸುತ್ತಾ ಬರುತ್ತಿದ್ದೇವೆ. ಇಂದು ಮೂರು ಛಾತ್ರರನ್ನು ವಿದ್ಯಾನಿಧಿಯೊಂದಿಗೆ ಅಭಿನಂದಿಸುತ್ತಿದ್ದೇವೆ. ತುಳು ಬೆಳೆ ಯಲಿ. ಭಾಷಾಭಿಮಾನ ವೃದ್ಧಿಸಲಿ” ಎಂದು ಕುಡ್ಲ ತುಳುಕೂಟದ ಅಧ್ಯಕ್ಷೆ ಶ್ರೀಮತಿ ಹೇಮಾ ದಾಮೋದರ ನಿಸರ್ಗ ವಿದ್ಯಾರ್ಥಿ ಗಳನ್ನು ಪುರಸ್ಕರಿಸುತ್ತಾಹೇಳಿದರು. ಮುಖ್ಯ ಅತಿಥಿಯಾಗಿ ತುಳುನಾಡು ವಿವಿದೊದ್ದೇಶ ಬ್ಯಾಂಕ್ ನ…

Read More

ಆ.16ರಂದು ಮಂಗಳೂರಿನಲ್ಲಿ ಬಿಸಿಎಫ್ ವಿದ್ಯಾರ್ಥಿವೇತನ ವಿತರಣೆ

ಮಂಗಳೂರು:ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ದುಬೈನ ಬ್ಯಾರೀಸ್ ಕಲ್ಚರಲ್ ಫೋರಂ (ಬಿಸಿಎಫ್) ವತಿಯಿಂದ ಕಳೆದ 25 ವರ್ಷಗಳಿಂದ ವಿದ್ಯಾರ್ಥಿವೇತನ ನೀಡಲಾಗುತ್ತಿದೆ. ಈ ಸಾಲಿನಲ್ಲಿ ಪಿಯುಸಿಯಿಂದ ಸ್ನಾತಕೋತ್ತರ ಪದವಿವರೆಗೆ ವ್ಯಾಸಂಗ ಮಾಡುತ್ತಿರುವ 300ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸುವ ಕಾರ್ಯಕ್ರಮ ಆಗಸ್ಟ್ 16ರಂದು ಮಂಗಳೂರಿನ ಟೌನ್‌ಹಾಲ್‌ನಲ್ಲಿ ನಡೆಯಲಿದೆ ಎಂದು ಬಿಸಿಎಫ್ ಅಧ್ಯಕ್ಷ ಡಾ. ಬಿ.ಕೆ. ಯೂಸುಫ್ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ ಸಂದರ್ಭದಲ್ಲಿ ಉಡುಪಿ ಹಾಗೂ…

Read More

ಅಖಂಡ ಭಾರತ ಸಂಕಲ್ಪ ದಿನ’ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಡಳಿತವು ಬಜರಂಗದಳ ವಿಭಾಗ ಸಂಯೋಜಕ ಪುನೀತ್ ಅತ್ತಾವರ ಅವರ ಮೇಲೆ ಹೇರಿರುವ ಜಿಲ್ಲಾ ಪ್ರವೇಶ ನಿರ್ಬಂಧಕ್ಕೆ ಖಂಡನೆ: ವಿಶ್ವ ಹಿಂದೂ ಪರಿಷದ್

ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ವತಿಯಿಂದ ಆಯೋಜಿಸಲಾಗುವ ‘ಅಖಂಡ ಭಾರತ ಸಂಕಲ್ಪ ದಿನ’ವನ್ನು ಸಂಪೂರ್ಣವಾಗಿ ದೇಶಭಕ್ತಿಯ ಸದ್ಭಾವನೆಯ ಕಾರ್ಯಕ್ರಮ ಎಂದು ವಿಹಿಂಪ ಹೇಳಿದೆ. ಭಾರತದ ವಿಭಜನೆಯ ಕರಾಳ ಇತಿಹಾಸವನ್ನು ಸ್ಮರಿಸುವುದರ ಜೊತೆಗೆ, ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣತ್ಯಾಗ ಮಾಡಿದ ಮಹಾಪುರುಷರು ಹಾಗೂ ಕ್ರಾಂತಿಕಾರಿಗಳನ್ನು ಸ್ಮರಿಸುವ ಕಾರ್ಯಕ್ರಮ ಇದಾಗಿದೆ ಎಂದು ತಿಳಿಸಿದೆ. ಯುವಜನತೆಯಲ್ಲಿ ರಾಷ್ಟ್ರಪ್ರೇಮವನ್ನು ಜಾಗೃತಗೊಳಿಸುವ ಉದ್ದೇಶವಿರುವ ಈ ಕಾರ್ಯಕ್ರಮದಲ್ಲಿ ಯಾವುದೇ ಕೋಮುದ್ವೇಷದ ಹೇಳಿಕೆಗಳು ಅಥವಾ ಕೋಮು ಪ್ರಚೋದನೆಗೆ ಸಂಬಂಧಿಸಿದ ಅಂಶಗಳಿಲ್ಲ ಎಂದು ವಿಹಿಂಪ ಪ್ರತಿಪಾದಿಸಿದೆ. ಆದರೆ, ಕಾರ್ಯಕ್ರಮದ…

Read More

ಗ್ರಾಮೀಣ ಜನರ ಸಬಲೀಕರಣವೇ ವಿಕಸಿತ ಭಾರತದ ನಿಜವಾದ ಅಡಿಪಾಯಕಾಯ್ಕಿಣಿ ಪಂಚಾಯತ್‌ನಲ್ಲಿ ಯಶಸ್ವಿಯಾಗಿ ನಡೆದ VB–G RAM–G ಮಾಹಿತಿ ಕಾರ್ಯಾಗಾರ

ಭಟ್ಕಳ: ಪ್ರತಿಯೊಂದು ಗ್ರಾಮದಲ್ಲಿ ಉದ್ಯೋಗ, ಪ್ರತಿಯೊಂದು ಕುಟುಂಬದಲ್ಲಿ ಆದಾಯ ಭದ್ರತೆ, ಪ್ರತಿಯೊಂದು ಹೊಲಕ್ಕೆ ನೀರು, ಪ್ರತಿಯೊಂದು ಗ್ರಾಮದಲ್ಲಿ ಉತ್ತಮ ಮೂಲಸೌಕರ್ಯ ಹಾಗೂ ಪ್ರತಿಯೊಬ್ಬ ನಾಗರಿಕನ ಬದುಕಿನಲ್ಲಿ ಗೌರವ—ಇವುಗಳ ಸಮನ್ವಯವೇ ನಿಜವಾದ ಅಭಿವೃದ್ಧಿ. ಈ ಆಶಯವನ್ನು ಸಾಕಾರಗೊಳಿಸುವಲ್ಲಿ VB–G RAM–G ಯೋಜನೆ ಮಹತ್ವದ ಪಾತ್ರ ವಹಿಸಲಿದೆ ಎಂದು ಕಾಯ್ಕಿಣಿ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಭಟ್ಕಳ ತಾಲೂಕು ಪಂಚಾಯತ್ ಲೆಕ್ಕಾಧಿಕಾರಿ ರಾಜೇಶ ಮಹಾಲೆ ಹೇಳಿದರು. ಅವರು ಬುಧವಾರ ಕಾಯ್ಕಿಣಿ ಪಂಚಾಯತ್ ಸಭಾಭವನದಲ್ಲಿ ನಡೆದ VB–G RAM–G ಮಾಹಿತಿ ಕಾರ್ಯಾಗಾರದ ಅಧ್ಯಕ್ಷತೆ…

Read More

ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮತ್ತಿಬ್ಬರು ಬಂಧನ

ಉಡುಪಿ,: ಪ್ರಿನ್ಸ್ ಎಂಟರ್‌ಪ್ರೈಸಸ್ ಮಾಲೀಕ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತಿಬ್ಬರನ್ನು ಬಂಧಿಸಿದ್ದಾರೆ. ಹತ್ಯೆಗೆ ಸಂಬಂಧಿಸಿದ ಹಣದ ವರ್ಗಾವಣೆಗೆ ನೆರವು ನೀಡಿದ ಆರೋಪದಡಿ ಕಾಪು ತಾಲೂಕಿನ ತೆಂಕ ಗ್ರಾಮದ ಚಿರಾಗ್ ಪೂಜಾರಿ (26) ಹಾಗೂ ಎರ್ಮಾಳ್ ತೆಂಕ ನಿವಾಸಿ ಮೊಹಮ್ಮದ್ ಇರ್ಷಾದ್ (43) ಅವರನ್ನು ಬಂಧಿಸಲಾಗಿದೆ. ಆಗಸ್ಟ್ 7ರಂದು ಮುದರಂಗಡಿಯ ಸೇಂಟ್ ಕ್ಸೇವಿಯರ್ ಚರ್ಚ್ ಕಾಂಪ್ಲೆಕ್ಸ್‌ನಲ್ಲಿ ಡೇವಿಡ್ ಡಿಸೋಜಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಹತ್ಯೆ ನಡೆಸಿದ್ದರು ಎನ್ನಲಾಗಿದ್ದು, ಈ…

Read More

ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವ ಆದೇಶ ಖಂಡಿಸಿ ಹಾಗೂ ನೀರಾವರಿ ಯೋಜನೆಗಳ ಜಾರಿಗೆ ಆಗ್ರಹಿಸಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕರೆ ನೀಡಿರುವ ಅಖಂಡ ಕರ್ನಾಟಕ ಬಂದ್‌ಗೆ ರಾಜ್ಯಾದ್ಯಂತ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಜನಜೀವನ ಸಹಜವಾಗಿದ್ದು, ಬಸ್ ಸಂಚಾರ, ಶಾಲಾ-ಕಾಲೇಜು, ಸರ್ಕಾರಿ ಕಚೇರಿ ಹಾಗೂ ತುರ್ತು ಸೇವೆಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ. ಕೆಲ ಕನ್ನಡಪರ ಹಾಗೂ ರೈತ ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿದ್ದರೆ, ಹಲವು ಪ್ರಮುಖ ಸಂಘಟನೆಗಳು ದೂರ ಉಳಿದಿವೆ. ಮಂಡ್ಯ, ಮೈಸೂರಿನಲ್ಲಿ…

Read More
error: Content is protected !!