ಸರಕಾರಿ ಶಾಲೆಗಳ ದಾಖಲಾತಿ ಹೆಚ್ಚಿಸಲು ಪುತ್ತೂರಿನಲ್ಲಿ ಆಂದೋಲನ
ಪುತ್ತೂರು: ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿಯನ್ನು ಹೆಚ್ಚಿಸುವ ದೃಷ್ಟಿಯಿಂದ ಪುತ್ತೂರು ತಾಲೂಕು ಮಟ್ಟದಲ್ಲಿ ದಾಖಲಾತಿ ಆಂದೋಲನವನ್ನು ಆಯೋಜಿಸಲಾಗುತ್ತಿದ್ದು, ತಾಲೂಕಿನಲ್ಲಿ ಕಳೆದ ವರ್ಷಕ್ಕಿಂತ 5 ಶೇ. ಹೆಚ್ಚು ದಾಖಲಾತಿಯ ಗುರಿ ಹೊಂದಲಾಗಿದೆ ಎಂದು ಪುತ್ತೂರು ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ವಿಷ್ಣುಪ್ರಸಾದ್ ಸಿ. ತಿಳಿಸಿದರು. ಅವರು ಗುರುವಾರ ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಶಿಕ್ಷಣದಿಂದ ಯಾವುದೇ ಮಗು ವಂಚಿತವಾಗಬಾರದು ಹಾಗೂ ಸರಕಾರಿ ಶಾಲೆಗಳಲ್ಲಿ ದಾಖಲಾತಿಯನ್ನು ಹೆಚ್ಚಿಸುವ ದೃಷ್ಟಿಯಿಂದ ಈ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಸರಕಾರಿ ಶಾಲೆಗಳಲ್ಲಿ ಸಿಗುವ ಗುಣಮಟ್ಟದ ಶಿಕ್ಷಣದ ಜತೆಗೆ ವಿವಿಧ…