ನಿಗದಿತ ಅವಧಿಯೊಳಗೆ ಬಡವರಿಗೆ ಸೂರು, ಸೈಟ್ ವಿತರಿಸಲು ಸಿದ್ಧತೆ ಮಾಡಿಕೊಳ್ಳಿ: ಸಚಿವ ಕೆ.ಹೆಚ್ ಮುನಿಯಪ್ಪ

ಎಲ್ಲಾ ವರ್ಗದ ಬಡವರಿಗೆ ಸೂರು, ಸೈಟ್ ನೀಡುವುದು ನಮ್ಮ ಸರ್ಕಾರದ ಗುರಿಯಾಗಿದ್ದು ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ, ವಸತಿ ಹಂಚಿಕೆ ಮಾಡಲು ಅಗತ್ಯ ಸಿದ್ಧತೆ ಕೈಗೊಳ್ಳಿ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ನಡೆದ ದೇವನಹಳ್ಳಿ ತಾಲ್ಲೂಕು ಮಟ್ಟದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಜ್ಯದ…

Read More

ಶಿವಪ್ರಸಾದ್ ಶೇಟ್‌ಗೆ ತುಳುನಾಡಿನ ಸೂರ್ಯ ಚಂದ್ರರ ಶಾಲು ಹೊದಿಸಿ ಗೌರವ

ಮಂಗಳೂರು: ‘ಗಿವ್ ಬ್ಯಾಕ್ ನಾಗರಿಕ ಅಭಿಯಾನ’ದ ಬೆಂಗಳೂರು ಸ್ಥಾಪಕಾಧ್ಯಕ್ಷ ಹಾಗೂ 2021-22ನೇ ಸಾಲಿನ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪುರಸ್ಕೃತ ಶಿವಪ್ರಸಾದ್ ಶೇಟ್ ಅವರನ್ನು ರಾಜಕೇಸರಿ ಸೇವಾ ಟ್ರಸ್ಟ್‌ನ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸಂತೋಷ್ ಕುಮಾರ್ ಕೊಲ್ಯ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲೋಕೇಶ್ ಕುಲಾಲ್ ಅವರು ತುಳುನಾಡಿನ ಸೂರ್ಯ–ಚಂದ್ರರ ಚಿತ್ತಾರದ ಶಾಲು ಹೊದಿಸಿ ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ರಾಜಕೇಸರಿ ಸೇವಾ ಟ್ರಸ್ಟ್‌ನ ವತಿಯಿಂದ ಮುಂದಿನ ದಿನಗಳಲ್ಲಿ ಕೈಗೊಳ್ಳಲಿರುವ ವಿವಿಧ ಸಾಮಾಜಿಕ ಕಾರ್ಯಗಳ ಕುರಿತು ಶಿವಪ್ರಸಾದ್ ಶೇಟ್…

Read More

ಕನಸವಾಡಿಯಲ್ಲಿ ಹೋಬಳಿ ಮಟ್ಟದ ಪ್ರಜಾ ಸೇವಾ ಆಂದೋಲನ ಸಭೆ

ದೊಡ್ಡಬಳ್ಳಾಪುರ ಬರ ಪೀಡಿತ ತಾಲ್ಲೂಕು ಘೋಷಣೆಗೆ ಸರ್ಕಾರಕ್ಕೆ ವರದಿ: ಸಚಿವ ಕೆ.ಹೆಚ್ ಮುನಿಯಪ್ಪ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ತೀವ್ರ ಮಳೆ ಕೊರತೆಯಿಂದ ಬೆಳೆಗಳು ಹಾನಿಯಾಗಿದ್ದು ಈಗಾಗಲೇ ಮೊದಲ ಪಟ್ಟಿಯಲ್ಲಿ ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ತಾಲ್ಲೂಕುಗಳನ್ನು ಬರ ಪೀಡಿತ ತಾಲ್ಲೂಕು ಎಂದು ಸರ್ಕಾರ ಘೋಷಿಸಿದ್ದು ದೊಡ್ಡಬಳ್ಳಾಪುರವನ್ನು ಬರ ಪೀಡಿತ ತಾಲ್ಲೂಕನ್ನಾಗಿ ಘೋಷಿಸಲು ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಹೇಳಿದರು. ದೊಡ್ಡಬಳ್ಳಾಪುರ ತಾಲೂಕಿನ ಕನಸವಾಡಿಯ ಪ್ರೌಢಶಾಲೆ…

Read More

ಶಶಿಕುಮಾರ್ ರೈ ಬಾಲ್ಯೊಟ್ಟು ಅವರಿಗೆ ಸೆ.20ರಂದು ಹುಟ್ಟೂರ ಅಭಿನಂದನೆ

ಪುತ್ತೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಮೈನೂರು ವಿಭಾಗದ ನೂತನ ನಿರ್ದೇಶಕರಾಗಿ ಆಯ್ಕೆಯಾಗಿರುವ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಹಾಗೂ ಎನ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಅವರಿಗೆ ಸೆ.20ರಂದು ಇರ್ದೆ-ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಹುಟ್ಟೂರ ಅಭಿನಂದನಾ ಸಮಾರಂಭ ನಡೆಯಲಿದೆ. ಊರ ನಾಗರಿಕರ ವತಿಯಿಂದ ಆಯೋಜಿಸಿರುವ ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆ ಶ್ರೀ ರಾಮನಗರ ಶ್ರೀ ಅಯ್ಯಪ್ಪ ಭಜನಾ ಮಂದಿರದ ವಠಾರದಿಂದ ತೆರೆದ ಜೀಪಿನಲ್ಲಿ ಭವ್ಯ ಮೆರವಣಿಗೆ ಮೂಲಕ…

Read More

ಎಸ್‌ಸಿಡಿಸಿಸಿ ಬ್ಯಾಂಕ್‌ಗೆ ‘ಅತ್ಯುತ್ತಮ ಸಾಧನ ಪ್ರಶಸ್ತಿ’

ಮಂಗಳೂರು: ಸಹಕಾರಿ ರಂಗದಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡು ಉತ್ಕೃಷ್ಟ ಬ್ಯಾಂಕಿಂಗ್ ಸೇವೆ ನೀಡುವ ಮೂಲಕ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್)ಗೆ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್‌ನ ‘ಅತ್ಯುತ್ತಮ ಸಾಧನ ಪ್ರಶಸ್ತಿ’ ಲಭಿಸಿದೆ. ಬೆಂಗಳೂರಿನಲ್ಲಿ ಶುಕ್ರವಾರ ನಡೆದ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್‌ನ ವಾರ್ಷಿಕ ಮಹಾಸಭೆಯಲ್ಲಿ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಎಸ್. ರವಿ ಅವರಿಂದ ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಶಶಿಕುಮಾರ್ ರೈ ಹಾಗೂ ಎಂ….

Read More

ತುಳು ಅಧಿಕೃತ ಭಾಷೆ ಘೋಷಣೆ ಸಂತಸದ ವಿಚಾರ: ಶುಭೋದಯ ಆಳ್ವ

ಮಂಗಳೂರು:ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸಿರುವುದು ಸಂತಸದ ವಿಚಾರ. ತುಳು ಭಾಷೆಗೆ ಸೂಕ್ತ ಸ್ಥಾನಮಾನ ದೊರೆಯಬೇಕು ಎಂಬ ನಿಟ್ಟಿನಲ್ಲಿ ಹಲವು ವರ್ಷಗಳಿಂದ ಹೋರಾಟ ನಡೆಸಲಾಗುತ್ತಿದ್ದು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ತುಳು ಭಾಷೆಯ ಬಗ್ಗೆ ಅರಿವು ಮೂಡಿಸುವ ಕಾರ್ಯವನ್ನು ನಿರಂತರವಾಗಿ ಮಾಡಲಾಗುತ್ತಿದೆ ಎಂದು ತುಳು ಪರಿಷತ್ ಅಧ್ಯಕ್ಷ ಶುಭೋದಯ ಆಳ್ವ ಹೇಳಿದರು. ತುಳು ಭಾಷೆಗೆ ಅಧಿಕೃತ ಮಾನ್ಯತೆ ದೊರೆಯಬೇಕು ಎಂಬ ಬೇಡಿಕೆಯನ್ನು ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪ್ರಸ್ತುತ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮುಂದೆಯೂ…

Read More

ತುಳುವಿಗೆ ಹೆಚ್ಚುವರಿ ಆಡಳಿತ ಭಾಷೆ ಮಾನ್ಯತೆ ಐತಿಹಾಸಿಕ ಹೆಜ್ಜೆ: ತಾರಾನಾಥ ಗಟ್ಟಿ ಕಾಪಿಕಾಡ್

ಮಂಗಳೂರು: ತುಳು ಭಾಷೆಗೆ ಕರ್ನಾಟಕದ ಹೆಚ್ಚುವರಿ ಆಡಳಿತ ಭಾಷೆಯಾಗಿ ಮಾನ್ಯತೆ ನೀಡಿರುವುದು ತುಳುನಾಡಿನ ಇತಿಹಾಸದಲ್ಲಿ ಮಹತ್ವದ ಹಾಗೂ ಐತಿಹಾಸಿಕ ಬೆಳವಣಿಗೆಯಾಗಿದೆ. ಈ ನಿರ್ಧಾರಕ್ಕಾಗಿ ಸಮಸ್ತ ತುಳುವರ ಪರವಾಗಿ ಕರ್ನಾಟಕ ಸರ್ಕಾರ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಹೇಳಿದರು. ತುಳು ಸುಮಾರು ಎರಡೂವರೆ ಸಾವಿರ ವರ್ಷಗಳ ಹಿಂದೆಯೇ ದ್ರಾವಿಡ ಭಾಷಾ ವಲಯದಿಂದ ಸ್ವತಂತ್ರವಾಗಿ ಬೆಳವಣಿಗೆ ಹೊಂದಿದ ಸಮೃದ್ಧ ಭಾಷೆಯಾಗಿದೆ. 1856ರಲ್ಲಿ ಭಾಷಾ ವಿಜ್ಞಾನಿ…

Read More

ತುಳುವಿಗೆ ಎರಡನೇ ಅಧಿಕೃತ ಭಾಷೆ ಸ್ಥಾನಮಾನ: ಸಂತಸ ವ್ಯಕ್ತಪಡಿಸಿದ ಲೋಕೇಶ್ ಕುಲಾಲ್

ಮಂಗಳೂರು: ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯಾಗಿ ಅಂಗೀಕರಿಸಿರುವುದು ಸಂತಸದ ವಿಚಾರವಾಗಿದೆ. ಈ ನಿರ್ಧಾರದಿಂದ ತುಳುವರ ಬಹುಕಾಲದ ಆಶಯಕ್ಕೆ ಮಾನ್ಯತೆ ದೊರೆತಿದ್ದು, ಭಾಷೆಯ ಬೆಳವಣಿಗೆಗೆ ಹೊಸ ಅವಕಾಶಗಳು ಸೃಷ್ಟಿಯಾಗಲಿವೆ ಎಂದು ರಾಜಕೇಸರಿ ಸೇವಾ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲೋಕೇಶ್ ಕುಲಾಲ್ ಹೇಳಿದರು. ಸಮಾಜ ಸೇವೆಯ ಭಾಗವಾಗಿ ಸರ್ಕಾರಿ ಪ್ರಾಥಮಿಕ ಶಾಲೆಯ ಶೌಚಾಲಯವನ್ನು ಸಂಪೂರ್ಣ ನವೀಕರಿಸಿ ನೀಡುವ ಕಾರ್ಯವನ್ನು ಕೈಗೊಂಡಿರುವುದಾಗಿ ತಿಳಿಸಿದ ಅವರು, ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ…

Read More

ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ ಐತಿಹಾಸಿಕ ಹೆಜ್ಜೆ: ಸಂತೋಷ್ ಕುಮಾರ್ ಕೊಲ್ಯ

ಮಂಗಳೂರು: ತುಳು ಭಾಷೆಗೆ ರಾಜ್ಯ ಸರ್ಕಾರ ಆಡಳಿತ ಭಾಷೆಯಾಗಿ ಎರಡನೇ ಸ್ಥಾನಮಾನ ನೀಡಿರುವುದು ತುಳುನಾಡಿನ ಜನತೆಗೆ ಐತಿಹಾಸಿಕ ಹಾಗೂ ಸಂಭ್ರಮದ ಕ್ಷಣವಾಗಿದೆ ಎಂದು ರಾಜಕೇಸರಿ ಸೇವಾ ಟ್ರಸ್ಟ್‌ನ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸಂತೋಷ್ ಕುಮಾರ್ ಕೊಲ್ಯ ಹೇಳಿದರು. ತುಳುವಿಗೆ ಅಧಿಕೃತ ಸ್ಥಾನಮಾನ ನೀಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ರಾಜ್ಯ ಸಚಿವ ಸಂಪುಟಕ್ಕೆ ವೈಯಕ್ತಿಕವಾಗಿ ಹಾಗೂ ರಾಜಕೇಸರಿ ಸೇವಾ ಟ್ರಸ್ಟ್ ಪರವಾಗಿ ಅಭಿನಂದನೆ ಸಲ್ಲಿಸಿದ ಅವರು, ಈ ನಿರ್ಧಾರಕ್ಕಾಗಿ ಹಲವು ವರ್ಷಗಳಿಂದ ಹೋರಾಡಿದ ತುಳುಪರ ಸಂಘಟನೆಗಳು, ಸಾಹಿತಿಗಳು,…

Read More

ತುಳುವಿಗೆ ಎರಡನೇ ಅಧಿಕೃತ ಭಾಷೆ ಸ್ಥಾನಮಾನ ಸ್ವಾಗತಾರ್ಹ: ಶಿವಪ್ರಸಾದ್ ಶೇಟ್

ಮಂಗಳೂರು: ಕರ್ನಾಟಕದಲ್ಲಿ ತುಳು ಭಾಷೆಗೆ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡಿರುವುದು ತುಳುನಾಡಿನ ಜನರ ಬಹುಕಾಲದ ಆಶಯಕ್ಕೆ ದೊರೆತ ಮಾನ್ಯತೆಯಾಗಿದೆ. ಈ ನಿರ್ಧಾರವನ್ನು ಹೃದಯಪೂರ್ವಕವಾಗಿ ಸ್ವಾಗತಿಸುವುದಾಗಿ ‘ಗಿವ್ ಬ್ಯಾಕ್ ನಾಗರಿಕ ಅಭಿಯಾನ’ದ ಬೆಂಗಳೂರು ಸ್ಥಾಪಕಾಧ್ಯಕ್ಷ ಹಾಗೂ 2021-22ನೇ ಸಾಲಿನ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪುರಸ್ಕೃತ ಶಿವಪ್ರಸಾದ್ ಶೇಟ್ ಹೇಳಿದರು. ತುಳು ಭಾಷೆಗೆ ಆಡಳಿತಾತ್ಮಕ ಬಳಕೆಯ ಅವಕಾಶ ದೊರೆತಿರುವುದು ಮಹತ್ವದ ಬೆಳವಣಿಗೆಯಾಗಿದೆ. ಜನಪ್ರತಿನಿಧಿಗಳು ತಮ್ಮ ಸ್ಥಳೀಯ ಸಮಸ್ಯೆಗಳನ್ನು ಹಾಗೂ ಜನರ ಬೇಡಿಕೆಗಳನ್ನು ತುಳು ಭಾಷೆಯಲ್ಲೇ ಪರಿಣಾಮಕಾರಿಯಾಗಿ ಮಂಡಿಸಲು ಇದರಿಂದ…

Read More
error: Content is protected !!