‘ಚುನ್ಯಾಚೊ ಫೊಂಡ್’ ಕೊಂಕಣಿ ಕವನ ಸಂಕಲನ ಬಿಡುಗಡೆ

ಮಂಗಳೂರು:ಖ್ಯಾತ ಪತ್ರಕರ್ತ ಹಾಗೂ ಸಾಹಿತಿ ರೇಮಂಡ್ ಡಿಕುನ್ಹಾ ತಾಕೊಡೆ ಅವರು ರಚಿಸಿರುವ ಕನ್ನಡ ಮತ್ತು ದೇವನಾಗರಿ ಲಿಪಿಯಲ್ಲಿನ ಕೊಂಕಣಿ ಕವನ ಸಂಕಲನ ‘ಚುನ್ಯಾಚೊ ಫೊಂಡ್’ ’ ಕೃತಿಯ ಬಿಡುಗಡೆ ಸಮಾರಂಭವು ಮಂಗಳೂರಿನ ನಗರದ ಪತ್ರಿಕಾಭವನದಲ್ಲಿ ನಡೆಯಿತು. ಕೃತಿಯನ್ನು ‘ಮೈಕಲ್ ಡಿಸೋಜಾ ವಿಷನ್ ಕೊಂಕಣಿ’ ಸಂಸ್ಥೆಯ ಸಂಸ್ಥಾಪಕ, ಅನಿವಾಸಿ ಭಾರತೀಯ ಉದ್ಯಮಿ ಹಾಗೂ ಸಮಾಜಸೇವಕರಾದ ಮೈಕಲ್ ಡಿಸೋಜಾ ಬಿಡುಗಡೆಗೊಳಿಸಿದರು. ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದ ಮೈಕಲ್ ಡಿಸೋಜಾ, ‘ಮೈಕಲ್ ಡಿಸೋಜಾ ವಿಷನ್ ಕೊಂಕಣಿ’ ಸಂಸ್ಥೆಯ ಮೂಲಕ ಮಾತೃಭಾಷೆಯಲ್ಲಿ ಕೃತಿ ಪ್ರಕಟಿಸುವ…

Read More

ಕಾಂಗ್ರೆಸ್ ನಿಂದ ಶೈಕ್ಷಣಿಕ ಕ್ಷೇತ್ರದಲ್ಲೂ ಒಡೆದು ಆಳುವ ನೀತಿ :- ಶಾಸಕ ಕಾಮತ್

ಶೈಕ್ಷಣಿಕ ಕೇಂದ್ರಗಳಲ್ಲಿ ಸಮಾನತೆ ಹಾಗೂ ಮಕ್ಕಳಲ್ಲಿ ಏಕತೆ ತರುವ ಉದ್ದೇಶದಿಂದ ಹಿಂದಿನ ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ಶಿಸ್ತುಬದ್ಧ ಸಮವಸ್ತ್ರ ನಿಯಮವನ್ನು ರಾಜ್ಯ ಕಾಂಗ್ರೆಸ್ ಸರ್ಕಾರವು ಹಿಂಪಡೆಯುವ ಮೂಲಕ ಶಾಲಾ-ಕಾಲೇಜುಗಳ ಶೈಕ್ಷಣಿಕ ವಾತಾವರಣವನ್ನು ಹಾಳುಗೆಡವಲು ಮುಂದಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ಆಕ್ರೋಶ ವ್ಯಕ್ತಪಡಿಸಿದರು. ಸಮವಸ್ತ್ರದ ಮೂಲ ಉದ್ದೇಶವೇ ವಿದ್ಯಾರ್ಥಿಗಳಲ್ಲಿ ಜಾತಿ-ಮತ-ಭೇದ ಮರೆಸಿ ಸಮಾನತೆಯ ಭಾವ ಮೂಡಿಸುವುದು. ಆದರೆ ಓಲೈಕೆ ರಾಜಕಾರಣಕ್ಕಾಗಿ ರಾಜ್ಯ ಸರ್ಕಾರವೇ, ಧರ್ಮದ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ವಿಭಜಿಸುತ್ತಿರುವುದು ಎಷ್ಟು ಸರಿ? ಈ ಹಿಂದೆ…

Read More

ಬನ್ನಡ್ಕ ಸರಣಿ ಅಪಘಾತಗಳಿಗೆ ಕಿಡಿಕಾರಿದ ಬಿಜೆಪಿ ಕಾರ್ಯಕರ್ತರು: ಸಂಸದ ಬ್ರಿಜೇಶ್ ಚೌಟ ವಿರುದ್ಧ ಆಕ್ರೋಶ

ಮಂಗಳೂರು :ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ವಿರುದ್ಧ ಕಾರ್ಯಕರ್ತರು ಗರಂ ಆದ ಘಟನೆ ನಡೆದಿದೆ.ಇದು‘ಇಂಥವರು ನಮ್ಮ ಜನಪ್ರತಿನಿಧಿಯಾಗಿದ್ದು ನಮ್ಮ ದುರಂತ ‘ ಎಂದು ಹೇಳುವಲ್ಲಿಗೆ ತಲುಪಿದೆ. ಬಿಜೆಪಿ ಮಂಡಲ ಉಪಾಧ್ಯಕ್ಷರೇ ಸಂಸದರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಸೋಶಿಯಲ್ ಮೀಡಿಯಾದಲ್ಲಿ ಅಸಮಾಧಾನದ ಪೋಸ್ಟ್ ಹರಿದಾಡತೊಡಗಿದೆ.ರಸ್ತೆ ಸಮಸ್ಯೆಗೆ ಪರಿಹಾರ ಕೇಳಲು ಹೋದ ಬಿಜೆಪಿ ಮುಖಂಡರಿಗೆ ಅಧಿಕಾರಿಗಳ ಎದುರು ಅವಮಾನ ಮಾಡಲಾಗಿದೆ ಎಂದು ಆರೋಪಿಸಲಾಗುತ್ತಿದೆ.ಇದು ಸಾಮಾಜಿಕ ಜಾಲತಾಣಗಳಲ್ಲಿ ಸಂಸದ ಬ್ರಿಜೇಶ್ ಚೌಟ ವಿರುದ್ಧ ಆಕ್ರೋಶದ ಕಿಚ್ಚು ಹರಡಲು ಪ್ರೇರಣೆ ನೀಡುತ್ತಿದೆ. ಮೂಲ್ಕಿ…

Read More

ಮಳೆಗೆ ಜೀವಂತಗೊಂಡ ನೇತ್ರಾವತಿ; ಎ.ಎಂ.ಆರ್ ಡ್ಯಾಂನಿಂದ ನೀರು ಬಿಡುಗಡೆ ಹಿನ್ನೆಲೆ ನದಿ ಭರ್ತಿ

ಬಂಟ್ವಾಳ: ಉರಿ ಬಿಸಿಲಿನ ತಾಪಕ್ಕೆ ಬತ್ತಿ ಹೋಗಿ ಕಲ್ಲು ಬಂಡೆಗಳು ಕಾಣಿಸುತ್ತಿದ್ದ ನೇತ್ರಾವತಿ ನದಿ ಇದೀಗ ಮತ್ತೆ ಜಲಾವೃತಗೊಂಡು ತುಂಬಿ ಹರಿಯುತ್ತಿರುವ ದೃಶ್ಯ ಜನರಲ್ಲಿ ನಿರಾಳತೆ ಮೂಡಿಸಿದೆ. ಕೆಲವು ವಾರಗಳ ಹಿಂದೆ ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ತೀವ್ರ ಕುಸಿತ ಕಂಡಿದ್ದು, ಒಳಹರಿವು ಕೂಡ ಕ್ಷೀಣವಾಗಿತ್ತು. ಇದರ ಪರಿಣಾಮ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಜನರಿಗೆ ಕುಡಿಯುವ ನೀರಿನ ಅಭಾವ ಎದುರಾಗುವ ಭೀತಿ ಉಂಟಾಗಿತ್ತು. ಆದರೆ ಕಳೆದ ಮೂರು–ನಾಲ್ಕು ದಿನಗಳಿಂದ ಘಟ್ಟ ಪ್ರದೇಶ ಹಾಗೂ ತಾಲೂಕಿನ ವಿವಿಧ…

Read More

ಮಂಗಳೂರು ವಿವಿಯಲ್ಲಿ ‘ಸಂಭ್ರಮ-2026’ ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ ಆಶ್ರಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ‘ಸಂಭ್ರಮ-2026’ ಸಾಂಸ್ಕೃತಿಕ ಸ್ಪರ್ಧೆಗೆ ಮಂಗಳವಾರ ಮಂಗಳ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಸಿನಿಮಾ ಹಾಗೂ ನಾಟಕ ಕಲಾವಿದ ಸತೀಶ್ ಬಂದಲೆ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವ ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳಾಗಿರುವುದು ಹೆಮ್ಮೆಯ ಸಂಗತಿ. ಸಾಂಸ್ಕೃತಿಕ ಕಾರ್ಯಕ್ರಮಗಳು ವ್ಯಕ್ತಿತ್ವ ವಿಕಸನಕ್ಕೆ ಹಾಗೂ ಜೀವನದ ಬೆಳವಣಿಗೆಗೆ ಪೂರಕವಾಗುತ್ತವೆ ಎಂದು ಹೇಳಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮಂಗಳೂರು ವಿವಿ ಕುಲಪತಿ…

Read More

ಸಿಟಿ ಸೆಂಟರ್‌ನಲ್ಲಿ ಮೂರು ದಿನಗಳ ಐತಿಹಾಸಿಕ ವಸ್ತು ಪ್ರದರ್ಶನ

ಮಂಗಳೂರು : ಸಿಟಿ ಸೆಂಟರ್ ಪ್ರಸ್ತುತಪಡಿಸುವ ದಕ್ಷಿಣ ಕನ್ನಡ ಜಿಲ್ಲಾ ಫಿಲಾಟೆಲಿಕ್ಸ್ ಮತ್ತು ನುಮಿಸ್ಮ್ಯಾಟಿಕ್ಸ್ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ಮೂರು ದಿನಗಳ ಅಪರೂಪದ “ವಿಂಟೇಜ್ ವೈಬ್ಸ್” ವಸ್ತು ಪ್ರದರ್ಶನವು ಮೇ 15ರಿಂದ 17ರವರೆಗೆ ಮಂಗಳೂರಿನ ಸಿಟಿ ಸೆಂಟರ್ ಮಾಲ್ ನ ನೆಲ ಅಂತಸ್ತಿನಲ್ಲಿ ನಡೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಫಿಲಾಟೆಲಿಕ್ಸ್ ಮತ್ತು ನುಮಿಸ್ಮ್ಯಾಟಿಕ್ಸ್ ಅಸೋಸಿಯೇಶನ್ ಅಧ್ಯಕ್ಷ ಪ್ರಭಾಕರ್ ಕಾಮತ್ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರದರ್ಶನವು ಪ್ರತಿದಿನ ಬೆಳಿಗ್ಗೆ 11 ಗಂಟೆಯಿಂದ ರಾತ್ರಿ…

Read More

ಇ-ಆಟೋ ರಿಕ್ಷಾ ಪರವಾನಿಗೆಗೆ ಅರ್ಜಿ ಸಲ್ಲಿಸಲು ಸಾರಿಗೆ ಇಲಾಖೆ ಸೂಚನೆ

ಮಂಗಳೂರು: ಮಂಗಳೂರು ಉಪಸಾರಿಗೆ ಆಯುಕ್ತರು ಹಾಗೂ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ (ಕೆಎ-19) ವ್ಯಾಪ್ತಿಯಲ್ಲಿ ನೋಂದಣಿಗೊಂಡಿರುವ ಒಟ್ಟು 3,551 ಇಲೆಕ್ಟ್ರಿಕ್ ಆಟೋ ರಿಕ್ಷಾಗಳ ಪೈಕಿ 2,162 ವಾಹನಗಳಿಗೆ ಮಾತ್ರ ಪರವಾನಿಗೆಗಾಗಿ ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ಇಲಾಖೆ ತಿಳಿಸಿದೆ.ಇನ್ನೂ 1,389 ಇಲೆಕ್ಟ್ರಿಕ್ ಆಟೋ ರಿಕ್ಷಾ ಮಾಲಕರು ಪರವಾನಿಗೆ ಪಡೆಯಲು ಅರ್ಜಿ ಸಲ್ಲಿಸಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಪರವಾನಿಗೆಗೆ ಅರ್ಜಿ ಸಲ್ಲಿಸಲು ಬಾಕಿ ಉಳಿದಿರುವ ವಾಹನ ಮಾಲಕರು ತಕ್ಷಣ ಅರ್ಜಿ ಸಲ್ಲಿಸಬೇಕು. ಇನ್ನಷ್ಟು ವಿಳಂಬ ಮಾಡಿದಲ್ಲಿ ಮೋಟಾರು ವಾಹನ…

Read More

ಸನಾತನ ಧರ್ಮದ ವಿರುದ್ಧ ಉದಯನಿಧಿ ಸ್ಟಾಲಿನ್ ಅವರ ವಿಷಪೂರಿತ ಹೇಳಿಕೆ:ವಿಶ್ವ ಹಿಂದೂ ಪರಿಷದ್ ಖಂಡನೆ

ತಮಿಳುನಾಡು ವಿಧಾನಸಭೆಯಂತಹ ಪವಿತ್ರ ಸದನದಲ್ಲಿ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಅತ್ಯಂತ ಕೀಳುಮಟ್ಟದ ಮತ್ತು ಪ್ರಚೋದನಾತ್ಮಕ ಹೇಳಿಕೆಯನ್ನು ವಿಶ್ವ ಹಿಂದೂ ಪರಿಷದ್ ತೀವ್ರವಾಗಿ ಖಂಡಿಸುತ್ತದೆ.ರಾಜಕೀಯ ಲಾಭಕ್ಕಾಗಿ ಕೋಟ್ಯಂತರ ಜನರ ನಂಬಿಕೆಯಾಗಿರುವ ಸನಾತನ ಧರ್ಮದ ನಿರ್ಮೂಲನೆಯ ಬಗ್ಗೆ ಮಾತನಾಡುವುದು ಸಂವಿಧಾನ ವಿರೋಧಿ ನಡವಳಿಕೆಯಾಗಿದ್ದು, . ಸದನದ ಗೌರವವನ್ನು ಕಾಪಾಡುವ ದೃಷ್ಟಿಯಿಂದ ಸನಾತನ ಧರ್ಮದ ವಿರುದ್ಧದ ಈ ವಿಷಪೂರಿತ ಮಾತುಗಳನ್ನು ವಿಧಾನಸಭೆಯ ಅಧಿಕೃತ ನಡಾವಳಿಗಳಿಂದ ಕೂಡಲೇ ತೆಗೆದುಹಾಕಲು ತಮಿಳ್ನಾಡು ಸರಕಾರಕ್ಕೆ ಆಗ್ರಹಿಸುತ್ತೇನೆ . ಇತಿಹಾಸದುದ್ದಕ್ಕೂ ಸನಾತನ…

Read More

ಮೇ 17ರಂದು ರಾಶಿ ರಾಜೇಶ್ ಹೆಗ್ಡೆ ಅದ್ದೂರಿ ಭರತನಾಟ್ಯ ರಂಗಪ್ರವೇಶ

ಮಂಗಳೂರು,ಕದ್ರಿ ನೃತ್ಯ ವಿದ್ಯಾನಿಲಯ ಚಾರಿಟೇಬಲ್ ಟ್ರಸ್ಟ್(ರಿ) ನಿರ್ದೇಶಕ ವಿದ್ವಾನ್ ಯು. ಕೆ. ಪ್ರವೀಣ್ ಅವರ ಶಿಷ್ಯೆ ಕುಮಾರಿ ರಾಶಿ ರಾಜೇಶ್ ಹೆಗ್ಡೆ ಅವರ ಭರತನಾಟ್ಯ ರಂಗಪ್ರವೇಶ ಕಾರ್ಯಕ್ರಮ ಮೇ 17ರಂದು ರವಿವಾರ ಸಂಜೆ 4.30ಕ್ಕೆ ಮಂಗಳೂರಿನ ಕುದ್ಮಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ ಎಂದು ವಿದ್ವಾನ್ ಯು. ಕೆ. ಪ್ರವೀಣ್ ತಿಳಿಸಿದರು. ನಗರದ ಪತ್ರಿಕಾಭವನದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಮಾರು 13 ವರ್ಷಗಳಿಂದ ಭರತನಾಟ್ಯ ಅಭ್ಯಾಸ ಮಾಡುತ್ತಿರುವ ರಾಶಿ ರಾಜೇಶ್ ಹೆಗ್ಡೆ ಅವರು ಪುಷ್ಪಾಂಜಲಿ, ಶ್ಲೋಕ,…

Read More

ಸ್ಪೀಕರ್ ಯು.ಟಿ. ಖಾದರ್‌ಗೆ ಮುತ್ತಿಗೆ ಆರೋಪ: 11 ಮಂದಿ ವಿರುದ್ಧ ಪ್ರಕರಣ

ಮಂಗಳೂರು, ಮೇ 13: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಆರೋಪದಡಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ 11 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಕೆಲ ದಿನಗಳ ಹಿಂದೆ ಉಳ್ಳಾಲ ತಾಲೂಕಿನ ಕುತ್ತಾರ್ ಪ್ರದೇಶಕ್ಕೆ ಭೇಟಿ ನೀಡಿದ್ದ ಸ್ಪೀಕರ್ ಯು.ಟಿ. ಖಾದರ್ ಅವರನ್ನು ಸ್ಥಳೀಯರು ವೃತ್ತ ನಿರ್ಮಾಣ ಹಾಗೂ ಇತರ ಸಮಸ್ಯೆಗಳ ಕುರಿತು ಪ್ರಶ್ನಿಸಿ ತಡೆದ ಘಟನೆ ನಡೆದಿತ್ತು. ಸ್ಪೀಕರ್ ಅವರ ವಾಹನವನ್ನು ತಡೆದು ಅಸಭ್ಯವಾಗಿ ವರ್ತಿಸಿ, ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಲಾಗಿದೆ….

Read More
error: Content is protected !!