ಕಾವೂರಿನ ಟೆಕ್ಕಿ ಶರ್ಮಿಳಾ ಸಾವಿನ ರಹಸ್ಯ ಬಯಲು . ಉಸಿರುಗಟ್ಟಿಸಿ ಕೊಂದ ಕೇರಳ ಮೂಲದ 18ರ ಹರೆಯದ ವಿದ್ಯಾರ್ಥಿ ಬಂಧನ
ಮಂಗಳೂರು :ಕಾವೂರಿನ ಟೆಕ್ಕಿ ಶರ್ಮಿಳಾ ಸಾವಿನ ರಹಸ್ಯ ಬಯಲಾಗಿದ್ದು, ಉಸಿರುಗಟ್ಟಿಸಿ ಕೊಂದಿದ್ದ ಕೇರಳ ಮೂಲದ 18ರ ಹರೆಯದ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ.ಲೈಂಗಿಕವಾಗಿ ಸಹಕರಿಸಲು ನಿರಾಕರಿಸಿದ ಮಂಗಳೂರಿನ ಕಾವೂರು ನಿವಾಸಿ ಟೆಕ್ಕಿ ಶರ್ಮಿಳಾ (35) ಳನ್ನು ಕೊಂದಿದ್ದ 18 ವರ್ಷದ ಯುವಕನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಶರ್ಮಿಳಾ ಕಳೆದ ವಾರ ಬೆಂಗಳೂರಿನ ತಮ್ಮ ಫ್ಲಾಟ್ನಲ್ಲಿ ಬೆಂಕಿ ಅವಘಡದಲ್ಲಿ ಮೃತಪಟ್ಟಿದ್ದಾರೆ ಎಂದು ಮೊದಲು ಶಂಕಿಸಲಾಗಿತ್ತು. ಶರ್ಮಿಳಾ ಅವಿವಾಹಿತೆಯಾಗಿದ್ದು ಸುಬ್ರಹ್ಮಣ್ಯ ಲೇಔಟ್ನ ಸಂಕಲ್ಪ ನಿಲಯದಲ್ಲಿ ಎರಡು ಬೆಡ್ರೂಮ್ ಫ್ಲಾಟ್ನಲ್ಲಿ ವಾಸವಿದ್ದರು. ಬೆಂಗಳೂರಿನ ಪ್ರಮುಖ…