ಫಿಟ್ ಇಂಡಿಯಾ ಅಭಿಯಾನಕ್ಕೆ ಬಲ: ವಿಶ್ವ ಸೈಕಲ್ ದಿನದಂದು ಮಂಗಳೂರಿನಲ್ಲಿ ನೂರಾರು ಸೈಕ್ಲಿಸ್ಟ್‌ಗಳ ಭಾಗವಹಿಸುವಿಕೆ

ಮಂಗಳೂರು, ಜೂನ್ 7: ವಿಶ್ವ ಸೈಕಲ್ ದಿನಾಚರಣೆ-2026ರ ಅಂಗವಾಗಿ ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೇರಾ ಯುವ ಭಾರತ (MY Bharat), ದಕ್ಷಿಣ ಕನ್ನಡ ವತಿಯಿಂದ “ಹಸಿರು ಭವಿಷ್ಯಕ್ಕಾಗಿ ಸೈಕ್ಲಿಂಗ್” ಎಂಬ ಧ್ಯೇಯವಾಕ್ಯದೊಂದಿಗೆ ಭವ್ಯ “ಸಂಡೇಸ್ ಆನ್ ಸೈಕಲ್” ಸೈಕಲ್ ಜಾಥಾವನ್ನು ಭಾನುವಾರ ಯಶಸ್ವಿಯಾಗಿ ಆಯೋಜಿಸಲಾಯಿತು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ, ಎನ್‌ಎಸ್‌ಎಸ್ ಮಂಗಳೂರು ವಿಶ್ವವಿದ್ಯಾಲಯ, ಫ್ರೀಜಿಂಗ್ ಸನ್, ಮಂಗಳೂರು ಸೈಕ್ಲಿಂಗ್ ಕ್ಲಬ್, ಸುರತ್ಕಲ್ ಬೀಚ್…

Read More

ಸೂರಿಂಜೆ-ಪುಚ್ಚಾಡಿ ಹದಗೆಟ್ಟ ರಸ್ತೆ: ಬಿಜೆಪಿ ಪದಾಧಿಕಾರಿಗಳಿಂದ ಸಾಮೂಹಿಕ ರಾಜೀನಾಮೆ, ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮಂಗಳೂರು: ಮೂಲ್ಕಿ-ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಸೂರಿಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳು ಸಂಪೂರ್ಣ ನೆನೆಗುದಿಗೆ ಬಿದ್ದಿರುವುದನ್ನು ಖಂಡಿಸಿ, ಸೂರಿಂಜೆ 159ನೇ ಬೂತ್‌ನ ಭಾರತೀಯ ಜನತಾ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ ನೀಡಲು ನಿರ್ಧರಿಸಿದ್ದು, ಮುಂಬರುವ ಚುನಾವಣೆಗಳನ್ನು ಬಹಿಷ್ಕರಿಸುವುದಾಗಿ ಮನವಿ ಪತ್ರ ಸಲ್ಲಿಸಿ ಎಚ್ಚರಿಸಿದ್ದಾರೆ.ಸೂರಿಂಜೆ ಹೋಬಳಿಯ ವ್ಯಾಪ್ತಿಗೆ ಬರುವ ಸೂರಿಂಜೆ- ಪುಚ್ಚಾಡಿ ರಸ್ತೆಯು ಕಳೆದ ಹದಿನೈದು ವರ್ಷಗಳಿಂದ ಯಾವುದೇ ಡಾಮರೀಕರಣ ಕಾಣದೆ ಸಂಪೂರ್ಣ ಹದಗೆಟ್ಟು ಹೋಗಿದೆ. ರಸ್ತೆಯ ತುಂಬಾ ಹೊಂಡ-ಗುಂಡಿಗಳು…

Read More

ಹಸಿವು,ಬಡತನ, ದಾರಿದ್ರ್ಯ, ನಿರುದ್ಯೋಗ ಮುಕ್ತ ಸಮಾಜದ ನಿರ್ಮಾಣ ಕಮ್ಯುನಿಸ್ಟ್ ಸಿದ್ದಾಂತದಿಂದ ಮಾತ್ರ ಸಾಧ್ಯ – ಕೃಷ್ಣಪ್ಪ ಸಾಲ್ಯಾನ್

ಸಮಾಜವಾದಿ ವ್ಯವಸ್ಥೆಯಡಿಯಲ್ಲಿ ಕಳೆದ 8 ದಶಕಗಳಿಂದ ಮುನ್ನಡೆಯುತ್ತಿರುವ ಚೈನಾ ದೇಶವು ಆರ್ಥಿಕ, ಸಾಮಾಜಿಕ ಶೈಕ್ಷಣಿಕ, ಔದ್ಯೋಗಿಕ ಕ್ಷೇತ್ರಗಳಲ್ಲಿ ಭಾರೀ ಮುನ್ನಡೆ ಸಾಧಿಸಿದೆ. ಜಗತ್ತಿಗೆ ತಾನೇ ದೊಡ್ಡಣ್ಣನಂತೆ ವರ್ತಿಸುವ ಅಮೇರಿಕಾವನ್ನೂ ಮೀರಿ ಅಭಿವೃದ್ಧಿಯ ನಾಗಾಲೋಟದಲ್ಲಿ ಸಾಗುತ್ತಿದೆ. ಸಮಾಜವಾದಿ ಪುಟ್ಟ ರಾಷ್ಟ್ರ ಕ್ಯೂಬಾ ಕೊರೋನಾ ಸಂದರ್ಭದಲ್ಲಿ ಅಮೇರಿಕಾ ಸೇರಿದಂತೆ ಜಗತ್ತಿನ ಹಲವು ರಾಷ್ಟ್ರಗಳಿಗೆ ವೈದ್ಯರನ್ನು ಕಳುಹಿಸುವ ಮೂಲಕ ಆರೋಗ್ಯ ಕ್ಷೇತ್ರದಲ್ಲಿ ಅತ್ಯದ್ಭುತ ಸಾಧನೆ ಮಾಡಿದೆ.ಇತರ ಸಮಾಜವಾದಿ ರಾಷ್ಟ್ರಗಳಾದ ವಿಯೆಟ್ನಾಂ, ಉತ್ತರ ಕೊರಿಯಾ ಲಾವೋಸ್ ದೇಶಗಳು ಉತ್ತಮ ಆರ್ಥಿಕತೆಯನ್ನು ಸಾಧಿಸುವ ಮೂಲಕ…

Read More

ಕಳ್ಳತನ ಮತ್ತು ಪರಾರಿ ಪ್ರಕರಣ: ಆರೋಪಿಗೆ ಜೈಲು ಶಿಕ್ಷೆ

ಮಂಗಳೂರು:ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಗೂ ಪೊಲೀಸ್ ವಶದಿಂದ ಪರಾರಿಯಾದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರಲ್ಲಿ ಶಿಕ್ಷೆ ಪ್ರಕಟಗೊಂಡಿದೆ. ಸುಳ್ಯ ಪೊಲೀಸ್ ಠಾಣಾ 96/2006 ಕಲಂ: 457, 380 ಐ.ಪಿ.ಸಿ ಹಾಗೂ 103/2018 ಕಲಂ:224 ಐ.ಪಿ.ಸಿ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಎ ಎಮ್ ಅಜೀಜ್ ಎಂಬಾತನ ವಿರುದ್ದ ಎಸ್ ಸಿ ಜೆ ಮತ್ತು ಜೆ ಎಮ್‌ಎಫ್ ಸಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದ ನ್ಯಾಯಾದೀಶರು ಆರೋಪಿ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ, ಅ.ಕ್ರ: 103/2018 ರಲ್ಲಿ ಒಂದು ವರ್ಷಗಳ ಸಾದಾ ಕಾರಗೃಹ ವಾಸ…

Read More

ಬಂಟ್ವಾಳದಲ್ಲಿ ಎಂಡಿಎಂಎ ಸಾಗಾಟ ಪತ್ತೆ: ಮೂವರು ಬಂಧನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂ.ಡಿ.ಎಂ.ಎ ಸಾಗಾಟ ಪತ್ತೆಯಾಗಿದ್ದು, ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಟ್ವಾಳ ನಗರ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಸಂದೀಪ್‌ ಕುಮಾರ್‌ ಶೆಟ್ಟಿರವರು ಠಾಣಾ ಸಿಬ್ಬಂದಿಗಳೊಂದಿಗೆ ಮೆಲ್ಕಾರ್ ಪ್ಲೈಒವರ್ ಬಳಿ ಕಾರೊಂದನ್ನು ತಪಾಸಣೆಗಾಗಿ ನಿಲ್ಲಿಸಿದ್ದರು. ಈ ಕಾರಿನಲ್ಲಿ ಚಾಲಕ ಹಾಗೂ ಇಬ್ಬರು ಪ್ರಯಾಣಿಕರಿರುತ್ತಾರೆ. ಕಾರನ್ನು ಪರಿಶೀಲಿಸಿದಾಗ ಮನೋದ್ರೇಕಕಾರಿ ವಸ್ತು ಸೇವನೆ ಮಾಡಲು ಬಳಸುವ ಸಾಧನ ಕಂಡುಬಂದಿದ್ದು, ಈ ಬಗ್ಗೆ ಅವರನ್ನು ವಿಚಾರಿಸಿದಾಗ ಎ,ಜುಬೈರ್, ಮುಹಮ್ಮದ್ ಸವಾದ್ ಹಾಗೂ ಬಿ.ಎಮ್. ರಶೀದ್ ಯಾನೆ ಮಾರಿಮುತ್ತು ಎಂಬುದಾಗಿ…

Read More

ಪದವಿನಂಗಡಿಯಲ್ಲಿ ₹6 ಲಕ್ಷ ಮೌಲ್ಯದ ಎಂಡಿಎಂಎ ವಶ: ಸಿಸಿಬಿ ಕಾರ್ಯಾಚರಣೆಯಲ್ಲಿ ಆರೋಪಿಯ ಬಂಧನ

ಮಂಗಳೂರು, ಜೂನ್ 6:ಪದವಿನಂಗಡಿ ಪರಿಸರದಲ್ಲಿರುವ ಮನೆಯಿಂದ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಎಂಡಿಎಂಎ ಮಾದಕವಸ್ತು ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯಿಂದ ಸುಮಾರು ₹6 ಲಕ್ಷ ಮೌಲ್ಯದ 60 ಗ್ರಾಂ ಎಂಡಿಎಂಎ ಮಾದಕವಸ್ತು, ಜಿಪ್-ಲಾಕ್ ಕವರ್ಗಳು, ಒಂದು ಮೊಬೈಲ್ ಫೋನ್ ಹಾಗೂ ಡಿಜಿಟಲ್ ತೂಕಮಾಪನ ಯಂತ್ರವನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಬಂಧಿತ…

Read More

ವಿದ್ಯಾರ್ಥಿಗಳನ್ನು ಗುರಿಯಾಗಿಸಿ ಡ್ರಗ್ಸ್ ಮಾರಾಟ: ಆರೋಪಿ ಬಂಧನ

ಮಂಗಳೂರು : ಮಂಗಳೂರು ನಗರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕವಸ್ತು ಎಂಡಿಎಂಎ (MDMA) ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಮಂಗಳೂರು ನಗರ ಅಪರಾಧ ವಿಭಾಗ (CCB) ಪೊಲೀಸರು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಬಂಧಿಸಿದ್ದಾರೆ. ಅವರಿಂದ ಒಟ್ಟು 164 ಗ್ರಾಂ ಎಂಡಿಎಂಎ ಮಾದಕವಸ್ತುವನ್ನು ವಶಪಡಿಸಿಕೊಂಡಿದ್ದಾರೆ.ವಶಪಡಿಸಿಕೊಂಡ ಮಾದಕವಸ್ತುವಿನ ಒಟ್ಟು ಮೌಲ್ಯ ಸುಮಾರು ₹16,40,000 ಎಂದು ಅಂದಾಜಿಸಲಾಗಿದೆ. ಬೆಂಗಳೂರು ನಗರದಿಂದ ಎಂಡಿಎಂಎ ಮಾದಕವಸ್ತುವನ್ನು ಖರೀದಿಸಿ ಮಂಗಳೂರು ನಗರಕ್ಕೆ ತಂದು ಹೊಯಿಗೆ ಬಜಾರ್ ಪರಿಸರದಲ್ಲಿರುವ ಮನೆಯಿಂದ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿರುವ…

Read More

ಬೆಂಗ್ರೆ ಜಲಮೂಲದಲ್ಲಿ ಮೀನುಗಳ ಸಾಮೂಹಿಕ ಸಾವು: ಸ್ಥಳೀಯರಲ್ಲಿ ಆತಂಕ

ಮಂಗಳೂರು: ನಗರದ ಬೆಂಗ್ರೆ ಪ್ರದೇಶದ ಜಲಮೂಲದಲ್ಲಿ ಮೀನುಗಳು ಸಾಮೂಹಿಕವಾಗಿ ಸಾವನ್ನಪ್ಪುತ್ತಿರುವುದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಹೆಚ್ಚುತ್ತಿರುವ ಮಾಲಿನ್ಯ ಹಾಗೂ ನೀರಿನಲ್ಲಿನ ಆಮ್ಲಜನಕದ ಕೊರತೆಯಿಂದ ಈ ಪರಿಸ್ಥಿತಿ ಉಂಟಾಗಿದೆ ಎಂದು ಹೇಳಲಾಗಿದೆ. ಸಂಸ್ಕರಿಸದ ಕೊಳಚೆ ನೀರು ನೇರವಾಗಿ ಜಲಮೂಲಕ್ಕೆ ಸೇರುತ್ತಿರುವುದು ಮತ್ತು ಹತ್ತಿರದ ಪ್ರದೇಶಗಳಿಂದ ರಾಸಾಯನಿಕ ತ್ಯಾಜ್ಯಗಳು ನೀರಿನಲ್ಲಿ ಬೆರೆಯುತ್ತಿರುವುದೇ ಮೀನುಗಳ ಸಾವಿಗೆ ಪ್ರಮುಖ ಕಾರಣಗಳಾಗಿವೆ. ಇದರಿಂದ ಜಲಚರಗಳ ಜೀವಕ್ಕೆ ಅಪಾಯ ಉಂಟಾಗಿದ್ದು, ಪರಿಸರ ಸಮತೋಲನಕ್ಕೂ ಧಕ್ಕೆಯಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ಮಾಲಿನ್ಯ ನಿಯಂತ್ರಣಕ್ಕೆ ಮುಂದಾಗಬೇಕು…

Read More

ಮಂಗಳೂರಿನಲ್ಲಿ ‘ಉದ್ಗಮ್-2026’ ರಾಷ್ಟ್ರೀಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ

ಮಂಗಳೂರು, ಜೂನ್ 5: ದಕ್ಷಿಣ ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ವಿದ್ಯಾರ್ಥಿಗಳ ಸಂಘ (SICASA) ಆಯೋಜಿಸಿರುವ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನ ‘ಉದ್ಗಮ್-2026’ ಗುರುವಾರ ನಗರದ ಟೌನ್ ಹಾಲ್‌ನಲ್ಲಿ ಅದ್ದೂರಿಯಾಗಿ ಆರಂಭಗೊಂಡಿತು. ದೇಶದ ವಿವಿಧ ಭಾಗಗಳಿಂದ ಆಗಮಿಸಿದ ಚಾರ್ಟರ್ಡ್ ಅಕೌಂಟೆನ್ಸಿ ವಿದ್ಯಾರ್ಥಿಗಳು, ವೃತ್ತಿಪರರು ಹಾಗೂ ತಜ್ಞರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಿದ ಈ ಸಮ್ಮೇಳನ ಜ್ಞಾನ ವಿನಿಮಯ, ವೃತ್ತಿಪರ ಮಾರ್ಗದರ್ಶನ ಮತ್ತು ನೆಟ್‌ವರ್ಕಿಂಗ್‌ಗೆ ಅವಕಾಶ ಕಲ್ಪಿಸಿತು. ಸೆಬಿ ನೋಂದಾಯಿತ ಸಂಶೋಧನಾ ವಿಶ್ಲೇಷಕ ಹಾಗೂ ಸ್ಪೇಡ್ ಕ್ಯಾಪಿಟಲ್ ಅಡ್ವೈಸರ್ಸ್ ಸಂಸ್ಥಾಪಕ ಶ್ರೇಯಸ್…

Read More

ಮಂಗಳೂರಿನಲ್ಲಿ ದೀಪಾ ಭಸ್ತಿ ವಿಶೇಷ ಉಪನ್ಯಾಸ: ಭಾಷೆ ಮತ್ತು ಸಂಸ್ಕೃತಿ ಕುರಿತು ಚಿಂತನೆ

ಮಂಗಳೂರು: ಪ್ರತಿವರ್ಷ ಆಯೋಜಿಸಲಾಗುವ ಪಿ.ಪಿ. ಗೋಮತಿ ಸ್ಮಾರಕ ಉಪನ್ಯಾಸ ಮಾಲಿಕೆ-2026ರ ಅಂಗವಾಗಿ ಖ್ಯಾತ ಲೇಖಕಿ ಹಾಗೂ ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ದೀಪಾ ಭಸ್ತಿ ಅವರ ವಿಶೇಷ ಉಪನ್ಯಾಸ ಕಾರ್ಯಕ್ರಮವು ಜೂನ್ 9ರಂದು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಬೆಳಿಗ್ಗೆ 10.30ಕ್ಕೆ ನಡೆಯಲಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಲ್. ಧರ್ಮ, ಪಿ.ಪಿ. ಗೋಮತಿ ಎಜುಕೇಶನ್ ಟ್ರಸ್ಟ್ (ರಿ.), ಮಂಗಳೂರು ವಿಶ್ವವಿದ್ಯಾನಿಲಯ, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು…

Read More
error: Content is protected !!