ಬೈಂದೂರು ತಾಲೂಕಿನ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಳ.

ಉಡುಪಿ ಜಿಲ್ಲೆಯ ಬೈಂದೂರು ಹಾಗೂ ಕುಂದಾಪುರ ತಾಲೂಕಿನಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಬೈಂದೂರು ತಾಲೂಕಿನಲ್ಲಿ ಎಡೆಬಿಡದೆ ಮಳೆಯಾಗುತ್ತಿದ್ದು, ಪ್ರಮುಖ ನದಿಗಳು ತುಂಬಿ ಹರಿಯುತ್ತಿವೆ. ಬೈಂದೂರಿನ ಸೌಪರ್ಣಿಕಾ, ಸುಮನಾವತಿ, ಸಂಕದ ಗುಂಡಿ, ಎಡ ಮಾವಿನ ಹೊಳೆ ತುಂಬಿ ಹರಿಯುತ್ತಿವೆ, ನದಿ ಪಾತ್ರ, ನಾಡ, ನಾವುಂದ, ಮರವಂತೆ, ಬಡಾಕೆರೆ ಚಿಕ್ಕಳ್ಳಿ ಪಡುಕೋಣೆ ಆನಗಳ್ಳಿ ಹಳಗೇರಿ ಜನರು ಎಚ್ಚರ ವಹಿಸುವಂತೆ‌ ಜಿಲ್ಲಾಡಳಿತ ಸೂಚಿಸಿದೆ. ಪಶ್ಚಿಮ ಘಟ್ಟದಲ್ಲಿ ಮಳೆ ಮುಂದುವರಿದರೆ ಪರಿಸ್ಥಿತಿ ಇನ್ನಷ್ಟು ಹದಗೆಡಲಿದೆ.ಪ್ರತಿ ವರ್ಷ ಮಳೆಗಾಲ ಬಂದರೆ ನಮಗೆ ಸಮಸ್ಯೆ ತಪ್ಪಿದ್ದಲ್ಲ….

Read More

ಸೂಕ್ತ ಗಣಿ ನೀತಿ ರೂಪಿಸಿ ಪರಿಹರಿಸದಿದ್ದಲ್ಲಿ ಹೋರಾಟ ಇನ್ನಷ್ಟು ತೀವ್ರಗೊಳ್ಳಲಿದೆ : ಅಶ್ರಫ್ ತಲಪಾಡಿ

ಮಂಗಳೂರು:ಜು. 25 – ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆ ನಿಷೇದಿಂದಾಗಿ ಕಟ್ಟಡದ ಮಾಲೀಕರು, ಗುತ್ತಿಗೆದಾರರು ಹಾಗೂ ಕಾರ್ಮಿಕರು ಸಂಕಷ್ಟದಲ್ಲಿದ್ದಾರೆ. ಇದರಿಂದಾಗಿ ಜಿಲ್ಲೆಯಲ್ಲಿ ಆರ್ಥಿಕತೆಯು ದುರ್ಬಲಗೊಂಡಿದೆ. ದಿನಾ ಕೂಲಿ ಕೆಲಸ ಮಾಡಿ ಸಂಬಳ ಪಡೆದು ಮನೆಗೆ ಹೋಗುತ್ತಿದ್ದ ಕಾರ್ಮಿಕ ಎರಡು ತಿಂಗಳುಗಳಿಂದ ಸಂಜೆ ಹೊತ್ತಿಗೆ ಇಂದು ಬರಿಗೈಯ್ಯಲ್ಲಿ ಮನೆಗೆ ಹೇಗೆ ಹೋಗಲಿ ಎಂಬ ಚಿಂತೆಯಲ್ಲಿದ್ದಾನೆ. ಅಧಿಕಾರಿಗಳು, ಸಂಬಂಧಪಟ್ಟ ಚುನಾಯಿತ ಪ್ರತಿನಿಧಿಗಳು ಸಮಸ್ಯೆ ಪರಿಹರಿಸುವಲ್ಲಿ ವಿಫಲರಾಗಿದ್ದಾರೆ. ಈ ಸಮಸ್ಯೆಗೆ ಸೂಕ್ತ ಗಣಿ ನೀತಿ ರೂಪಿಸಿ ಕೂಡಲೇ ಪರಿಹರಿಸಬೇಕು. ಇಲ್ಲದಿದ್ದಲ್ಲಿ…

Read More

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚಿಸಿದ ಪ್ರಕರಣ, ಆರೋಪಿ ಕೃಷ್ಣ ಜೆ.ರಾವ್ ಜಾಮೀನು ಅರ್ಜಿ ತಿರಸ್ಕೃತ

ಪುತ್ತೂರು : ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿ ವಿದ್ಯಾರ್ಥಿನಿಯನ್ನು ಗರ್ಭವತಿಯನ್ನಾಗಿಸಿ ವಂಚಿಸಿರುವ ಪ್ರಕರಣದ ಆರೋಪಿ ಶ್ರೀಕೃಷ್ಣ ಜೆ ರಾವ್ ನ ಬೇಲ್ ಅರ್ಜಿಯ ವಿಚಾರಣೆ ನಡೆಸಿರುವ ದ.ಕ.ಆರನೇ ನ್ಯಾಯಾಲಯ ಜಾಮೀನು ಅರ್ಜಿ ತಿರಸ್ಕೃತಗೊಳಿಸಿದೆ. ಜು.19 ರಂದು ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು, ಜು. 25 ರಂದು ತೀರ್ಪು ನೀಡುವುದಾಗಿ ಪ್ರಕಟಿಸಿದ್ದರು. 6ನೇ ಜಿಲ್ಲಾ ನ್ಯಾಯಾಲಯದಲ್ಲಿ ಶುಕ್ರವಾರ ಜಾಮೀನು ಅರ್ಜಿ ತಿರಸ್ಕೃತ ಗೊಳಿಸಲಾಗಿದೆ.

Read More

ಸುಬ್ರಹ್ಮಣ್ಯ – ನಾಪತ್ತೆಯಾಗಿದ್ದ ಆಂಬ್ಯುಲೆನ್ಸ್ ಡ್ರೈವರ್ ಮೃತದೇಹ ಪತ್ತೆ

ಕಳೆದ ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯಕೇಂದ್ರದ ಆಂಬ್ಯುಲೆನ್ಸ್ ಡ್ರೈವರ್ ಮೃತದೇಹ ಕುಮಾರಧಾರ ನದಿಯಲ್ಲಿ ನೆನ್ನೆ ಪತ್ತೆಯಾಗಿದೆ.ಮೃತರನ್ನು ಸುಬ್ರಹ್ಮಣ್ಯ ದೇವರಗದ್ದೆ ನಿವಾಸಿ ಹೊನ್ನಪ್ಪ (52) ಎಂದು ಗುರುತಿಸಲಾಗಿದೆ. ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯಕೇಂದ್ರದ ಆಂಬ್ಯುಲೆನ್ಸ್ ಡ್ರೈವರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಹೊನ್ನಪ್ಪ ಅವರು ಮಂಗಳವಾರದಿಂದ ನಾಪತ್ತೆಯಾಗಿದ್ದರು. ಅವರು ಕುಮಾರಧಾರ ನದಿ ಕಡೆಗೆ ಓಡುತ್ತಿರುವ ದೃಶ್ಯ ಸಿಸಿ ಕೆಮರಾದಲ್ಲಿ ಸೆರೆಯಾಗಿತ್ತು. ಈ ಹಿನ್ನಲೆ ನದಿಗೆ ಹಾರಿರಬಹುದು ಎಂಬ ಶಂಕೆ ಮೇರೆಗೆ ಕುಮಾರಧಾರ ನದಿಯಲ್ಲಿ ಅಂದು ರಾತ್ರಿಯಿಂದಲೇ ಹುಡುಕಾಟ…

Read More

ಕರಾವಳಿ ಜಿಲ್ಲೆಗಳಿಗೆ ಅಂತರ್ ರಾಜ್ಯಗಳಿಂದ ಭಾರಿ ಪ್ರಮಾಣದಲ್ಲಿ ಮೀನು ಪೂರೈಕೆ.

ಕರ್ನಾಟಕ ಕರಾವಳಿಯಲ್ಲಿ ಮೀನುಗಾರಿಕೆ ನಿಷೇಧವಿದ್ದರೂ, ತಮಿಳುನಾಡು, ಆಂಧ್ರಪ್ರದೇಶಗಳಿಂದ ಹೇರಳವಾಗಿ ಮೀನು ಮಂಗಳೂರಿಗೆ ಬರುತ್ತಿದೆ. ಕಮಿಷನ್ ಏಜೆಂಟರು ಹೊರ ರಾಜ್ಯಗಳ ವ್ಯಾಪಾರಿಗಳೊಂದಿಗೆ ವ್ಯವಹರಿಸಿ, ಪ್ರತಿದಿನ 40-50 ಲಾರಿಗಳಷ್ಟು ಮೀನು ತರಿಸುತ್ತಿದ್ದಾರೆ. ಆಗಸ್ಟ್ 1ರಿಂದ ಕರ್ನಾಟಕದಲ್ಲಿ ಮೀನುಗಾರಿಕೆ ಆರಂಭವಾಗಲಿದ್ದರೂ, ಹೊರ ರಾಜ್ಯಗಳಿಂದ ಮೀನು ಪೂರೈಕೆ ನಿರಂತರವಾಗಿ ಮುಂದುವರಿಯುತ್ತದೆ. ಕರ್ನಾಟಕ ಕರಾವಳಿಯಲ್ಲಿ ಜೂನ್ ಮತ್ತು ಜುಲೈನಲ್ಲಿಯೇ ಮೀನುಗಾರಿಕೆ ನಿಷೇಧವಿದ್ದು, ತಮಿಳುನಾಡು ಮತ್ತು ಆಂಧ್ರಪ್ರದೇಶದಿಂದ ಕರಾವಳಿ ಪ್ರದೇಶಕ್ಕೆ ಸಾಕಷ್ಟು ಪ್ರಮಾಣದಲ್ಲಿ ಮೀನು ಬರುತ್ತಿದೆ.ಮಂಗಳೂರು, ಮಲ್ಪೆ, ಕುಂದಾಪುರ, ಗಂಗೊಳ್ಳಿ, ಭಟ್ಕಳ, ಕುಮಟಾ, ಕಾರವಾರದಲ್ಲಿ 26…

Read More

ಹೈದರಾಬಾದ್ ,ಮುಂಬೈ,ಬೆಂಗಳೂರು ,ಅಹಮದಾಬಾದ್ ನಡೆದ ಭಯೋತ್ಪಾದನಾ ದಾಳಿಯ ಹಿನ್ನಲೆಯಲ್ಲಿ ಬಂದಿಯಾಗಿದ್ದ ಆರೋಪಿ ಯಾಸೀನ್ ಭಟ್ಕಳ ವಿಚಾರಣೆ ಮತ್ತೆ ಆರಂಭ

ಹೈದರಾಬಾದ್ ,ಮುಂಬೈ,ಬೆಂಗಳೂರು ,ಅಹಮದಾಬಾದ್ ನಡೆದ ಭಯೋತ್ಪಾದನಾ ದಾಳಿಯ ಹಿನ್ನಲೆಯಲ್ಲಿ 04-10-2008 ರಂದು ಬಂಧಿಸಲಾಗಿದ್ದ ಯಾಸೀನ್ ಭಟ್ಕಳ ವಿಚಾರಣೆ ಮತ್ತೆ ಆರಂಭವಾಗಿದೆ ನಿಷೇಧಿತ ಇಂಡಿಯನ್ ಮುಜಾಹಿದ್ದೀನ್ ಸಂಘಟನೆ ಯೊಂದಿಗೆ ನಂಟು ಇಟ್ಟುಕೊಂಡಿದ್ದ ಭಯೋತ್ಪಾದನಾ ಕೃತ್ಯಗಳಲ್ಲಿ ತೊಡಗಿಸಿಕೊಂಡಿದ್ದ ಯಾಸೀನ್ ಭಟ್ಕಳ ವಿರುದ್ಧ ದೇಶದ ವಿವಿಧ ಕಡೆಗಳಲ್ಲಿ ಭಯೋತ್ಪಾದನಾ ಕೃತ್ಯ ಎಸಗಲು ಪೂರ್ವ ತಯಾರಿ ಆರೋಪ ಮತ್ತು ಸ್ಪೋಟಕ ವಸ್ತುಗಳನ್ನು ಹಾಗೂ ಸ್ಪೋಟಕಗಳನ್ನು ತಯಾರಿಸುವ ವಸ್ತುಗಳನ್ನು ತನ್ನ ಬಳಿ ಇಟ್ಟುಕೊಂಡ ಆರೋಪದಲ್ಲಿ ಮಂಗಳೂರಿನ ಉಳ್ಳಾಲ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು, ದಕ್ಷಿಣ ಕನ್ನಡ…

Read More

ಮೈ ತುಂಬಿ ಹರಿಯುವ ನೇತ್ರಾವತಿ

ಸುಮಾರು ಎರಡು ತಿಂಗಳಿನಿಂದ ಸುರಿಯುತ್ತಿರುವ ನಿರಂತರ ‌ಮಳೆಗೆ ನೇತ್ರಾವತಿ ‌ನದಿ ತುಂಬಿ ಹರಿಯುತ್ತಿದ್ದು, ಇಂದು ನೇತ್ರಾವತಿ ನೀರಿನ ಮಟ್ಟ 6.9 ಮೀ. ಅಗಿದೆ. ಬೆಳಿಗ್ಗೆಯಿಂದ ಮಳೆಯ ಪ್ರಮಾಣ ತುಸು ಕಡಿಮೆಯಾದಂತೆ ಕಾಣುತ್ತಿದ್ದು,ರಾತ್ರಿಯಿಡಿ ಗಾಳಿ ಮಳೆ ಆಗಿದೆ. ನಿರಂತರವಾಗಿ ಮಳೆ ಸುರಿಯುತ್ತಿದ್ದರೂ ಕೂಡ ಈವರೆಗೆ ನೇತ್ರಾವತಿ ನದಿಯ ತಗ್ಗು ಪ್ರದೇಶಗಳು ಜಲಾವೃತಗೊಂಡಿಲ್ಲ.ನೇತ್ರಾವತಿ ನದಿಗೆ ಅಲ್ಲಲ್ಲಿ ಆಡ್ಡವಾಗಿ ಚೆಕ್ ಡ್ಯಾಂಗಳು ,ಡ್ಯಾಂಗಳು ನಿರ್ಮಾಣಗೊಂಡ ಕಾರಣದಿಂದ ನೀರಿನ ಹರಿಯುವ ಪ್ರಮಾಣದಲ್ಲಿ ಏರುಪೇರಾಗುತ್ತದೆ. ಹಾಗಾಗಿ ನೆರೆಯ ಆತಂಕ ಇತ್ತೀಚಿನ ದಿನಗಳಲ್ಲಿ ‌ಕಡಿಮೆಯಾಗಿದೆ.

Read More

ಮೂಡಬಿದ್ರೆಯ ಆಳ್ವಾಸ್ ಕಾಲೇಜ್ ಕ್ಯಾಂಪಸ್ ನಲ್ಲಿ ಬೃಹತ್ ಉದ್ಯೋಗ ಮೇಳ.ಆಗಸ್ಟ್ 01 ಮತ್ತು 02 ರಂದು

ಮಂಗಳೂರು :ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದ್ರೆ ವತಿಯಿಂದ ಆಗಸ್ಟ್ 01 ಮತ್ತು 02 ರಂದು ಮೂಡಬಿದ್ರೆಯ ಆಳ್ವಾಸ್ ಕಾಲೇಜ್ ಕ್ಯಾಂಪಸ್ ನಲ್ಲಿ ನಡೆಯಲಿರುವ ಆಳ್ವಾಸ್ ಪ್ರಗತಿ ಬೃಹತ್ ಉದ್ಯೋಗ ಮೇಳದ ಪೂರ್ವಭಾವಿಯಾಗಿ ಮಂಗಳೂರು ದಕ್ಷಿಣ ವಲಯದ ಶಾಸಕರಾದ ಡಿ. ವೇದವ್ಯಾಸ್ ಕಾಮತ್ ರವರ ನೇತೃತ್ವದಲ್ಲಿ ಉದ್ಯೋಗ ಮಾಹಿತಿ ಶಿಬಿರವು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕರಾದ ವೇದವ್ಯಾಸ ಕಾಮತ್ , ಆಳ್ವಾಸ್ ಪ್ರಗತಿ 2025 ಬೃಹತ್ ಉದ್ಯೋಗ ಮೇಳಕ್ಕೆ ಹೊರ ರಾಜ್ಯ…

Read More

ಸ್ಮಾರ್ಟ್ ಸಿಟಿ ಮತ್ತೊಮ್ಮೆ ಸ್ಮಾರ್ಟ್ ಕ್ಲೀನ್ ಸಿಟಿ ಅಲ್ಲವೆಂದು ಸಾಬೀತು-ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತ ಜನರು

ಸ್ಮಾರ್ಟ್ ಸಿಟಿ ಮತ್ತೊಮ್ಮೆ ಸ್ಮಾರ್ಟ್ ಕ್ಲೀನ್ ಸಿಟಿ ಅಲ್ಲವೆಂದು ಸಾಬೀತು ಮಾಡಲು ಹೊರಡ್ತಾ ಇದೆ ಎಂದ್ರೆ ನೀವೆಲ್ಲರೂ ನಂಬಲೇ ಬೇಕು. ಮಲೇರಿಯಾ, ಡೆಂಗ್ಯೂ, ಚಿಕನ್ ಗುನ್ಯಾದಂತಹ ಖಾಯಿಲೆಗಳು ಹರಡದಂತೆ ಎಚ್ಚರ ವಹಿಸೋ ಆರೋಗ್ಯ ಇಲಾಖೆಯ ನಿರ್ದೇಶನಕ್ಕೆ ಇಲ್ಲಿ ಎಳ್ಳು ನೀರು ಬಿಡುವುದು ಸ್ಪಷ್ಟವಾಗಿ ನೋಡ ಬಹುದು . ಕಿವಿ ಕೆಪ್ಪು, ಕಣ್ಣು ಕುರುಡು, ಮೊಸಳೆಯ ಮನಸ್ಸು ಇದ್ದ ಅಧಿಕಾರಿಗಳು ಮಾತ್ರವೇ ಇಂತಹ ಸ್ಥಿತಿಯನ್ನು ನಿರ್ಮಾಣ ಮಾಡಬಲ್ಲರು. ಓಟ್ ಬರುವಾಗ ಹೋದರೆ ಸಾಕು ಅಲ್ಲಿ ತನಕ ಗೋಡೆಗೆ ಕಾಲು…

Read More

ಮಂಗಳೂರು ರೈಲ್ವೇ ಪೊಲೀಸ್ ಠಾಣೆಯಲ್ಲಿ ಸಿಬ್ಬಂದಿ ಕೊರತೆ ನೀಗಿಸಲು ಶಾಸಕ ಮಂಜುನಾಥ ಭಂಡಾರಿ ಮನವಿ!

ಮಂಗಳೂರು: ರೈಲುಗಳ ಸಂಖ್ಯೆ ಹೆಚ್ಚಾದರೂ ರೈಲು ನಿಲ್ದಾಣಗಳು ಮೇಲ್ದರ್ಜೆಗೇರಿದರೂ ರೈಲ್ವೇ ಪೊಲೀಸ್ ಮಾತ್ರ ತುಂಬಾ ಹಳೆಯ ವ್ಯವಸ್ಥೆಯನ್ನೇ ಹೊಂದಿದೆ. ಮಂಗಳೂರು ಕೇಂದ್ರ ರೈಲು ನಿಲ್ದಾಣದ ಬಳಿ ಠಾಣೆಯನ್ನು ಹೊಂದಿರುವ ಮಂಗಳೂರು ರೈಲ್ವೇ ಪೊಲೀಸ್ ವಿಭಾಗದಲ್ಲಿ ಸಿಬ್ಬಂದಿ ಕೊರತೆ ಹಲವು ವರ್ಷಗಳಿಂದ ಇದ್ದು ಕೂಡಲೇ ಸಿಬ್ಬಂದಿಯ ನೇಮಕಕ್ಕೆ ಸೂಕ್ತ ಕ್ರಮ ಜರುಗಿಸಬೇಕು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ಪತ್ರ ಮುಖೇನ ಮನವಿ ಮಾಡಿದ್ದಾರೆ. ಮಂಗಳೂರು ರೈಲ್ವೇ ಪೊಲೀಸ್ ತಲಪಾಡಿ, ತೊಕ್ಕೊಟ್ಟು…

Read More
error: Content is protected !!