ಮಂಗಳೂರು: NRAI ಮಂಗಳೂರು–ಪಶ್ಚಿಮ ಕರ್ನಾಟಕ ಅಧ್ಯಾಯ ಉದ್ಘಾಟನೆ ಇಂದು ಸಂಜೆ ಅವತಾರ್ ಹೋಟೆಲ್‌ನಲ್ಲಿ

ಮಂಗಳೂರು, ಜೂನ್ 4: ಭಾರತೀಯ ಹೋಟೆಲ್ ಮತ್ತು ರೆಸ್ಟೋರೆಂಟ್ ಉದ್ಯಮವನ್ನು ಪ್ರತಿನಿಧಿಸುವ ಸರ್ವೋಚ್ಛ ಸಂಸ್ಥೆಯಾದ National Restaurant Association of India (NRAI)ಯ ಮಂಗಳೂರು ಮತ್ತು ಪಶ್ಚಿಮ ಕರ್ನಾಟಕ ಅಧ್ಯಾಯದ ಅಧಿಕೃತ ಉದ್ಘಾಟನಾ ಸಮಾರಂಭವು ಇಂದು ಸಂಜೆ 6 ಗಂಟೆಗೆ ನಗರದ ಹೋಟೆಲ್ ಅವತಾರ್‌ನಲ್ಲಿ ನಡೆಯಲಿದೆ ಎಂದು NRAI ಪ್ರಧಾನ ಕಾರ್ಯದರ್ಶಿ ಪ್ರಕುಲ್ ಕುಮಾರ್ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರಾವಳಿ ಕರ್ನಾಟಕದ ಆಹಾರ ಸಂಸ್ಕೃತಿಯನ್ನು ಮತ್ತಷ್ಟು ಬಲಪಡಿಸುವುದು, ಆತಿಥ್ಯ ಕ್ಷೇತ್ರದ…

Read More

ಕಡಬದಲ್ಲಿ ಸಂಚಾರಿ ನ್ಯಾಯಾಲಯಕ್ಕೆ ಚಾಲನೆ: ಶೀಘ್ರ ನ್ಯಾಯದಾನಕ್ಕೆ ನ್ಯಾಯಾಧೀಶ ಬಸವರಾಜ್ ಕರೆ

ತಾಲೂಕು ಮಟ್ಟದಲ್ಲಿ ನ್ಯಾಯಾಲಯ ಗಳನ್ನು ಪ್ರಾರಂಭಿಸಿ ಶೀಘ್ರ ನ್ಯಾಯದಾನ ನೀಡಬೇಕು ಎನ್ನುವುದು ನ್ಯಾಯಾಂಗ ವ್ಯವಸ್ಥೆಯ ಆಶಯವಾಗಿದೆ. ಈ ನಿಟ್ಟಿನಲ್ಲಿ ಕಕ್ಷಿದಾರರಿಗೆ ಶೀಘ್ರ ನ್ಯಾಯ ದಾನ ಒದಗಿಸಲು ಎಲ್ಲ ವಕೀಲರು ಹಾಗೂ ನಾವು ಶ್ರಮಿಸುಬೇಕಾಗಿದೆ ಎಂದು ಜಿಲ್ಲಾ ಪ್ರಧಾನ ಸತ್ರ ನ್ಯಾಯಾ ಲಯದ ನ್ಯಾಯಾಧೀಶ ಬಸವರಾಜ್ ಹೇಳಿದರು. ಕಡಬ ಗಣೇಶ್ ಬಿಲ್ಡಿಂಗ್‌ನಲ್ಲಿ ಪ್ರಾರಂಭವಾದ ಪುತ್ತೂರು ಪ್ರಧಾನ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯದ ಕಡಬ ಸಂಚಾರಿ ನ್ಯಾಯಾಲಯವನ್ನು ಅವರು ಮಂಗಳವಾರ ಉದ್ಘಾಟಿಸಿ ಮಾತ ನಾಡಿದರು. ಗ್ರಾಮೀಣ ಪ್ರದೇಶವಾದ ಕಡಬ ದಿಂದ…

Read More

ತೃತೀಯ ಲಿಂಗಿಗಳ ಬಗ್ಗೆ ಜಾಗೃತಿ: ಮಂಗಳೂರಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಬೀದಿ ನಾಟಕ

ಮಂಗಳೂರು, ಜೂನ್ 4: ತೃತೀಯ ಲಿಂಗಿಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಮಂಗಳೂರಿನ ಲಾಲ್‌ಬಾಗ್‌ನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಬೀದಿ ನಾಟಕ ಪ್ರದರ್ಶನ ನಡೆಯಿತು. ಡಾ. ಪಿ. ದಯಾನಂದ ಪೈ – ಪಿ. ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಥಬೀದಿ, ಮಂಗಳೂರು ಇದರ ಸ್ನಾತಕೋತ್ತರ ಸಮಾಜ ಕಾರ್ಯ ಅಧ್ಯಯನ ವಿಭಾಗದ ಪಠ್ಯೇತರ ಚಟುವಟಿಕೆಗಳ ಅಂಗವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಬೀದಿ ನಾಟಕದ ಮೂಲಕ ತೃತೀಯ ಲಿಂಗಿಗಳ ಹಕ್ಕುಗಳು, ಸಾಮಾಜಿಕ ಸ್ವೀಕಾರ, ಸಮಾನ ಅವಕಾಶಗಳು…

Read More

ಉದ್ಯೋಗಾವಕಾಶ : ಜೂ.6 ರಂದು ಸಂದರ್ಶನ

ಮಂಗಳೂರು:ಎಕ್ಸ್‍ಪರ್ಟ್ ಕಾಲೇಜು, ಮಂಗಳೂರು ವತಿಯಿಂದ ಖಾಲಿ ಇರುವ ಹಾಸ್ಟೆಲ್ ವಾರ್ಡನ್ ಹುದ್ದೆಗೆ ನೇರ ಸಂದರ್ಶನವನ್ನು ಜೂನ್ 6 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1:30 ರವರೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ.ಸಂದರ್ಶನದಲ್ಲಿ ಯಾವುದೇ ಪದವಿ ಹೊಂದಿರುವ ಪುರುಷ ಅಭ್ಯರ್ಥಿಗಳು ಸ್ವ-ವಿವರವುಳ್ಳ ಬಯೋಡೇಟಾದೊಂದಿಗೆ ಭಾಗವಹಿಸಬಹುದು. ಕೆಲಸದ ಸ್ಥಳ ಎಕ್ಸ್‍ಪರ್ಟ್ ಕಾಲೇಜು, ವಳಚ್ಚಿಲ್, ಮಂಗಳೂರು.ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಂಗಳೂರು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ತೆಂಕುತಿಟ್ಟು ಚಿಕ್ಕಮೇಳಗಳ ಒಕ್ಕೂಟದ ಕಾರ್ಯಕ್ರಮ: ಕಲಾವಿದರಿಗೆ ಸನ್ಮಾನ

ಮಂಗಳೂರು: ತೆಂಕುತಿಟ್ಟು ಚಿಕ್ಕಮೇಳಗಳ ಒಕ್ಕೂಟದ ಕಾರ್ಯಕ್ರಮವು ಒಕ್ಕೂಟದ ಅಧ್ಯಕ್ಷರಾದ ಅಶೋಕ್ ಶೆಟ್ಟಿ ಸರಪಾಡಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕ್ಷೇತ್ರದ ಧರ್ಮದರ್ಶಿ ಸುರೇಶ್ ಸಾಲಿಯನ್ ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮೂರು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದಿರುವ ತೆಂಕುತಿಟ್ಟು ಚಿಕ್ಕಮೇಳಗಳ ಒಕ್ಕೂಟಕ್ಕೆ ಸಮಸ್ತ ಕಲಾಭಿಮಾನಿಗಳು ಸಹಕಾರ ನೀಡಬೇಕು. ಧರ್ಮ ಪ್ರಜ್ಞೆಯನ್ನು ಬೆಳೆಸುವ ಹಾಗೂ ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸುವ ಕಾರ್ಯದಲ್ಲಿ ಎಲ್ಲರೂ ಕೈಜೋಡಿಸಬೇಕೆಂದು ಕರೆ ನೀಡಿದರು. ವೇದಿಕೆಯಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ…

Read More

ವಿಧಾನ ಪರಿಷತ್ ಚುನಾವಣೆ: ಬಿ.ಕೆ. ಹರಿಪ್ರಸಾದ್, ಪಿ.ವಿ. ಮೋಹನ್‌ಗೆ ಕಾಂಗ್ರೆಸ್ ಟಿಕೆಟ್

ಮಂಗಳೂರು, ಜೂನ್ 4: ಜೂನ್ 18ರಂದು ನಡೆಯಲಿರುವ ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮೂಲದ ಬಿ.ಕೆ. ಹರಿಪ್ರಸಾದ್ ಹಾಗೂ ಪಿ.ವಿ. ಮೋಹನ್ ಅವರಿಗೆ ಅವಕಾಶ ನೀಡಿದೆ. ಈ ಕುರಿತು ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ವಿಧಾನ ಪರಿಷತ್ ಚುನಾವಣೆಗೆ ಬಿ.ಕೆ. ಹರಿಪ್ರಸಾದ್, ತಿಪ್ಪನಪ್ಪ ಕಮಕನೂರ್, ಪಿ.ವಿ. ಮೋಹನ್ ಹಾಗೂ ಶಿವಣ್ಣ ಮಳವಳ್ಳಿ ಅವರನ್ನು ಅಭ್ಯರ್ಥಿಗಳಾಗಿ ಆಯ್ಕೆ ಮಾಡಲಾಗಿದೆ. ಕರ್ನಾಟಕದಿಂದ ಜೂನ್…

Read More

ಡಿ.ಕೆ. ಶಿವಕುಮಾರ್ ಸಿಎಂ ಆಗಿ ಪ್ರಮಾಣವಚನ: ಮಲ್ಲಿಕಟ್ಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ

ಮಂಗಳೂರು, ಜೂನ್ 4: ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಬುಧವಾರ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಮಂಗಳೂರಿನ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಈ ಸಂದರ್ಭದಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ತಮ್ಮ ಸಂತಸವನ್ನು ವ್ಯಕ್ತಪಡಿಸಿದರು. ಪಕ್ಷದ ಜಯಘೋಷಗಳೊಂದಿಗೆ ಕಾರ್ಯಕರ್ತರು ಹೊಸ ಮುಖ್ಯಮಂತ್ರಿ ಅವರಿಗೆ ಶುಭಾಶಯ ಕೋರಿದರು. ಸಂಭ್ರಮಾಚರಣೆಯಲ್ಲಿ ಮುಖಂಡರಾದ ಟಿ.ಕೆ. ಸುಧೀರ್, ಭರತೇಶ್ ಅಮೀನ್, ಜೀತೇಂದ್ರ ಜೆ. ಸುವರ್ಣ, ಯೋಗಿಶ್ ಕುಮಾರ್, ಉದಯ್ ಆಚಾರ್ಯ, ಹನೀಫ್…

Read More

ಸಾಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸೆಮಿಕಂಡಕ್ಟರ್ ಶಿಕ್ಷಣಕ್ಕೆ ಮತ್ತಷ್ಟು ಬಲ

ಮಂಗಳೂರು, ಜೂನ್ 3: ನಗರದ ಸಾಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಮ್ಯಾನೇಜ್‌ಮೆಂಟ್‌ (SCEM)ನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ (ECE) ವಿಭಾಗದಲ್ಲಿ ಸೆಮಿಕಂಡಕ್ಟರ್‌ ಕೇಂದ್ರಿತ ಶಿಕ್ಷಣಕ್ಕೆ ಮಹತ್ವದ ಉತ್ತೇಜನ ದೊರೆತಿದೆ. ಮೇ 30ರಂದು ನಡೆದ ವಿಭಾಗದ 7ನೇ ಅಧ್ಯಯನ ಮಂಡಳಿ (Board of Studies) ಸಭೆಯಲ್ಲಿ ಈ ಕುರಿತು ಮಹತ್ವದ ಬೆಳವಣಿಗೆಗಳು ಚರ್ಚೆಗೆ ಬಂದವು. ಸಭೆಯನ್ನು ಉದ್ದೇಶಿಸಿ ಆನ್‌ಲೈನ್ ಮೂಲಕ ಮಾತನಾಡಿದ ಆರ್‌ವಿ ಸ್ಕಿಲ್ಸ್ ಡಿಸೈನ್ ಸೆಂಟರ್‌ (VLSI Design Centre of Excellence)ನ ಮುಖ್ಯ…

Read More

ಯೂನಿವರ್ಸಿಟಿ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪ್ರವೇಶಾತಿ ಪ್ರಕ್ರಿಯೆ ಆರಂಭ

ಪತ್ರಿಕೋದ್ಯಮ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ, ಪ್ರಾಯೋಗಿಕ ತರಬೇತಿ ಹಾಗೂ ಉದ್ಯಮ ಸಂಪರ್ಕದೊಂದಿಗೆ ವೃತ್ತಿಪರ ಕೌಶಲ್ಯಗಳನ್ನು ಬೆಳೆಸುವ ಉದ್ದೇಶದಿಂದ ವಿವಿಧ ಸಂಯೋಜಿತ ಕೋರ್ಸ್‌ಗಳನ್ನು ಕಾಲೇಜು ನೀಡುತ್ತಿದೆ. ಪತ್ರಿಕೋದ್ಯಮ ವಿಭಾಗದಲ್ಲಿ ಇಂಗ್ಲಿಷ್ (ಐಚ್ಛಿಕ), ಪತ್ರಿಕೋದ್ಯಮ ಮತ್ತು ಅರ್ಥಶಾಸ್ತ್ರ; ಕನ್ನಡ (ಐಚ್ಛಿಕ), ಪತ್ರಿಕೋದ್ಯಮ ಮತ್ತು ಅರ್ಥಶಾಸ್ತ್ರ; ಹಿಂದಿ (ಐಚ್ಛಿಕ), ಪತ್ರಿಕೋದ್ಯಮ ಮತ್ತು ಅರ್ಥಶಾಸ್ತ್ರ; ಇತಿಹಾಸ, ಅರ್ಥಶಾಸ್ತ್ರ ಮತ್ತು ಪತ್ರಿಕೋದ್ಯಮ ಸೇರಿದಂತೆ ವಿವಿಧ ಸಂಯೋಜನೆಗಳ ಕೋರ್ಸ್‌ಗಳು ಲಭ್ಯವಿವೆ. ವಿದ್ಯಾರ್ಥಿಗಳಿಗೆ ಅನುಭವಿ ಬೋಧಕ ವರ್ಗ, ಪ್ರಾಯೋಗಿಕ ತರಬೇತಿ, ಆಧುನಿಕ ನ್ಯೂಸ್‌ರೂಂ…

Read More

ಬೀದಿ ಬದಿ ವ್ಯಾಪಾರಿಗಳ ವಿಚಾರದಲ್ಲಿ ಪಾಲಿಕೆ ವೈಫಲ್ಯ: ಎಎಪಿ ಆಕ್ರೋಶ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಪ್ರತ್ಯೇಕ ವ್ಯಾಪಾರ ವಲಯಗಳನ್ನು ಗುರುತಿಸಲು ವಿಫಲವಾಗಿರುವ ಪಾಲಿಕೆಯ ಕ್ರಮವನ್ನು ಆಮ್ ಆದ್ಮಿ ಪಾರ್ಟಿ (ಎಎಪಿ) ತೀವ್ರವಾಗಿ ಖಂಡಿಸಿದೆ. ನಗರದ ಪ್ರೆಸ್‌ಕ್ಲಬ್‌ನಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಎಪಿ ರಾಜ್ಯ ಉಪಾಧ್ಯಕ್ಷ ವಿವೇಕಾನಂದ ಸಾಲಿನ್ಸ್, ಪುರಭವನದ ಸಮೀಪ ಅನಧಿಕೃತ ಬೀದಿ ಬದಿ ವ್ಯಾಪಾರಿಗಳ ವಿಚಾರವಾಗಿ ಇತ್ತೀಚೆಗೆ ಸಾರ್ವಜನಿಕರಲ್ಲಿ ವ್ಯಕ್ತವಾದ ಆಕ್ರೋಶವು ಪಾಲಿಕೆಯ ಆಡಳಿತ ವೈಫಲ್ಯವನ್ನು ಬಯಲಿಗೆಳೆದಿದೆ ಎಂದು ಆರೋಪಿಸಿದರು. ನೈರ್ಮಲ್ಯದ ಕೊರತೆ, ಕಾಲುದಾರಿ ಅತಿಕ್ರಮಣ ಹಾಗೂ ಮಹಿಳೆಯರ ಸುರಕ್ಷತೆಗೆ…

Read More
error: Content is protected !!