ಟಿಪ್ಪು ಸುಲ್ತಾನ್ ಹೆಸರಲ್ಲಿ ಪ್ರಶಸ್ತಿ ನೀಡುವಂತೆ ಹಾಗು ಪಠ್ಯಪುಸ್ತಕಗಳಲ್ಲಿ ಟಿಪ್ಪು ಚರಿತ್ರೆ ಅಳವಡಿಸಿ, ಜನ್ಮದಿನ ಆಚರಣೆಗೆ ಕ್ರಮ ಕೈಗೊಳ್ಳಬೇಕು – ಮುಸ್ಲಿಂ ಲೀಗ್ ಒತ್ತಾಯ

ಮಂಗಳೂರು: ಟಿಪ್ಪು ಸುಲ್ತಾನ್ ಹೆಸರಲ್ಲಿ ಪ್ರಶಸ್ತಿ ನೀಡುವಂತೆ ಹಾಗು ಪಠ್ಯಪುಸ್ತಕಗಳಲ್ಲಿ ಟಿಪ್ಪು ಚರಿತ್ರೆ ಅಳವಡಿಸಿ, ಜನ್ಮದಿನ ಆಚರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಮುಸ್ಲಿಂ ಲೀಗ್ ಒತ್ತಾಯ ಮಾಡಿದೆ. ಶಹೀದ್ ಟಿಪ್ಪು ಸುಲ್ತಾನ್ ಅವರ ಜನ್ಮ ದಿನಾಚರಣೆಯನ್ನು ಆಚರಿಸುವುದರೊಂದಿಗೆ ಶಾಲಾ ಕಾಲೇಜುಗಳ ಪುಸ್ತಕಗಳಲ್ಲಿ ಅವರ ಚರಿತ್ರೆಯನ್ನು ಅಳವಡಿಸಬೇಕು. ಸಾಹಸಿಗರಿಗೆ ಅವರ ಹೆಸರಲ್ಲಿ ಪ್ರಶಸ್ತಿಯನ್ನು ಕೊಡಬೇಕು ಎನ್ನುವುದು ಮುಸ್ಲಿಂ ಲೀಗಿನ ಬೇಡಿಕೆಯಾಗಿದೆ. ಒಂದು ವೇಳೆ ನಮ್ಮ ಬೇಡಿಕೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಿದರೆ, ಬಿಜೆಪಿ ಹೇಗೆ ಪತನಗೊಂಡಿತೋ ಅದೇ ರೀತಿ ಕಾಂಗ್ರೆಸ್…

Read More

ಮಂಗಳಾ ಕ್ರೀಡಾಂಗಣದಲ್ಲಿ ಮಂಗಳೂರು ದಕ್ಷಿಣ ವಲಯ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪೌಢ ಶಾಲಾ ಬಾಲಕ-ಬಾಲಕಿಯರ ಕ್ರೀಡಾಕೂಟ 2025-26

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮಂಗಳೂರು ದಕ್ಷಿಣ ವಲಯ ಮತ್ತು ನಿತ್ಯಾಧರ್ ಆಂಗ್ಲ ಮಾಧ್ಯಮ ಶಾಲೆ ಪೆರ್ಮನ್ನೂರು ಸಂಯುಕ್ತ ಆಶ್ರಯದಲ್ಲಿ ಮಂಗಳೂರು ದಕ್ಷಿಣ ವಲಯ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪೌಢ ಶಾಲಾ ಬಾಲಕ-ಬಾಲಕಿಯರ ಕ್ರೀಡಾಕೂಟ 2025-26 ಮಂಗಳೂರು ಮಂಗಳಾ ಕ್ರೀಡಾಂಗಣದಲ್ಲಿ ಮಂಗಳವಾರ ನಡೆಯಿತು. ನಿತ್ಯಾಧರ್ ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕ ವಂದನೀಯ ಫಾದರ್ ಆಂಟೋನಿ ಲಸ್ರಾದೋ ಕ್ರೀಡಾಕೂಟವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಕ್ರೀಡೆ ಎಂಬುದು…

Read More

ವ್ಯಾಟಿಕನ್‌ನ ಭಾರತ ಮತ್ತು ನೇಪಾಳದ ಡೆಪ್ಯುಟಿ ರಾಯಭಾರಿ ಫಾ.ಆ್ಯಂಡ್ರಿಯಾ ಫಾನ್ರಿಯಾ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ .

ವ್ಯಾಟಿಕನ್‌ನ ಭಾರತ ಮತ್ತು ನೇಪಾಳದ ಡೆಪ್ಯುಟಿ ರಾಯಭಾರಿ ಫಾ.ಆ್ಯಂಡ್ರಿಯಾ ಫಾನ್ರಿಯಾ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿದರು. ಕ್ಷೇತ್ರದ ಇತಿಹಾಸದ ಬಗ್ಗೆ ಮಾಹಿತಿ ಪಡೆದ ಅವರು ಹರ್ಷ ವ್ಯಕ್ತಪಡಿಸಿದರು. ಬೆಳ್ತಂಗಡಿ ಧರ್ಮ ಪ್ರಾಂತ್ಯದ ‌ಪ್ರಧಾನ ಧರ್ಮಗುರು ಫಾ.ಜೋಸೆಫ್, ಬಿಜು ಎಂ. ಜೋಸೆಫ್ ಮಂಗಳೂರು, ಮನೋಜ್ ಜತೆಗಿದ್ದರು. ಅವರನ್ನು ಕ್ಷೇತ್ರದ ವತಿಯಿಂದ ಗೌರವಿಸಲಾಯಿತು. ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಜೈರಾಜ್ ಎಚ್. ಸೋಮಸುಂದರಂ, ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ, ಮಾಜಿ ಕಾರ್ಪೋರೆಟರ್ ಪ್ರವೀಣ್‌ಚಂದ್ರ ಆಳ್ವ, ದಿನೇಶ್ ಅಂಚನ್ ಅವರನ್ನು‌…

Read More

ಕರ್ನಾಟಕ ಪ್ರೌಢ ಶಾಲೆ ಮಾಣಿ: ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸಾಹಿತ್ಯ ರಚನಾ ಕಮ್ಮಟ- ಕವಿಗೋಷ್ಠಿ

ಕರ್ನಾಟಕ ರಾಜ್ಯ ಬರಹಗಾರರ ವೇದಿಕೆ (ರಿ) ಹೂವಿನಹಡಗಲಿ ದ.ಕ. ಕನ್ನಡ ಜಿಲ್ಲೆ, ಬಂಟ್ವಾಳತಾಲೂಕು ಘಟಕ, ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು (ರಿ) ಹುಬ್ಬಳ್ಳಿ – ತಾಲೂಕು ಸಮಿತಿ ಬಂಟ್ವಾಳ ಹಾಗೂ ಕರ್ನಾಟಕ ಪ್ರೌಢಶಾಲೆ ಮಾಣಿ ಇವುಗಳ ಸಹಭಾಗಿತ್ವದಲ್ಲಿ 70ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಸಾಹಿತ್ಯ ರಚನಾ ಕಮ್ಮಟ ಹಾಗೂ ಕವಿಗೋಷ್ಠಿ ಕಾರ್ಯಕ್ರಮ ನಡೆಯಿತು.ನಿವೃತ್ತ ಸಂಸ್ಕೃತ ಶಿಕ್ಷಕ ಶಿರಂಕಲ್ಲು ಕೃಷ್ಣ ಭಟ್ ಉದ್ಘಾಟಿಸಿದರು. ‘ಸಾಹಿತ್ಯದ ಅಭಿರುಚಿ ಮನೆಯಿಂದ ಆರಂಭವಾಗಿ ಶಾಲೆಯಲ್ಲಿ ಉನ್ನತಿ ಹೊಂದಿ ಸಮಾಜದಲ್ಲಿ ಪ್ರಸ್ತುತಿಗೊಳ್ಳಬೇಕು. ಭೂಮಿಗೆ…

Read More

ನಟೋರಿಯಸ್ ರೌಡಿಶೀಟರ್ ಟೋಪಿ ನೌಫಾಲ್ ಕೊಲೆ ಪ್ರಕರಣಕ್ಕೆ ಇನ್ನಷ್ಟು ಟ್ವಿಸ್ಟ್ …. !

ಮಂಗಳೂರು ನಗರ ವ್ಯಾಪ್ತಿಯ ನಟೋರಿಯಸ್ ರೌಡಿಶೀಟರ್ ಟೋಪಿ ನೌಫಾಲ್(42) ಕೊಲೆಯಾಗಿದ್ದಲ್ಲ. ರೈಲು ಡಿಕ್ಕಿಯಾಗಿ ಸಾವನ್ನಪ್ಪಿದ್ದಾಗಿ ಮೃತದೇಹದ ಪೋಸ್ಟ್ ಮಾರ್ಟಂ ನಡೆಸಿದ ಕಾಸರಗೋಡಿನ ವೈದ್ಯರು ಮಾಹಿತಿ ನೀಡಿದ್ದಾರೆ. ಶನಿವಾರ ಬೆಳಗ್ಗೆ ಮಂಜೇಶ್ವರ ಠಾಣೆ ವ್ಯಾಪ್ತಿಯ ಉಪ್ಪಳ ರೈಲ್ವೇ ಗೇಟ್ ಬಳಿಯಲ್ಲಿ ನೌಫಾಲ್ ಮೃತದೇಹ ಲಭಿಸಿತ್ತು. ನೌಫಾಲ್ ಮಂಗಳೂರಿನ ವಿವಿಧ ಠಾಣೆಗಳಲ್ಲಿ 20ಕ್ಕೂ ಹೆಚ್ಚು ಕೇಸುಗಳನ್ನು ಎದುರಿಸುತ್ತಿದ್ದುದರಿಂದ ಯಾರೋ ಮಾತುಕತೆಗೆ ಕರೆದು ಕೊಲೆ ಮಾಡಿದ್ದಾರೆಂದು ಮಾಹಿತಿ ಲಭಿಸಿತ್ತು. ಕುತ್ತಿಗೆ, ತಲೆಯಲ್ಲಿ ರಕ್ತ ಜಿನುಗಿದ್ದು ಹೊಡೆದು ಹಾಕಿದ ರೀತಿಯ ಕಲೆಗಳಿದ್ದುದರಿಂದ ಯಾರೋ…

Read More

ಕಾರ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ಸವಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವು

ಮಂಗಳೂರು : ಕಾರ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ಸವಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ಘಟನೆ ಕಿನ್ನಿಗೋಳಿ-ಎಸ್.ಕೋಡಿ ಬಳಿಯ ರೋಹನ್ ಎಸ್ಟೇಟ್ ಮುಂಭಾಗ ನಡೆದಿದೆ. ಘಟನೆಯಲ್ಲಿ ಮುಲ್ಕಿ ಪುನರೂರು ಮೊಗೇರ ದೈವಸ್ಥಾನ ಬಳಿಯ ನಿವಾಸಿಗಳಾದ ಸುರೇಂದ್ರ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದರು. ರವಿವಾರ ಸಂಜೆ ಸಾವನ್ನಪ್ಪಿದ್ದು ಹಿಂಬದಿ ಸವಾರ ಸಂದೀಪ್ ಯಾನೆ ಲೋಲಾಕ್ಷ ಎಂಬವರಿಗೆ ಅಲ್ಪಪ್ರಮಾಣದ ಗಾಯಗಳಾಗಿವೆ. ಗಾಯಾಳುಗಳು ಎಸ್. ಕೋಡಿಯಾಗಿ ಹಳೆಯಂಗಡಿ ಕಡೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ಅತಿಯಾದ…

Read More

ರೌಡಿಶೀಟರ್ ಟೊಪ್ಪಿ ನೌಫಲ್ ಹತ್ಯೆ ಪ್ರಕರಣದ ಸುತ್ತ ನೂರಾರು ಅನುಮಾನದ ಹುತ್ತ

ಮಂಗಳೂರು: ಉಪ್ಪಳ ರೈಲ್ವೆ ಗೇಟ್ ಬಳಿ ನಿಗೂಢವಾಗಿ ಹತ್ಯೆಗೀಡಾದ ಸ್ಥಿತಿಯಲ್ಲಿ ಪತ್ತೆಯಾದ ರೌಡಿಶೀಟರ್ ಬಜಾಲ್ ನಿವಾಸಿ ಟೊಪ್ಪಿ ನೌಫಲ್ ಪ್ರಕರಣದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ. ಆತನ ಶವವನ್ನು ಪೊಲೀಸರು ಕಾಸರಗೋಡು ಜನರಲ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಮರಣೋತ್ತರ (ಪೋಸ್ಟ್ ಮಾರ್ಟಂ) ಪರೀಕ್ಷೆ ನಡೆಸಿ ಶವವನ್ನು ಮೃತನ ಕುಟುಂಬದ ಸದಸ್ಯರಿಗೆ ಹಸ್ತಾಂತರಿಸಲಾಗಿದೆ. ಮೂಲಗಳ ಪ್ರಕಾರ ಟೊಪ್ಪಿಯ ತಲೆ ಹಾಗೂ ಕುತ್ತಿಗೆ ಭಾಗದಲ್ಲಿ ಗಂಭೀರ ಗಾಯಗಳು ಕಂಡು ಬಂದಿರುವುದರಿಂದ ಇದೊಂದು ವ್ಯವಸ್ಥಿತ ಕೊಲೆಯಾಗಿರುವ ಬಗ್ಗೆ, ಪೊಲೀಸರು ಅನುಮಾನಿಸಿದ್ದಾರೆ. ಶವದ ಪ್ಯಾಂಟ್…

Read More

ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ವತಿಯಿಂದ ಬಲಿದಾನ ದಿವಸ ಪ್ರಯುಕ್ತ ರಕ್ತದಾನ ಶಿಬಿರ

02 ನವೆಂಬರ್ 1990 ರಂದು ಅಯೋಧ್ಯೆಯಲ್ಲಿ ಶ್ರೀ ರಾಮ ಜನ್ಮಭೂಮಿ ಹೋರಾಟದ ಕರಸೇವೆಯಲ್ಲಿ ಪ್ರಾಣಾರ್ಪಣೆಗೈದ ಬಜರಂಗದಳದ ಕಾರ್ಯಕರ್ತರಾದ ರಾಮ್ ಕೊಠಾರಿ ಮತ್ತು ಶರದ್ ಕೊಠಾರಿ ಸಹೋದರರ ಬಲಿದಾನವನ್ನು ಸ್ಮರಿಸುವ ಸಲುವಾಗಿ ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಪುತ್ತೂರು ನಗರ ಮತ್ತು ಗ್ರಾಮಾಂತರ ಪ್ರಖಂಡದ ವತಿಯಿಂದ ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಪುತ್ತೂರು ಇಲ್ಲಿ ರಕ್ತದಾನ ಶಿಬಿರ ನಡೆಯಿತು. ಹಿಂದೂ ಮುಖಂಡರಾದ ಮುರಳೀಕೃಷ್ಣ ಹಸಂತಡ್ಕ, ಖ್ಯಾತ ವೈದ್ಯರಾದ ಸುರೇಶ್ ಪುತ್ತೂರಾಯ ಸಹಿತ ಒಟ್ಟು 33 ಜನ ಕಾರ್ಯಕರ್ತರು ರಕ್ತದಾನ…

Read More

ಸಹ್ಯಾದ್ರಿ ಇಂಜಿನಿಯರಿಂಗ್ ಹಾಗೂ ಮ್ಯಾನೇಜ್‌ಮೆಂಟ್ ಕಾಲೇಜು ಮಂಗಳೂರಿನಲ್ಲಿ “ಸಿನರ್ಜಿಯಾ 2025” ವಿಜ್ಞಾನ ಕೌಶಲ್ಯ ಮೇಳ … !

ಮಂಗಳೂರು: ಸಹ್ಯಾದ್ರಿ ಇಂಜಿನಿಯರಿಂಗ್ ಹಾಗೂ ಮ್ಯಾನೇಜ್‌ಮೆಂಟ್ ಕಾಲೇಜು, ಮಂಗಳೂರು, “ಶೈನ್ ಫೌಂಡೇಶನ್” ಸಹಯೋಗದೊಂದಿಗೆ “ಸಿನರ್ಜಿಯಾ 2025” ಎಂಬ ರಾಷ್ಟ್ರೀಯ ಮಟ್ಟದ ಸೃಜನಾತ್ಮಕ ನವೋದ್ಯಮ ಮೇಳವು ನವೆಂಬರ್ 6ರಿಂದ 8ರವರೆಗೆ ನಡೆಯಲಿದ್ದು , ಈ ಕಾರ್ಯಕ್ರಮವು ವಿಜ್ಞಾನ, ತಂತ್ರಜ್ಞಾನ ಹಾಗೂ ಸೃಜನಶೀಲತೆಯ ಸಂಯೋಜನೆಯ ಮೂಲಕ ಸಾಮಾಜಿಕ ಸವಾಲುಗಳಿಗೆ ಪರಿಹಾರ ಕಂಡುಹಿಡಿಯುವ ವೇದಿಕೆಯಾಗಿ ಪರಿವರ್ತನೆಗೊಳ್ಳಲಿದೆ ಎಂದು ಸಹ್ಯಾದ್ರಿ ಇಂಜಿನಿಯರಿಂಗ್ ಹಾಗೂ ಮ್ಯಾನೇಜ್‌ಮೆಂಟ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಸ್. ಎಸ್. ಇಂಜಗನೇರಿ ತಿಳಿಸಿದರು . ಅವರು ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ…

Read More

ತೆಂಗಿನಕಾಯಿ ಕೀಳುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೋರ್ವ ಸಾವು

ಬಂಟ್ವಾಳ: ತೆಂಗಿನಕಾಯಿ ಕೀಳುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ವಿಟ್ಲದ ಅಳಿಕೆಯಲ್ಲಿ ನಡೆದಿದೆ.ಅಳಿಕೆ ಗ್ರಾಮದ ಇಬ್ರಾಹಿಂ ಉಸ್ತಾದ್ ಅವರ ಪುತ್ರ ಇಸ್ಮಾಯಿಲ್(37) ಮೃತ ವ್ಯಕ್ತಿ. ಇಸ್ಮಾಯಿಲ್ ಕಬ್ಬಿಣದ ದೋಟಿ ಬಳಸಿ ತೆಂಗಿನ ಮರದಿಂದ ತೆಂಗಿನಕಾಯಿ ಕೀಳುತ್ತಿದ್ದ ವೇಳೆ ದೋಟಿ ವಿದ್ಯುತ್ ತಂತಿಗೆ ಸ್ಪರ್ಶಿಸಿದ್ದು, ಈ ವೇಳೆ ವಿದ್ಯುತ್ ಪ್ರವಹಿಸಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದರು.ಮೃತರು ಪತ್ನಿ, ಪುತ್ರಿ, ಪುತ್ರ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Read More
error: Content is protected !!