ಸಂತ ಮದರ್ ತೆರೇಸಾರವರ 28ನೇ ಸಂಸ್ಕರಣಾ ದಿನಾಚರಣೆಯ ಅಂಗವಾಗಿ ಸೆ.11ರಂದು ದ.ಕ. ಜಿಲ್ಲಾ ಮಟ್ಟದ ವಿಚಾರ ಸಂಕಿರಣವು ಜರುಗಲಿದೆ – ರೋಯ್ ಕ್ಯಾಸ್ಟಲಿನೋ .

ಮಂಗಳೂರು:: ಸಂತ ಮದರ್ ತೆರೇಸಾ ವಿಚಾರ ವೇದಿಕೆ ಮಂಗಳೂರು: ಇದರ ಆಶ್ರಯದಲ್ಲಿ ‘ಪ್ರೀತಿ ಹರಡಲಿ ಎಲ್ಲೆಡೆ’ ಎಂಬ ಘೋಷವಾಕ್ಯದೊಂದಿಗೆ ಮಾನವೀಯತೆಯ ಪ್ರತಿರೂಪ ಸಂತ ಮದರ್ ತೆರೇಸಾರವರ 28ನೇ ಸಂಸ್ಕರಣಾ ದಿನಾಚರಣೆಯ ಅಂಗವಾಗಿ ಸೆ.11ರಂದು ಬೆಳಿಗ್ಗೆ 10ಕ್ಕೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ‘ಸಹಬಾಳ್ವೆಗೆ ಎದುರಾಗಿರುವ ಅಪಾಯಗಳು, ಪ್ರಜಾಪ್ರಭುತ್ವದ ಮುಂದಿರುವ ಸವಾಲುಗಳು’ ಎಂಬವಿಷಯದಲ್ಲಿ ದ.ಕ. ಜಿಲ್ಲಾ ಮಟ್ಟದ ವಿಚಾರ ಸಂಕಿರಣವು ಜರುಗಲಿದೆ ಎಂದು ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಅಧ್ಯಕ್ಷರಾದ ರೋಯ್ ಕ್ಯಾಸ್ಟಲಿನೋ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು….

Read More

ಕೂಳೂರು ರಸ್ತೆ ಗುಂಡಿಯಿಂದಾಗಿ ಲಾರಿ ಚಕ್ರದಡಿ ಸಿಲುಕಿ ಯುವತಿ ದಾರುಣ ಸಾವು!!

ಮಂಗಳೂರು:: ರಾಷ್ಟ್ರೀಯ ಹೆದ್ದಾರಿ 66 ರ ಕೂಳೂರು ರಾಯಲ್ ಓಕ್ ಮುಂಭಾಗದಲ್ಲಿ ರಸ್ತೆ ಗುಂಡಿಗೆ ಸಿಲುಕಿ ಸ್ಕೂಟರ್ ನಿಂದ ಉರುಳಿ ಬಿದ್ದ ಮಹಿಳೆಯ ಮೇಲೆ ಲಾರಿ ಹರಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ, 8:30 ಗಂಟೆ ಸುಮಾರಿಗೆ ನಡೆದಿದೆ . ಘಟನೆಯ ಪರಿಣಾಮ ಮೂಲತ: ಮಣಿಪಾಲ ವರ್ಕಳ ನಿವಾಸಿ ಸದ್ಯ ಚಿತ್ರಾಪುರದಲ್ಲಿ ನೆಲೆಸಿದ್ದ ಮಾಧವಿ (37) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇವರು ಎಜೆ ಆಸ್ಪತ್ರೆಯಲ್ಲಿ ಬ್ಲಡ್ ಬ್ಯಾಂಕ್ ಟೆಕ್ನಿಷಿಯನ್ ಆಗಿದ್ದು ಬೆಳಗ್ಗೆ ಕರ್ತವ್ಯಕ್ಕೆ ಹಾಜರಾಗುವಾಗ ಘಟನೆ…

Read More

ರಾಷ್ಟ್ರೀಯ ವಿಚಾರಗೋಷ್ಠಿಯು ಸೆ. 11,12 ರಂದು ಕೊಂಕಣಿ ಭಾಷೆಯಲ್ಲಿ ನಡೆಯಲಿದೆ-ಡಾ ಆಲ್ಮಿನ್ ಡೇಸಾ

ಮಂಗಳೂರು: ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ತು (AICTE) ಇವರ ಸಹಯೋಗದೊಂದಿಗೆ ಸಂತ ಅಲೋಸಿಯಸ್ ಪರಿಗಣಿತ ವಿಶ್ವವಿದ್ಯಾಲಯ ಮಂಗಳೂರು. ಇಲ್ಲಿ ಸ್ಮಾರ್ಟ್ ವೈದ್ಯಕೀಯ ಉಪಕರಣಗಳು ಮತ್ತು ತಂತ್ರಜ್ಞಾನಗಳ ಮೂಲಕ ಆರೋಗ್ಯ ಸುಧಾರಿಸುವುದು ಎಂಬ ಶೀರ್ಷಿಕೆಯಡಿಯಲ್ಲಿ ಎರಡು ದಿನಗಳ ರಾಷ್ಟ್ರೀಯ ವಿಚಾರಗೋಷ್ಠಿಯು ಸೆಪ್ಟೆಂಬರ್ 11 ಮತ್ತು 12, 2025 ರಂದು ಕೊಂಕಣಿ ಭಾಷೆಯಲ್ಲಿ ನಡೆಯಲಿದೆ ಎಂದು ಸಂತ ಅಲೋಸಿಯಸ್ ಸ್ನಾಯತ್ತ ಕಾಲೇಜಿನ ಕುಲ ಸಚಿವರಾದ ಡಾ ಆಲ್ಮಿನ್ ಡೇಸಾ ತಿಳಿಸಿದರು . ಅವರು ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ…

Read More

ದಕ್ಷಿಣ ಏಷ್ಯಾದಲ್ಲೇ ಪ್ರಥಮ ಅರ್ಥೊಪೆಡಿಕ್ ರೊಬೊಟಿಕ್ ಸರ್ಜರಿ ವ್ಯವಸ್ಥೆ ಆರಂಭಗೊಂಡಿದೆ-ಡಾ. ಮುಹಮ್ಮದ್ ತಾಹಿರ್

ಮಂಗಳೂರು: ದಕ್ಷಿಣ ಏಷ್ಯಾದಲ್ಲೇ ಪ್ರಥಮ ಅರ್ಥೊಪೆಡಿಕ್ ರೊಬೊಟಿಕ್ ಸರ್ಜರಿ ವ್ಯವಸ್ಥೆಯು ಮಂಗಳೂರಿನ ಯೆನೆಪೋಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಆರಂಭಗೊಂಡಿದೆ ಎಂದು ಯೆನೆಪೋಯ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಮುಹಮ್ಮದ್ ತಾಹಿರ್ ಹೇಳಿದರು . ಅವರು ಕೊಡಿಯಾಲ್ ಬೈಲ್ ನಲ್ಲಿರುವ ಯೆನೆಪೋಯ ಆಸ್ಪತ್ರೆ ಹಾಲ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ , ಇದು ಮಂಡಿ ಬದಲಾವಣೆ ಆಪರೇಷನ್ ನಲ್ಲಿ ಕ್ರಾಂತಿ ಉಂಟುಮಾಡಲಿದೆ . ಏವೊಲ್ಯೂಷನ್ ಮೀಡಿಯಲ್ ಪೈವೊಟ್ ಬೀ ಸಿಸ್ಟಮ್ ಜೊತೆಗೆ ಕೆಲಸ ಮಾಡುವಂತೆ ವಿನ್ಯಾಸಗೊಂಡ ಜಗತ್ತಿನ ಏಕೈಕ…

Read More

ಗೋಹತ್ಯೆಯನ್ನು ಖಂಡಿಸಿ ಬೃಹತ್ ಪ್ರತಿಭಟನೆ. ದ್ವೇಷ ಭಾಷಣ ಮಾಡಿದ ಆರೋಪದಲ್ಲಿ ಹಿಂದುತ್ವ ಸಂಘಟನೆಯ ಮುಖಂಡನ ವಿರುದ್ಧ ಪ್ರಕರಣ ದಾಖಲು.

ಗೋಹತ್ಯೆಯನ್ನು ಖಂಡಿಸಿ ಗೋ ಮಾತಾ ಸಂರಕ್ಷಣಾ ಚಳವಳಿ ಪೆರ್ನೆ ಇದರ ವತಿಯಿಂದ ಗೋ ಹತ್ಯೆಯನ್ನು ಖಂಡಿಸಿ ಸೆ.6ರಂದು ದಕ್ಷಿಣ ಕನ್ನಡ ಜಿಲ್ಲೆಯ ಪೆರ್ನೆ ಗ್ರಾಮದ ಕಡಂಬುವಿನ ಕಾರ್ಲ ರಾಮದ್ವಾರದ ಬಳಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ದ್ವೇಷ ಭಾಷಣ ಮಾಡಿದ ಆರೋಪದಲ್ಲಿ ಹಿಂದುತ್ವ ಸಂಘಟನೆಯ ಮುಖಂಡ ಗಣರಾಜ್ ಭಟ್ ಕೆದಿಲ ಎಂಬಾತನ ವಿರುದ್ಧ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಪ್ರತಿಭಟನೆಯಲ್ಲಿ ಮಾತನಾಡಿದ ಗಣರಾಜ್ ಭಟ್ ಕೆದಿಲ ಸ್ಥಳೀಯವಾಗಿ ಧಾರ್ಮಿಕ, ಸಮುದಾಯಿಕವಾಗಿ ದ್ವೇಷ ಭಾವನೆ ಹುಟ್ಟಿಸುವ ಉದ್ದೇಶದಿಂದ ಗುಂಪು ಗುಂಪುಗಳ,…

Read More

ಜಿಲ್ಲಾ ಮಟ್ಟದ ದಸರಾ ಹ್ಯಾಂಡ್ ಬಾಲ್ ಕ್ರೀಡಾಕೂಟದಲ್ಲಿ ಪ್ರಶಸ್ತಿ

ಮಂಗಳೂರು: ಮಂಗಳಾ ಕ್ರೀಡಾಂಗಣದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಹ್ಯಾಂಡ್ ಬಾಲ್ ಕ್ರೀಡಾ ಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಹ್ಯಾಂಡ್ ಬಾಲ್ ಅಸೋಶಿಯನ್ ನ ಪುರುಷ ಮತ್ತು ಮಹಿಳಾ ತಂಡಗಳು ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿ ಎರಡು ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ದಕ್ಷಿಣಕನ್ನಡ ಜಿಲ್ಲೆಯ ಹ್ಯಾಂಡ್ ಬಾಲ್ ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಹ್ಯಾಂಡ್ ಬಾಲ್ ಸಂಸ್ಥೆಯ ಅಧ್ಯಕ್ಷರು ಮತ್ತು ಕರ್ನಾಟಕ ಹ್ಯಾಂಡ್ ಬಾಲ್ ಸಂಸ್ಥೆಯ ಉಪಾಧ್ಯಕ್ಷರಾದ ಡಾ ಆರ್…

Read More

7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಪೊಲೀಸರು ಬಂಧಿಸಿದ್ದಾರೆ. ಸುಳ್ಯ ಪೊಲೀಸ್ ಠಾಣಾ ಅಕ್ರ 115/2018 ಕಲಂ 504, 354(a) ಐಪಿಸಿ ಪ್ರಕರಣದಲ್ಲಿನ ಆರೋಪಿ ರವಿಂದ್ರ ಬಿ.ಎನ್ ಎಂಬವರು ಸುಮಾರು 7 ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದರು. ಹೀಗಾಗಿ LPC No 04/2023 ರಂತೆ ವಾರೆಂಟ್ ಹೊರಡಿಸಿದ್ದು LPC ವಾರೆಂಟ್ ಆಸಾಮಿಯಾದ ರವೀಂದ್ರ ಎಂಬಾತ ನನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ವೇದಾವತಿ ನಗರ ಎಂಬಲ್ಲಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಯ್ತು.

Read More

ಬೃಹತ್ ಜನಾಗ್ರಹ ಸಭೆಯಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ಭಾಗವಹಿಸಿ:- ಶಾಸಕ ಕಾಮತ್

ಕಾನೂನಿನ ನೆಪದಲ್ಲಿ ತುಳುನಾಡಿನ ಸಾಂಸ್ಕೃತಿಕ ಹಾಗೂ ಹಿಂದೂ ಧಾರ್ಮಿಕ ಆಚರಣೆಗಳಿಗೆ ತಡೆಯೊಡ್ಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನಡೆಯನ್ನು ಖಂಡಿಸಿ, ವಿಶ್ವ ಹಿಂದೂ ಪರಿಷದ್ ಹಾಗೂ ತುಳುನಾಡ ಧಾರ್ಮಿಕ ಸಾಂಸ್ಕೃತಿಕ ವೈಭವ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ನಡೆಯುವ ಬೃಹತ್ ಜನಾಗ್ರಹ ಸಭೆಗೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶಾಸಕ ವೇದವ್ಯಾಸ ಕಾಮತ್ ರವರು ಮನವಿ ಮಾಡಿದರು. ಕಳೆದ ಕೆಲವಾರು ದಿನಗಳಿಂದ ಹಿಂದೂ ಹಬ್ಬ ಹರಿದಿನಗಳ ಸಂದರ್ಭದಲ್ಲಿ ರಾಜ್ಯ ಸರ್ಕಾರವು ಪೊಲೀಸರ ಮೂಲಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅರ್ಧಕ್ಕೆ ನಿಲ್ಲಿಸುವುದು,…

Read More

“ಅನುಭವಿ ಮತ್ತು ವಂಶಪಾರಂಪರಿಕ ವೈದ್ಯರು’ಗಳನ್ನು “ನಕಲಿ” ವೈದ್ಯರೆಂದು ಕೆರೆದು ಕಾನೂನು ದಬ್ಬಾಳಿಕೆ ಮಾಡುತ್ತಿದೆ. -ಬಿ.ಎಸ್ ಚಂದ್ರು

ಮಂಗಳೂರು: ದೇಶದಲ್ಲಿಯೇ ಕರ್ನಾಟಕ ಸರ್ಕಾರ ಮಾತ್ರ ಕರ್ನಾಟಕ ಖಾಸಗಿ ವೈದ್ಯಕೀಯ ಅಧಿನಿಯಮ 2007 ಮತ್ತು ತಿದ್ದುಪಡಿಗಳನ್ನು ಜಾರಿಗೆ ತಂದು ರಾಜ್ಯದಲ್ಲಿ ಸರ್ಕಾರದ ಫಲಪೇಕ್ಷೆಯಿಲ್ಲದೆ, ಜನ ಸಾಮಾನ್ಯರಿಗೆ ಅತಿ ಕಡಿಮೆ ವೆಚ್ಚದಲ್ಲಿ ಸೇವೆ ನೀಡುತ್ತಿರುವ “ಅನುಭವಿ ಮತ್ತು ವಂಶಪಾರಂಪರಿಕ ವೈದ್ಯರು’ಗಳನ್ನು “ನಕಲಿ” ವೈದ್ಯರೆಂದು ಕೆರೆದು ಕಾನೂನು ಕಠಣಗೊಳಿಸಿ ಅವರ ಬದುಕಿನ ಮೇಲೆ ದಬ್ಬಾಳಿಕೆ ಮಾಡುತ್ತಿರುವ ಸರ್ಕಾರದ ಕ್ರಮವನ್ನು ಸಂಸ್ಥೆಯ ಪ್ರಧಾನ ಸಂಯೋಜಕರಾದ ಬಿ.ಎಸ್ ಚಂದ್ರು ಖಂಡಿಸಿದರು . ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಕರ್ನಾಟಕ ರಾಜ್ಯ…

Read More

ತುಳು ಸಿನಿಮಾ ‘ಪಿದಾಯಿ’ ಸೆಪ್ಟೆಂಬರ್ 12ನೇ ತಾರೀಕಿನಂದು ತೆರೆಗೆ

ಮಂಗಳೂರು: ನಮ್ಮ ಕನಸು ಬ್ಯಾನರ್ ಅಡಿಯಲ್ಲಿ ಕೆ. ಸುರೇಶ್ ಅವರ ನಿರ್ಮಾಣದ , ರಮೇಶ್ ಶೆಟ್ಟಿಗಾರ್ ಕಥೆ ಬರೆದು, ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಸಂತೋಷ್ ಮಾಡ ನಿರ್ದೇಶನದಲ್ಲಿ ಮೂಡಿ ಬಂದ ತುಳು ಸಿನಿಮಾ ಪಿದಾಯಿ ಸೆಪ್ಟೆಂಬರ್ 12ನೇ ತಾರೀಕಿನಂದು ಕರಾವಳಿಯಾದ್ಯಂತ ಬೆಳ್ಳಿ ತೆರೆಯ ಮೇಲೆ ಬಿಡುಗಡೆಯಾಗಲಿದೆ‌ ಎಂದು ನಟಿ ರೂಪಾ ವರ್ಕಾಡಿ ತಿಳಿಸಿದರು . ಪಿದಾಯಿ ಚಿತ್ರವು ಕೊಲ್ಕತ್ತ, ಸಿಮ್ಮಾ, ಜಾರ್ಖಂಡ್‌ ಹಾಗೂ ಕ್ಯಾಲಿಫೋರ್ನಿಯಾ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಅಧಿಕೃತ ಆಯ್ಕೆಯಾಗುವುದರ ಜೊತೆಗೆ 16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ…

Read More
error: Content is protected !!