ಮಾರ್ಗದೀಪ ಸಾಂಸ್ಕೃತಿಕ ಸಮಿತಿ ದುಬೈ ವತಿಯಿಂದ ನಡೆದ ಹನ್ನೊಂದನೇ ವರ್ಷದ ಗಣೇಶೋತ್ಸವ.
ದುಬೈ : ಮಾರ್ಗದೀಪ ಸಾಂಸ್ಕೃತಿಕ ಸಮಿತಿ ದುಬೈ ಇದರ ವತಿಯಿಂದ ನಡೆದ 11ನೇ ವರ್ಷದ ಸಾರ್ವಜನಿಕ ಗಣೇಶೋತ್ಸವವು ಆಗಸ್ಟ್ 31ರಂದು ಆದಿತ್ಯವಾರ ಇಂಡಿಯನ್ ಅಸೋಸಿಯೇಷನ್ ಹಾಲ್ ಅಜ್ಮಾನ್ ನಲ್ಲಿ ಸಾಂಸ್ಕೃತಿಕ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನೆರವೇರಿತು. ಪುರೋಹಿತರಾದ ಸಂತೂರ್ ಶ್ರೀ ಲಕ್ಷ್ಮಿಕಾಂತ್ ಭಟ್ ಹಾಗೂ ಶ್ರೀ ರಾಜೇಶ್ ಅಡಿಗರವರ ನೇತೃತ್ವದಲ್ಲಿ ಪೂಜಾ ವಿಧಿ ವಿಧಾನಗಳನ್ನು ನಡೆಸಿದರು.ಬೆಳಿಗ್ಗೆ ಗಣಹೋಮದೊಂದಿಗೆ ಪ್ರಾರಂಭವಾದ ಕಾರ್ಯಕ್ರಮ ಮಧ್ಯಾಹ್ನ ಮಹಾಪೂಜೆ ಮಹಾ ಅನ್ನದಾನದಲ್ಲಿ ಸಹಸ್ರ ಭಕ್ತಾದಿಗಳು ಪಾಲ್ಗೊಂಡು ಸಂಜೆ ವಿಸರ್ಜನಾ ಮೆರವಣಿಗೆ ನಡೆಯಿತು. ನಡೆದ ಸಭಾ…