ದಾನಿಗಳ ನೆರವಿನಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ: ಕನ್ನಡ ಶಾಲೆಗಳ ಉಳಿವಿಗೆ ಅರ್ಥಪೂರ್ಣ ಹೆಜ್ಜೆ
ಮುಡಿಪು: ದಾನಿಗಳ ಸಹಕಾರವೇ ಆಧಾರವಾಗಿರುವ ಭಾರತಿ ಅನುದಾನಿತ ಶಾಲೆ, ಮುಡಿಪು ಕುರ್ನಾಡಿನಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಪುಸ್ತಕ, ಪೆನ್ನು ಹಾಗೂ ಬಳಪ ವಿತರಿಸುವ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯಿತು. ಕನ್ನಡ ಶಾಲೆಗಳನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಈ ಸೇವಾ ಕಾರ್ಯ ಕೈಗೊಳ್ಳಲಾಗಿದೆ. ಕನ್ನಡ ಜಾಗೃತಿ ಸಮಿತಿಯ ಸದಸ್ಯರೂ,ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಸೈನಾರ್ ತಾಳಿತ್ತನೂಜಿ, ಸಾಮಾಜಿಕ ಟ್ರಸ್ಟ್ನ ನೆರವು ಹಾಗೂ ಖ್ಯಾತ ವ್ಲಾಗರ್ ಸಲಾಂ ಸಮ್ಮಿ ಅವರ ಸಹಯೋಗದೊಂದಿಗೆ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಅಗತ್ಯ ಶೈಕ್ಷಣಿಕ ಸಾಮಗ್ರಿಗಳನ್ನು ಉಚಿತವಾಗಿ ವಿತರಿಸಲಾಯಿತು….