ಮಾನವೀಯತೆ ಮೆರೆದ ಬಸ್ ಸಿಬ್ಬಂದಿ; ಗಾಯಗೊಂಡ ಮಹಿಳೆ-ಮಗುವನ್ನು ಆಸ್ಪತ್ರೆಗೆ ದಾಖಲಿಸಿ ಜೀವ ರಕ್ಷಣೆ

ಮಂಗಳೂರು: ಮರಕಡ ಜಂಕ್ಷನ್‌ನಲ್ಲಿ ಚಲಿಸುತ್ತಿದ್ದ ಬಸ್ಸಿನಿಂದ ಮಹಿಳೆ ಹಾಗೂ ಮಗು ಕೆಳಗೆ ಬಿದ್ದ ಘಟನೆ ನಡೆದಿದ್ದು, ಇದೇ ವೇಳೆ ಆ ಮಾರ್ಗದಲ್ಲಿ ಸಂಚರಿಸುತ್ತಿದ್ದ 13B ‘ಮಾಸ್ಟರ್’ ಬಸ್ಸಿನ ಚಾಲಕ ದಯಾನಂದ ಮತ್ತು ನಿರ್ವಾಹಕ ಸಂದೀಪ್ ಮಾನವೀಯತೆ ಮೆರೆದಿದ್ದಾರೆ. ಘಟನೆಯನ್ನು ಗಮನಿಸಿದ ಇಬ್ಬರೂ ತಕ್ಷಣವೇ ರಕ್ಷಣೆಗೆ ಧಾವಿಸಿ, ತಮ್ಮ ಬಸ್‌ನ ನಿಯಮಿತ ಟ್ರಿಪ್‌ ಬಗ್ಗೆ ಚಿಂತಿಸದೆ ಗಾಯಾಳುಗಳ ನೆರವಿಗೆ ಮುಂದಾದರು. ಬಸ್‌ನಲ್ಲಿದ್ದ ಪ್ರಯಾಣಿಕರನ್ನು ಬೇರೆ ಬಸ್‌ನಲ್ಲಿ ಕಳುಹಿಸಿ, ಗಾಯಗೊಂಡ ಮಹಿಳೆ ಹಾಗೂ ಮಗುವನ್ನು ತುರ್ತಾಗಿ ಎ.ಜೆ. ಆಸ್ಪತ್ರೆಗೆ ದಾಖಲಿಸಿ…

Read More

ಪೊಳಲಿ ಶ್ರೀ ಕ್ಷೇತ್ರದಲ್ಲಿ ನೂತನ ಅನ್ನಛತ್ರ, ಮದುವೆ ಸಭಾಂಗಣ ನಿರ್ಮಾಣಕ್ಕೆ ಮುಹೂರ್ತ

ಪೊಳಲಿ : ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಹಳೆಯ ಅನ್ನಛತ್ರವನ್ನು ತೆಗೆದು ನೂತನ ಅನ್ನ ಛತ್ರ ಹಾಗೂ ಮದುವೆ ಸಭಾಂಗಣಕ್ಕೆ ಮೇ. 28ರಂದು ಗುರುವಾರ ಮುಹೂರ್ತವನ್ನು ಮಾಡಲಾಯಿತು. ನಿರ್ಮಿತಿ ಕೇಂದ್ರದ ಅಧಿಕಾರಿ ನವೀನ್‌ , ದೇವಳದ ಇಂಜಿನಿಯರ್‌ ಲಕ್ಷಣ್‌ ಪೂಜಾರಿ, ಕಾಂಟ್ರಾಕ್ಟರ್‌ ಗಿರೀಶ್‌ ಅವರಿಗೆ ಪ್ರಸಾದ ನೀಡಿದರು. ಈ ಸಂದರ್ಭದಲ್ಲಿ ದೇವಳದ ಆಡಳಿತ ಮೊಕ್ತೇಸರ ಡಾ.ಎ.ಮಂಜಯ್ಯ ಶೆಟ್ಟಿ ಅಮ್ಮುಂಜೆಗುತ್ತು, ಬಂಟ್ವಾಳ ಶಾಸಕ ಯು.ರಾಜೇಶ್‌ ನಾಯ್ಕ್‌ , ಮಾಜಿ ಸಚಿವ ಬಿ.ರಮಾನಾಥ ರೈ, ಚಂದ್ರಪ್ರಕಾಶ್‌ ಶೆಟ್ಟಿ ತುಂಬೆ, ಕೃಷ್ಣಕುಮಾರ್‌…

Read More

ರಾಜ್ಯದ 9 ನಗರಗಳ ಮಕ್ಕಳ ಬೇಸಿಗೆ ಶಿಬಿರಗಳ ಸಮಾಪನ “ಜಂಬೂರಿ” ಸಂಪನ್ನ

ಮಂಗಳೂರು, ಕಟಪಾಡಿ, ಉಡುಪಿ-ಮಣಿಪಾಲ, ಬ್ರಹ್ಮಾವರ, ಕುಂದಾಪುರ, ಗಂಗೊಳ್ಳಿ, ಮೈಸೂರು, ಉಳ್ಳಾಲ, ಪುತ್ತೂರು ಸೇರಿದಂತೆ ರಾಜ್ಯದ ಒಂಭತ್ತು ನಗರಗಳಲ್ಲಿ ನಡೆದ ಬೇಸಿಗೆ ಶಿಬಿರದ ಸಮಾಪನ “ಜಂಬೂರಿ” ಮಂಗಳೂರಿನಲ್ಲಿ ಮಕ್ಕಳ ಖುಷಿ, ಸಂಭ್ರಮದೊಂದಿಗೆ ಯಶಸ್ವಿಯಾಗಿ ಸಂಪನ್ನಗೊಂಡಿತ್ತು. ಆಯಾ ಊರುಗಳಲ್ಲಿ ಒಟ್ಟು ಆರು ದಿನ ಬೆಳಿಗ್ಗೆಯಿಂದ ಸಂಜೆಯವರೆಗೆ ನಡೆದ ಶಿಬಿರದ ಕೊನೆಯ ಏಳನೇಯ ದಿನ ಎಲ್ಲಾ ಊರುಗಳ ಮಕ್ಕಳು ಒಂದೇ ಕಡೆಯಲ್ಲಿ ಸೇರುವ ವ್ಯವಸ್ಥೆ ಮಾಡಲಾಗಿತ್ತು. ಡೊಂಗರಕೇರಿಯಲ್ಲಿರುವ ಕೆನರಾ ಹೈಸ್ಕೂಲ್ ಆವರಣದಲ್ಲಿರುವ ಭುವನೇಂದ್ರ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇಲ್ಲಿ ಮಕ್ಕಳಿಗೆ ಭಗವತ್…

Read More

ಬೀದಿಬದಿ ವ್ಯಾಪಾರಿಗಳ ವಿರುದ್ಧ ಸುಳ್ಳು ಆರೋಪ: ನೈತಿಕ ಪೊಲೀಸ್‌ಗಿರಿ ನಡೆಸುವವರ ವಿರುದ್ಧ ಕ್ರಮಕ್ಕೆ ಒತ್ತಾಯ

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಬೀದಿಬದಿ ವ್ಯಾಪಾರಿಗಳನ್ನು ಹಾಗೂ ಅವರ ಸಂಘವನ್ನು ಅವಮಾನಿಸಿ, ಸುಳ್ಳು ಆರೋಪಗಳನ್ನು ಹೊರಿಸಲಾಗುತ್ತಿದೆ. ಬಡ ಬೀದಿಬದಿ ವ್ಯಾಪಾರಿಗಳ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಆಗ್ರಹಿಸಿದೆ. ನಗರದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ಗೌರವಾಧ್ಯಕ್ಷ ಬಿ.ಕೆ. ಇಮ್ತಿಯಾಝ್, ನಗರದ ವಿವಿಧೆಡೆ ಬೀದಿಬದಿ ವ್ಯಾಪಾರ ನಡೆಸುತ್ತಿರುವ ವ್ಯಾಪಾರಿಗಳ ವಿರುದ್ಧ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದು, ಅವರನ್ನು ಅಪರಾಧಿಗಳಂತೆ…

Read More

ಬಜಾಲ್ ವಾರ್ಡಿನ ಮೈರ ಜಯನಗರ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ

ಮಂಗಳೂರು ಮಹಾನಗರ ಪಾಲಿಕೆಯ 53ನೇ ಬಜಾಲ್ ವಾರ್ಡಿನ ಮೈರ ಜಯನಗರ–ವನರಕ್ತೇಶ್ವರಿ ದೇವಸ್ಥಾನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಗುದ್ದಲಿ ಪೂಜೆ ನೆರವೇರಿತು. ಸುಮಾರು ₹50 ಲಕ್ಷ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು, ಸ್ಥಳೀಯ ನಿವಾಸಿಗಳು ಹಾಗೂ ಪ್ರಮುಖರು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಕಾಮಗಾರಿಗೆ ₹50 ಲಕ್ಷ ಅನುದಾನ ಮಂಜೂರಾಗಿತ್ತು. ಬಳಿಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಕಾಮಗಾರಿಗೆ…

Read More

ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ; ಮಂಗಳೂರು ದಕ್ಷಿಣ ಪೊಲೀಸರ ಕಾರ್ಯಾಚರಣೆ

ಮಂಗಳೂರು ದಕ್ಷಿಣ ಪೊಲೀಸರು ಹಲವಾರು ಅಪರಾಧ ಪ್ರಕರಣಗಳಿಗೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ಮಹಮದ್ ಅಶ್ರಫ್ ಅಲಿಯಾಸ್ ಅಜ್ಜು ಅಲಿಯಾಸ್ ಸಮೀರ್ ಎಂದು ಗುರುತಿಸಲಾಗಿದ್ದು, ಅವರು ಬೆಳ್ತಂಗಡಿ ತಾಲೂಕಿನ ಅಜಿಲಮೊಗರು ಮಾವಿನಕಟ್ಟೆ ನಿವಾಸಿಯಾಗಿದ್ದಾರೆ. ಆರೋಪಿಯನ್ನು ಬುಧವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಅಶ್ರಫ್ ವಿರುದ್ಧ ಪಾಂಡೇಶ್ವರ, ಸುರತ್ಕಲ್, ಬಂಟ್ವಾಳ, ಉಪ್ಪಿನಂಗಡಿ ಹಾಗೂ ಪುತ್ತೂರು ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಕಳ್ಳತನ, ದರೋಡೆ ಹಾಗೂ ಮನೆ…

Read More

ಮಕ್ಕಳಿಗೆ ಪ್ರಕೃತಿ ಮತ್ತು ಎಲ್ಲಾ ಜೀವಿಗಳನ್ನು ಪ್ರೀತಿಸುವುದನ್ನು ಕಲಿಸಿ: ಮಾತಾ ಅಮೃತಾನಂದಮಯಿ ದೇವಿ

ಮಂಗಳೂರು: ಮಾನವಕುಲವು ಪ್ರಕೃತಿಯೆಡೆಗೆ ಹೆಚ್ಚಿನ ವಿನಯ, ಕರುಣೆ ಮತ್ತು ಪೂಜ್ಯಭಾವನೆಯಿಂದ ಬದುಕಬೇಕು ಎಂದು ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿ (ಅಮ್ಮ) ಕರೆ ನೀಡಿದರು. ಮಂಗಳೂರಿನ ಬೋಳೂರಿನಲ್ಲಿರುವ ಮಾತಾ ಅಮೃತಾನಂದಮಯಿ ಮಠದಲ್ಲಿ ನಡೆದಿರುವ ಬ್ರಹ್ಮಸ್ಥಾನ ಮಹೋತ್ಸವದಲ್ಲಿ ಭಕ್ತರನ್ನುದ್ದೇಶಿಸಿ ಮಾತನಾಡಿದ ಅಮ್ಮ, ಮನುಷ್ಯನು ಸಹಮಾನವರೊಂದಿಗೆ ಸಹಕಾರದಿಂದ, ಪ್ರಕೃತಿಯೊಂದಿಗೆ ಸೌಹಾರ್ದತೆಯಿಂದ ಮತ್ತು ಈಶ್ವರನ ಜೊತೆಗೆ ಸಂಪರ್ಕವಿರಿಸಿಕೊಂಡು ಬದುಕುವುದನ್ನು ಕಲಿಯಬೇಕು ಎಂದು ಹೇಳಿದರು. ಸಾಂಕ್ರಾಮಿಕ ರೋಗಗಳು, ನೈಸರ್ಗಿಕ ವಿಕೋಪಗಳು ಮತ್ತು ಹವಾಮಾನ ವೈಪರೀತ್ಯಗಳು ಪ್ರಕೃತಿಯೊಂದಿಗಿನ ನಮ್ಮ ಸಂಬಂಧವನ್ನು ಮರುಚಿಂತನೆ ಮಾಡಲು ಮಾನವಕುಲಕ್ಕೆ…

Read More

ಬದ್ರಿಯಾ ಜುಮಾ ಮಸೀದಿ ಮತ್ತು ಹಯತುಲ್ ಇಸ್ಲಾಂ ಮದರಸ ಬಜಾಲ್ ನಂತೂರ್ ಈದುಲ್ ಅಳ್ಹಾ (ಬಕ್ರೀದ್)ಆಚರಣೆ

ಬಜಾಲ್ ನಂತೂರು ಬದ್ರಿಯಾ ಜುಮಾ ಮಸೀದಿಯಲ್ಲಿ ಈದ್ ಆಚರಣೆ ನಡೆಯಿತು.ಖತೀಬರಾದ ಅಬ್ದುಲ್ ನಾಸಿರ್ ಸಅದಿ ಈದ್ ಆಶಂಸ ಭಾಷಣ ಮಾಡಿದರು .ತನ್ನ ಭಾಷಣದಲ್ಲಿ ಯಾರೂ ಯಾರೊಂದಿಗೂ ದ್ವೇಷಿಸದೆ ಪರಸ್ಪರ ಕಚ್ಛಾಟದೆ ಒಗ್ಗಟ್ಟಿನಿಂದ ಬಾಳಿರಿ ಯಾವುದೇ ಪ್ರತಿಸಂದಿ ನೇರಿಟ್ಟರೂ ಅಲ್ಲಾಹನು ನೀಡಿದ ಅನುಗ್ರಹಗಳನ್ನು ಮರೆಯದೆ ಅದಕ್ಕೆ ಕೃತಜ್ಞತೆ ಸಲ್ಲಿಸಿ, ಸದಾ ಸಮಯ ಅಲ್ಲಾಹನಿಗೆ ತಲೆಬಾಗಿ ಇಹಪರ ವಿಜಯಿಗಳಾಗಲು ಪ್ರಯತ್ನಿಸಿರಿ ಎಂಬ ಹಿತವಚನ ನೀಡಿದರು‌ ನಂತರ ಸದರ್ ಮುಅಲ್ಲಿಮರಾದ ಅಬ್ದುಲ್ ಹಕೀಂ ಮದನಿ ಈದ್ ನಮಾಜು ಹಾಗೂ ಖುತುಬಾ ನಿರ್ವಹಿಸಿದರು….

Read More

ಉಳ್ಳಾಲದಲ್ಲಿ ಎಸ್‌ಎಸ್‌ಎಲ್‌ಸಿ ಸಾಧಕರಿಗೆ ಸನ್ಮಾನ: ಶೇ.100 ಫಲಿತಾಂಶ ದಾಖಲಿಸಿದ ಶಾಲೆಗಳಿಗೆ ಗೌರವ

ಯು.ಟಿ ಫರೀದ್ ಫೌಂಡೇಶನ್ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮಂಗಳೂರು ದಕ್ಷಿಣ ವಲಯ ಇವುಗಳ ಆಶ್ರಯದಲ್ಲಿ 2025-26 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿದ ಶಾಲೆಗಳಿಗೆ ಹಾಗೂ ಅತ್ಯುನ್ನತ ಅಂಕಗಳೊಂದಿಗೆ ತೇರ್ಗಡೆ ಹೊಂದಿದ ಉಳ್ಳಾಲ ತಾಲೂಕಿನ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ ಕಾರ್ಯಕ್ರಮ ತೊಕ್ಕೊಟ್ಟು ಯುನಿಟಿ ಸಭಾಂಗಣದಲ್ಲಿ ನಡೆಯಿತು. ಸ್ಪೀಕರ್ ಡಾ. ಯುಟಿ ಖಾದರ್ ಫರೀದ್ ಶೇ.100 ಫಲಿತಾಂಶ ದಾಖಲಿಸಿದ ಶಾಲೆಗಳಿಗೆ ಹಾಗೂ ಅತ್ಯುನ್ನತ ಅಂಕಗಳೊಂದಿಗೆ ತೇರ್ಗಡೆ ಹೊಂದಿದ ಉಳ್ಳಾಲ ತಾಲೂಕಿನ…

Read More

ದ.ಕ. ಜಿಲ್ಲೆಯಲ್ಲಿ ಸಡಗರದಿಂದ ನಡೆದ ಬಕ್ರೀದ್ ಹಬ್ಬದ ಆಚರಣೆ

ಮಂಗಳೂರು : ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ‘ಈದುಲ್ ಅಝ್ಹಾ’ (ಬಕ್ರೀದ್ ಹಬ್ಬ)ವನ್ನು ದ.ಕ. ಜಿಲ್ಲಾದ್ಯಂತ ಅತ್ಯಂತ ಸಡಗರ, ಸಂಭ್ರಮದಿಂದ ಇಂದು ಆಚರಿಸಲಾಯಿತು. ನಗರದ ಬಾವುಟಗುಡ್ಡದ ಈದ್ಗಾ ಮಸ್ಟಿದ್ದಲ್ಲಿ ದ.ಕ.ಜಿಲ್ಲಾ ಖಾಝಿ ಅಲ್ಲಾಝ್ ತ್ವಾಖಾ ಅಹ್ಮದ್ ಮುಸ್ಲಿಯಾರ್‌ರ ನೇತೃತ್ವದಲ್ಲಿ ಖುತುಬಾ ಪಾರಾಯಣ ಮತ್ತು ಝೀನತ್ ಬಕ್ಸ್ ಮಸ್ಟಿದ್‌ನ ಖತೀಬ್ ಸೈಯದ್ ಶಂಶುದ್ದೀನ್ ಬಾಸಿತ್ ಬಾ ಅಲವಿ ತಂಜಳ್ ಅಲ್ ಅನ್ಸಾರಿ ನೇತೃತ್ವದಲ್ಲಿ ಈದ್ ನಮಾಝ್ ನಡೆಯಿತು. ಈ ಸಂದರ್ಭ ಸ್ಪೀಕರ್ ಯು.ಟಿ. ಖಾದರ್, ಮಂಗಳೂರು ನಗರ ಪೊಲೀಸ್‌…

Read More
error: Content is protected !!