ಮಂಗಳೂರಿನ ಕದ್ರಿ ಪಾರ್ಕ್ನಲ್ಲಿ ಮಾವು ಮೇಳಕ್ಕೆ ಚಾಲನೆ.ಮೇ 31ರವರೆಗೆ ಅವಕಾಶ
ಮಂಗಳೂರು:ರಾಮನಗರ ಜಿಲ್ಲಾ ಮಾವು ತೋಟದ ಬೆಳೆಗಾರರ ಮಾರಾಟ ಸಂಘ (ರಿ) ವತಿಯಿಂದ “ರೈತರಿಂದ ಗ್ರಾಹಕರಿಗೆ ನೇರ ಮಾರಾಟ” ಶೀರ್ಷಿಕೆಯಡಿ ಆಯೋಜಿಸಲಾದ ಮಾವು ಮೇಳವು ನಗರದ ಕದ್ರಿ ಪಾರ್ಕ್ನಲ್ಲಿ ಆರಂಭಗೊಂಡಿದೆ. ಮೇಳವು ಮೇ 31ರವರೆಗೆ ನಡೆಯಲಿದೆ.ಮೇಳವನ್ನು ಕದ್ರಿ ಉದ್ಯಾನವನ ಸಮಿತಿಯ ಸದಸ್ಯ ಬಿ. ಜಗನ್ನಾಥ ಗಾಂಭೀರ್ ಉದ್ಘಾಟಿಸಿದರು . ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪಂಚಾಯತ್ ಮಂಗಳೂರು ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಪ್ರವೀಣ್ ಕೆ., ಮೇಳದ ಮೂಲಕ ಮಂಗಳೂರಿನ ಜನತೆಗೆ ನೈಸರ್ಗಿಕವಾಗಿ ಮಾಗಿಸಿದ ಗುಣಮಟ್ಟದ ಹಣ್ಣುಗಳನ್ನು…