ಮಂಗಳೂರಿನ ಕದ್ರಿ ಪಾರ್ಕ್‌ನಲ್ಲಿ ಮಾವು ಮೇಳಕ್ಕೆ ಚಾಲನೆ.ಮೇ 31ರವರೆಗೆ ಅವಕಾಶ

ಮಂಗಳೂರು:ರಾಮನಗರ ಜಿಲ್ಲಾ ಮಾವು ತೋಟದ ಬೆಳೆಗಾರರ ಮಾರಾಟ ಸಂಘ (ರಿ) ವತಿಯಿಂದ “ರೈತರಿಂದ ಗ್ರಾಹಕರಿಗೆ ನೇರ ಮಾರಾಟ” ಶೀರ್ಷಿಕೆಯಡಿ ಆಯೋಜಿಸಲಾದ ಮಾವು ಮೇಳವು ನಗರದ ಕದ್ರಿ ಪಾರ್ಕ್‌ನಲ್ಲಿ ಆರಂಭಗೊಂಡಿದೆ. ಮೇಳವು ಮೇ 31ರವರೆಗೆ ನಡೆಯಲಿದೆ.ಮೇಳವನ್ನು ಕದ್ರಿ ಉದ್ಯಾನವನ ಸಮಿತಿಯ ಸದಸ್ಯ ಬಿ. ಜಗನ್ನಾಥ ಗಾಂಭೀರ್ ಉದ್ಘಾಟಿಸಿದರು . ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪಂಚಾಯತ್ ಮಂಗಳೂರು ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಪ್ರವೀಣ್ ಕೆ., ಮೇಳದ ಮೂಲಕ ಮಂಗಳೂರಿನ ಜನತೆಗೆ ನೈಸರ್ಗಿಕವಾಗಿ ಮಾಗಿಸಿದ ಗುಣಮಟ್ಟದ ಹಣ್ಣುಗಳನ್ನು…

Read More

ಬಂಟ ಸಮಾಜ ಪ್ರವರ್ಗ 3 (ಬಿ) ಯಲ್ಲಿ ಸೇರಿರುವುದರಿಂದ ಸೌಲಭ್ಯಗಳಿಂದ ವಂಚಿತವಾಗಿದೆ: ಕೆ ಅಜಿತ್ ಕುಮಾರ್ ರೈ ಮಾಲಾಡಿ

ಮಂಗಳೂರು: ಬಂಟ ಸಮಾಜವನ್ನು ಕೇಂದ್ರ ಸರಕಾರವು ಮೀಸಲಾತಿ ಪಟ್ಟಿಯಲ್ಲಿ ಸೇರ್ಪಡೆಗೊಳಿಸಿಲ್ಲ, ರಾಜ್ಯದ ಮೀಸಲಾತಿ ಪಟ್ಟಿಯಲ್ಲಿ ಬಂಟ ಸಮಾಜವನ್ನು ಪ್ರವರ್ಗ 2 (ಎ) ಯಲ್ಲಿ ಸೇರಲು ಅರ್ಹವಾಗಿದ್ದರೂ ಬಂಟ ಸಮುದಾಯವನ್ನು ಪ್ರವರ್ಗ 3 (ಬಿ) ಯಲ್ಲಿ ಸೇರಿಸಿರುವ ಕಾರಣ ಬಂಟರು ಶಿಕ್ಷಣ, ಉದ್ಯೋಗ, ಸಾಮಾಜಿಕ, ರಾಜಕೀಯ ಮುಂತಾದ ಕ್ಷೇತ್ರಗಳಲ್ಲಿ ಸಿಗುವ ಸೌಲಭ್ಯಗಳಿಂದ ವಂಚಿತವಾಗಿ ಬಂಟ ಸಮುದಾಯಕ್ಕೆ ತುಂಬಾ ಹಿನ್ನಡೆಯಾಗಿದೆ ಎಂದು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾದ ಕೆ ಅಜಿತ್ ಕುಮಾರ್ ರೈ ಮಾಲಾಡಿ ತಿಳಿಸಿದರು. ಬಂಟ್ಸ್…

Read More

ಮಂಗಳೂರಿನಲ್ಲಿ ‘ಟಾಟಾ ಐಪಿಎಲ್ ಫ್ಯಾನ್ ಪಾರ್ಕ್’; ಉಚಿತವಾಗಿ ಪ್ಲೇ-ಆಫ್ ಮತ್ತು ಫೈನಲ್ ವೀಕ್ಷಣೆಗೆ ಅವಕಾಶ

ಮಂಗಳೂರು: ಕ್ರಿಕೆಟ್ ಅಭಿಮಾನಿಗಳಿಗೆ ಕ್ರೀಡಾಂಗಣದ ನೈಜ ಅನುಭವ ನೀಡುವ ಉದ್ದೇಶದಿಂದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ವತಿಯಿಂದ ಮಂಗಳೂರಿನಲ್ಲಿ ‘ಟಾಟಾ ಐಪಿಎಲ್ ಫ್ಯಾನ್ ಪಾರ್ಕ್’ ಆಯೋಜಿಸಲಾಗಿದೆ ಎಂದು ಮಾಜಿ ಮೇಯರ್ ಮಹಾಬಲ ಮಾರ್ಲ ತಿಳಿಸಿದ್ದಾರೆ. ನಗರದ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ಐಪಿಎಲ್ ಪ್ಲೇ-ಆಫ್ ಹಾಗೂ ಫೈನಲ್ ಪಂದ್ಯಗಳ ರೋಚಕತೆಯನ್ನು ಕರಾವಳಿಯ ಜನತೆಗೆ ಉಚಿತವಾಗಿ ತಲುಪಿಸಲು ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಹೇಳಿದರು. ನಗರದ ಲಾಲ್‌ಬಾಗ್‌ನಲ್ಲಿರುವ ಕರಾವಳಿ ಉತ್ಸವ ಮೈದಾನದಲ್ಲಿ…

Read More

ಮಂಗಳೂರು-ಉಡುಪಿ ಭೋವಿ ಸಮಸ್ಯೆಗಳಿಗೆ ಪವನ್ ಕುಮಾರ್ ಶಿರ್ವ ಹೋರಾಟದ ಘೋಷಣೆ

ಮಂಗಳೂರು: ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭೋವಿ ಸಮುದಾಯಕ್ಕೆ ಸಂಬಂಧಿಸಿದಂತೆ ಉಂಟಾಗುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಭೋವಿ ಯುವ ಮುಖಂಡ ಪವನ್ ಕುಮಾರ್ ಶಿರ್ವ ಹೋರಾಟದ ನಿಲುವು ಕೈಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ. ರಾಮಪ್ಪ ಅವರು ಜಿಲ್ಲೆಯಲ್ಲಿ ಮೂರು ದಿನಗಳ ಪ್ರವಾಸ ಕೈಗೊಳ್ಳಬೇಕಾಗಿದ್ದರೂ, ಕಾರಣಾಂತರಗಳಿಂದ ಆ ಪ್ರವಾಸ ರದ್ದುಪಡಿಸಲಾಗಿದೆ ಎಂದು ತಿಳಿದುಬಂದಿದೆ. ಇದೀಗ ಅಧ್ಯಕ್ಷರೊಂದಿಗೆ ಸಮಯ ನಿಗದಿಯಾಗಿರುವ ಹಿನ್ನೆಲೆ, ಪವನ್ ಕುಮಾರ್ ಶಿರ್ವ ಅವರು ನಾಳೆ ಬೆಂಗಳೂರಿನಲ್ಲಿ ಎಂ….

Read More

ಮಂಗಳೂರಿನಲ್ಲಿ ‘ಮ್ಯಾವರಿಕ್ಸ್ ಸಮರ್ ನ್ಯಾಷನಲ್ಸ್ 2026’ ಬ್ರಿಡ್ಜ್ ಪಂದ್ಯಾವಳಿ

ಮಂಗಳೂರು: ಕರಾವಳಿ ಬ್ರಿಡ್ಜ್ ಅಸೋಸಿಯೇಷನ್ ವತಿಯಿಂದ ಪ್ರತಿಷ್ಠಿತ ‘ಮ್ಯಾವರಿಕ್ಸ್ ಸಮರ್ ನ್ಯಾಷನಲ್ಸ್ 2026’ ಬ್ರಿಡ್ಜ್ ಪಂದ್ಯಾವಳಿಯು ಜೂನ್ 4ರಿಂದ 13ರವರೆಗೆ ನಗರದ ಸೆಂಟ್ ಸೆಬಾಸ್ಟಿಯನ್ ಸೆಂಟೆನರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಅಸೋಸಿಯೇಷನ್ ಅಧ್ಯಕ್ಷೆ ಮಾರ್ಜೊರಿ ಟೆಕ್ಸೇರಾ ತಿಳಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತೀಯ ಬ್ರಿಡ್ಜ್ ಫೆಡರೇಷನ್ (BFI) ಹಾಗೂ ಕರ್ನಾಟಕ ರಾಜ್ಯ ಬ್ರಿಡ್ಜ್ ಅಸೋಸಿಯೇಷನ್ ಆಶ್ರಯದಲ್ಲಿ ಈ ರಾಷ್ಟ್ರೀಯ ಮಟ್ಟದ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ತಿಳಿಸಿದರು. ಈ ಪ್ರತಿಷ್ಠಿತ ವಾರ್ಷಿಕ ರಾಷ್ಟ್ರೀಯ…

Read More

ಜೆ. ಕೊರಗಪ್ಪ ಅವರಿಗೆ ‘ಸೇವಾ ತ್ರಿವಿಕ್ರಮ’ ಬಿರುದು ಪ್ರದಾನ

ಮಂಗಳೂರುದಲ್ಲಿ ನಡೆದ ಸಮಾರಂಭದಲ್ಲಿ ಸಮಾಜಸೇವಕ ಜೆ. ಕೊರಗಪ್ಪ ಅವರಿಗೆ “ಸೇವಾ ತ್ರಿವಿಕ್ರಮ” ಬಿರುದು ಪ್ರದಾನ ಮಾಡಿ ಗೌರವಿಸಲಾಯಿತು. ರಿಯಲ್ ಎಸ್ಟೇಟ್ ಸಂಸ್ಥೆ ಲ್ಯಾಂಡ್ ಲಿಂಕ್ಸ್ ರೂವಾರಿ ಹಾಗೂ ಮಾಜಿ ಸಚಿವ ಕೃಷ್ಣ ಜೆ ಪಾಲೆಮಾರ್ ಅವರ ಮುಂದಾಳತ್ವದಲ್ಲಿ ಮೇರಿಹಿಲ್‌ನಲ್ಲಿ ನಿರ್ಮಾಣಗೊಂಡ ಪಾಲೆಮಾರ್ ಕನ್ವೆಷನ್ ಸೆಂಟರ್ ಸೇರಿದಂತೆ ನಾಲ್ಕು ಸಭಾಂಗಣಗಳ ಲೋಕಾರ್ಪಣೆ ಕಾರ್ಯಕ್ರಮದ ವೇಳೆ ಈ ಗೌರವ ಪ್ರದಾನ ಮಾಡಲಾಯಿತು. ಆಂಧ್ರ ಪ್ರದೇಶದ ರಾಜ್ಯಪಾಲ ಜಸ್ಟೀಸ್ ಎಸ್. ಅಬ್ದುಲ್ ನಝೀರ್ ಅವರ ದಿವ್ಯಹಸ್ತದಲ್ಲಿ ಜೆ. ಕೊರಗಪ್ಪ ಅವರಿಗೆ ಗೌರವಾಭಿನಂದನ…

Read More

ಕೋಸ್ಟಲ್ ಫಿಲ್ಮ್ ಅವಾಡ್ಸ್೯ ಅಕ್ಷರ್ ಜೆ ಶೆಟ್ಟಿಗೆ ಬಾಲ ನಟ ಪ್ರಶಸ್ತಿ

ಮುಲ್ಕಿ ಸುಂದರ್ ರಾಮ ಶೆಟ್ಟಿ ಕನ್ವೆನ್ಷನ್ ಸೆಂಟರ್ ನಲ್ಲಿ ಸ್ಯಾಂಡಿಸ್ ಕಂಪನಿಯ ಆಶ್ರಯದಲ್ಲಿ ನಡೆದ ಕೋಸ್ಟಲ್ ಫಿಲಂ ಅವಾಡ್ಸ್೯ ನಲ್ಲಿ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ನಿರ್ದೇಶನ “ಜೈ” ತುಳು ಸಿನಿಮಾದಲ್ಲಿ ಅಕ್ಷರ್ ಜೆ ಶೆಟ್ಟಿಯ ಅಭಿನಯಕ್ಕಾಗಿ ಬಾಲನಟ ಪ್ರಶಸ್ತಿ ಲಭಿಸಿದೆ.ಅಕ್ಷರ್ ಜೆ ಶೆಟ್ಟಿ ಹಿರಿಯ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ ಮತ್ತು ಚಿತ್ರಾ ಜೆ ಶೆಟ್ಟಿ ದಂಪತಿಯ ಪುತ್ರ. ಅಕ್ಷರ್ ಜೆ ಶೆಟ್ಟಿ ಈ ಹಿಂದೆ ಜಯಕಿರಣ ಫಿಲಂಸ್ ಲಾಂಛನದಲ್ಲಿ ಪ್ರಕಾಶ್ ಪಾಂಡೇಶ್ವರ್ ನಿರ್ಮಾಣದಲ್ಲಿ ವಿರೇಂದ್ರ…

Read More

ಮಂಗಳೂರಿನಲ್ಲಿ ಮೇ 30ರಂದು “ಸುಹಾನಾ ಸಫರ್ ಮತ್ತು ಬಿನಾಕಾ ಗೀತಮಾಲಾ” ಸಂಗೀತ ವೈಭವ

ಮಂಗಳೂರು: ಲಯನ್ಸ್ ಪ್ರಕೋಷ್ಟ ಹಾಗೂ ಲಯನ್ಸ್ ಜಿಲ್ಲೆ 317D ಸಹಯೋಗದಲ್ಲಿ , ಲಯನ್ಸ್ ಕ್ಲಬ್ ಮಂಗಳೂರು ವತಿಯಿಂದ “ಸುಹಾನಾ ಸಫರ್ ಅಂಡ್ ಬಿನಾಕಾ ಗೀತಮಾಲಾ” ಎಂಬ ಪ್ರತಿಷ್ಠಿತ ಸಂಗೀತ ಕಾರ್ಯಕ್ರಮವು ಮೇ 30 ರ ಶನಿವಾರ ನಗರದ ಸುಜೀರ್ ಸಿ.ವಿ. ನಾಯಕ್ ಹಾಲ್‌ನಲ್ಲಿ ನಡೆಯಲಿದೆ ಎಂದು ಲಯನ್ಸ್ ಪ್ರಕೋಷ್ಟದ ಜಿಲ್ಲಾಧ್ಯಕ್ಷ ಲ/ ಕುಂಬ್ಳೆ ನರಸಿಂಹ ಪ್ರಭು ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಜೆ 5 ಗಂಟೆಯಿಂದ 5.45ರವರೆಗೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಬಳಿಕ…

Read More

ಕೇರಳದ ನೂತನ ಗೃಹಮಂತ್ರಿ ರಮೇಶ್ ಚೆನ್ನಿತ್ತಲವರನ್ನು ಭೇಟಿ ಮಾಡಿ ಅಭಿನಂದಿಸಿದ ಹರೀಶ್ ಕುಮಾರ್

ಮಂಗಳೂರು/ತಿರುವನಂತಪುರ: ಕೇರಳ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ ಯುಡಿಎಫ್ ಸರ್ಕಾರದ ಗೃಹಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ರಮೇಶ್ ಚೆನ್ನಿತ್ತಲ ಅವರನ್ನು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಅಧ್ಯಕ್ಷ ಹರೀಶ್ ಕುಮಾರ್ ಆತ್ಮೀಯವಾಗಿ ಭೇಟಿ ಮಾಡಿ ಅಭಿನಂದಿಸಿದರು. ವಿದ್ಯಾರ್ಥಿ ರಾಜಕೀಯ ದಿನಗಳಲ್ಲಿ ಆರಂಭವಾದ ಸ್ನೇಹ ಇಂದು ಸಹ ಅದೇ ಆತ್ಮೀಯತೆಯೊಂದಿಗೆ ಮುಂದುವರಿದಿರುವುದು ವಿಶೇಷವಾಗಿತ್ತು. ರಾಜೀವ್ ಗಾಂಧಿಯವರ ಯುವ ನಾಯಕತ್ವ ಬೆಳೆಸುವ ಕನಸಿನ ಭಾಗವಾಗಿ, ಯುವ ಕಾಂಗ್ರೆಸ್ ಸಂಘಟನೆಯಲ್ಲಿ ಚತುರ ಸಂಘಟಕರಾಗಿ ಗುರುತಿಸಿಕೊಂಡಿದ್ದ ರಮೇಶ್ ಚೆನ್ನಿತ್ತಲ ಅವರನ್ನು ಅಖಿಲ ಭಾರತೀಯ…

Read More

ದಕ್ಷಿಣ ಕನ್ನಡ ಜಿಲ್ಲೆಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಭೇಟಿ … !

ಮಂಗಳೂರು : ಭಾರತದ ಉಪರಾಷ್ಟ್ರಪತಿ ಸಿ. ಪಿ. ರಾಧಾಕೃಷ್ಣನ್ ಅವರು ಮೇ 30 ಹಾಗೂ 31ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದಲ್ಲಿ ಇರಲಿದ್ದಾರೆ . ಅಧಿಕೃತ ಕಾರ್ಯಕ್ರಮದ ಪ್ರಕಾರ, ಮೇ 30ರಂದು ಸಂಜೆ 4:25ಕ್ಕೆ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಉಪರಾಷ್ಟ್ರಪತಿಗಳು, ಬಳಿಕ ಸಂಜೆ 5:05ಕ್ಕೆ ಧರ್ಮಸ್ಥಳ ಹೆಲಿಪ್ಯಾಡ್ ತಲುಪಲಿದ್ದಾರೆ. ನಂತರ ಅವರು ಧರ್ಮಸ್ಥಳ ಅತಿಥಿಗೃಹದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಮೇ 31ರಂದು ಬೆಳಿಗ್ಗೆ 8 ಗಂಟೆಗೆ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನ ಧರ್ಮಸ್ಥಳ ದೇವಾಲಯಕ್ಕೆ ಭೇಟಿ…

Read More
error: Content is protected !!