ಕ್ಷುಲ್ಲಕ ನೆಪಒಡ್ಡಿ ರಾಜಕೀಯ ಪ್ರೇರಿತ ಪ್ರಕರಣ ದಾಖಲಾತಿ ಅಧಿಕಾರಿಗಳ ನಡೆ ಖಂಡನಿಯ :ಹರೀಶ್ ಆಚಾರ್ಯ
ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಸದಸ್ಯರೂ ಹಾಗೂ ಬಿಜೆಪಿ ಮುಖಂಡರಾಗಿರುವ ಪ್ರಭಾಕರ ಪ್ರಭುರವರು ಬಂಟ್ವಾಳ ತಾಲೂಕು ಪಂಚಾಯತ್ ಹೆಸರನ್ನು ತನ್ನ ಲೆಟರ್ ಹೆಡ್ ನಲ್ಲಿ ಬಳಸಿಕೊಂಡು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಕುರಿತು ಗ್ರಾಮ ಪಂಚಾಯತ್ ಸಿಬ್ಬಂದಿಗಳಿಗೆ ಜ್ಞಾಪನ ಪತ್ರ ಮೂಲಕ ಒತ್ತಡ ಹೇರದಂತೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಿಗೆ ಮನವಿ ಮಾಡಿರುವುದರ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳ ಸೂಚನೆಯಂತೆ ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪೊಲೀಸ್ ದೂರು ನೀಡಿ ಪ್ರಕರಣ ದಾಖಲಿಸಿರುವ…
