ಪುತ್ತೂರು ಯೋಜನಾ ಪ್ರಾಧಿಕಾರದಿಂದ ಕಡತ ವಿಲೇವಾರಿ.ರಾಜ್ಯದಲ್ಲೇ ಪ್ರಪ್ರಥಮ ಬಾರಿ ಕಡತ ವಿಲೇವಾರಿ ಕಾರ್ಯಾಗಾರ-ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ.

ಪುತ್ತೂರು: ಪುತ್ತೂರು ಮತ್ತು ಕಡಬ ಗ್ರಾಮಾಂತರ ಪ್ರದೇಶದ ಗ್ರಾಮ ಪಂಚಾಯತ್‌ಗಳಲ್ಲಿ ಸಲ್ಲಿಸುವ ಏಕ ನಿವೇಶನ ವಿನ್ಯಾಸ ಅನುಮೋದನೆ ಕುರಿತ ಅರ್ಜಿಗಳಿಗೆ ಸಂಬಂಧಿಸಿ ೪ಕೆ ನಿಯಮಾವಳಿಗಳು ಜಾರಿಯಾಗಿರುವ ಮೊದಲು ಪ್ರಾಧಿಕಾರಕ್ಕೆ ಸಲ್ಲಿಕೆಯಾಗಿರುವ ಅರ್ಜಿಗಳ ವಿಲೇವಾರಿಯ ಅದಾಲತ್ ಸೆ.೩೦ರಂದು ಶಾಸಕರ ಕಚೇರಿಯ ಸಭಾಂಗಣದಲ್ಲಿ ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ದೀಪ ಪ್ರಜ್ವಲಿಸಿ ಉದ್ಘಾಟಿಸಿ ಮಾತನಾಡಿ ಕರ್ನಾಟಕ ರಾಜ್ಯದಲ್ಲೇ ಪ್ರಪ್ರಥಮ ಬಾರಿಗೆ ಯೋಜನಾ ಪ್ರಾಧಿಕಾರದಿಂದ ಕಡತ ವಿಲೇವಾರಿ ಕಾರ್ಯಾಗಾರ ಆಯೋಜಿಸಲಾಗಿದೆ. ಏಕ ನಿವೇಶನ ನಕ್ಕಷೆ ಈ ಮೊದಲು ಗ್ರಾಮ ಪಂಚಾಯತ್‌ನಲ್ಲಿ…

Read More

ಅಮಾಸೆಬೈಲು: ಜ್ಯುವೆಲ್ಲರಿಯಿಂದ ಚಿನ್ನ ಖರೀದಿಸಿ ಹಣ ಕೊಡದೆ ವಂಚನೆ: ಆರೋಪಿ ಸೆರೆ.

ಉಡುಪಿ: ಜ್ಯುವೆಲ್ಲರಿಯಿಂದ ಚಿನ್ನ ಖರೀದಿಸಿ ಹಣ ಕೊಡದೆ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಅಮಾಸೆಬೈಲು ಪೊಲೀಸರು ಬಂಧಿಸಿದ್ದಾರೆ. ಹೊಸಂಗಡಿಯ ಶ್ರೀಕೃಷ್ಣ ಜ್ಯುವೆಲ್ಲರಿಯಿಂದ 2024ರ ನ.3ರಂದು ಸಂತೋಷ ಎಂದು ಹೆಸರು ಹೇಳಿಕೊಂಡು ಕಾರಿನಲ್ಲಿ ಬಂದ ವ್ಯಕ್ತಿ ಗಿಪ್ಟ್ ಕೊಡುವ ಬಗ್ಗೆ 30 ಸಾವಿರ ರೂ. ಮೌಲ್ಯದ 2 ಚಿನ್ನದ ಉಂಗುರಗಳನ್ನು ಖರೀದಿ ಮಾಡಿದ್ದನು. ಹಣವನ್ನು ನೆಫ್ಟ್ ಮೂಲಕ ಹಾಕಿರುವುದಾಗಿ ಮೊಬೈಲ್ ಪೋನ್ ತೋರಿಸಿ ಉಂಗುರಗಳನ್ನು ತೆಗೆದುಕೊಂಡು ಹೋಗಿದ್ದನು. ಆದರೆ ಹಣ ಖಾತೆಗೆ ಜಮಾ ಆಗದ ಬಗ್ಗೆ ಆತನಿಗೆ…

Read More

ತಿಮರೋಡಿ ಗಡಿಪಾರು ಆದೇಶ. ವಿರೋಧಿಸಿ ಪ್ರತಿಭಟನೆಗೆ ಅನುಮತಿ ನಿರಾಕರಣೆ.

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಿ ಆದೇಶ ಮಾಡಿರುವ ವಿರುದ್ಧ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯಿಂದ ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆಗೆ ಅನುಮತಿ ನಿರಾಕರಿಸಿ ಬೆಳ್ತಂಗಡಿ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರ್ಷ ಗಡಿಪಾರು ಮಾಡಿ ಸೆ.18 ರಂದು ಪುತ್ತೂರು ಸಹಾಯಕ ಆಯುಕ್ತ (ಎಸಿ) ಸ್ಟೆಲ್ಲಾ ವರ್ಗಿಸ್ ಆದೇಶ ಹೊರಡಿಸಿದ್ದರು.ಈ ಗಡಿಪಾರು ಆದೇಶದ ವಿರುದ್ಧ…

Read More

ಧರ್ಮಸ್ಥಳ ಪ್ರಕರಣ.ಇಂದು ಚಿನ್ನಯ್ಯನ ಹೇಳಿಕೆ ಪೂರ್ಣಗೊಳ್ಳುವ ನಿರೀಕ್ಷೆ.

ಧರ್ಮಸ್ಥಳ ಪ್ರಕರಣದಲ್ಲಿ ಆರೋಪಿಯಾಗಿರುವ  ಬುರುಡೆ ಚಿನ್ನಯ್ಯನನ್ನು ಶಿವಮೊಗ್ಗ ಜೈಲಿನಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಶನಿವಾರ ಕರೆತಂದಿದ್ದು ಇಂದು ಆತ ನ್ಯಾಯಾಲಯದ ಮುಂದೆ‌ತನ್ನ ಹೇಳಿಕೆಯನ್ನು ದಾಖಲಿಸಲಿದ್ದಾನೆ .  ಬೆಳ್ತಂಗಡಿ ನ್ಯಾಯಾಲಯಕ್ಕೆ ಇಂದು ಬೆಳಗ್ಗೆ  ಶಿವಮೊಗ್ಗ ಜೈಲಿನಿಂದ  ಭದ್ರತೆಯಲ್ಲಿ ಕರೆದುಕೊಂಡು ಬಂದಿದ್ದು. 11.30 ಕ್ಕೆ ಆತನನ್ನು ನ್ಯಾಯಾಲಯಕ್ಕೆ ಕರೆದೊಯ್ಯಲಾಗಿದೆ  .ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಧೀಶರ ಮುಂದೆ BNSS 183 ಹೇಳಿಕೆ ನೀಡಲಿದ್ದಾನೆ. ಈತ ಈ ಹಿಂದೆ ಎರಡು ದಿನಗಳ ಕಾಲ ಹೇಳಿಕೆ ನೀಡಿದ್ದು ಈತನ ಹೇಳಿಕೆ ಪೂರ್ಣಗೊಳ್ಳದ ಹಿನ್ನಲೆಯಲ್ಲಿ ಇಂದು ಮುಂದುವರಿದ ಹೇಳಿಕೆ…

Read More

ಸಿಗ್ನಲ್ ಲೈಟ್ ಇಲ್ಲೇಕೆ…… ?!

ಮಂಗಳೂರು: ಸಿಗ್ನಲ್ ಲೈಟ್ ನಗರದ ಮುಖ್ಯ ರಸ್ತೆಯಲ್ಲಿರುವುದು ಸಹಜ . ಆದರೆ ಕೆಟ್ಟು ಹೋದ ಸಿಗ್ನಲ್ ಲೈಟನ್ನು ಕಂಕನಾಡಿ ಬಸ್ ನಿಲ್ದಾಣದ ಫುಟ್ ಪಾತ್ ಮೇಲೆಯೇ ಇಡಲಾಗಿದೆ . ಇದು ಕಳೆದ ಒಂದು ಕೆಲವಾರು ದಿನಗಳ ಕಾಲ ಈ ಸ್ಥಳದಲ್ಲಿಯೇ ಇದ್ದು ಅಧಿಕಾರಿಗಳ ಬೇಜವಾಬ್ದಾರಿಯನ್ನು ಕಾಣಿಸುತ್ತಿದೆ . ಆದಷ್ಟು ಬೇಗನೆ ಸಾರ್ವಜನಿಕ ಸ್ಥಳದಲ್ಲಿರುವ ಈ ಸಿಗ್ನಲ್ ಲೈಟಿನ ಅವಶೇಷವನ್ನು ಸೂಕ್ತ ಸ್ಥಳದಲ್ಲಿ ಸ್ಥಳಾಂತರ ಮಾಡಬೇಕು .

Read More

ಮದುವೆಯಾಗುವುದಾಗಿ ವಂಚನೆ ಪ್ರಕರಣ : ಶ್ರೀಕೃಷ್ಣನೇ ಅಪ್ಪ ಎಂದು ‘ಡಿ ಎನ್ ಎ ವರದಿಯಲ್ಲಿ ಬಂದಿದೆ’- ವಿಶ್ವಕರ್ಮ ಮಹಾ ಮಂಡಲದ ರಾಜ್ಯ ಅಧ್ಯಕ್ಷ ಕೆ ಪಿ ನಂಜುಂಡಿ.

ಪುತ್ತೂರು:ಮದುವೆಯಾಗುವುದಾಗಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಡಿ ಎನ್ ಎ ಪರೀಕ್ಷೆ ವರದಿ ಬಂದಿದೆ. ಶ್ರೀಕೃಷ್ಣ ಜೆ ರಾವ್ ಮಗುವಿನ ಅಪ್ಪ ಎಂದು ಸಂತ್ರಸ್ತೆಯ ಮನೆಯವರಿಗೆ ಮಾಹಿತಿಯನ್ನು ತಿಳಿಸಲಾಗಿದೆ ಎಂದು ವಿಶ್ವಕರ್ಮ ಮಹಾ ಮಂಡಲದ ರಾಜ್ಯ ಅಧ್ಯಕ್ಷ ಕೆ ಪಿ ನಂಜುಂಡಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ. ಸಮಾಜದ ಬಡ ಹೆಣ್ಣು ಮಗಳಿಗೆ ಅನ್ಯಾಯ ಆಗಿದೆ. ಹಿಂದೆ ಸೀತಾಮಾತೆಗೆ ಅಗ್ನಿ ಪರೀಕ್ಷೆ ನಡೆಯಿತು. ಇವತ್ತಿನ ಕಾಲದಲ್ಲಿ ಡಿ ಎನ್ ಎ ಪರೀಕ್ಷೆಯೇ ಅಂತಿಮವಾಗಿದೆ. ಹಾಗಾಗಿ ಎಲ್ಲಾ ವಿಚಾರಕ್ಕೂ ಡಿ ಎನ್…

Read More

ಮಲ್ಪೆಯಲ್ಲಿ AKMS ಬಸ್ ಮಾಲಕ ರೌಡಿಶೀಟರ್ ಸೈಫುದ್ದೀನ್ ನ ಗುಂಡಿಕ್ಕಿ ಹತ್ಯೆಗೈದ ಅಪರಿಚಿತ ದುಷ್ಕರ್ಮಿಗಳು!

ಉಡುಪಿ: AKMS ಬಸ್ ಮಾಲಕ ಕೊಲೆ, ಕೊಲೆಯತ್ನದಂತಹ ಹತ್ತಾರು ಪ್ರಕರಣಗಳ ಆರೋಪಿ ರೌಡಿ ಶೀಟರ್ ಸೈಫುದ್ದೀನ್ ನನ್ನು ಮಲ್ಪೆ ಸಮೀಪದ ಕೊಡವೂರಿನ ಆತನ ಮನೆಯಲ್ಲೇ ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಮಣಿಪಾಲ ಅತ್ರಾಡಿ ಮೂಲದ ಸಾರಿಗೆ ವ್ಯವಹಾರದಲ್ಲಿಯೂ ತೊಡಗಿಸಿಕೊಂಡಿದ್ದ ಸೈಫುದ್ದೀನ್ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ. ಆತನ ಮೇಲೆ ಗುಂಡು ಹಾರಿಸಿದ ನಂತರ, ದುಷ್ಕರ್ಮಿಗಳು ಆತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ…

Read More

ಸಮುದ್ರ ತೀರದಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಮೃತದೇಹ.4 ಕಿ.ಮೀ ಹೆಗಲ ಮೇಲಿಟ್ಟು ಆಂಬುಲೆನ್ಸ್ ವಾಹನಕ್ಕೆ ಸಾಗಿಸಿ ಮಾನವೀಯತೆ ಮೆರೆದ ಶಿವಾಜಿ ಜೀವ ರಕ್ಷಕ ಈಜುಗಾರರ ಸಂಘದ ಸದಸ್ಯರು.

ಉಳ್ಳಾಲ : ಕೊಳೆತ ಸ್ಥಿತಿಯಲ್ಲಿದ್ದ ಮೃತದೇ ಹ ಉಳ್ಳಾಲ ಸಮುದ್ರ ತೀರದ ಅಳಿವೆಬಾಗಿಲು ಬ್ರೇಕ್ ವಾಟರ್ ಕಲ್ಲುಗಳ ಮಧ್ಯೆ ಸಿಲುಕಿರುವುದನ್ನು ಉಳ್ಳಾಲ ಮೊಗವೀರಪಟ್ನ ಶಿವಾಜಿ ಜೀವ ರಕ್ಷಕ ಈಜುಗಾರರ ಸಂಘದ ಸದಸ್ಯರು 3-4 ಕಿ.ಮೀ ದೂರ ಎತ್ತಿಕೊಂಡು ಸಾಗಿ ಆಂಬುಲೆನ್ಸ್ ವಾಹನಕ್ಕೆ ತಲುಪಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಶಿವಾಜಿ ಜೀವ ರಕ್ಷಕ ಈಜುಗಾರರ ಸಂಘದ ಸದಸ್ಯರುಗಳಾದ ಯೋಗೀಶ್ ಅಮೀನ್, ಪ್ರಸಾದ್ ಸುವರ್ಣ, ಚಂದ್ರಹಾಸ್ ಸುವರ್ಣ ಎಂಬವರು ತೀರ ಕೊಳೆತ ಸ್ಥಿತಿಯಲ್ಲಿದ್ದ ಮೃತದೇಹ ವನ್ನು ಹೆಗಲ ಮೇಲೆ ಇಟ್ಟು…

Read More

ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಸೆ.30ಕ್ಕೆ ಮುಂದೂಡಿಕೆ.

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಅವರ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಮಂಗಳೂರಿನ ನ್ಯಾಯಾಲಯವು ಸೆ.30ಕ್ಕೆ ಮುಂದೂಡಿದೆ. ಶನಿವಾರ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ವೇಳೆ ಜಾಮೀನು ಅರ್ಜಿಗೆ ಆಕ್ಷೇಪ ಸಲ್ಲಿಸಲು ಸಕಾರಿ ವಕೀಲರು ಸಮಯಾವಕಾಶ ಕೋರಿದ್ದಾರೆ ಅದನ್ನು ಪುರಸ್ಕರಿಸಿದ ನ್ಯಾಯಾಧೀಶರು ಸೆ.30ಕ್ಕೆ ವಿಚಾರಣೆಯ ನ್ನು ಮುಂದೂಡಿದ್ದಾರೆ.

Read More

ರಚನಾತ್ಮಕ ಹೃದಯ ಮಧ್ಯಸ್ಥಿಕೆಯ ಚಿಕಿಸ್ತಾ ವಿಧಾನದಿಂದ ಗುಣಮುಖರಾದ ರೋಗಿಗಳ ಸಮುಖದಲ್ಲಿ ಹೃದಯ ದಿನಾಚರಣೆಯನ್ನು ಆಚರಿಸಿದ ಇಂಡಿಯಾನಾ ಆಸ್ಪತ್ರೆ.

ಮಂಗಳೂರು: ಇಂಡಿಯಾನಾ ಆಸ್ಪತ್ರೆ ಮತ್ತು ಹೃದಯ ಸಂಸ್ಥೆ ಮಂಗಳೂರು ತನ್ನ 2 ನೇ ವರ್ಷದ ರಚನಾತ್ಮಕ ಹೃದಯ ಮದ್ಯಸ್ಥಿಕೆಗಳೊಂದಿಗೆ ವಿಶ್ವ ಹೃದಯ ದಿನಾಚರಣೆಯನ್ನು TAVR/TAVI, TMVR, TTVR, ಮತ್ತು MitraClip ಕಾರ್ಯ ವಿಧಾನಗಳಂತಹ ಮುಂದುವರಿದ ರಚನಾತ್ಮಕ ಹೃದಯ ಮಧ್ಯಸ್ಥಿಕೆಯ ಚಿಕಿಸ್ತಾ ವಿಧಾನದಿಂದ ಯಶಸ್ವಿಯಾಗಿ ಗುಣ ಮುಖ ಹೊಂದಿದ ರೋಗಿಗಳನ್ನು ಸನ್ಮಾನಿಸುವ ಮೂಲಕ ಆಸ್ಪತ್ರೆಯ ಸಭಾಂಗಣದಲ್ಲಿ ಆಚರಿಸಲಾಯಿತ್ತು . ಈ ಸಂದರ್ಭದಲ್ಲಿ ಕಾರ್ಯಕ್ರಮಕ್ಕೆ ಮುಖ್ಯ ಅಥಿತಿಯಾಗಿ ಆಗಮಿಸಿದ ದ.ಕ. ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಎಚ್.ಆರ್.ತಿಮ್ಮಯ್ಯ ಮಾತನಾಡಿ , ಇಂದಿನ…

Read More
error: Content is protected !!