ಪಡುಬಿದ್ರಿ: ಹೆದ್ದಾರಿ ಬದಿಯಲ್ಲಿ ನಿಂತಿದ್ದ ಪಿಕಪ್ ಗೆ ಟಿಪ್ಪರ್ ಡಿಕ್ಕಿ; ಭೀಕರ ಅಪಘಾತಕ್ಕೆ ನವ ವಿವಾಹಿತ ಬಲಿ.

ಉಡುಪಿ: ಟಿಪ್ಪರ್ ಚಾಲಕನ ನಿರ್ಲಕ್ಷ್ಯ ಚಾಲನೆಯಿಂದಾಗಿ ನಡೆದ ಅಪಘಾತದಲ್ಲಿ ನವ ವಿವಾಹಿತನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಪಡುಬಿದ್ರಿ ಕಾಮತ್ ಪೆಟ್ರೋಲ್ ಬಂಕ್ ಸಮೀಪ ಸಂಭವಿಸಿದೆ.ಮೃತನನ್ನು ಬಿಹಾರ ಮೂಲದ ಎರ್ಮಾಳಿನ ಪ್ರೈವುಡ್ ಫ್ಯಾಕ್ಟರಿ ಉದ್ಯೋಗಿ ರಾಜಕುಮಾರ ಶರ್ಮ(23) ಎಂದು ಗುರುತಿಸಲಾಗಿದೆ. ಇವರು ಇಬ್ಬರು ಸಹೋದ್ಯೋಗಿಗಳೊಂದಿಗೆ ಪಡುಬಿದ್ರಿ ಪೇಟೆ ಕಡೆಗೆ ನಡೆದುಕೊಂಡು ಬರುತ್ತಿದ್ದಾಗ ಹೆದ್ದಾರಿಯಲ್ಲಿ ನಿಂತಿದ್ದ ಪಿಕಪ್ ವಾಹನಕ್ಕೆ ಹಿಂದಿನಿಂದ ವೇಗವಾಗಿ ಬಂದ ಟಿಪ್ಪರ್ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಪಿಕಪ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಂಚಿನಲ್ಲಿ ನಡೆದುಕೊಂಡು ಹೋಗುತ್ತಿದ್ದ ಮೂವರ…

Read More

ಅಫೀಮು ಮಾದಕ ದ್ರವ್ಯ ಸಾಗಿಸುತ್ತಿದ್ದ ರಾಜಸ್ಥಾನ ಮೂಲದ ಇಬ್ಬರು ಆರೋಪಿಗಳ ಬಂಧನ.

ಮಂಗಳೂರು: ಎಸಿಪಿ ತಂಡ ಮತ್ತು ಬರ್ಕೆ ಪೊಲೀಸರ ಜಂಟಿ ಕಾರ್ಯಾಚರಣೆ ಯಲ್ಲಿ ಅಫೀಮು ಮಾದಕ ದ್ರವ್ಯ ಸಾಗಿಸುತ್ತಿದ್ದ ರಾಜಸ್ಥಾನ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.ರಾಜಸ್ಥಾನ ಮೂಲದ ವಾಸುದೇವ(48) ಮತ್ತು ಈತನಿಗೆ ಮಾದಕ ವಸ್ತುವನ್ನು ಪೂರೈಸಿದ್ದ ರಾಜಸ್ಥಾನ್ ಮೂಲದ ಮಂಗಲ್ ಚೌಧರಿ(44) ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಸುಮಾರು ನಲ್ವತ್ತು ಸಾವಿರ ರೂಪಾಯಿ ಬೆಲೆಬಾಳುವ 151 ಗ್ರಾಂ ಓಪಿಯಂ ಮಾದಕ ವಸ್ತು, 2 ಮೊಬೈಲ್, ಒಂದು ದ್ವಿಚಕ್ರ ವಾಹನ ವಶಪಡಿಸಲಾಗಿದೆ. ಈ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರು…

Read More

ಸಾಂಕ್ರಾಮಿಕ ರೋಗದ ಕೇಂದ್ರವಾಗುವತ್ತ ಚರಂಡಿಯ ಈ ಗುಂಡಿ …..?

ಮಂಗಳೂರು: ಚರಂಡಿಗೆಂದು ತೆರದ ಗುಂಡಿ ದಿನಗಳೇ ಕಳೆದಿದೆ. ಆದರೂ ಅದನ್ನು ಮುಚ್ಚದೆ ಹಾಗೇ ಬಿಡಲಾಗಿದ್ದು ಇದೀಗಾ ಅಲ್ಲಿ ನೀರು ಕಟ್ಟಿ ನಿಂತು ಸಾಂಕ್ರಾಮಿಕ ರೋಗಕ್ಕೆ ಎಡೆ ಮಾಡಿ ಕೊಡ್ತಾ ಇದೆ . ಈ ಸಾಂಕ್ರಾಮಿಕ ರೋಗದ ಸಂಗ್ರಹಕ ನೀರನ್ನು ಕಟ್ಟಿ ನಿಂತಿರುವ ಸ್ಥಳ ಇರುವುದು ನಗರದ ವೆನ್ಲಾಕ್ ಆಸ್ಪತ್ರೆಯ ಹಿಂಬದಿಗೆ . ಇದೇ ಮಾರ್ಗವಾಗಿ ಸೆಂಟ್ರಲ್ ರೈಲ್ವೆ ನಿಲ್ದಾಣಕ್ಕೆ ಹೋಗುವವರು , ನಗರಕ್ಕೆ ಬರುವವರು ಸಂಚರಿಸ್ತಾ ಇರುತ್ತಾರೆ . ಮಳೆಯಿಂದ ಕಟ್ಟಿನಿಂತ ಈ ನೀರು ಕೊಳಕಾಗಿದ್ದು ಸೊಳ್ಳೆಗಳ…

Read More

ಖಾಸಗಿ ಬಸ್ ಸ್ಟೇರಿಂಗ್ ದೋಷದಿಂದ ಜೀಪ್ ಗೆ ಡಿಕ್ಕಿ. ಜೀಪ್ ಚಾಲಕ ಗಾಯ.

ಬಂಟ್ವಾಳ: ಖಾಸಗಿ ಬಸ್ ಒಂದರ ಸ್ಟೇರಿಂಗ್ ನ ದೋಷ ದಿಂದಾಗಿ ಜೀಪ್ ಗೆ ಡಿಕ್ಕಿ ಹೊಡೆದ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಜೀಪ್ ಚಾಲಕನಿಗೆ ಗಾಯವಾಗಿದ್ದು ಮೂಡಬಿದಿರೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಜಗನ್ನಾಥ ಎಂಬವರು ಜೀಪ್ ಚಲಾಯಿಸಿಕೊಂಡು ಬಂಟ್ವಾಳದಿಂದ ಮೂಡಬಿದರೆಗೆ ಹೋಗುತ್ತಿರುವ ವೇಳೆ ವೇಣೂರು ನಮನ ಕ್ಲಿನಿಕ್ ಬಳಿ ಬೆಳ್ತಂಗಡಿ ಕಡೆಯಿಂದ ಮೂಡಬಿದರೆಗೆ ಬರುವ ಬಸ್ ನ ಸ್ಟೇರಿಂಗ್ ನಲ್ಲಿ ತಾಂತ್ರಿಕ ದೋಷಗಳು‌ ಉಂಟಾಗಿ ಚಾಲಕನ ನಿಯಂತ್ರಣ ಬಾರದೆ ಬಸ್ ಎದುರುಕಡೆಯಿಂದ ಬರುತ್ತಿದ್ದ ಜೀಪಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ…

Read More

ಬಂಟ್ವಾಳ: ನಿಷೇಧಿತ ಗಾಂಜಾ ಮಾರಾಟಗಾರರು ಎನ್ನಲಾಗಿರುವ ಆರೋಪಿಗಳಿಂದ ಸರಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ,

ಬಂಟ್ವಾಳ: ನಿಷೇಧಿತ ಗಾಂಜಾ ಮಾರಾಟಗಾರರು ಎನ್ನಲಾಗಿರುವ ಆರೋಪಿಗಳು ಸರಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ ಅಪರಾಧ ಎಸಗಲು ಪ್ರಯತ್ನ ಬಂಟ್ವಾಳದಲ್ಲಿ ನಡೆದಿದೆ. ಬಂಟ್ವಾಳ ‌ಅಬಕಾರಿ ನಿರೀಕ್ಷಕರಾದ ಲಕ್ಷ್ಮಣ್ ಹಾಗೂ ಅವರ ಸಿಬ್ಬಂದಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಿ ಬಂಟ್ವಾಳ ‌ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಂಗಳೂರು ಕಡೆಯಿಂದ ಬೊಲೆರೋ ವಾಹನವೊಂದರಲ್ಲಿ ಅಕ್ರಮವಾಗಿ ಮಾದಕ ವಸ್ತು ಗಾಂಜಾವನ್ನು ಸಾಗಾಟ ನಡೆಸುತ್ತಿದ್ದಾರೆ ಮತ್ತು ಅವರು ಬಿಸಿರೋಡು ಕಡೆಗೆ ಬರುತ್ತಿದ್ದಾರೆ ಎಂಬ ಮಾಹಿತಿಯನ್ನು ಪಡೆದ ಅಬಕಾರಿ ಜಿಲ್ಲಾ ಉಪ ಆಯುಕ್ತರ ನಿರ್ದೇಶನದಂತೆ…

Read More

ರಾಮಕ್ಷತ್ರಿಯ ಸೇವಾ ಸಂಘದಿಂದ ಸೆಪ್ಟೆಂಬರ್ 28ರಂದು “ಅಭಿನಂದನಾ ಸಮಾರಂಭ” ಕಾರ್ಯಕ್ರಮ.

ಮಂಗಳೂರು: ರಾಮಕ್ಷತ್ರಿಯ ಸೇವಾ ಸಂಘ (ರಿ.), ಮಂಗಳೂರು ವತಿಯಿಂದ “ಅಭಿನಂದನಾ ಸಮಾರಂಭ” ಕಾರ್ಯಕ್ರಮವನ್ನು ಸೆಪ್ಟೆಂಬರ್ 28ರಂದು ಆದಿತ್ಯವಾರ ಬೆಳಿಗ್ಗೆ 10 ಗಂಟೆಗೆ ಮೋರ್ಗನ್ಸ್ ಗೇಟ್‌ನ ಪಾಲೆಮಾರ್ ಗಾರ್ಡನ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ತಿಳಿಸಿದರು. ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 75 ವರ್ಷಗಳ ಪರಂಪರೆಯ ಈ ಸಂಘವು ಸಮಾಜಮುಖಿ ಚಟುವಟಿಕೆಗಳ ಮೂಲಕ ವೈದ್ಯಕೀಯ ಸಹಾಯ, ವಿದ್ಯಾಧನ, ರಕ್ತದಾನ, ಪ್ರತಿಭಾ ಪುರಸ್ಕಾರ ಮತ್ತು ಧಾರ್ಮಿಕ-ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ ಎಂದು…

Read More

ಕಾಳಭೈರವನಿಗೆ ಬೆಳ್ಳಿ ಪ್ರಭಾವಳಿ ಸಮರ್ಪಣೆ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಶ್ರೀ ಕಾಳಭೈರವ ದೇವರಿಗೆ ಕುದ್ರೋಳಿ ಕ್ಷೇತ್ರದ ಸ್ಥಾಪಕ ಅಧ್ಯಕ್ಷರಾದ ಸಾವ್‌ಕಾರ್ ಕೊರಗಪ್ಪರವರ ಪುತ್ರ ದಿ.ಸೋಮಸುಂದರಂ ಕುಟುಂಬಸ್ಥರು ಸುಮಾರು 9 ಲಕ್ಷ ರೂಪಾಯಿ ವೆಚ್ಚದಲ್ಲಿ 6 ಕೆ.ಜಿ. ತೂಕ ಬೆಳ್ಳಿಯ ಪ್ರಭಾವಳಿಯನ್ನು ಕೊಡುಗೆಯಾಗಿ ನೀಡಿದ್ದು, ಶುಕ್ರವಾರ ಸಮರ್ಪಿಸಲಾಯಿತು. ದಿ.ಸೋಮಸುಂದರಂರವರು ಸುಮಾರು 34 ವರ್ಷ ಕ್ಷೇತ್ರದಲ್ಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಅವರ ಕಿರಿಯ ಪುತ್ರ ಜೈರಾಜ್ ಎಚ್.ಸೋಮಸುಂದರಂ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕ್ಷೇತ್ರದ ಅಧ್ಯಕ್ಷ ಜೈರಾಜ್ ಎಚ್.ಸೋಮಸುಂದರಂ, ಕಾರ್ಯದರ್ಶಿ ಮಾಧವ ಸುವರ್ಣ, ಕೋಶಾಧಿಕಾರಿ…

Read More

ಸೆಪ್ಟೆಂಬರ್ 30 ರಂದು ಕುಡ್ಲದ ಪಿಲಿಪರ್ಬ- 4 ನೇ ಆವೃತ್ತಿ:-

ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಮಾಜಿ ಸಂಸದ ಶ್ರೀ ನಳಿನ್ ಕುಮಾ‌ರ್ ಕಟೀಲ್ ಮಾರ್ಗದರ್ಶನದಲ್ಲಿ ಕುಡ್ಲದ ಪಿಲಿಪರ್ಬದ ನಾಲ್ಕನೇ ಆವೃತ್ತಿಯ ಸ್ಪರ್ಧಾಕೂಟವು ಇದೇ ಸಪ್ಟೆಂಬರ್ 30 ರಂದು ಮಂಗಳೂರಿನ ಕೇಂದ್ರ ಮೈದಾನದಲ್ಲಿ ಬೆಳಗ್ಗೆ 9.30 ಕ್ಕೆ ಉದ್ಘಾಟನೆಗೊಳ್ಳಲಿದೆ ಎಂದು ಶಾಸಕ ಶ್ರೀ ಡಿ. ವೇದವ್ಯಾಸ್ ಕಾಮತ್ ರವರು ಹೇಳಿದರು. ನಂತರ ಮಾತನಾಡಿದ ಅವರು, ಬೆಳಿಗ್ಗೆ 10 ಗಂಟೆಗೆ ಸರಿಯಾಗಿ ಭವ್ಯ ವಿಶಾಲ ವೇದಿಕೆಯಲ್ಲಿ ಆರಂಭಗೊಳ್ಳಲಿರುವ ಸ್ಪರ್ಧಾಕೂಟದಲ್ಲಿ ಕರಾವಳಿ ಭಾಗದ ಅತ್ಯಂತ ಜನಪ್ರಿಯ ಎಂಬ ಹೆಗ್ಗಳಿಕೆ ಹೊಂದಿರುವ 10…

Read More

ಶಿಕ್ಷಕರ ಕಾರ್ಯಚಟುವಟಿಕೆಗಳಿಗೆ, ಅವರ ಸಂಘಗಳ ಸಭೆಗಳಿಗೆ ತಮ್ಮ ಕಚೇರಿಯನ್ನು ನೀಡುವುದಾಗಿ ವಿಧಾನಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಭರವಸೆ

ಮಂಗಳೂರು :ಶಿಕ್ಷಕರ ಕಾರ್ಯಚಟುವಟಿಕೆಗಳಿಗೆ, ಅವರ ಸಂಘಗಳ ಸಭೆಗಳಿಗೆ ತಮ್ಮ ಕಚೇರಿಯನ್ನು ನೀಡುವುದಾಗಿ ವಿಧಾನಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಭರವಸೆ ನೀಡಿದ್ದಾರೆ. ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಮಹಾನಗರ ಪಾಲಿಕೆ ಕಟ್ಟಡದ ಮೊದಲ ಮಹಡಿಯಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಅವರ ಕಚೇರಿ ಗುರುವಾರದಂದು ವಿಧ್ಯುಕ್ತವಾಗಿ ಉದ್ಘಾಟನೆಯಾಯಿತು. ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ ಸೇರಿದಂತೆ ಅನೇಕ ಗಣ್ಯರು ಕಚೇರಿ ಉದ್ಘಾಟನೆ ಸಂದರ್ಭ ಉಪಸ್ಥಿತರಿದ್ದು ಶುಭ ಹಾರೈಸಿದರು. ಉದ್ಘಾಟನೆ ಬಳಿಕ ಮಾತನಾಡಿದ ಭೋಜೇಗೌಡ ಅವರು ತಾನು ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವುದರಿಂದ ಶಿಕ್ಷಕರ…

Read More

ಕೊಲ್ಲಮೊಗ್ರು ಪಂಚಾಯತ್‌ ನಲ್ಲಿ ಕಳ್ಳರು ಯಾರು? ಅಂಗಡಿ ಮುಂಗಟ್ಟು ಬಂದ್ – ಗ್ರಾಮಸ್ಥರಿಂದ ಮುತ್ತಿಗೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗವಾದ ಸುಳ್ಯ ತಾಲೂಕಿನ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ನಲ್ಲಿನ ಸೊತ್ತುಗಳನ್ನು ಅಲ್ಲಿನ ಗುಮಾಸ್ತನೇ ಕಳವು ಮಾಡಿದ್ದರೂ ಆತನ ವಿರುದ್ಧ ಪಂಚಾಯತ್ ಸೂಕ್ತ ಕ್ರಮ ಜರುಗಿಸಿಲ್ಲ, ಪಂಚಾಯತ್ ಸಿಸಿ ಟಿವಿ ಅಳವಡಿಸಿ ಜನರ ಖಾಸಗಿ ವಿಡಿಯೋಗಳನ್ನು ಸೆರೆಹಿಡಿದು ಅದನ್ನು ವಾಟ್ಸ್ಯಾಪ್‌ನಲ್ಲಿ ಹರಿಯಬಿಡಲಾಗುತ್ತದೆ‌ ಎಂದು ಆರೋಪಿಸಿದ ಗ್ರಾಮಸ್ಥರು ಗುರುವಾರ ಬೆಳಗ್ಗೆ ಪಂಚಾಯತ್ ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಗ್ರಾಮ ಪಂಚಾಯತ್ ಗೆ ಸಂಬಂಧಪಟ್ಟ ಸಿಸಿ ಟಿವಿ ಪರಿಕರ, ಸೌಂಡ್ ಸಿಸ್ಟಮ್‌ ಗಳನ್ನು ಖಾಸಗಿ…

Read More
error: Content is protected !!