ಫೆ.14 ರಂದು ತೊಕ್ಕೊಟ್ಟು ಒಳಪೇಟೆಯ ಅಂಬೇಡ್ಕರ್ ಮೈದಾನದಲ್ಲಿ ಅಬ್ಬಕ್ಕ ಉತ್ಸವ.
ಉಳ್ಳಾಲ:ತೊಕ್ಕೊಟ್ಟು ಒಳಪೇಟೆಯ ಅಂಬೇಡ್ಕರ್ ಮೈದಾನದಲ್ಲಿ ಫೆ.14ರ ಶನಿವಾರದಂದು ಮಧ್ಯಾಹ್ನ 2 ಗಂಟೆಗೆ ನಡೆಯಲಿರುವ ವೀರರಾಣಿ ಅಬ್ಬಕ್ಕ ಉತ್ಸವವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ರಾಣಿ ಅಬ್ಬಕ್ಕ ವಂಶಸ್ಥರಾದ ಅನಿತಾ ಸುರೇಂದ್ರ ಕುಮಾರ್ ಉದ್ಘಾಟಿಸಲಿದ್ದು, ಅಬ್ಬಕ್ಕಳ ಜನ್ಮಭೂಮಿಯಲ್ಲಿ ಉತ್ಸವ ನಡೆಸಲು ಸರಕಾರವು ಅನುದಾನವನ್ನ ತಡೆ ಹಿಡಿಯುವ ಮೂಲಕ ದೇಶವೇ ಕೊಂಡಾಡುವ ವೀರರಾಣಿಗೆ ಕನಿಷ್ಟ ಗೌರವವನ್ನೂ ನೀಡುತ್ತಿಲ್ಲವೆಂದು ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ಅಧ್ಯಕ್ಷರಾದ ದಿನಕರ ಉಳ್ಳಾಲ್ ಅಸಮಾಧಾನ ವ್ಯಕ್ತಪಡಿಸಿದರು. ಕುತ್ತಾರುವಿನ ಖಾಸಗಿ ಹೊಟೇಲ್ ನಲ್ಲಿ ಬುಧವಾರ ನಡೆದ ಸುದ್ಧಿಗೋಷ್ಠಿಯನ್ನುದ್ಧೇಶಿಸಿ…