ಫೆ.14 ರಂದು ತೊಕ್ಕೊಟ್ಟು ಒಳಪೇಟೆಯ ಅಂಬೇಡ್ಕರ್‌ ಮೈದಾನದಲ್ಲಿ ಅಬ್ಬಕ್ಕ ಉತ್ಸವ.

ಉಳ್ಳಾಲ:ತೊಕ್ಕೊಟ್ಟು ಒಳಪೇಟೆಯ ಅಂಬೇಡ್ಕರ್‌ ಮೈದಾನದಲ್ಲಿ ಫೆ.14ರ ಶನಿವಾರ‌ದಂದು ಮಧ್ಯಾಹ್ನ 2 ಗಂಟೆಗೆ ನಡೆಯಲಿರುವ ವೀರರಾಣಿ ಅಬ್ಬಕ್ಕ ಉತ್ಸವವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ರಾಣಿ ಅಬ್ಬಕ್ಕ ವಂಶಸ್ಥರಾದ ಅನಿತಾ ಸುರೇಂದ್ರ ಕುಮಾರ್‌ ಉದ್ಘಾಟಿಸಲಿದ್ದು, ಅಬ್ಬಕ್ಕಳ ಜನ್ಮಭೂಮಿಯಲ್ಲಿ ಉತ್ಸವ ನಡೆಸಲು ಸರಕಾರವು ಅನುದಾನವನ್ನ ತಡೆ ಹಿಡಿಯುವ ಮೂಲಕ ದೇಶವೇ ಕೊಂಡಾಡುವ ವೀರರಾಣಿಗೆ ಕನಿಷ್ಟ ಗೌರವವನ್ನೂ ನೀಡುತ್ತಿಲ್ಲವೆಂದು ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ಅಧ್ಯಕ್ಷರಾದ ದಿನಕರ ಉಳ್ಳಾಲ್‌ ಅಸಮಾಧಾನ ವ್ಯಕ್ತಪಡಿಸಿದರು. ಕುತ್ತಾರುವಿನ ಖಾಸಗಿ ಹೊಟೇಲ್‌ ನಲ್ಲಿ ಬುಧವಾರ ನಡೆದ ಸುದ್ಧಿಗೋಷ್ಠಿಯನ್ನುದ್ಧೇಶಿಸಿ…

Read More

“ಮನೆರೇಗಾ ಬಚಾವೋ ಸಂಗ್ರಾಮ್” ಪಾದಯಾತ್ರೆಗೆ ಚಾಲನೆ.ಕೇಂದ್ರ ನೀತಿಗೆ ವಿರೋಧವಾಗಿ ಕಾಂಗ್ರೆಸ್ 26 ಕಿಮೀ ಪಾದಯಾತ್ರೆ

ಮಂಗಳೂರು: ಜಿಲ್ಲಾ ಕಾಂಗ್ರೆಸ್ ವತಿಯಿಂದ “ಮನೆರೇಗಾ ಬಚಾವೋ ಸಂಗ್ರಾಮ್” ಅಭಿಯಾನದ ಅಂಗವಾಗಿ ಪಾದಯಾತ್ರೆಗೆ ಮಹಾನಗರಪಾಲಿಕೆ ಎದುರುಗಡೆಯಿರುವ ಮಹಾತ್ಮಾ ಗಾಂಧೀಜಿ ಪ್ರತಿಮೆಯಿಂದ ಚಾಲನೆ ನೀಡಲಾಯಿತು. ಪಾದಯಾತ್ರೆ ಮುಲ್ಕಿ ಕಡೆಗೆ ಹೊರಟಿತು.ಕಾಂಗ್ರೆಸ್ ಮುಖಂಡ ವಿನಯ ಕುಮಾರ್ ಸೊರಕೆ ಗಾಂಧೀಜಿ ಪ್ರತಿಮೆಗೆ ಹಾರ ಅರ್ಪಿಸುವ ಮೂಲಕ ಪಾದಯಾತ್ರೆಯನ್ನು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಕೇಂದ್ರದ ಮೋದಿ ಸರ್ಕಾರ ಜಾರಿಗೆ ತಂದಿರುವ ವಿ.ಬಿ. ರಾಮ್ ಜಿ ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. “ಗಾಂಧೀಜಿ ಪೂಜಿಸುತ್ತಿದ್ದ ರಾಮನಲ್ಲ, ಅದು ನಾಥೂರಾಮ್ ಗೋಡ್ಸೆಯ ರಾಮ….

Read More

ಹಿಂಸೆಯನ್ನು ಪ್ರಚೋಧಿಸುವ ಜಾಹಿರಾತಿನಿಂದಾಗಿ : ಗಾಂಧೀಜಿ ಗೆ ಅಪಮಾನ.ವಿಬಿ ರಾಮ್ ಜಿ ವಿರುದ್ಧ ದ ಪಾದಾಯಾತ್ರೆ ಉದ್ಘಾಟಿಸಿದ ರಮಾನಾಥ ರೈ ಆರೋಪ

ಹಿಂದೆ ಕಾಂಗ್ರೆಸ್ ಸರಕಾರ ಜಾರಿಗೆ ತಂದಿರುವ ಉದ್ಯೋಗ ಖಾತ್ರಿ ಯೋಜನೆಯನ್ನು ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರಕಾರ ವಿರೂಪಗೊಳಿಸಿ ದೇಶದ ಜನರಿಗೆ ಅನ್ಯಾಯಮಾಡಿರುವುದಲ್ಲದೆ ಇದನ್ನು ವಿರೋಸಿರುವ ಕಾಂಗ್ರೆಸ್ ಪಕ್ಷದ ಮುಖಂಡರಿಗೆ ಗಾಂಧೀಜಿಯವರು ಕೋಲಿನಿಂದ ಹೊಡೆಯುವ ಜಾಹಿರಾತು ನೀಡಿ ಅಹಿಂಸೆಯನ್ನು ಭೋಧಿಸಿರುವ ಗಾಂಧೀಜಿಯವರು ಹಿಂಸೆಯನ್ನು ಪ್ರಚೋಸುವಂತೆ ಅಪಮಾನ ಮಾಡಿದ್ದಾರೆ ಎಂದು ಮಾಜಿ ಸಚಿವ ಹಿರಿಯ ಕಾಂಗ್ರೆಸ್ ಮುಖಂಡ ಬಿ.ರಮಾನಾಥ ರೈ ಆರೋಪಿಸಿದರು. ಅವರು ಶನಿವಾರ ಮರ್ಧಾಳದಲ್ಲಿ ಮಹಾತ್ಮ ಗಾಂಧಿ ಉದ್ಯೋಗಖಾತ್ರಿ ಯೋಜನೆಯನ್ನು ವಿಬಿ ರಾಮ್ ಜಿ ಎಂದು ಮರುನಾಮಕರಣ…

Read More

ಕಾರ್ಮಿಕ ಸಂಹಿತೆಗಳ ವಿರುದ್ದ ಅಖಿಲ ಭಾರತ ಮಹಾಮುಷ್ಕರ – ಮಂಗಳೂರಿನಲ್ಲಿ ರಸ್ತೆತಡೆ ಹಾಗೂ ಪ್ರತಿಭಟನಾ ಪ್ರದರ್ಶನ

ಕಾರ್ಮಿಕ ವರ್ಗದ 29 ಪ್ರಮುಖ ಕಾನೂನುಗಳನ್ನು ರದ್ದುಗೊಳಿಸಿ, ಕಾರ್ಪೊರೇಟ್ ಪರ 4 ಸಂಹಿತೆಗಳನ್ನು ಜಾರಿಗೊಳಿಸಿದ ಕೇಂದ್ರ ಸರಕಾರದ ವಿರುದ್ಧ ಇಂದು (ಫೆಬ್ರವರಿ – 12) ರೈತ ಕಾರ್ಮಿಕರ ನೇತ್ರತ್ವದಲ್ಲಿ ಅಖಿಲ ಭಾರತ ಮಹಾಮುಷ್ಕರ ಅತ್ಯಂತ ಯಶಸ್ವಿಯಾಗಿ ಜರುಗಿದ್ದು,ಅದರ ಭಾಗವಾಗಿ ಮಂಗಳೂರಿನ ಹೃದಯಭಾಗದ ಕ್ಲಾಕ್ ಟವರ್ ಬಳಿಯಲ್ಲಿ ವಿವಿಧ ವಿಭಾಗದ ಕಾರ್ಮಿಕರು ನೌಕರರು ಜತೆಯಾಗಿ ಸೇರಿ ರಸ್ತೆತಡೆ ನಡೆಸಿ ಬಳಿಕ ಪ್ರತಿಭಟನಾ ಸಭೆಯನ್ನು ನಡೆಸಿದರು.500ಕ್ಕೂ ಮಿಕ್ಕಿದ ಪ್ರತಿಭಟನಾಕಾರರು, ಕಾರ್ಪೊರೇಟ್ ಹಿತಾಸಕ್ತಿಗಳನ್ನು ತನ್ನ ಮೂಲಮಂತ್ರವನ್ನಾಗಿಸಿದ ಕೇಂದ್ರ ಸರಕಾರದ ವಿರುದ್ದ ಆಕ್ರೋಶಭರಿತರಾಗಿ…

Read More

ಕೇರಳ ರಾಜ್ಯದಲ್ಲಿ ವ್ಯವಸ್ಥಿತವಾಗಿ ಲವ್ ಜಿಹಾದ್ ನಡೆಯುತ್ತಿದೆ ಇದಕ್ಕೆ ಅಲ್ಲಿನ ಸರ್ಕಾರ ಮತ್ತು ಪೊಲೀಸ್ ಇಲಾಖೆ ಸಂಪೂರ್ಣ ಸಹಕಾರ ನೀಡುತ್ತಿದೆ : ಹಿಂದೂ ಜಾಗರಣಾ ವೇದಿಕೆ‌ ಮುಖಂಡ ನರಸಿಂಹ ಮಾಣಿ

ಮಂಗಳೂರು:ಕೇರಳ ರಾಜ್ಯದಲ್ಲಿ ವ್ಯವಸ್ಥಿತವಾಗಿ ಲವ್ ಜಿಹಾದ್ ನಡೆಯುತ್ತಿದೆ. ಇದಕ್ಕೆ ಅಲ್ಲಿನ ಸರ್ಕಾರ ಮತ್ತು ಪೊಲೀಸ್ ಇಲಾಖೆ ಸಂಪೂರ್ಣ ಸಹಕಾರ ನೀಡುತ್ತಿದೆ ಎಂದು ಹಿಂದೂ ಜಾಗರಣಾ ವೇದಿಕೆ‌ ಮುಖಂಡ ನರಸಿಂಹ ಮಾಣಿ ಕಿಡಿಕಾರಿದರು .ಅವರು ನಗರದ ಪತ್ರಿಕಾ ಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಕಾಸರಗೋಡಿನ ಯುವತಿ ವೈಶಾಲಿ ಅನ್ಯ ಮತದ ಯುವಕನೊಂದಿಗೆ ವಯನಾಡಿನಲ್ಲಿ ರಿಜಿಸ್ಟರ್ ಮ್ಯಾರೇಜ್ ಆಗಿರುವ ಮಾಹಿತಿ ಆಕೆಯ ತಂದೆಗೆ ತಿಳಿದ ಕೂಡಲೇ ಅವರು ಆಕೆ ವಾಸ್ತವ್ಯವನ್ನು ಹೂಡುತ್ತಿದ್ದ ಪಿಜೆ ಭೇಟಿನೀಡುತ್ತಾರೆ .ಅಲ್ಲಿ ಫೆ.9ರಂದು ಪಿಜಿ…

Read More

ಮಂಗಳೂರು-ಬೆಂಗಳೂರು ಪ್ರಯಾಣಿಕರಿಗೆ ಆತಂಕ – ಜನಪ್ರಿಯ ರೈಲು ಸಮಯ ಬದಲಾವಣೆಯ ಚರ್ಚೆ

ಮಂಗಳೂರು : ಅದ್ಯಾಕೋ ಏನೋ ರೈಲ್ವೇಗೆ ಮಂಗಳೂರಿಗರೆಂದರೆ ಭಾರಿ ಸದರ, ಏನು ಮಾಡಿದರೂ ಮಾತನಾಡುವುದಿಲ್ಲ ಎಂಬ ನಂಬಿಕೆ. ಆದ್ದರಿಂದ ಅದು ಇರುವ ಸೌಲಭ್ಯಗಳನ್ನು ಮೊಟಕು ಮಾಡಲು ಹೊರಟಿದೆ. ಆ ಕುರಿತ ಒಂದು ಸ್ಟೋರಿ ಇದು.ಮಂಗಳೂರು ರೈಲು ನಿಲ್ದಾಣ ಅತ್ಯಂತ ಹಳೆಯ ನಿಲ್ದಾಣಗಳಲ್ಲಿ ಒಂದು. ಮಂಗಳೂರಿನ ಹಂಚು ಸಾಗಾಟಕ್ಕಾಗಿ ಇಲ್ಲಿಗೆ ರೈಲು ಮಾರ್ಗ ಬಂತು. ಹಂಚಿನ ಕಾಲ ಮುಗಿಯಿತು. ರೈಲು ಪ್ರಯಾಣ ಮರುರೂಪಿಸಲ್ಪಟ್ಟ ಕಾಲಘಟ್ಟ ಇದು.ಆದರೆ ಮಂಗಳೂರಿನ ಮಟ್ಟಿಗೆ ನೆಮ್ಮದಿಯ ರೈಲು ಪ್ರಯಾಣ ಎಂದರೆ ಅದೊಂದು ಕನಸು ಎಂಬಂತಾಗುತ್ತಿದೆ….

Read More

ಕಾಲೇಜು ವಿದ್ಯಾರ್ಥಿನಿಯ ಕಿಡ್ನಾಪ್ ಡ್ರಾಮಾ ಬಯಲು

ಪುತ್ತೂರು:ಕಾಲೇಜು ವಿದ್ಯಾರ್ಥಿನಿಯ ಕಿಡ್ನಾಪ್ ಡ್ರಾಮಾ ಇದೀಗ ಬಯಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿತ್ತು ಎನ್ನಲಾದ ಕಿಡ್ನಾಪ್ ಯತ್ನ ಪ್ರಕರಣದಲ್ಲಿ, ಇದು ಸಂಪೂರ್ಣ ನಾಟಕ ಎಂಬುದು ಪೊಲೀಸರ ತನಿಖೆಯಿಂದ ಬಹಿರಂಗವಾಗಿದೆ.ಮಂಗಳೂರು ಪಿಯುಸಿ ಕಾಲೇಜಿಗೆ ಸೇರ್ಪಡೆ ಪಡೆಯುವ ಉದ್ದೇಶದಿಂದ ವಿದ್ಯಾರ್ಥಿನಿಯೇ ಕಿಡ್ನಾಪ್ ಹೈಡ್ರಾಮಾ ಸೃಷ್ಟಿಸಿದ್ದಾಳೆ ಎಂಬುದು ತಿಳಿದುಬಂದಿದೆ. ಬ್ಲೇಡ್ ಬಳಸಿ ಕೈಗೆ ಸಣ್ಣ ಗಾಯ ಮಾಡಿಕೊಂಡು ಕಿಡ್ನಾಪ್ ನಡೆದಂತೆ ತೋರಿಸಲು ಯತ್ನಿಸಿದ್ದಾಳೆ. ಘಟನೆಗೆ ನಾಟಕೀಯ ತಿರುವು ನೀಡಲು ವಿದ್ಯಾರ್ಥಿನಿ ತನ್ನ ಶಾಲಾ ಬ್ಯಾಗ್‌ನಲ್ಲಿದ್ದ ಪುಸ್ತಕಗಳನ್ನು ಮನೆಯಲ್ಲೇ ಸುಟ್ಟು ಹಾಕಿ,…

Read More

ಕೊಂಕಣಿ ಚಿತ್ರ ‘ವಾಗಾಂಚೊ ಖೇಳ್’ ಮೊದಲ ಹಾಡು ‘ಮೋಗ್ ಜಾಲಾ’ ಫೆ.14ರಂದು ಬಿಡುಗಡೆ

ಮಂಗಳೂರು :ಸನ್ ಶೈನ್ ಕ್ರಿಯೇಷನ್ ಲಾಂಛನದಲ್ಲಿ ಪ್ರವೀಣ್ ಫೆರ್ನಾಂಡೀಸ್ ನಿರ್ಮಾಣದ ಹಾಗೂ ಅರ್ವಿನ್ ಲೋಬೊ ಇವರ ನಿರ್ದೇಶನದಲ್ಲಿ ಮೂಡಿ ಬಂದಿರುವ ಕೊಂಕಣಿ ಚಲನ ಚಿತ್ರ ವಾಗಾಂಚೊ ಖೇಳ್ ಚಿತ್ರದ ಮೊದಲ ಹಾಡು ಮೋಗ್ ಜಾಲಾ ಇದೇ ಬರುವ ಫೆಬ್ರವರಿ 14 ಪ್ರೇಮಿಗಳ ದಿನಾಚರಣೆಯಂದು ಸನ್ ಶೈನ್ ಕ್ರಿಯೇಷನ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಆಗಲಿದೆ ಎಂದು ಚಿತ್ರದ ನಿರ್ದೇಶಕರಾದ ಅರ್ವಿನ್ ಲೋಬೊ ಅವರು ಹೇಳಿದರು. ಪತ್ರಿಕಾಭವನದಲ್ಲಿ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಚಲನಚಿತ್ರವು ಕರಾವಳಿ ಭಾಗದ…

Read More

ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್.

ಪುತ್ತೂರು:ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಅವರ ವಿರುದ್ಧ ಗಡಿಪಾರು ಆದೇಶ ಹೊರಡಿಸುವ ಕುರಿತು ಪ್ರಸ್ತಾವನೆ ಸಲ್ಲಿಸಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಲಾಗಿದೆ. ಪುತ್ತೂರು ತಾಲೂಕು ಒಳಮೊಗ್ರು ಗ್ರಾಮ ಹೊಸಮನೆ ನಿವಾಸಿ ಅಜಿತ್ ರೈ ವಿರುದ್ಧ ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರು ಕರ್ನಾಟಕ ಪೊಲೀಸ್‌ ಕಾಯ್ದೆ 1963ರ ಕಲಂ 55ರಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಆದೇಶ ಹೊರಡಿಸುವ ಕುರಿತು ಸಲ್ಲಿಸಿರುವ ಪ್ರಸ್ತಾವನೆಗೆ ಸಂಬಂಧಿಸಿದಂತೆ ವಿಚಾರಣೆ ಸಹಾಯಕ ಆಯುಕ್ತರ ನ್ಯಾಯಾಲಯದ ಸಭಾಂಗಣದಲ್ಲಿ ಫೆ.25ರಂದು ನಡೆಯಲಿದೆ….

Read More

ಫೆಬ್ರವರಿ 12 ಮಹಾ ಮುಷ್ಕರ ಬೆಂಬಲಿಸಿ ಬಂದರು ಹಮಾಲಿ ಕಾರ್ಮಿಕರ ಸಭೆ

ಮಂಗಳೂರು : ಕೇಂದ್ರ ಸರಕಾರ ಜಾರಿಗೆ ತಂದಿರುವ ಕಾರ್ಮಿಕ ವಿರೋಧಿ 4 ಕಾರ್ಮಿಕ ಸಂಹಿತೆ ರದ್ದುಗೊಳಿಸಲು ಒತ್ತಾಯಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳು ಹಮ್ಮಿಕೊಂಡಿರುವ ಫೆಬ್ರವರಿ 12 ರಂದು ನಡೆಯಲಿರುವ ಅಖಿಲ ಭಾರತ ಸಾರ್ವತ್ರಿಕ ಕಾರ್ಮಿಕರ ಮುಷ್ಕರವನ್ನು ಹಳೆ ಬಂದರು ಸಗಟು ಮಾರುಕಟ್ಟೆಯ ಹಮಾಲಿ ಕಾರ್ಮಿಕರು ಬೆಂಬಲಿಸಿ ಬಂದರು ಶ್ರಮಿಕರ ಸಂಘದ ನೇತೃತ್ವದಲ್ಲಿ ಇಂದು ಹಳೆ ಬಂದರಿನ ಕಾರ್ಮಿಕರ ಕಟ್ಟೆ ಬಳಿ ಸಭೆ ನಡೆಸಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಮಾತನಾಡುತ್ತಾ…

Read More
error: Content is protected !!