ಧರ್ಮಗಳಲ್ಲ, ಧರ್ಮವನ್ನು ದುರುಪಯೋಗಪಡಿಸಿಕೊಂಡು ಸಮಾಜ ವಿಭಜಿಸುವವರ ವಿರುದ್ಧ ವಿರೋಧ: ದೀಪಾ ಭಾಸ್ತಿ

ಮಂಗಳೂರು: ಹಿಂದೂ, ಕ್ರೈಸ್ತ, ಮುಸ್ಲಿಂ ಸೇರಿದಂತೆ ಯಾವುದೇ ಧರ್ಮಗಳು ಸಮಸ್ಯೆಯಲ್ಲ. ಆದರೆ ಕೆಲವರು ಧರ್ಮವನ್ನು ಅಸ್ತ್ರವನ್ನಾಗಿ ಬಳಸಿಕೊಂಡು ಸಮಾಜವನ್ನು ವಿಭಜಿಸುವ ಪ್ರಯತ್ನ ನಡೆಸುತ್ತಿರುವುದರ ವಿರುದ್ಧ ನನ್ನ ವಿರೋಧವಿದೆ ಎಂದು ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಹಾಗೂ ಲೇಖಕಿ ದೀಪಾ ಭಾಸ್ತಿ ಹೇಳಿದ್ದಾರೆ. ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ಮಂಗಳವಾರ ಪಿ.ಪಿ. ಗೋಮತಿ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್, ಮಂಗಳೂರು ವಿಶ್ವವಿದ್ಯಾನಿಲಯ, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ನಡೆದ…

Read More

ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರವನ್ನೂ ಕಲಿಸಿ“-ಉಮಾನಾಥ್ ಕೋಟ್ಯಾನ್

ಅಮ್ಮನ ನೆನಪಿಗಾಗಿ ಬಡಕುಟುಂಬಕ್ಕೆ ಮನೆ ನಿರ್ಮಿಸಿಕೊಟ್ಟ ಪುತ್ರರು! ಮಂಗಳೂರು: ಮೂಡುಶೆಡ್ಡೆ ಹೊಸಲಕ್ಕೆ ದಿ.ದೇವಕಿ ಸಂಜೀವ ಶೆಟ್ಟಿ ಅವರ ನಾಲ್ಕನೇ ವರ್ಷದ ಪುಣ್ಯ ಸ್ಮರಣೆಯ ಅಂಗವಾಗಿ ಅವರ ಪುತ್ರರು ಕೊರಗ ಸಮುದಾಯಕ್ಕೆ ಸೇರಿದ ಗಿರಿಜ ಎಂಬವರಿಗೆ ನೂತನವಾಗಿ ನಿರ್ಮಿಸಿದ ಮನೆಯ ಹಸ್ತಾಂತರ ಕಾರ್ಯಕ್ರಮ ಮಂಗಳವಾರ ನಡೆಯಿತುಅತಿಥಿಗಳು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮನೆಯ ಕೀಲಿ ಕೈ ಹಸ್ತಾಂತರಿಸಿದರು. ಬಳಿಕ ಮಾತಾಡಿದ ವಕೀಲ ಹೊಸಲಕ್ಕೆ ಉಮೇಶ್ ಶೆಟ್ಟಿ ಅವರು, “ಅಮ್ಮ ದಿವಂಗತ ದೇವಕಿ ಶೆಟ್ಟಿಯವರು ನೊಂದವರು, ಕಷ್ಟದಲ್ಲಿರುವವರಿಗೆ…

Read More

ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

ಮಂಗಳೂರು : ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಪ್ರತ್ಯೇಕ ಪ್ರಕರಣಗಳ ಇಬ್ಬರು ಆರೋಪಿಗಳನ್ನು ಬರ್ಕೆ ಪೊಲೀಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿಗಳು ಪತ್ತೆ ಮಾಡಿ, ದಸ್ತಗಿರಿ ಮಾಡಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ. ಬಂಟ್ವಾಳ, ನರಿಂಗಾಣ ಗ್ರಾಮದ ತೌಡಗೊಳಿ ಕ್ರಾಸ್ ನಿವಾಸಿ ಅಬ್ದುಲ್ ಖಾದರ್ ತನ್ಸಿಪ್ ಯಾನೆ ತಂಜಿ ಹಾಗೂ ಮಂಗಳೂರು, ಅಡ್ಯಾರ ಕಣ್ಣೂರಿನ ಕುಂಡಾಲ ಹೌಸ್ ನಿವಾಸಿ ಮೊಹಮ್ಮದ್ ರಾಜೀಕ್ ಬಂಧಿತ ಆರೋಪಿಗಳು. ಅಬ್ದುಲ್ ಖಾದರ್ ತನ್ಸಿಪ್ ಯಾನೆ ತಂಜಿ ಎಂಬಾತನ ವಿರುದ್ಧ…

Read More

ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪ್ರತಿಭಟನೆ: ನೀರಿನ ಸಮಸ್ಯೆ ಖಂಡಿಸಿ ಪಂಚಾಯತ್ ಕಚೇರಿಗೆ ಮುತ್ತಿಗೆ ಯತ್ನ

ಮಂಗಳೂರು ಹೊರವಲಯದ ಎಡಪದವು ಪಂಚ್ಯಾತ್ ವ್ಯಾಪ್ತಿಯ ಕೊರ್ಡೆಲ್ , ಪದರಂಗಿ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಎಡಪದವು ಪಂಚ್ಯಾತ್ ಎದುರು ಪ್ರತಿಭಟನೆ ನಡೆಯಿತು. ಎಡಪದವು ಪಂಚ್ಯಾತ್ ವ್ಯಾಪ್ತಿಯ ಕೊರ್ಡೆಲ್ , ಪದರಂಗಿ ಗ್ರಾಮದಲ್ಲಿ ಕುಡಿಯುವ ನೀರು ಸಹಿತ ಇತರ ಮೂಲಭೂತ ಸೌಕರ್ಯಕ್ಕೆ ಕೊರತೆ ಇದ್ದು ಎಡಪದವು ಪಂಚ್ಯಾತ್ ಗೆ ಮನವಿ ನೀಡಿದರೂ ಸ್ಪಂದಿಸದ ಹಿನ್ನಲೆಯಲ್ಲಿ ಗ್ರಾಮಸ್ಥರುಎಡಪದವು ಪಂಚ್ಯಾತ್ ಎದುರು ಪ್ರತಿಭಟನೆಯನ್ನು ನಡೆಸಿದರು. ಅಧಿಕಾರಿಗಳ ಕೊಠಡಿಗೆ ಮುತ್ತಿಗೆ ಹಾಕಲು ಯತ್ನಿಸಿದ ಸಂದರ್ಭ ಪೊಲೀಸರು ಅಧಿಕಾರಿಗಳನ್ನ ಪ್ರತಿಭಟನಾ ನಿರಂತರ ಬಳಿ ಕರೆತಂದರು…

Read More

ಹನಿಟ್ರ್ಯಾಪ್ ಪ್ರಕರಣದ ಸಮಗ್ರ ತನಿಖೆಗೆ ಬಿಜೆಪಿ ಯುವ ಮೋರ್ಚಾ ಆಗ್ರಹ!

ಮಂಗಳೂರು, ಮಂಗಳೂರಿನ ಉದ್ಯಮಿಯೊಬ್ಬರನ್ನು ಹನಿಟ್ರ್ಯಾಪ್ ಹಾಗೂ ಬ್ಲ್ಯಾಕ್‌ಮೇಲ್ ಮೂಲಕ ಸುಮಾರು ₹2.77 ಕೋಟಿ ವಸೂಲಿ ಮಾಡಿದ ಆರೋಪದಲ್ಲಿ ಯುವ ಕಾಂಗ್ರೆಸ್ ಮುಖಂಡ ನಿಝಾಮ್ ಹಾಗೂ ಆತನ ಸಹಚರ ಜಿತೇಶ್ ಬಂಧನಕ್ಕೊಳಗಾಗಿರುವ ಪ್ರಕರಣವು ರಾಜ್ಯದ ಜನತೆಯನ್ನು ಬೆಚ್ಚಿಬೀಳಿಸಿದೆ ಎಂದು ಬಿಜೆಪಿ ಯುವ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಘಟಕ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ . ಈ ಕುರಿತು ಪ್ರಕಟಣೆ ನೀಡಿರುವ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಯು. ನಂದನ್ ಮಲ್ಯ, ಪ್ರಕರಣದ ತನಿಖೆಯನ್ನು ನಿಷ್ಪಕ್ಷಪಾತವಾಗಿ ನಡೆಸಿ ಸತ್ಯಾಂಶವನ್ನು ಬಹಿರಂಗಪಡಿಸಬೇಕು…

Read More

ಆಯುಷ್ಮಾನ್ ಯೋಜನೆಯಲ್ಲಿ ಹೆಚ್ಚುವರಿ ಶುಲ್ಕ ವಸೂಲಿ ಬೇಡ: ಖಾಸಗಿ ಆಸ್ಪತ್ರೆಗಳಿಗೆ ಸಚಿವ ಖಾದರ್ ಎಚ್ಚರಿಕೆ

ನಿರ್ಲಕ್ಷ್ಯ ತೋರಿದ ಆರೋಗ್ಯ ಮಿತ್ರರ ವಿರುದ್ಧವೂ ಕ್ರಮದ ಎಚ್ಚರಿಕೆ ಮಂಗಳೂರು, ಜೂನ್ 8: ಆಯುಷ್ಮಾನ್ ಕರ್ನಾಟಕ ಯೋಜನೆಯಡಿ ಬಿಪಿಎಲ್ ಕಾರ್ಡ್‌ದಾರರಿಂದ ಖಾಸಗಿ ಆಸ್ಪತ್ರೆಗಳು ಯಾವುದೇ ಹೆಚ್ಚುವರಿ ಶುಲ್ಕ ವಸೂಲಿ ಮಾಡಬಾರದು. ಒಂದು ವೇಳೆ ಹೆಚ್ಚುವರಿ ಹಣ ಪಡೆಯುತ್ತಿರುವುದು ಕಂಡುಬಂದರೆ ಆರೋಗ್ಯ ಮಿತ್ರರು ತಕ್ಷಣ ಮಧ್ಯಪ್ರವೇಶಿಸಿ ಫಲಾನುಭವಿಗಳಿಗೆ ಉಚಿತ ಚಿಕಿತ್ಸೆ ದೊರಕುವಂತೆ ಕ್ರಮ ಕೈಗೊಳ್ಳಬೇಕು. ಈ ಜವಾಬ್ದಾರಿಯಲ್ಲಿ ನಿರ್ಲಕ್ಷ್ಯ ತೋರಿದ ಆರೋಗ್ಯ ಮಿತ್ರರ ವಿರುದ್ಧ ಇಲಾಖಾ ಕ್ರಮ ಜರುಗಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ….

Read More

ಹನಿಟ್ರ್ಯಾಪ್‌ ಜಾಲ ಬಯಲು: ಉದ್ಯಮಿಯಿಂದ ₹2.77 ಕೋಟಿ ವಸೂಲಿ ಆರೋಪ

ಯುವ ಕಾಂಗ್ರೆಸ್ ಮುಖಂಡ ಸೇರಿ ಇಬ್ಬರ ಬಂಧನ; ಆತ್ಮಹತ್ಯೆ ನಾಟಕವಾಡಿ ಹಣ ದೋಚಿದ ಆರೋಪ ಮಂಗಳೂರು, ಜೂನ್ 9: ಮಂಗಳೂರಿನ ಖ್ಯಾತ ಉದ್ಯಮಿಯೊಬ್ಬರನ್ನು ಹನಿಟ್ರ್ಯಾಪ್‌ಗೆ ಒಳಪಡಿಸಿ, ಅಶ್ಲೀಲ ವಿಡಿಯೊಗಳು ಮತ್ತು ಫೋಟೋಗಳನ್ನು ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಿ ₹2.77 ಕೋಟಿ ಹಣ ವಸೂಲಿ ಮಾಡಿದ ಆರೋಪದಡಿ ಉರ್ವಾ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಿಝಾಮ್ ಹಾಗೂ ಆತನ ಸ್ನೇಹಿತ ಜಿತೇಶ್ ಎಂದು ಗುರುತಿಸಲಾಗಿದೆ. 2024ರಿಂದ 2026ರ ಅವಧಿಯಲ್ಲಿ ವಿವಿಧ…

Read More

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ನಿಝಾಮ್ ಉಚ್ಚಾಟನೆ

ಮಂಗಳೂರು,: ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಆರೋಪದ ಹಿನ್ನೆಲೆಯಲ್ಲಿ ನಿಝಾಮ್ ಅವರನ್ನು ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದಲೇ ಉಚ್ಚಾಟನೆ ಮಾಡಲಾಗಿದೆದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಇಬ್ರಾಹಿಂ ನವಾಝ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ . ನಿಝಾಮ್ ಅವರ ವಿರುದ್ಧ ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಆರೋಪಗಳು ಕೇಳಿಬಂದಿರುವುದು ಪಕ್ಷದ ಶಿಸ್ತು ಹಾಗೂ ಗೌರವಕ್ಕೆ ಧಕ್ಕೆ ಉಂಟುಮಾಡಿರುವುದು ಗಮನಕ್ಕೆ ಬಂದಿದೆ ಎಂದು ಹೇಳಲಾಗಿದೆ….

Read More

ಲಯನ್ಸ್ ಇಂಟರ್ನ್ಯಾಷನಲ್ ಡಿಸ್ಟ್ರಿಕ್ಟ್ 317D ಮೆಗಾ ಸೇವಾ ಯೋಜನೆಗೆ ಮತ್ತೊಂದು ಮೈಲುಗಲ್ಲು

ಮಂಗಳೂರು, ಜೂನ್ 9: ಲಯನ್ಸ್ ಇಂಟರ್ನ್ಯಾಷನಲ್ ಡಿಸ್ಟ್ರಿಕ್ಟ್ 317D ವತಿಯಿಂದ ಮೆಗಾ ಸೇವಾ ಯೋಜನೆಯ ಅಂಗವಾಗಿ ಅಕ್ಷಯಪಾತ್ರ ಫೌಂಡೇಶನ್‌ಗೆ ಫುಡ್ ಟ್ರಕ್ ಹಸ್ತಾಂತರಿಸುವ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಸಮಾಜಮುಖಿ ಕಾರ್ಯಕ್ರಮವು ಜೂನ್ 10ರಂದು ಬುಧವಾರ ಸಂಜೆ 5 ಗಂಟೆಗೆ ಮಂಗಳೂರಿನ ಬೆಂಜನಪದವಿನಲ್ಲಿರುವ ಅಕ್ಷಯಪಾತ್ರ ಫೌಂಡೇಶನ್ ಕ್ಯಾಂಪಸ್‌ನಲ್ಲಿ ನಡೆಯಲಿದೆ. ಲಯನ್ಸ್ ಕ್ಲಬ್ಸ್ ಇಂಟರ್ನ್ಯಾಷನಲ್ ಫೌಂಡೇಶನ್ (ಎಲ್‌ಸಿಐಎಫ್) ಸಹಯೋಗದೊಂದಿಗೆ ಹಮ್ಮಿಕೊಂಡಿರುವ ಈ ಯೋಜನೆಯು ಸಮಾಜದ ಬಡ ಹಾಗೂ ಹಿಂದುಳಿದ ವರ್ಗದ ಮಕ್ಕಳಿಗೆ ಶಿಕ್ಷಣ ಮತ್ತು ಪೌಷ್ಟಿಕ ಆಹಾರ ಒದಗಿಸುವ…

Read More

ಮೀನುಗಾರಿಕೆ ನಿಷೇಧ: ಎರಡು ತಿಂಗಳ ಮೌನಕ್ಕೆ ಜಾರಿದ ಮಂಗಳೂರು ಬಂದರು

ಮಂಗಳೂರು, ಜೂನ್ 9: ಸೂರ್ಯ ಉದಯಿಸುವುದಕ್ಕೂ ಮುನ್ನವೇ ಹರಾಜಿನ ಕೂಗು, ಬೋಟ್‌ಗಳ ಎಂಜಿನ್‌ಗಳ ಸದ್ದು, ವಾಹನಗಳ ದಟ್ಟಣೆ ಮತ್ತು ಕಾರ್ಮಿಕರ ಓಡಾಟದಿಂದ ಕಿಕ್ಕಿರಿದು ಕಾಣುತ್ತಿದ್ದ ಮಂಗಳೂರು ಮೀನುಗಾರಿಕಾ ಬಂದರು ಇದೀಗ ಎರಡು ತಿಂಗಳ ಮೌನಕ್ಕೆ ಜಾರಿದೆ. ವಾರ್ಷಿಕ ಮೀನುಗಾರಿಕೆ ಋತು ಅಂತ್ಯಗೊಂಡಿರುವ ಹಿನ್ನೆಲೆಯಲ್ಲಿ ಬಂದರಿನ ಬಹುತೇಕ ಚಟುವಟಿಕೆಗಳು ಸ್ಥಗಿತಗೊಂಡಿದ್ದು, ಜೆಟ್ಟಿ ಪ್ರದೇಶ ನೀರವ ನಿಶ್ಶಬ್ದಕ್ಕೆ ಸಾಕ್ಷಿಯಾಗಿದೆ. ರಾಜ್ಯ ಸರ್ಕಾರದ ಆದೇಶದಂತೆ ಜೂನ್ 1ರಿಂದ ಜುಲೈ 31ರವರೆಗೆ ಎರಡು ತಿಂಗಳ ಕಾಲ ಯಾಂತ್ರೀಕೃತ ಹಾಗೂ ಟ್ರಾಲ್ ಬೋಟ್‌ಗಳ ಮೀನುಗಾರಿಕೆಗೆ…

Read More
error: Content is protected !!