ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಜು.25ರಂದು ಪುತ್ತೂರಿನಲ್ಲಿ ವಿದ್ಯಾರ್ಥಿಗಳ ಶಾಂತಿಯುತ ಜಾಥಾ

ಪುತ್ತೂರು: ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದನ್ನು ಖಂಡಿಸಿ ವಿದ್ಯಾರ್ಥಿ ಹಿತರಕ್ಷಣಾ ವೇದಿಕೆಯಿಂದ ಜು.25ರಂದು ಬೆಳಿಗ್ಗೆ 11.30ಕ್ಕೆ ಬಸ್ ನಿಲ್ದಾಣದ ಬಳಿಯ ಗಾಂಧೀಕಟ್ಟೆಯಿಂದ ಅಮ‌ರ್ ಜವಾನ್ ಜ್ಯೋತಿ ತನಕ ಶಾಂತಿಯುತ ಜಾಥಾ ನಡೆಯಲಿದೆ ಎಂದು ವಿದ್ಯಾರ್ಥಿ ಹಿತ ರಕ್ಷಣಾ ವೇದಿಕೆ ಸಂಚಾಲಕ ಬಾತೀಷ ಅಳಕೆಮಜಲು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದನ್ನು ಖಂಡಿಸಿ, ದೆಹಲಿಯ ಜಂತರ್ ಮಂತರ್‌ನಲ್ಲಿ ಕಳೆದ 20 ದಿನಗಳಿಂದ ವಿದ್ಯಾರ್ಥಿಗಳು ತಮ್ಮ ಹಕ್ಕಿಗಾಗಿ ಹೋರಾಟ ನಡೆಸುತ್ತಿದ್ದಾರೆ. ಆದರೆ ಈ ತನಕ ಯಾವುದೇ…

Read More

ಬೀದಿ ಬದಿ ಆಹಾರ ಮಳಿಗೆಗಳ ಮೇಲೆ ದಾಳಿ; ಅಜಿನೊಮೊಟೊ ಜಪ್ತಿ, ₹6,000 ದಂಡ

ಮಂಗಳೂರು: ಆಹಾರ ಸುರಕ್ಷತೆ ಮತ್ತು ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ಆರೋಗ್ಯ ಅಧಿಕಾರಿಗಳು ಬಿಜೈ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಹಾಗೂ ಸ್ಟೇಟ್ ಬ್ಯಾಂಕ್ ಪ್ರದೇಶದ ಬೀದಿ ಬದಿ ಆಹಾರ ಮಳಿಗೆಗಳ ಮೇಲೆ ತಪಾಸಣೆ ನಡೆಸಿ, ಆರೋಗ್ಯಕ್ಕೆ ಹಾನಿಕರವೆಂದು ಪರಿಗಣಿಸಲಾದ ಅಜಿನೊಮೊಟೊ ವಶಪಡಿಸಿಕೊಂಡಿದ್ದಾರೆ. ತಪಾಸಣೆ ವೇಳೆ ಕೆಲವು ಮಳಿಗೆಗಳಲ್ಲಿ ನಿಯಮಬಾಹಿರವಾಗಿ ಅಜಿನೊಮೊಟೊ ಬಳಕೆ ಪತ್ತೆಯಾಗಿದ್ದು, ಅದನ್ನು ಜಪ್ತಿ ಮಾಡಲಾಗಿದೆ. ಅಲ್ಲದೆ ಸ್ಟೇಟ್ ಬ್ಯಾಂಕ್ ಪ್ರದೇಶದಲ್ಲಿ ನಿಷೇಧಿತ ಕೃತಕ ಬಣ್ಣ ಬಳಸುತ್ತಿದ್ದ ಮೂರು ಆಹಾರ ಮಳಿಗೆಗಳಿಗೆ…

Read More

ಪಿ.ಎ. ಪ್ರಥಮ ದರ್ಜೆ ಕಾಲೇಜಿನಲ್ಲಿ ಓರಿಯಂಟೇಶನ್ ಕಾರ್ಯಕ್ರಮ

ಮಂಗಳೂರು: ಕೋಣಾಜೆಯ ಪಿ.ಎ. ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗಾಗಿ ಓರಿಯೆಂಟೇಶನ್ ಕಾರ್ಯಕ್ರಮ ಪೇಸ್ ನಾಲೆಡ್ಜ್ ಸಿಟಿಯ ಆಡಿಟೋರಿಯಂನಲ್ಲಿ ಬುಧವಾರ ನಡೆಯಿತು‌‌. ಪಿ.ಎ. ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ರಮೀಝ್ ಎಂ.ಕೆ. ಮುಖ್ಯ ಅತಿಥಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಕಾಲೇಜು ಜೀವನದಲ್ಲಿ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಹಾಗೂ ಉತ್ತಮ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳುವಂತೆ ಕರೆ ನೀಡಿದರು. ಪಿ.ಎ. ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಸರ್ಫ್ರಾಝ್ ಜೆ. ಹಾಸಿಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅಂತರರಾಷ್ಟ್ರೀಯ…

Read More

ಬರಿಮಾರು ಶಾಲಾ ಬಸ್ ದುರಂತದಲ್ಲಿ ಮೃತಪಟ್ಟ ಬಾಲಕಿಯ ಮನೆಗೆ ಭೇಟಿ ನೀಡಿದ ಮಾಜಿ ಸಚಿವ ಬಿ. ರಮಾನಾಥ ರೈ

ಪೆರ್ನೆ, ಜುಲೈ 24: ಬಂಟ್ವಾಳ ತಾಲೂಕಿನ ಬರಿಮಾರು ಸಮೀಪದ ಕಲೆಟ್ಟಿ ಪ್ರದೇಶದಲ್ಲಿ ಖಾಸಗಿ ಶಾಲಾ ಬಸ್ ಮೇಲೆ ಮರ ಬಿದ್ದು ಸಂಭವಿಸಿದ ದುರಂತದಲ್ಲಿ ಮೃತಪಟ್ಟ ಬಾಲಕಿಯ ಪೆರ್ನೆ ನೆಕ್ಕರೆ ಅಮೈ ನಿವಾಸಕ್ಕೆ ಮಾಜಿ ಸಚಿವರಾದ ಬಿ. ರಮಾನಾಥ ರೈ ಅವರು ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ದುರಂತದಲ್ಲಿ ಅಮೂಲ್ಯ ಜೀವ ಕಳೆದುಕೊಂಡ ಬಾಲಕಿಯ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ ಅವರು, ಮೃತಳ ತಾಯಿ-ತಂದೆ ಹಾಗೂ ಕುಟುಂಬ ಸದಸ್ಯರನ್ನು ಭೇಟಿ ಮಾಡಿ ದುಃಖದಲ್ಲಿ ಭಾಗಿಯಾದರು. ಈ…

Read More

ಐತಿಹಾಸಿಕ ವೈಭವ ಮತ್ತು ಆಧ್ಯಾತ್ಮಿಕ ಮಹಿಮೆಯ ಪ್ರತೀಕ – ಮಾಣೂರಿನ ಶ್ರೀ ಸುಬ್ರಾಯ ದೇವಸ್ಥಾನ

ತುಳುನಾಡು ತನ್ನ ಶ್ರೀಮಂತ ಸಂಸ್ಕೃತಿ, ನಾಗಾರಾಧನೆ, ದೈವಾರಾಧನೆ ಹಾಗೂ ಶತಮಾನಗಳ ಧಾರ್ಮಿಕ ಪರಂಪರೆಗೆ ಹೆಸರುವಾಸಿಯಾಗಿದೆ. ಈ ಪವಿತ್ರ ನೆಲದಲ್ಲಿರುವ ಮಂಗಳೂರು ತಾಲೂಕಿನ ನೀರುಮಾರ್ಗ ಗ್ರಾಮದ ಮಾಣೂರಿನ ಶ್ರೀ ಸುಬ್ರಾಯ ದೇವಸ್ಥಾನವು ಐತಿಹಾಸಿಕ, ಆಧ್ಯಾತ್ಮಿಕ ಹಾಗೂ ನಾಗಾರಾಧನೆಯ ಮಹತ್ವವನ್ನು ಸಾರುವ ಪ್ರಮುಖ ಕ್ಷೇತ್ರವಾಗಿದೆ. ಸುಮಾರು 800 ವರ್ಷಗಳ ಇತಿಹಾಸ ಹೊಂದಿರುವ ಈ ಕ್ಷೇತ್ರವು ಮೂಲತಃ ‘ಶ್ರೀ ಸುಬ್ರಾಯ ದೇವಸ್ಥಾನ’ ಎಂಬ ಹೆಸರಿನಿಂದಲೇ ಪ್ರಸಿದ್ಧಿ ಪಡೆದಿತ್ತು. ಕಾಲಕ್ರಮೇಣ ವಿವಿಧ ಕಾರಣಗಳಿಂದ ‘ಅನಂತ ಪದ್ಮನಾಭ ಸುಬ್ರಹ್ಮಣ್ಯ ದೇವಸ್ಥಾನ’ ಎಂದು ಕರೆಯಲಾಗುತ್ತಿತ್ತು. ಆದರೆ…

Read More

ನೀಟ್ ಅಕ್ರಮಕ್ಕೆ ಕೇಂದ್ರವೇ ಹೊಣೆ; ಶಿಕ್ಷಣ ಸಚಿವರು ರಾಜೀನಾಮೆ ನೀಡಲಿ: ಪದ್ಮರಾಜ್ ಪೂಜಾರಿ

ಮಂಗಳೂರು, ಜು.24: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ತಡೆಯುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ಅದರ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಆಗ್ರಹಿಸಿದರು. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೀಟ್ ಅಕ್ರಮ ವಿರೋಧಿಸಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ಕ್ರಮ ಹಾಗೂ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ನಡೆಸಿಕೊಂಡ ರೀತಿಯನ್ನು ಖಂಡಿಸಿದರು. ಇದು…

Read More

ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ; ‘ಆರೋಗ್ಯ ಬೈ ಆರ್‌ವಿಆರ್’ ದೇಶವ್ಯಾಪಿ ವಿಸ್ತರಣೆ

ಮಂಗಳೂರು, ಜು.24: ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆ ನೀಡುವ ಗುರಿಯೊಂದಿಗೆ ಕಾರ್ಯನಿರ್ವಹಿಸುತ್ತಿರುವ ಆರ್‌ವಿಆರ್ ಹೆಲ್ತ್‌ಕೇರ್, ಕೇರಳದ ಕಾಸರಗೋಡಿನಲ್ಲಿ ಜುಲೈ 26ರಂದು ನೂತನ ನ್ಯೂರೋ-ಆಂಕಾಲಜಿ ಕೇಂದ್ರವನ್ನು ಆರಂಭಿಸುವುದಾಗಿ ಹಾಗೂ ತನ್ನ ಸಮುದಾಯ ಆರೋಗ್ಯ ಕಾರ್ಯಕ್ರಮ ‘ಆರೋಗ್ಯ ಬೈ ಆರ್‌ವಿಆರ್’ ಅನ್ನು ದೇಶಾದ್ಯಂತ ವಿಸ್ತರಿಸುವುದಾಗಿ ಘೋಷಿಸಿದೆ. ನಗರದ ದಿ ಓಶನ್ ಪರ್ಲ್ ಹೋಟೆಲ್‌ನಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಂಸ್ಥೆಯ ನಿರ್ದೇಶಕ ಹಾಗೂ ಹಿರಿಯ ನರಶಸ್ತ್ರಚಿಕಿತ್ಸಕರಾದ ಡಾ. (ಪ್ರೊ.) ರಾಘವೇಂದ್ರ ಬಿ. ಎಸ್. ಈ ಮಾಹಿತಿ ನೀಡಿದರು.2026ರ ಏಪ್ರಿಲ್‌ನಲ್ಲಿ ಆರಂಭಗೊಂಡ…

Read More

ಪಡೀಲು ನಿವಾಸಿ, ಮಾಜಿ ಅಬಕಾರಿ ಉಪನಿರೀಕ್ಷಕ ಅಂಗಾರ ಪಿ ಇನ್ನಿಲ್ಲ

ಪುತ್ತೂರು: ಅಬಕಾರಿ ಇಲಾಖೆಯ ನಿವೃತ್ತ ಉಪನಿರೀಕ್ಷಕ ಪಡೀಲು ನಿವಾಸಿ ಅಂಗಾರ ಪಿ(65ವ) ಅವರು ಜು.24ರ ನಸುಕಿನ ಜಾವ ನಿಧನರಾದರು. ಪುತ್ತೂರು ಮೊಗೇರ ಸಂಘ, ಬನ್ನೂರು ನವೋದಯ ಯುವಕ ವೃಂದದ ಮಾಜಿ ಅಧ್ಯಕ್ಷರೂ, ಹಾಲಿ ಗೌರವಾಧ್ಯಕ್ಷರೂ ಆಗಿದ್ದ ಅಂಗಾರ ಪಿ ಅವರು ಕಾಂಗ್ರೆಸ್ ಪಡೀಲ್‌ಬೂತ್‌ನ ಅಧ್ಯಕ್ಷರಾಗಿಯೂ, ಪಡೀಲು ಸಾರ್ವಜನಿಕ ಕಟ್ಟೆಪೂಜೆ ಸಮಿತಿಯಲ್ಲೂ ಸಕ್ರಿಯರಾಗಿದ್ದರು. ಪುತ್ತೂರು ಪೇಟೆಯ ಹೃದಯಭಾಗ ಚಿಕ್ಕಪುತ್ತೂರಿನಲ್ಲಿ ಭತ್ತಬೇಸಾಯ ಮಾಡುವ ಮೂಲಕ ಮಾದರಿ ಕೃಷಿಕರಾಗಿದ್ದರು. ವಾರದ ಹಿಂದೆ ಅನಾರೋಗ್ಯಕ್ಕೆ ಒಳಗಾಗಿದ್ದ ಅವರು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಅಲ್ಲಿ…

Read More

ನೀಟ್ ಹೊರಾಟವನ್ನು ಧಾರ್ಮಿಕವಾಗಿ ಥಳುಕು ಹಾಕಿ, ಅವಹೇಳನಕಾರಿ ಬರಹ ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲು, ಆರೋಪಿಯ ದಸ್ತಗಿರಿ

ವಿಟ್ಲ: ನೀಟ್ ಹೋರಾಟವನ್ನು ಧಾರ್ಮಿಕವಾಗಿ ತಿರುಚಿ, ಸಮುದಾಯಗಳ ನಡುವೆ ವೈಮನಸ್ಸು ಉಂಟುಮಾಡುವ ಹಾಗೂ ಸಾರ್ವಜನಿಕ ನೆಮ್ಮದಿಗೆ ಭಂಗ ತರುವಂತಹ ಅವಹೇಳನಕಾರಿ ಬರಹವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ ಆರೋಪದ ಹಿನ್ನೆಲೆಯಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಪ್ರಕರಣದ ಪಿರ್ಯಾದಿದಾರರ ದೂರಿನಂತೆ, ಸದ್ರಿಯವರು KFC KHANDIGA ಎಂಬ ವಾಟ್ಸಾಪ್ ಗ್ರೂಪ್ ನಲ್ಲಿ ಸದಸ್ಯರಾಗಿದ್ದು, ದಿನಾಂಕ:23.07.2026 ರಂದು ಸದ್ರಿ ಗ್ರೂಪ್ ನಲ್ಲಿ ಬಂದ ಸ್ಕ್ರೀನ್ ಶಾಟ್ ವೊಂದನ್ನು ನೋಡಿದಾಗ ಅದರಲ್ಲಿ ಸಮುದಾಯಗಳ ನಡುವೆ ವೈಮನಸ್ಸು ಮೂಡುವಂತೆ…

Read More

ಲಯನ್ಸ್ ಜಿಲ್ಲಾ ಅವಾರ್ಡ್ ನೈಟ್‌ನಲ್ಲಿ ಲಯನ್ ಸುದರ್ಶನ್ ಪಡಿಯಾರ್‌ಗೆ ಬಹು ಪ್ರಶಸ್ತಿಗಳ ಗೌರವ

ಮಂಗಳೂರು: ಲಯನ್ಸ್ ಇಂಟರ್ನ್ಯಾಷನಲ್ ಜಿಲ್ಲೆ 317ಡಿ ವ್ಯಾಪ್ತಿಯ ಹಾಸನ, ಚಿಕ್ಕಮಗಳೂರು, ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಲಯನ್ಸ್ ಕ್ಲಬ್‌ಗಳಿಗಾಗಿ ಆಯೋಜಿಸಿದ್ದ “ಧನ್ಯೋಸಿ ಜಿಲ್ಲಾ ಅವಾರ್ಡ್ ನೈಟ್” ಕಾರ್ಯಕ್ರಮದಲ್ಲಿ ಲಯನ್ ಸುದರ್ಶನ್ ಪಡಿಯಾರ್ ವಿಟ್ಲ ಅವರಿಗೆ ವಿವಿಧ ಪ್ರತಿಷ್ಠಿತ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ರಾಜ್ಯಪಾಲ ಲಯನ್ ಕುಡುಪಿ ಅರವಿಂದ್ ಶೆಣೈ ಅವರು ಜಿಲ್ಲೆಯ ಬೆಸ್ಟ್ ಪಿಆರ್‌ಒ (Best PRO), ರೋರಿಂಗ್ ಲಯನ್ ಆಫ್ ದ ಇಯರ್ (Roaring Lion of the Year), ಇಂಟರ್ನ್ಯಾಷನಲ್…

Read More
error: Content is protected !!