ತುಳುವಿಗೆ ಅಧಿಕೃತ ಭಾಷೆ ಮಾನ್ಯತೆ: ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ
ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಮಾನ್ಯತೆ ನೀಡುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಮಂಗಳೂರಿನ ಕಾಂಗ್ರೆಸ್ ಜಿಲ್ಲಾ ಕಚೇರಿ ಮುಂಭಾಗದಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.ಕಾಂಗ್ರೆಸ್ ಬಾವುಟದ ಜೊತೆಗೆ ತುಳುನಾಡಿನ ಧ್ವಜವೂ ರಾರಾಜಿಸಿತು. ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡುವ ಘೋಷಣೆಯನ್ನು ಸ್ವಾಗತಿಸಿದ ಕಾರ್ಯಕರ್ತರು, ಪರಸ್ಪರ ಸಿಹಿ ಹಂಚಿಕೊಂಡು ಹರ್ಷ ವ್ಯಕ್ತಪಡಿಸಿದರು. ತುಳು ಭಾಷೆಗೆ ಅಧಿಕೃತ ಸ್ಥಾನಮಾನ ನೀಡಬೇಕೆಂಬ ಕರಾವಳಿಯ ಬಹುದಿನಗಳ…
