ಸಾಮರಸ್ಯದಿಂದ ಅಭಿವೃದ್ಧಿ ಸಾಧ್ಯ : ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್.

ಮಂಗಳೂರು: ಸಾಮರಸ್ಯದಿಂದ ಅಭಿವೃದ್ಧಿ ಸಾಧ್ಯ ಎಂಬುದನ್ನು ಸಮಾಜದ ಜನರಿಗೆ ಮತ್ತು ಚರ್ಚ್‌, ಮಸೀದಿ ಮಂದಿರಗಳ ಮುಖ್ಯಸ್ಥರಿಗೆ ಮನದಟ್ಟು ಮಾಡಬೇಕಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್‌ ನಗರದ ನೆಹರೂ ಮೈದಾನದಲ್ಲಿ ನಡೆದ ಪಥಸಂಚಲನದೊಂದಿಗೆ 79ನೇ ಸ್ವಾತಂತ್ರೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಸಂದೇಶ ಭಾಷಣದಲ್ಲಿ ಅವರು ಕರೆ ನೀಡಿದರು. ಕಲೆ, ನಾಟಕ, ಯಕ್ಷಗಾನ ಕ್ಷೇತ್ರಗಳಲ್ಲೂ ಸಹ ಸಾಮರಸ್ಯ ಸಂದೇಶ ಸಾರುವತ್ತ ಕಲಾವಿದರು ಹೆಚ್ಚಿನ ಗಮನ ಹರಿಸಬೇಕು. ಹಿಂಸೆಗೆ ಅವಕಾಶ ನೀಡದೇ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಎಲ್ಲರೂ ಕೈ…

Read More

ಐಎಂಸಿ ವತಿಯಿಂದ ಪುರಸ್ಕಾರ ಸಮಾರಂಭ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಗಡಿಯಾರ ಜೋಗಿಬೆಟ್ಟುವಿನ ಐಎಂಸಿ ಸಂಘಟನೆಯ ನೇತೃತ್ವದಲ್ಲಿ ಎಸೆಸೆಲ್ಸಿಯಲ್ಲಿ ಉತ್ತಮ ಅಂಕ ಪಡೆದ ಊರಿನ ವಿದ್ಯಾರ್ಥಿಗಳಿಗೆ ಪುರಸ್ಕಾರ ಸಮಾರಂಭವು ಶುಕ್ರವಾರ ಗಡಿಯಾರ ಜುಮಾ‌ ಮಸೀದಿ ಆವರಣದಲ್ಲಿ ‌ನಡೆಯಿತು. ಇದೇ ವೇಳೆ ಉತ್ತಮ ಅಂಕಗಳನ್ನು ಪಡೆದ ದುಲ್ಖತ್ಹುಲ್ ಅಫೀಫಾ (ಅಂಕ 617), ಮುಹಮ್ಮದ್ ಶಬೀರ್ ಕೆ (ಅಂಕ 590), ಮುಹಮ್ಮದ್ ರಾಫಿ (ಅಂಕ 566),ಮುಹಮ್ಮದ್ ನಿಹಾಲ್ (ಅಂಕ 560), ಮರಿಯಂ ರಾಯಿದ್ (ಅಂಕ 549) ಇವರನ್ನು ಪೋಷಕರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು. ಸಮಾರಂಭದ ಮುಖ್ಯ…

Read More

ಪಿವಿಎಸ್ ವೃತ್ತ ಬಳಿಯ ಆಟೋರಿಕ್ಷಾ ನಿಲ್ದಾಣಕ್ಕೆ ನೂತನವಾಗಿ ನಿರ್ಮಿಸಲಾದ ಮೇಲ್ಚಾವಣಿಯ ಉದ್ಘಾಟನೆ ಇಂದು.

ಪಿವಿಎಸ್ ವೃತ್ತ ಬಳಿಯ ಆಟೋರಿಕ್ಷಾ ನಿಲ್ದಾಣಕ್ಕೆ ನೂತನವಾಗಿ ನಿರ್ಮಿಸಲಾದ ಮೇಲ್ಚಾವಣಿಯ ಉದ್ಘಾಟನೆಯನ್ನು ಶಾಸಕ ವೇದವ್ಯಾಸ ಕಾಮತ್ ರವರು ನೆರವೇರಿಸಿದರು. ಈ ವೇಳೆ ಮಾತನಾಡಿದ ಶಾಸಕರು, ನಿಮ್ಮೆಲ್ಲರ ಅನುಕೂಲಕ್ಕಾಗಿ ಶಾಸಕರ ನಿಧಿಯಿಂದ ಅನುದಾನವನ್ನು ಹೊಂದಿಸಿಕೊಂಡು ಈ ಆಟೋರಿಕ್ಷಾ ನಿಲ್ದಾಣದ ಮೇಲ್ಚಾವಣಿಯನ್ನು ನಿರ್ಮಿಸಲಾಗಿದ್ದು, 79ನೇ ಸ್ವಾತಂತ್ರ್ಯೋತ್ಸವದ ಶುಭ ದಿನದಂದೇ ಉದ್ಘಾಟನೆಗೊಳ್ಳುತ್ತಿದೆ. ಇಲ್ಲಿನ ಚಾಲಕ ಬಂಧುಗಳಿಗೆ ಇದರ ಉಪಯೋಗವಾದರೆ ಅದಕ್ಕಿಂತ ಸಂತೋಷ ಬೇರೇನಿಲ್ಲ, ಎಲ್ಲರಿಗೂ ಶುಭವಾಗಲಿ ಎಂದು ಹಾರೈಸಿದರು. ನಿಕಟಪೂರ್ವ ಪಾಲಿಕೆ ಸದಸ್ಯೆ ಪೂರ್ಣಿಮಾ, ರಮೇಶ್ ಹೆಗ್ಡೆ, ಮೋಹನ್ ಪೂಜಾರಿ, ಭಾಗ್ಯ…

Read More

ದಕ್ಷಿಣಕನ್ನಡದ ಹೆಸರು ಮಂಗಳೂರು ಎಂದಾಗಲಿ :- ಅಧಿವೇಶನದಲ್ಲಿ ಆಗ್ರಹಿಸಿದ ಶಾಸಕ ಕಾಮತ್

ಕೇವಲ ಒಂದೆರಡು ತಿಂಗಳಲ್ಲಿಯೇ ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಬದಲಾಯಿಸಲು ತೋರಿದ ಉತ್ಸಾಹವನ್ನು ದಕ್ಷಿಣಕನ್ನಡದ ಹೆಸರನ್ನು ಮಂಗಳೂರು ಎಂದು ಬದಲಿಸುವಲ್ಲಿಯೂ ರಾಜ್ಯ ಸರ್ಕಾರ ತೋರಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ರವರು ಅಧಿವೇಶನದಲ್ಲಿ ಆಗ್ರಹಿಸಿದರು. ಗಮನ ಸೆಳೆಯುವ ವೇಳೆ ನಡೆದ ಚರ್ಚೆಯಲ್ಲಿ ಮಾತನಾಡಿದ ಶಾಸಕರು, ಸದರಿ ವಿಷಯಕ್ಕೆ ಸಂಬಂಧಿಸಿದಂತೆ ದ.ಕ ಜಿಲ್ಲಾಧಿಕಾರಿಗಳಿಂದ ವರದಿ ಬರಲು ಬಾಕಿ ಇದ್ದು ಪ್ರಸ್ತಾವನೆ ಸ್ವೀಕೃತಗೊಂಡಿರುವುದಿಲ್ಲ ಎಂದು ಸರ್ಕಾರ ಹೇಳಿದೆ. ಆದರೆ ಆ ಪ್ರಸ್ತಾವನೆ ಸಲ್ಲಿಕೆಯಾಗಲು ಸರ್ಕಾರದಿಂದ ಪೂರಕವಾದ ವಾತಾವರಣ…

Read More

ಸದನದಲ್ಲಿ ಯಶಸ್ವಿಯಾಗಿ ಕಲಾಪ ನಡೆಸಿಕೊಟ್ಟ ಶಾಸಕ ಮಂಜುನಾಥ ಭಂಡಾರಿ!

ಬೆಂಗಳೂರು: ಇಂದು ವಿಧಾನಸೌಧದಲ್ಲಿ ನಡೆದ ವಿಧಾನ ಮಂಡಲ ಅಧಿವೇಶನದಲ್ಲಿ ವಿಧಾನ ಪರಿಷತ್ ಶಾಸಕರಾದ ಮಂಜುನಾಥ ಭಂಡಾರಿಯವರು ಸಭಾಪತಿ ಪೀಠದಲ್ಲಿ ಕುಳಿತು ಶೂನ್ಯ ವೇಳೆಯ ಚರ್ಚೆಯನ್ನು ಹಾಗೂ ವಿವಿಧ ವಿಧೇಯಕಗಳ ಅಂಗೀಕಾರದ ಮೇಲಿನ ಚರ್ಚೆಯನ್ನು ಬಹಳ ಸುಧೀರ್ಘವಾಗಿ ಹಾಗೂ ಅರ್ಥಗರ್ಭಿತವಾಗಿ ನಡೆಸಿಕೊಟ್ಟರು. ಶಾಸಕ ಭಂಡಾರಿ ಅವರು ಈ ಹಿಂದೆಯೂ ಅನೇಕ ಬಾರಿ ಯಶಸ್ವಿಯಾಗಿ ವಿಧಾನ ಪರಿಷತ್ ಕಲಾಪವನ್ನು ನಿರ್ವಹಿಸುವ ಮೂಲಕ ಸೈ ಅನ್ನಿಸಿಕೊಂಡಿದ್ದಾರೆ.

Read More

ನಮ್ಮ ಕುಡ್ಲ ವಾಹಿನಿಯ ಬೊಳ್ಳಿ ಪರ್ಬ 2025 ಸಮಾರೋಪ ಮಾತೃಭಾಷೆಯಲ್ಲಿ ತುಳುವಾರ್ತೆ ಬಂದಾಗ ಬಾರೀ ಸಂತೋಷ : ಡಾ. ಡಿ. ವೀರೇಂದ್ರ ಹೆಗ್ಗಡೆ

ಮಂಗಳೂರು, ಆಗಸ್ಟ್ 13: ಧರ್ಮಸ್ಥಳದ ಎಲ್ಲಾ ಕಾರ್ಯಕ್ರಮಗಳಿಗೆ ನಮ್ಮಕುಡ್ಲ ಬೇಕೇ ಬೇಕು. ಶ್ರೀ ಕಾಂತರಾವ್ ರಂಥ ಅದ್ಭುತ ಟೀಮ್ ಇದೆ. ಮಾತೃಭಾಷೆ ನಮಗೆ ಬಹಳ ಪ್ರಿಯವಾದುದು. ಮಾತೃಭಾಷೆಯಲ್ಲಿ ತುಳುವಾರ್ತೆ, ಕಾರ್ಯಕ್ರಮ ಬಂದಾಗ ಭಾರೀ ಸಂತೋಷ ಎಂದು ರಾಜ್ಯಸಭಾ ಸದಸ್ಯ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಹೇಳಿದರು. ಮಂಗಳೂರಿನ ಪುರಭವನದಲ್ಲಿ ಆಗಸ್ಟ್ 12 ರಂದು ನಡೆದ ಪ್ರಥಮ ತುಳು ವಾರ್ತಾವಾಹಿನಿ ‘ನಮ್ಮಕುಡ್ಲ’ದ ಬೊಳ್ಳಿ ಪರ್ಬ 2025 ರ ಸಮಾರೋಪ ಸಮಾರಂಭದಲ್ಲಿ…

Read More

ದ.ಕ ಜಿಲ್ಲೆಯಲ್ಲಿ ಹಿಂದೂ ವಿರೋಧಿ ಕಾರ್ಯಪಡೆ ವ್ಯಾಪಕ . ಶಾಸಕ ವೇದವ್ಯಾಸ ಕಾಮತ್ ಆರೋಪ.

ದ.ಕ ಜಿಲ್ಲೆಯನ್ನು ಕೇಂದ್ರವಾಗಿರಿಸಿಕೊಂಡು ರಾಜ್ಯ ಕಾಂಗ್ರೆಸ್ ಸರ್ಕಾರ ಮಂಗಳೂರಿನಲ್ಲಿ ಅಸ್ಥಿತ್ವಕ್ಕೆ ತಂದಿರುವ ಕೋಮು ವಿರೋಧಿ ಕಾರ್ಯಪಡೆಯು ಹಿಂದೂ ವಿರೋಧಿ ಕಾರ್ಯಪಡೆಯಾಗಿ ಕಾರ್ಯನಿರ್ವಹಿಸುತ್ತಿರುವಂತೆ ಭಾಸವಾಗುತ್ತಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ಅಧಿವೇಶನದಲ್ಲಿ ಪ್ರಸ್ತಾಪಿಸಿದರು. ಕರಾವಳಿ ಭಾಗದಲ್ಲಿ ಗೋಕಳ್ಳರು ರಾಜಾರೋಷವಾಗಿ ತಲವಾರು ಸಹಿತ ಹಟ್ಟಿಗೆ ನುಗ್ಗಿ ಗೋವುಗಳನ್ನು ಕದ್ದುಕೊಂಡು ಹೋಗಿ ಹತ್ಯೆ ಮಾಡುತ್ತಿದ್ದಾರೆ. ಲವ್ ಜಿಹಾದ್ ಪ್ರಕರಣಗಳು ಹೆಚ್ಚುತ್ತಿವೆ. ಅತೀ ಹೆಚ್ಚು ಶಿಕ್ಷಣ ಸಂಸ್ಥೆಯಿರುವ ಮಂಗಳೂರು, ಕೇರಳದ ಗಡಿಭಾಗವಾದ್ದರಿಂದ ವ್ಯಾಪಕವಾಗಿ ಡ್ರಗ್ಸ್ ಪ್ರಕರಣಗಳು ಕಂಡು ಬರುತ್ತಿವೆ. ಇವುಗಳೇ ಇಲ್ಲಿನ…

Read More

ಪಿಲಿಕುಳ ಜೈವಿಕ ಉದ್ಯಾನವನದ ಪ್ರಾಣಿಗಳಿಗೆ ಪೂರೈಸುವ ಮಾಂಸಕ್ಕೆ ಕೊಳೆತ ಮತ್ತು ವಿಷಪೂರಿತ ಮಾಂಸ ಪೂರೈಕೆಯ ಆರೋಪ .ದೂರು ದಾಖಲು.

ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದ ಪ್ರಾಣಿಗಳಿಗೆ ಪೂರೈಸುವ ಮಾಂಸಕ್ಕೆ ಕೊಳೆತ ಮತ್ತು ವಿಷಪೂರಿತ ಮಾಂಸವನ್ನು ಬೆರೆಸಿ ಪ್ರಾಣಿಗಳನ್ನು ಕೊಲ್ಲುವ ಹುನ್ನಾರ ನಡೆದಿದೆ ಎಂದು ಆರೋಪಿಸಿ ಪಿಲಿಕುಳ ಜೈವಿಕ ಉದ್ಯಾನದ ನಿರ್ದೇಶಕ ಡಾ.ಪ್ರಶಾಂತ್ ಪೈಯವರು ಕಾವೂರು ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಹೊಸ ಗುತ್ತಿಗೆದಾರರೊಬ್ಬರು ಉದ್ಯಾನವನದ ಪ್ರಾಣಿಗಳಿಗೆ ಮಾಂಸ ಪೂರೈಕೆಯ ಗುತ್ತಿಗೆ ಪಡೆದಿದ್ದಾರೆ. ಮಾಂಸಕ್ಕೆ ಕೊಳೆತ ಅಥವಾ ವಿಷಪೂರಿತ ಮಾಂಸ ಬೆರೆಸಿ ಹೊಸ ಟೆಂಡರುದಾರರ ಮಾಂಸವನ್ನು ತಿರಸ್ಕರಿಸುವಂತೆ ಮಾಡುವ ಹುನ್ನಾರವನ್ನು ಹಿಂದಿನ ಟೆಂಡರುದಾರ ಮಾಡಿದ್ದಾನೆಂದು ಆತನ ನೌಕರನೊಬ್ಬ…

Read More

ಮಂಗಳೂರು : ಹಬ್ಬಗಳ ಸಂದರ್ಭದಲ್ಲಿ ಫ್ಲೆಕ್ಸ್ ಬೋರ್ಡ್‌ಗಳಿಗೆ ನಿಷೇಧ -ನಿಗಮದಿಂದ ಕಟ್ಟುನಿಟ್ಟಿನ ನಿರ್ದೇಶನ

ಮಂಗಳೂರು, ಆ. 12 : ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ನಗರವನ್ನು “ಫ್ಲೆಕ್ಸ್-ಮುಕ್ತ”ವನ್ನಾಗಿ ಮಾಡುವ ತನ್ನ ನಿರಂತರ ಅಭಿಯಾನದ ಭಾಗವಾಗಿ, ಮುಂಬರುವ ಧಾರ್ಮಿಕ ಅಥವಾ ಇತರ ಹಬ್ಬಗಳಿಗೆ ಫ್ಲೆಕ್ಸ್ ಬೋರ್ಡ್‌ಗಳು ಮತ್ತು ಬ್ಯಾನರ್‌ಗಳನ್ನು ಅಳವಡಿಸುವುದನ್ನು ನಿಷೇಧಿಸಿ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಹಬ್ಬದ ಋತುಗಳಲ್ಲಿ ಇಂತಹ ಪ್ರದರ್ಶನಗಳಲ್ಲಿ ಹೆಚ್ಚಳವಾಗುವ ನಿರೀಕ್ಷೆಯಿರುವ ಎಂಸಿಸಿ, “ಫ್ಲೆಕ್ಸ್-ಮುಕ್ತ ಹಬ್ಬಗಳು, ಸ್ವಚ್ಛ ಪರಿಸರ-ಎಲ್ಲರ ಜವಾಬ್ದಾರಿ” ಎಂಬ ಘೋಷಣೆಯಡಿಯಲ್ಲಿ ಸಾರ್ವಜನಿಕರ ಸಹಕಾರವನ್ನು ಕೋರಿದೆ. ಈ ತಿಂಗಳು ಸ್ವಾತಂತ್ರ್ಯ ದಿನಾಚರಣೆ, ಶ್ರೀ ಕೃಷ್ಣ ಜನ್ಮಾಷ್ಟಮಿ, ಗಣೇಶ ಚತುರ್ಥಿ, ದಸರಾ…

Read More

ಕೆಂಪುಕಲ್ಲು ಹಾಗೂ ಮರಳಿನ ತೀವ್ರ ಸಮಸ್ಯೆ. ಸದನದಲ್ಲಿ ಸರಕಾರದ ಗಮನ ಸೆಳೆದ ಶಾಸಕ ವೇದವ್ಯಾಸ ಕಾಮತ್.

ಬಿಜೆಪಿ ಹಿರಿಯ ಶಾಸಕ ಸುನಿಲ್ ಕುಮಾರ್ ಅವರ ಮಾತಿಗೆ ಧ್ವನಿಗೂಡಿಸಿದ ಶಾಸಕರು, ಗಣಿ ಇಲಾಖೆಯ ಅಧಿಕಾರಿಗಳು ಮಂಗಳೂರಿನ ವಸ್ತುಸ್ಥಿತಿ ಅರಿಯದೇ ಬೆಂಗಳೂರಿನಲ್ಲಿ ಕೂತು ಕಾನೂನು ರೂಪಿಸಿದರೆ ಇನ್ನಷ್ಟು ಗೊಂದಲಗಳೇ ಹೆಚ್ಚುವುದಲ್ಲದೇ ಪರಿಹಾರ ಸಿಗುವುದಿಲ್ಲ. ಎಲ್ಲಾ ಅಧಿಕಾರಿಗಳು ಮಂಗಳೂರಿಗೆ ಬಂದು ವಾಸ್ತವ ಅಂಶಗಳನ್ನು ತಿಳಿದುಕೊಂಡು ನೀತಿ ನಿಯಮ ರೂಪಿಸುವಂತಾಗಲಿ. ಜನಪ್ರತಿನಿಧಿಗಳಾದ ನಮ್ಮನ್ನು ಆಹ್ವಾನಿಸದೇ ಈ ಬಗ್ಗೆ ಎರಡು ಮೂರು ಸಭೆಗಳನ್ನು ನಡೆಸಲಾಗಿದೆ. ಕಲ್ಲುಗಳನ್ನು ತೆಗೆಯುವಾಗ ಎಷ್ಟು ಜಾಗಗಳನ್ನು ಲೀಸ್ ಗೆ ಪಡೆಯಲಾಗುತ್ತದೆ, ಅದರಿಂದ ಎಷ್ಟು ಕಲ್ಲು ಉತ್ಪಾದಿಸಲಾಗುತ್ತದೆ, ಅಲ್ಲಿರುವ…

Read More
error: Content is protected !!