ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಅಗತ್ಯ – ವಿಧಾನ ಪರಿಷತ್ ಸದಸ್ಯ (ಶಾಸಕ) ಕಿಶೋರ್ ಕುಮಾರ್ ಪುತ್ತೂರು

ವಿಧಾನಪರಿಷತ್ತಿನ ಮುಂಗಾರು ಅಧಿವೇಶನದಲ್ಲಿ ಶಾಸಕ ಶ್ರೀ ಕಿಶೋರ್ ಕುಮಾರ್ ಅವರು ತಮ್ಮ ಚುಕ್ಕೆ ಗುರುತಿನ ಪ್ರಶ್ನೆಯಲ್ಲಿ ಮಾನ್ಯ ಅರಣ್ಯ ಸಚಿವ ಶ್ರೀ ಈಶ್ವರ್ ಖಂಡ್ರೆ ಅವರಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಮಾನವ – ಕಾಡು ಪ್ರಾಣಿ ಸಂಘರ್ಷದ ಕುರಿತು ಸೂಕ್ತವಾದ ಕ್ರಮವನ್ನು ಕೈಗೊಂಡು ಈ ಭಾಗದ ಜನರ ಬಹುಮುಖ್ಯ ಸಮಸ್ಯೆಯ ಬಗ್ಗೆ ಬೆಳಕು ಚೆಲ್ಲಿದ್ದಾರೆ. ಪುತ್ತೂರು, ಸುಳ್ಯ, ಕಡಬ ಹಾಗೂ ಬೆಳ್ತಂಗಡಿ ತಾಲೂಕುಗಳಲ್ಲಿ ಕಾಡಾನೆಗಳು ನಾಡಿಗೆ ನುಗ್ಗಿ ಬೆಳೆ ಹಾನಿ ಮಾಡುವ ಘಟನೆಗಳು…

Read More

ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಅಖಿಲ ಭಾರತ ದೈವಾರಾಧಕ ಒಕ್ಕೂಟ. ಕರ್ನಾಟಕ ವಿಧಾನ ಸಭಾ ಅಧ್ಯಕ್ಷರಿಗೆ ಮನವಿ ಸಲ್ಲಿಕೆ.

ಅಖಿಲ ಭಾರತ ದೈವಾರಾಧಾಕರ ಒಕ್ಕೂಟ (ರಿ) ಕೇಂದ್ರೀಯ ಉಡುಪಿ ವತಿಯಿಂದ ಮಂಗಳೂರಿನಲ್ಲಿ ಕರ್ನಾಟಕ ಸರ್ಕಾರದ ವಿಧಾನ ಸಭಾಧ್ಯಕ್ಷರಾದ ಹಾಗೂ ಕ್ಷೇತ್ರದ ಶಾಸಕರಾದ ಯು ಟಿ ಖಾದರ್ ಅವರನ್ನು ಒಕ್ಕೂಟದ ಸದಸ್ಯರು ಭೇಟಿಯಾಗಿ ಮಂಗಳೂರು ಹಾಗೂ ಉಡುಪಿ ಜಿಲ್ಲೆಯಲ್ಲಿ ಸಾವಿರಾರು ವರ್ಷಗಳ ಇತಿಹಾಸ ಇರುವ ದೈವಾರಾಧನೆ ಕ್ಷೇತ್ರದಲ್ಲಿ ಚಾಕ್ರಿ ಮಾಡುವ ಸುಮಾರು 16 ವರ್ಗಗಳಿವೆ ಹಾಗೂ ಸುಮಾರು 20 ಸಾವಿರದ ಜನ ದೈವಚಕ್ರಿಯನ್ನು ಕುಲ ಕಸುಬು ವಾಗಿ ಅವಲಂಬಿಸಿದ್ದಾರೆ ದೈವಚಾಕ್ರಿ ವರ್ಗವನ್ನು ಸರ್ಕಾರಕ್ಕೆ ಸಂಬಂಧಪಟ್ಟ ಇಲಾಖೆಗೆ ಸೇರ್ಪಡಿಸುವುದು. 60…

Read More

ಧರ್ಮಸ್ಥಳ: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣದಲ್ಲಿ ಆರೋಪಿಗಳ ದಸ್ತಗಿರಿ

ಮಂಗಳೂರು : ಧರ್ಮಸ್ಥಳ ಪಾಂಗಳ ಕ್ರಾಸ್ ಬಳಿ ನಡೆದ ಅಹಿತಕರ ಘಟನೆಯ ವೇಳೆ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ:47/2025 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತದೆ . ಧರ್ಮಸ್ಥಳ ನಿವಾಸಿಗಳಾದ ಪದ್ಮಪ್ರಸಾದ್ (32),ಸುಹಾಸ್ (22),ಶಶಿಧರ್(30),ಉಜಿರೆ ನಿವಾಸಿ ಖಲಂದರ್ ಪುತ್ತುಮೋನು (42),ಕಳೆಂಜ ನಿವಾಸಿ ಚೇತನ್ (21),ಕಳ್ಮಂಜ ನಿವಾಸಿ ಗುರುಪ್ರಸಾದ್ (19) ಎಂಬವರುಗಳನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರಾಪಡಿಸಲಾಗಿದೆ.ನ್ಯಾಯಾಲಯವು ಆರೋಪಿಗಳಿಗೆ ಮಧ್ಯಂತರ ಜಾಮೀನು ನೀಡಿ ಬಿಡುಗಡೆಗೊಳಿಸಿರುತ್ತದೆ ಎಂದು ಪೊಲೀಸ್ ಮೂಲಗಳು ತಿಳಿಸಿದೆ.

Read More

ತೌಡುಗೋಳಿ ಶ್ರೀ ದುರ್ಗಾದೇವಿ ಕ್ಷೇತ್ರ ದಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣೆ

ಉಳ್ಳಾಲ : ತೌಡುಗೋಳಿ ಶ್ರೀ ದುರ್ಗಾ ದೇವಿ ಕ್ಷೇತ್ರ , ಶ್ರೀ ಅಯ್ಯಪ್ಪ ಸ್ವಾಮಿ ಮಂದಿರ ಹಾಗೂ ಪರಿವಾರ ದೈವಗಳ ಸಾನಿಧ್ಯದಲ್ಲಿ ಆಗಸ್ಟ್ 10, ರ ಭಾನುವಾರ ವನಮಹೋತ್ಸವ ಹಾಗೂ ಸಸಿ ವಿತರಣೆ ನಡೆಯಿತು. ಮುಖ್ಯ ಅತಿಥಿಗಳಾಗಿ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಆಗಮಿಸಿದ ಭಕ್ತರಿಗೆ ಮಾಡಿ ಮಾತನಾಡುತ್ತಾ ಗಿಡ ನೆಟ್ಟು ಬಿಡಬಾರದು, ಅದನ್ನು ಪೋಷಣೆಮಾಡಿದರೆ ಅದು ಮುಂದೆ ಹೆಮ್ಮರವಾಗಿ ಬೆಳೆದು ಫಲ ಕೊಡುತ್ತದೆ, ನಮಗೆ ನೆರಳು ಕೊಡುತ್ತದೆ ಮನುಷ್ಯನಿಗೆ ಉಸಿರಾಡಲು ಸ್ವಚ್ಛ ಗಾಳಿಕೊಡುತ್ತದೆ ಈ ಕ್ಷೇತ್ರ…

Read More

ಮುದ್ದುಕಂದ ಕೃಷ್ಣರ ಮೋಹಕ ಲೀಲೆ: ಕೆನರಾ ಶಿಕ್ಷಣ ಸಂಸ್ಥೆಯಲ್ಲಿ ಗೋಕುಲಾಷ್ಟಮಿ- 2025

ಮಂಗಳೂರು, 10ಆಗಸ್ಟ್ 2025 –ಕೆನರಾ ಹೈ ಸ್ಕೂಲ್ ಅಸೋಸಿಯೇಷನ್, ಮಂಗಳೂರು, ಕೆನರಾ ಸಾಂಸ್ಕೃತಿಕ ಅಕಾಡೆಮಿಯ ಪ್ರಾಯೋಜಕತ್ವದಲ್ಲಿ, ಗೋಕುಲಾಷ್ಟಮಿ-2025 ಪ್ರಯುಕ್ತ ಮುದ್ದು ಕೃಷ್ಣ ವೇಷ ಸ್ಪರ್ಧೆವನ್ನು ಭವ್ಯವಾಗಿ ಆಯೋಜಿಸಲಾಯಿತು. ಭಾರತೀಯ ಪರಂಪರೆ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ವಿದ್ಯಾರ್ಥಿ ಹಾಗೂ ಯುವ ಸಮುದಾಯದಲ್ಲಿ ಬೆಳೆಸುವ ಉದ್ದೇಶದಿಂದ ಈ ವಿಶೇಷ ಕಾರ್ಯಕ್ರಮವನ್ನು ನಡೆಸಲಾಯಿತು. ಟಿವಿ ರಮಣ ಪೈ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ ಈ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಕೆನರಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಿ. ವಾಸುದೇವ ಕಾಮತ್ ಉದ್ಘಾಟಿಸಿದರು….

Read More

ಶಕ್ತಿನಗರದ ನಾಲ್ಯಪದವಿನಲ್ಲಿ ಆಟೋ ರಿಕ್ಷಾ ಸ್ಟ್ಯಾಂಡ್ ಉದ್ಘಾಟನಾ ಕಾರ್ಯಕ್ರಮ.

ಮಂಗಳೂರು ನಗರ ದಕ್ಷಿಣ ಕ್ಷೇತ್ರದ 21ನೇ ಪದವು ಪಶ್ಚಿಮ ವಾರ್ಡಿನ ಶಕ್ತಿನಗರದ ನಾಲ್ಯಪದವಿನಲ್ಲಿ ಶಾಸಕರಾದ ಶ್ರೀ ಡಿ.ವೇದವ್ಯಾಸ ಕಾಮತ್ ಅವರ ಸಂಪೂರ್ಣ ಸಹಕಾರದಿಂದ ನಿರ್ಮಾಣಗೊಂಡ ಆಟೋ ರಿಕ್ಷಾ ಸ್ಟ್ಯಾಂಡ್ ಉದ್ಘಾಟನಾ ಕಾರ್ಯಕ್ರಮವು ನಡೆಯಿತು. ದಿನನಿತ್ಯ ದುಡಿಯುವ ಆಟೋ ಚಾಲಕರದ್ದು ಶ್ರಮಿಕ ವರ್ಗವಾಗಿದ್ದು ಅವರುಗಳು ಪ್ರಯಾಣಿಕರ ಜೊತೆಗೆ ತಮ್ಮ ಆಟೋಗಳ ಬಗ್ಗೆಯೂ ವಿಶೇಷ ಕಾಳಜಿ ಹೊಂದಿರುತ್ತಾರೆ. ತಾವು ಬಿಸಿಲಲ್ಲಿದ್ದರೂ ತಮ್ಮ ಆಟೋಗಳು ನೆರಳಲ್ಲಿ ಇರಬೇಕು ಎಂದು ಬಯಸುವ ಅವರಿಗೆ ಈ ನೂತನ ರಿಕ್ಷಾ ಪಾರ್ಕ್ ಉಪಯೋಗವಾಗಲಿದೆ. ಸಾರ್ವಜನಿಕರಿಗೆ ಅತ್ಯುತ್ತಮ…

Read More

ಈಜು ಪಟು ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ಸ್ಥಾನ ಗಳಿಸಿದ್ದ ಕೆ. ಚಂದ್ರಶೇಖರ್ ರೈ ದುರಂತ ಸಾವು

ಈಜುಕೊಳದಲ್ಲಿ ಮುಳುಗಿ ಕೋಚ್, ಲೈಫ್‌ಗಾರ್ಡ್ ಸಾವನ್ನಪ್ಪಿದ ಘಟನೆ ಮಂಗಳೂರಿನ ಲೇಡಿಹಿಲ್‌ನಲ್ಲಿರುವ ಮಹಾನಗರ ಪಾಲಿಕೆಯ ಈಜುಕೊಳದಲ್ಲಿ ರವಿವಾರ ಘಟನೆ ನಡೆದಿದೆ . ಮೃತರನ್ನು ಕೆ. ಚಂದ್ರಶೇಖರ್ ರೈ ಸೂರಿಕುಮೇರು (52) ಎಂದು ಗುರುತಿಸಲಾಗಿದೆ. ನಿರ್ವಹಣೆ ಕೆಲಸಗಳು ನಡೆಯುತ್ತಿದ್ದರಿಂದ ಭಾನುವಾರ ಈಜುಕೊಳಕ್ಕೆ ರಜೆ ಇತ್ತು. ಈ ಸಮಯದಲ್ಲಿ ಈಜಲು ನೀರಿಗಿಳಿದ ಅವರು ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.ಕೆ. ಚಂದ್ರಶೇಖರ್ ರೈ ಅವರು 2023 ರಲ್ಲಿ ಈಜುಕೊಳದ ನೀರಿನೊಳಗೆ ಒಂದು ನಿಮಿಷದಲ್ಲಿ 28 ಬಾರಿ ಸಮ್ಮರ್‌ಸಾಲ್ಟ್ ಎಂಬ ಸ್ಟಂಟ್ ಮಾಡಿ ‘ವರ್ಲ್ಡ್ ವೈಡ್…

Read More

ಮಂಗಳೂರು ಭಾರತೀಯ ಜನತಾ ಪಕ್ಷದ ಕಾರ್ಯಾಲಯದಲ್ಲಿ ರಕ್ಷಾಬಂಧನ

ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ರಕ್ಷಾಬಂಧನದ ಪ್ರಯುಕ್ತ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಸೈನಿಕರಿಗೆ ರಕ್ಷೆಯನ್ನು ಕಟ್ಟಿ ಶುಭ ಹಾರೈಸಲಾಯಿತು. ನಿವೃತ್ತ ಸೈನಿಕರಿಗೆ ಆರತಿ ಬೆಳಗಿ, ಸಿಂಧೂರ ತಿಲಕವಿಟ್ಟು ಪೆಹಲ್ಗಮ್ ಉಗ್ರರ ದಾಳಿಯಲ್ಲಿ ಸಿಂಧೂರವನ್ನು ಕಳಕೊಂಡ ತಾಯಂದಿರ ನೋವಿಗೆ ಆಪರೇಷನ್ ಸಿಂಧೂರದ ಮೂಲಕ ಪ್ರತ್ಯುತ್ತರ ನೀಡಿದ ಭಾರತೀಯ ಸೇನೆಗೆ ಮಹಿಳಾ ಮೋರ್ಚಾದಿಂದ ಧನ್ಯವಾದ ಸಮರ್ಪಿಸಲಾಯಿತು. ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ,…

Read More

ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಪೋಟ ’ಧರ್ಮಸ್ಥಳ’ ಕ್ಷೇತ್ರವನ್ನು ಟಾರ್ಗೆಟ್ ಮಾಡಿರುವ ಆಘಾತಕಾರಿ ಸಂಗತಿ

ಮಂಗಳೂರು ಹೊರ ವಲಯದಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಬ್ಲಾಸ್ಟ್ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ವಿಚಾರಣಾ ಮಾಹಿತಿ ಆರೋಪಿಯು, ಧರ್ಮಸ್ಥಳದಲ್ಲಿ ಸ್ಪೋಟ ನಡೆಸಲು ಸಂಚು ರೂಪಿಸಿದ್ದ ಎನ್ನುವುದನ್ನು ಬೆಳಕಿಗೆ ತಂದಿದೆ.ನವೆಂಬರ್ 2022ರಲ್ಲಿ ನಡೆದ ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟಕ್ಕೆ ಸಂಬಂಧಿಸಿದಂತೆ ಇಡಿ ವಿಚಾರಣೆ ನಡೆಸುತ್ತಿದೆ. ಮಂಗಳೂರಿನಲ್ಲಿ ಹಿಂದೆ ಆಟೋರಿಕ್ಷಾದಲ್ಲಿ ಕಡಿಮೆ ತೀವ್ರತೆಯ ಸ್ಪೋಟ ಸಂಭವಿಸಿತ್ತು. ಜಾರಿ ನಿರ್ದೇಶನಾಲಯವು, ಪ್ರಮುಖ ಆರೋಪಿ ಸಯ್ಯದ್ ಯಾಸಿನ್ ಬ್ಯಾಂಕ್ ಖಾತೆಯಲ್ಲಿದ್ದ 29 ಸಾವಿರ ರೂಪಾಯಿ ಹಣವನ್ನು, ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿಯಲ್ಲಿ ಮುಟ್ಟುಗೋಲು…

Read More

ಸರ್ಕಾರದ ಬೊಕ್ಕಸದಿಂದ ಪಿಂಚಣಿ ಕೊಡಿ. ಜನರ ಜೇಬಿನಿಂದ ಅಲ್ಲ :- ಶಾಸಕ ಕಾಮತ್

ವಿದ್ಯುತ್ ಸರಬರಾಜು ನಿಗಮಗಳ ನೌಕರರಿಗೆ ಪಿಂಚಣಿ ಹಾಗೂ ಗ್ರಾಚ್ಯುಟಿ ನೀಡಲು, ಗ್ರಾಹಕರಿಂದಲೇ ಹಣ ವಸೂಲಿ ಮಾಡುವ ಮೂಲಕ ಹಗಲು ದರೋಡೆಗಿಳಿದಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ತಪ್ಪನ್ನು ತಿದ್ದಿಕೊಳ್ಳುವ ಬದಲು, ಮುಚ್ಚಿಕೊಳ್ಳಲು ಪ್ರಯತ್ನಿಸಿ, “ಆ ನಿರ್ಧಾರ ನಮ್ಮದಲ್ಲ, ಹಿಂದಿನ ಸರ್ಕಾರದ್ದು” ಎಂದು ಬಾಲಿಶ ಹೇಳಿಕೆ ನೀಡಿ ಜನತೆಯ ಮುಂದೆ ಇನ್ನಷ್ಟು ಬೆತ್ತಲಾಗುತ್ತಿದ್ದಾರೆ ಎಂದು ಶಾಸಕ ವೇದವ್ಯಾಸ್ ಕಾಮತ್ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಅವಧಿಯ ಕರೆಂಟ್ ಬಿಲ್ಲುಗಳಲ್ಲಿ ಪಿಂಚಣಿ ಹಾಗೂ ಗ್ರ್ಯಾಚುಟಿ ಹೆಸರಿನಲ್ಲಿ ಒಂದೇ ಒಂದು…

Read More
error: Content is protected !!