ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಬೆಳಕಿಗೆ ಬಂದರೂ ಪ್ರಧಾನಿ ಮೋದಿ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಯಾರೂ ನೈತಿಕ ಹೊಣೆ ಹೊತ್ತಿಲ್ಲ. ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆ ನೀಟ್ ಪರೀಕ್ಷೆ ರದ್ದುಗೊಂಡಿರುವ ಘಟನೆ ದೇಶದ ಶಿಕ್ಷಣ ವ್ಯವಸ್ಥೆಯ ಮೇಲಿನ ನಂಬಿಕೆಗೆ ದೊಡ್ಡ ಹೊಡೆತ ನೀಡಿದ್ದು, ಇದು ಕೇಂದ್ರ ಬಿಜೆಪಿ ಸರ್ಕಾರದ ವೈಫಲ್ಯಕ್ಕೆ ಕಾರಣವಾಗಿದೆ. ಪ್ರಶ್ನೆಪತ್ರಿಕೆ ಸೋರಿಕೆಯಂತಹ ಗಂಭೀರ ಹಗರಣದಿಂದ ವಿದ್ಯಾರ್ಥಿಗಳ ಭವಿಷ್ಯವೇ ಅತಂತ್ರ ಸ್ಥಿತಿಗೆ ತಳ್ಳಲ್ಪಟ್ಟಿದ್ದು, ಅವರ ಕನಸು ನುಚ್ಚುನೂರಾಗಿದೆ. ಕೇಂದ್ರ ಸರ್ಕಾರ ಹಾಗೂ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ…

Read More

ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ SDPI ಪ್ರತಿಭಟನೆ

ಮಂಗಳೂರು: ರಾಜ್ಯ ಸರ್ಕಾರ ಕೈಗೊಂಡಿರುವ ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ನೀತಿಯನ್ನು ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ನಗರ ಜಿಲ್ಲಾ ಸಮಿತಿಯ ವತಿಯಿಂದ ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ SDPI ಮಂಗಳೂರು ನಗರ ಜಿಲ್ಲಾ ಉಪಾಧ್ಯಕ್ಷ ಅಶ್ರಪ್ ಅಡ್ಡೂರು ಜಿಲ್ಲೆಯ ನಾಲ್ಕು ತಾಲೂಕು ಆಸ್ಪತ್ರೆಗಳನ್ನು ಖಾಸಗಿ ಆಸ್ಪತ್ರೆಗಳ ಸುಪರ್ದಿಗೆ ಒಪ್ಪಿಸುವ ಬದಲು ಅಲ್ಲಿಗೆ ಸರಕಾರಿ ತಜ್ಞ ವೈದ್ಯರನ್ನು ನೇಮಿಸಿ, ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಿ ಉತ್ತಮ ಆರೋಗ್ಯ ಸೇವೆ…

Read More

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ಕೇಂದ್ರ ಸರ್ಕಾರದ ವಿರುದ್ಧ ಎನ್‌ಎಸ್‌ಯುಐ ಆಕ್ರೋಶ

ಮಂಗಳೂರು: ನೀಟ್ (NEET) ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ದೇಶದ ಶಿಕ್ಷಣ ವ್ಯವಸ್ಥೆಯ ಮೇಲಿನ ನಂಬಿಕೆಗೆ ದೊಡ್ಡ ಹೊಡೆತವಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಎನ್‌ಎಸ್‌ಯುಐ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಅಭಿಷೇಕ್ ಉಳ್ಳಾಲ ಮಾತನಾಡಿ, “ಸಾಮಾನ್ಯ ವಿಚಾರಗಳಿಗೂ ಬೀದಿಗಿಳಿದು ಪ್ರತಿಭಟನೆ ನಡೆಸುವ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ಇಂದು ಮೌನ ವಹಿಸಿರುವುದು ಅರ್ಥವಾಗದ ಸಂಗತಿ. ಪ್ರಶ್ನೆಪತ್ರಿಕೆ ಸೋರಿಕೆಯಿಂದ ಭವಿಷ್ಯ ಕತ್ತಲಾದ ಕಾರಣ ನಾಲ್ಕಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ…

Read More

ಮಂಗಳೂರಿನಲ್ಲಿ ನಾಲ್ಕು ಅತ್ಯಾಧುನಿಕ ಸಭಾಭವನಗಳ ಲೋಕಾರ್ಪಣೆ

ಮಂಗಳೂರು, ಮೇ 23: ಬಡತನ ನಿರ್ಮೂಲನೆ ಹಾಗೂ ಸಮಾಜದಲ್ಲಿ ಸಮಾನತೆ ಸಾಧಿಸಲು ಶಿಕ್ಷಣವೇ ಪ್ರಮುಖ ಅಸ್ತ್ರ ಎಂದು ಆಂಧ್ರಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್ ಹೇಳಿದರು. ಮೇರಿಹಿಲ್‌ನ ಪಾಲೆಮಾರ್ ಕನ್ವೆನ್ಶನ್ ಸೆಂಟರ್‌ನಲ್ಲಿ ಶನಿವಾರ ಲ್ಯಾಂಡ್ ಲಿಂಕ್ಸ್ ಸಂಸ್ಥೆಯಿಂದ ನಿರ್ಮಿಸಲಾದ ನಾಲ್ಕು ಅತ್ಯಾಧುನಿಕ ಸಭಾಭವನಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರು ಶಿಕ್ಷಣ, ಸಮಾಜಸೇವೆ ಹಾಗೂ ಉದ್ಯಮ ಕ್ಷೇತ್ರಗಳಲ್ಲಿ ಸಲ್ಲಿಸಿರುವ ಕೊಡುಗೆ ಶ್ಲಾಘನೀಯವಾಗಿದೆ. ಬಡ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಹಾಗೂ…

Read More

7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಮಂಗಳೂರಿನಲ್ಲಿ ಬಂಧನ

7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರಲ್ಲಿ ಬಂಧಿಸಲಾಗಿದೆ. ಮಂಗಳೂರು ಕಸಬಾ ಬೇಂಗ್ರೆ ನಿವಾಸಿ ಅಕ್ರಂ @ ಬೋಜ ಅಕ್ರಂ, ಬಂಧಿತ ವ್ಯಕ್ತಿ. ಉಪ್ಪಿನಂಗಡಿ ಠಾಣಾ ಅಕ್ರ:158/2015 ಕಲಂ:457, 380 ಐಪಿಸಿ ಪ್ರಕರಣದಲ್ಲಿ ಆರೋಪಿಯಾಗಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ಸುಮಾರು 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಅಕ್ರಂನನ್ನು ನಿನ್ನೆ ಉಪ್ಪಿನಂಗಡಿ ಪೊಲೀಸ್ ಠಾಣೆಯ ಪಿಎಸ್ ಐ ಕೌಶಿಕ್ ಬಿಸಿ, ಸಿಬ್ಬಂದಿಯವರಾದ ಶಿವರಾಮ್ ರೈ, ಮಹದೇವ ರವರು ಮಂಗಳೂರಿನ ಪಣಂಬೂರಿನಲ್ಲಿ ದಸ್ತಗಿರಿ ಮಾಡಿ ಪತ್ತೆ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ…

Read More

ಕೋಕ್ ಸಲ್ಪರ್ ಘಟಕ ವಿರುದ್ಧ ಹೋರಾಟ ತೀವ್ರ

ಹಸಿರು ವಲಯ ನಿರ್ಮಾಣ, ಪುನರ್ವಸತಿಗೆ ಆಗ್ರಹಿಸಿ 6ನೇ ದಿನಕ್ಕೂ ಧರಣಿ ಮುಂದುವರಿಕೆ ಮಂಗಳೂರು: ಎಂಆರ್‌ಪಿಎಲ್‌ನ ಕೋಕ್ ಸಲ್ಪರ್ ಘಟಕದಿಂದ ಉಂಟಾಗುತ್ತಿರುವ ಗಂಭೀರ ಮಾಲಿನ್ಯ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಜೋಕಟ್ಟೆ, ಕೆಂಜಾರು ಹಾಗೂ ಕಳವಾರು ಭಾಗದ ಗ್ರಾಮಸ್ಥರು ನಡೆಸುತ್ತಿರುವ ಹಗಲು-ರಾತ್ರಿ ಧರಣಿ ಆರನೇ ದಿನಕ್ಕೂ ಮುಂದುವರಿದಿದೆ. ಕೋಕ್ ಸಲ್ಪರ್ ಘಟಕದ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿರುವ ನಾಗರಿಕ ಹೋರಾಟ ಸಮಿತಿ, ಜನವಸತಿ ಪ್ರದೇಶದಲ್ಲಿ ತಕ್ಷಣ ಹಸಿರು ವಲಯ ನಿರ್ಮಾಣಕ್ಕಾಗಿ ಭೂಸ್ವಾಧೀನ ಪ್ರಕ್ರಿಯೆ ಆರಂಭಿಸಬೇಕು ಹಾಗೂ ಸಂತ್ರಸ್ತರಿಗೆ ಪುನರ್ವಸತಿ…

Read More

ಬಕ್ರೀದ್ ಹಿನ್ನೆಲೆ: ಗೋವಂಶ ಅಕ್ರಮ ಸಾಗಾಣಿಕೆ ತಡೆಗೆ ವಿಹಿಂಪ ಮನವಿ

ಮಂಬರಲಿರುವ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಕಾನೂನುಬಾಹಿರವಾಗಿ ಗೋವಂಶದ ಸಾಗಾಣಿಕೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಗೋವಂಶ ಬಲಿ ಬಲಿ(ಕುರ್ಬಾನಿ) ನಡೆಯುವ ಸಾಧ್ಯತೆಯಿದೆ. ಇದನ್ನು ತಡೆಗಟ್ಟಲು ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020 ಮತ್ತು ಜಾನುವಾರು ಸಾಗಾಟ ನಿಯಮಾವಳಿ 2021 ಅನ್ವಯ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಪುತ್ತೂರು ಗ್ರಾಮಾಂತರ ವತಿಯಿಂದ ವತಿಯಿಂದ ಇಂದು ಪುತ್ತೂರು ಗ್ರಾಮಾಂತರ ಪೋಲಿಸ್ ಠಾಣೆಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ…

Read More

ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಎದುರು ಮೂಲಸೌಕರ್ಯ ಕೊರತೆ …… ! ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮೂಲಸೌಕರ್ಯ ಕೊರತೆ; ವಾಹನ ದಟ್ಟಣೆ ಸಮಸ್ಯೆ ಗಂಭೀರ: ಅಝೀಝ್ ಪರ್ತಿಪಾಡಿ

ಮಂಗಳೂರು, ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಹಾಗೂ ಅದರ ಎದುರು ಭಾಗದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಮತ್ತು ವಾಹನ ದಟ್ಟಣೆ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದೆ ಎಂದು ದಕ್ಷಿಣ ಕನ್ನಡ ಬಸ್ಸು ಮಾಲಕರ ಸಂಘ (ರಿ.) ಮಂಗಳೂರು ಅಧ್ಯಕ್ಷ ಅಝೀಝ್ ಪರ್ತಿಪಾಡಿ ಆರೋಪಿಸಿದರು. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಎದುರು ನಾಲ್ಕು ದಿಕ್ಕುಗಳಿಂದ ರಸ್ತೆ ಸಂಪರ್ಕವಿದ್ದರೂ, ಸಮರ್ಪಕ ಸರ್ಕಲ್‌ ಅಥವಾ ಸಂಚಾರ ನಿಯಂತ್ರಣ ವ್ಯವಸ್ಥೆ ಇಲ್ಲದ ಕಾರಣ ವಾಹನ ದಟ್ಟಣೆ…

Read More

ಮುಂಗಾರು ಎಚ್ಚರಿಕೆ: ವಾಹನ ಚಾಲಕರಿಗೆ ಬಸ್ ಮಾಲಕರ ಸಂಘದ ಸುರಕ್ಷತಾ ಸಲಹೆ

ಮಂಗಳೂರು, ಮೇ 23: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಆರಂಭವಾಗಿರುವ ಹಿನ್ನೆಲೆಯಲ್ಲಿ ರಸ್ತೆ ಹಾಗೂ ಹೆದ್ದಾರಿಗಳಲ್ಲಿ ಗ್ರೀಸ್, ಆಯಿಲ್, ಡೀಸೆಲ್‌ ಸೇರಿದಂತೆ ಜಾರುವ ಪದಾರ್ಥಗಳಿಂದ ಅಪಘಾತಗಳ ಸಾಧ್ಯತೆ ಹೆಚ್ಚಿರುವುದರಿಂದ ವಾಹನ ಚಾಲಕರು ಮತ್ತು ಪ್ರಯಾಣಿಕರು ಹೆಚ್ಚಿನ ಎಚ್ಚರಿಕೆ ವಹಿಸಬೇಕೆಂದು ದಕ್ಷಿಣ ಕನ್ನಡ ಬಸ್ಸು ಮಾಲಕರ ಸಂಘ (ರಿ.) ಮಂಗಳೂರು ಮನವಿ ಮಾಡಿದೆ. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಅಝೀಝ್ ಪರ್ತಿಪಾಡಿ, ಮಳೆಯ ಸಮಯದಲ್ಲಿ ರಸ್ತೆಗಳಲ್ಲಿ ಹೊಂಡಗಳು, ಜಾರಿ ಪ್ರದೇಶಗಳು ಹಾಗೂ ಇತರೆ ಅಡೆತಡೆಗಳು…

Read More

ಯುನೈಟೆಡ್ ಹೋಮ್ಸ್ – ಆರ್ಥಿಕವಾಗಿ ಹಿಂದುಳಿದವರಿಗೆ ಒಂದು ಆಶ್ರಯ ತಾಣ

ಮಂಗಳೂರು, ಮೇ 17: ಬಿಜೈಯ ‘ಯುನೈಟೆಡ್ ಫ್ರೆಂಡ್ಸ್ ಟ್ರಸ್ಟ್’ ವತಿಯಿಂದ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗಾಗಿ ಹಮ್ಮಿಕೊಳ್ಳಲಾದ ‘ಯುನೈಟೆಡ್ ಹೋಮ್ಸ್’ ವಸತಿ ಯೋಜನೆಯನ್ನು ಅಬ್ಬೆಟ್ಟುವಿನಲ್ಲಿ ಉದ್ಘಾಟಿಸಲಾಯಿತು. 10 ವಸತಿ ಘಟಕಗಳನ್ನು ಒಳಗೊಂಡಿರುವ ಈ ಅಪಾರ್ಟ್‌ಮೆಂಟ್ ಕಟ್ಟಡವನ್ನು ಬಿಜೈಯ ಸಂತ ಫ್ರಾನ್ಸಿಸ್ ಕ್ಸೇವಿಯರ್ ಚರ್ಚ್‌ನ ಪ್ರಧಾನ ಧರ್ಮಗುರುಗಳಾದ ವಂದನೀಯ ಡಾ. ಜೆ. ಬಿ. ಸಲ್ಡಾನ್ಹಾ ಅವರು ಆಶೀರ್ವದಿಸಿದರು. ದೈಜಿವರ್ಲ್ಡ್ ಮೀಡಿಯಾ ಪ್ರೈವೇಟ್ ಲಿಮಿಟೆಡ್‌ನ ಸಂಸ್ಥಾಪಕರಾದ ಶ್ರೀ ವಾಲ್ಟರ್ ನಂದಳಿಕೆ ಮತ್ತು ದಾನಿ ಶ್ರೀ ಮೈಕಲ್ ಡಿಸೋಜಾ ಅವರ ಪ್ರತಿನಿಧಿಯಾದ ಶ್ರೀ…

Read More
error: Content is protected !!