ಮಂಗಳೂರಿನಲ್ಲಿ ಧರೆ ಕುಸಿತ; ವ್ಯಕ್ತಿ ದುರ್ಮರಣ

ಮಂಗಳೂರು :ಧರೆ ಕುಸಿದು ಮಣ್ಣಿನಡಿ ಸಿಲುಕಿದ ವ್ಯಕ್ತಿ ಮೃತಪಟ್ಟಿದ್ದಾರೆ.ಕುಂಟಿಕಾನ ಬಳಿಯ ಲೋಹಿತ್ ನಗರದಲ್ಲಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಗುರುವಾರ (ಮೇ 21) ನಡೆದಿದೆ.ಉರ್ವ ಅಶೋಕನಗರ ನಿವಾಸಿ ಆಂಟನಿ ಮಸ್ಕರೇನ್ಹಸ್ (65) ಮೃತರು. ಸ್ಥಳಕ್ಕೆ ಧಾವಿಸಿದ ಕದ್ರಿ ಅಗ್ನಿಶಾಮಕ ಠಾಣೆ ಸಿಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿದರಾದರೂ ಅವರನ್ನು ಉಳಿಸಲಾಗಲಿಲ್ಲ. ಗುರುವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಮನೆಯೊಂದರ ಹಿಂಭಾಗದಲ್ಲಿ ಅವರಣ ಗೋಡೆ ನಿರ್ಮಾಣಕ್ಕೆ ಅಳತೆ ಮಾಡುತ್ತಿದ್ದಾಗ ಧರೆ ಜರಿದು ಅವಘಡ…

Read More

ಮೇ.26ಕ್ಕೆ ಹಕ್ಕುಪತ್ರ ವಿತರಣೆ: ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಪುತ್ತೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಪುಣಚ ಗ್ರಾಮದ ಪರಿಶಿಷ್ಟ ಪಂಗಡದ ಮೂರು ಕುಟುಂಬಗಳಿಗೆ ಹಕ್ಕುಪತ್ರಕ್ಕಾಗಿ ನಾಲ್ಕು ದಿನಗಳಿಂದ ಬಂಟ್ವಾಳ ಮಿನಿವಿಧಾನ ಸೌಧದ ಕಚೇರಿಯ ಮುಂಭಾಗದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ನೇತ್ರತ್ವದಲ್ಲಿ ಮಾತುಕತೆ ನಡೆಸಿ ಕೊನೆಗೊಳಿಸಲಾಯಿತು. ಮೇ. 26 ರಂದು ಪೆರ್ನೆಯ ಗ್ರಾ.ಪಂ.ನಲ್ಲಿ ಮೂರು ಕುಟುಂಬಗಳಿಗೆ ಹಕ್ಕುಪತ್ರ ವಿತರಿಸುವ ಭರವಸೆಯನ್ನು ತಹಶಿಲ್ದಾರ್ ಮಂಜುನಾಥ್ ಅವರು ಬಂಟ್ವಾಳ ಶಾಸಕರಿಗೆ ಭರವಸೆಯನ್ನು ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನಾ ನಿರತ ಕುಟುಂಬಗಳು ಇವರ ಮಾತಿಗೆ ಗೌರವ ನೀಡಿ…

Read More

ಸಹ್ಯಾದ್ರಿ ಕಾಲೇಜಿನಲ್ಲಿ ಎಐ-ರೊಬೊಟಿಕ್ಸ್ ಲ್ಯಾಬ್ ಹಾಗೂ ಸಮಗ್ರ ಕೈಗಾರಿಕಾ ಕಾರ್ಯಕ್ಷೇತ್ರ ಉದ್ಘಾಟನೆ

ಮಂಗಳೂರು: ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಆಂಡ್ ಮ್ಯಾನೇಜ್‌ಮೆಂಟ್‌ನಲ್ಲಿ ಎಂಫಸಿಸ್ ಫೌಂಡೇಶನ್ ಸಹಯೋಗದೊಂದಿಗೆ ಮೇ 22ರಂದು “ಎಂಫಸಿಸ್ ಎಐ ಮತ್ತು ರೊಬೊಟಿಕ್ಸ್ ಲ್ಯಾಬ್” ಹಾಗೂ ಮೇ 23ರಂದು “ಸಮಗ್ರ ಕೈಗಾರಿಕಾ ಕಾರ್ಯಕ್ಷೇತ್ರ” ಉದ್ಘಾಟನಾ ಕಾರ್ಯಕ್ರಮಗಳು ನಡೆಯಲಿವೆ ಎಂದು ಕಾಲೇಜಿನ ಪ್ರಾಂಶುಪಾಲ ಎಸ್‌.ಎಸ್‌. ಇಂಜನಗೇರಿ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮೇ 22ರಂದು ಬೆಳಗ್ಗೆ 10 ಗಂಟೆಗೆ ನಡೆಯುವ ಎಂಫಸಿಸ್ ಎಐ ಮತ್ತು ರೊಬೊಟಿಕ್ಸ್ ಲ್ಯಾಬ್ ಉದ್ಘಾಟನೆಯನ್ನು ಉನ್ನತ ಶಿಕ್ಷಣ ಸಚಿವ…

Read More

ಜಾಗತಿಕ ಶಾಂತಿಗಾಗಿ ಮೇ 23ರಂದು ಮಂಗಳೂರಿನಲ್ಲಿ ಮೌನ ಧರಣಿ

ಮಂಗಳೂರು: ಜಾಗತಿಕ ಯುದ್ಧ ಭೀತಿ, ಮಾನವೀಯ ಮೌಲ್ಯಗಳ ಕುಸಿತ ಹಾಗೂ ಪರಿಸರ ಹಾನಿಯ ವಿರುದ್ಧ ಜಾಗೃತಿ ಮೂಡಿಸುವ ಉದ್ದೇಶದಿಂದ ಮೇ 23ರಂದು ಮಂಗಳೂರಿನ ಹಂಪನಕಟ್ಟೆಯ ಕ್ಲಾಕ್ ಟವರ್ ಎದುರು ಮೌನ ಧರಣಿ ನಡೆಸಲಾಗುವುದು ನನ್ನ ಜೊತೆ ಒಂದು ಮಗು ಕೂಡ“ನಮಗೂ ಬದುಕಲು ಅವಕಾಶ ಕೊಡಿ” ಎಂಬ ಸಂದೇಶದೊಂದಿಗೆ ಧರಣಿಯಲ್ಲಿ ಭಾಗವಹಿಸಲಿದೆ ಆಸಕ್ತರು ಧರಣಿಯಲ್ಲಿ ಭಾಗಿಯಾಗಬಹುದೆಂದು ನಮ್ಮ ಭೂಮಿ ಕುಂದಾಪುರ ಸಂಸ್ಥೆಯ ಪ್ರಮುಖರಾದ ರಾಮಾಂಜಿ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಕಳೆದ…

Read More

ಮೇ 24ರಂದು ‘ಸಿನಿ ಗ್ಯಾಲಕ್ಸಿ ಕೋಸ್ಟಲ್ ಫಿಲಂ ಅವಾರ್ಡ್ಸ್ 2026’

ಮಂಗಳೂರು: ಕರಾವಳಿಯ ಚಿತ್ರರಂಗದಲ್ಲಿ ಸತತ ಐದನೇ ಬಾರಿಗೆ ಅತಿ ದೊಡ್ಡ ಸಿನಿಗಾಲಾ ಕಾರ್ಯಕ್ರಮವೆನಿಸಿಕೊಂಡಿರುವ ‘ಸ್ಯಾಂಡಿಸ್ ಕಂಪೆನಿ’ ಅರ್ಪಿಸುವ ‘ಸಿನಿ ಗ್ಯಾಲಕ್ಸಿ ಕೋಸ್ಟಲ್ ಫಿಲಂ ಅವಾರ್ಡ್ಸ್ 2026’ ಮೇ 24ರಂದು ಸಂಜೆ 3 ಗಂಟೆಗೆ ಮುಲ್ಕಿಯ ಕೊಲ್ನಾಡ್‌ನ ಸುಂದರರಾಮ ಶೆಟ್ಟಿ ಕನ್ವೆನ್ಷನ್ ಸೆಂಟರ್ ನಲ್ಲಿ ಅದ್ದೂರಿಯಾಗಿ ನಡೆಯಲಿದೆ ಎಂದು ಸ್ಯಾಂಡಿಸ್ ಕಂಪೆನಿಯ ಮಾಲಕರಾದ ಸಂದೇಶ್ ರಾಜ್ ಬಂಗೇರ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವರ್ಷದ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಚಿತ್ರರಂಗ ಹಾಗೂ ರಾಜಕೀಯ…

Read More

ಬಿಜೆಪಿ ಸರ್ಕಾರ ಕಟ್ಟಡ ನಿರ್ಮಿಸಿತು, ಕಾಂಗ್ರೆಸ್‌ಗೆ ರಿಬ್ಬನ್ ಕತ್ತರಿಸುವ ಭಾಗ್ಯ: ಶಾಸಕ ವೇದವ್ಯಾಸ ಕಾಮತ್ ವ್ಯಂಗ್ಯ

ಮಂಗಳೂರು: “ಅಭಿವೃದ್ಧಿ ಕಾಮಗಾರಿಗಳಿಗೆ ಮುತುವರ್ಜಿ ವಹಿಸಿ ಕೋಟಿ ಕೋಟಿ ರೂಪಾಯಿ ಅನುದಾನ ಮಂಜೂರು ಮಾಡಿದ್ದು ಬಿಜೆಪಿ ಸರ್ಕಾರ. ಇದೀಗ ನಿರ್ಮಾಣ ಪೂರ್ಣಗೊಂಡ ಕಟ್ಟಡಗಳಿಗೆ ರಿಬ್ಬನ್ ಕತ್ತರಿಸಿ ಉದ್ಘಾಟನೆ ಮಾಡುವ ಭಾಗ್ಯ ಮಾತ್ರ ಕಾಂಗ್ರೆಸ್ ಸರ್ಕಾರಕ್ಕೆ ಸಿಕ್ಕಿದೆ” ಎಂದು ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ರಾಜ್ಯ ಸರ್ಕಾರದ ವಿರುದ್ಧ ವ್ಯಂಗ್ಯವಾಡಿದರು. ನಗರದ ಅಟಲ್ ಸೇವಾ ಕೇಂದ್ರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕದ್ರಿಹಿಲ್ಸ್‌ನ ನೂತನ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆಜಿಟಿಟಿಐ)…

Read More

ಮಂಗಳೂರಿನಲ್ಲಿ ನಾಲ್ಕು ಭವ್ಯ ಸಭಾಭವನಗಳ ಮಹಾ ಲೋಕಾರ್ಪಣೆ ಮೇ 23ಕ್ಕೆ

ಮಂಗಳೂರು: ಕರಾವಳಿ ಇತಿಹಾಸದಲ್ಲೇ ಮೊದಲ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಪ್ರದೇಶಗಳಲ್ಲಿ ಏಕಕಾಲದಲ್ಲಿ ನಾಲ್ಕು ಅತ್ಯಾಧುನಿಕ ಮತ್ತು ಅದ್ದೂರಿ ಸಭಾಭವನಗಳನ್ನು ಲೋಕಾರ್ಪಣೆ ಮಾಡಲಾಗುತ್ತಿದೆ ಎಂದು ಮಾಜಿ ಸಚಿವ ಹಾಗೂ ವಿಕಾಸ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಕೃಷ್ಣ ಜೆ. ಪಾಲೆಮಾರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲ್ಯಾಂಡ್ ಲಿಂಕ್ಸ್ ಸಂಸ್ಥೆಯ 45 ವರ್ಷಗಳ ಯಶಸ್ವಿ ಪಯಣದ ಸವಿನೆನಪಾಗಿ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆಯಾಗಿ ನಾಲ್ಕು ಭವ್ಯ ಸಭಾಂಗಣಗಳನ್ನು ನಿರ್ಮಿಸಲಾಗಿದ್ದು, ಮೇ 23ರಂದು ಅವುಗಳನ್ನು ಸಾರ್ವಜನಿಕ ಬಳಕೆಗೆ ಸಮರ್ಪಿಸಲಾಗುವುದು…

Read More

ಮುಂಗಾರು ಎಂಟ್ರಿಗೆ ಕರಾವಳಿಯಲ್ಲಿ ಅಲರ್ಟ್-ಕೆತ್ತಿಕಲ್ ಮತ್ತೆ ಅಪಾಯ ವಲಯವಾಗಿ ಗುರುತು

ಮಂಗಳೂರು: ಕೇರಳಕ್ಕೆ ಮುಂಗಾರು ಆಗಮಿಸಿರುವ ಬೆನ್ನಲ್ಲೇ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದ ಮೂಲಕ ರಾಜ್ಯಕ್ಕೂ ಮುಂಗಾರು ಪ್ರವೇಶಿಸುವ ನಿರೀಕ್ಷೆ ಹೆಚ್ಚಾಗಿದೆ. ಜೂನ್ ಆರಂಭಕ್ಕೂ ಮುನ್ನವೇ ಈ ಬಾರಿ ಮುಂಗಾರು ಚುರುಕುಗೊಳ್ಳುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಜಿಲ್ಲೆಯ ವಿವಿಧ ಭಾಗಗಳಲ್ಲಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸುವ ಸಾಧ್ಯತೆ ಇರುವ ಪ್ರದೇಶಗಳಲ್ಲಿ ತಕ್ಷಣ ತಡೆಗಟ್ಟುವ ಕಾಮಗಾರಿಗಳನ್ನು ಕೈಗೊಳ್ಳಬೇಕೆಂದು ಸ್ಥಳೀಯ ನಿವಾಸಿಗಳು ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ. ಕಳೆದ ವರ್ಷಗಳ ಮಳೆ ಅವಾಂತರಗಳು ಮತ್ತು ಅನಾಹುತಗಳು ಈ ಬಾರಿಯೂ…

Read More

ಕೋಕ್ ಸಲ್ಪರ್ ಮಾಲಿನ್ಯ ವಿರುದ್ಧ ಜೋಕಟ್ಟೆ ಗ್ರಾಮಸ್ಥರ ಹೋರಾಟ ಮೂರನೇ ದಿನಕ್ಕೆ

ಮಂಗಳೂರು: ಎಂಆರ್‌ಪಿಎಲ್‌ನ ಕೋಕ್ ಸಲ್ಪರ್ ಘಟಕದಿಂದ ಉಂಟಾಗುತ್ತಿರುವ ಗಂಭೀರ ಮಾಲಿನ್ಯ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು, ಜನವಸತಿ ಪ್ರದೇಶದಲ್ಲಿ ಹಸಿರು ವಲಯ ನಿರ್ಮಾಣಕ್ಕಾಗಿ ಭೂಸ್ವಾಧೀನ ಪ್ರಕ್ರಿಯೆ ಹಾಗೂ ಸಂತ್ರಸ್ತರಿಗೆ ಪುನರ್ವಸತಿ ಕಾರ್ಯವನ್ನು ತಕ್ಷಣ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜೋಕಟ್ಟೆ, ಕೆಂಜಾರು ಮತ್ತು ಕಳವಾರು ಗ್ರಾಮದ ನಿವಾಸಿಗಳು ನಡೆಸುತ್ತಿರುವ ಹಗಲು-ರಾತ್ರಿ ಧರಣಿ ಮೂರನೇ ದಿನಕ್ಕೂ ಮುಂದುವರಿಯಿತು. ಎಂಆರ್‌ಪಿಎಲ್ ಕೋಕ್ ಸಲ್ಪರ್ ಘಟಕದ ಮುಂಭಾಗ ನಡೆಯುತ್ತಿರುವ ಧರಣಿಯಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್ ಭಾಗವಹಿಸಿ ಪ್ರತಿಭಟನಾಕಾರರಿಗೆ ಬೆಂಬಲ ಸೂಚಿಸಿದರು. ಈ…

Read More

ಕಡೇಶಿವಾಲಯ-ಅಜಿಲಮೊಗರು ಸೌಹಾರ್ದ ಸೇತುವೆ ಶೀಘ್ರ ಉದ್ಘಾಟನೆ: ರಮಾನಾಥ ರೈ

ಬಂಟ್ವಾಳ: ಕಡೇಶಿವಾಲಯದಿಂದ ಮಣಿನಾಲ್ಕೂರು ಗ್ರಾಮವನ್ನು ಸಂಪರ್ಕ ಮಾಡುವ “ಕಡೇಶಿವಾಲಯ- ಅಜಿಲಮೊಗರು” ಸೌಹಾರ್ದ ಸೇತುವೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಶೀಘ್ರವಾಗಿ ಉದ್ಘಾಟನೆಯಾಗಲಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ತಿಳಿಸಿದ್ದಾರೆ.ಇದರ ಪೂರ್ವಭಾವಿಯಾಗಿ ಸೇತುವೆಯ ಕಾಮಗಾರಿ ವೀಕ್ಷಿಸಲು ಸ್ಥಳಕ್ಕೆ ಭೇಟಿ ಈ ವಿಚಾರವಾಗಿ ಮಾತನಾಡಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಡೇಶಿವಾಲಯ ಮತ್ತು ಮಣಿನಾಲ್ಕೂರು ಗ್ರಾಮದ ಸಂಪರ್ಕದ ಕಡೇಶಿವಾಲಯ- ಅಜಿಲಮೊಗರು ಸೇತುವೆ ಬಗ್ಗೆ ಅನೇಕ ವರ್ಷಗಳ ಬೇಡಿಕೆಯಾಗಿತ್ತು. ಕಡೇಶಿವಾಲಯ ದೇವಸ್ಥಾನ ಹಾಗೂ ಅಜಿಲಮೊಗರು ಮಸೀದಿಯನ್ನು ಸಂಪರ್ಕ ಮಾಡುವ ಸೌಹಾರ್ದ ಸೇತುವೆ 20…

Read More
error: Content is protected !!