ಕಾಂಗ್ರೆಸ್ ಸರ್ಕಾರದ ಆರ್ಥಿಕ ನಿರ್ವಹಣೆಗೆ ಸಂಸದ ಬ್ರಿಜೇಶ್ ಚೌಟ ಟೀಕೆ: “ಕರ್ನಾಟಕ ಆದಾಯ ಮಿಗಿತ ರಾಜ್ಯದಿಂದ ಕೊರತೆ ರಾಜ್ಯವಾಗಿ ಮಾರ್ಪಟ್ಟಿದೆ”
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷದ ಸಾಧನಾ ಸಮಾವೇಶ ನಡೆಸುತ್ತಿರುವ ಹಿನ್ನೆಲೆ, ರಾಜ್ಯದ ಆರ್ಥಿಕ ಪರಿಸ್ಥಿತಿ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳ ಅನುಷ್ಠಾನದಲ್ಲಿ ಆಗುತ್ತಿರುವ ವಿಳಂಬದ ಕುರಿತು ಸಂಸದ ಕ್ಯಾ ಬ್ರಿಜೇಶ್ ಚೌಟ ತೀವ್ರ ಟೀಕೆ ವ್ಯಕ್ತಪಡಿಸಿದರು. ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸವರಾಜ ಬೊಮ್ಮಾಯಿ ಸರ್ಕಾರದ ಅವಧಿಯಲ್ಲಿ ಆದಾಯ ಮಿಗಿತ (Revenue Surplus) ಹೊಂದಿದ್ದ ಕರ್ನಾಟಕ ಇಂದು ಆದಾಯ ಕೊರತೆ (Revenue Deficit) ರಾಜ್ಯವಾಗಿ ಪರಿಣಮಿಸಿದೆ ಎಂದು…