ಮೇ 17ರಂದು ವಿಶಿಷ್ಟಚೇತನರ ಸಂಸ್ಥೆಯ 34ನೇ ವಾರ್ಷಿಕ ಮಹೋತ್ಸವ

ಮಂಗಳೂರು:ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ವಿಶಿಷ್ಟಚೇತನರ ಸಂಸ್ಥೆ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆಯ ಸಂಯುಕ್ತ ಆಶ್ರಯದಲ್ಲಿ ಸಂಸ್ಥೆಯ 34ನೇ ವರ್ಷದ ವಾರ್ಷಿಕ ಮಹೋತ್ಸವ ಸಮಾರಂಭ ಮೇ 17ರಂದು ಮಂಗಳೂರಿನ ರೆಡ್ ಕ್ರಾಸ್ ಸಭಾಭವನದಲ್ಲಿ ನಡೆಯಲಿದೆ. ಸಮಾಜದಲ್ಲಿ ಕಡೆಗಣನೆಗೆ ಒಳಗಾಗಿರುವ ಅಶಕ್ತ ಹಾಗೂ ದೈಹಿಕ ವಿಶೇಷಚೇತನರನ್ನು ಒಗ್ಗೂಡಿಸಿ, ಅವರ ಹಕ್ಕುಗಳ ರಕ್ಷಣೆ ಹಾಗೂ ಆರ್ಥಿಕ ಸಬಲೀಕರಣದ ಉದ್ದೇಶದಿಂದ ಸಂಸ್ಥೆಯನ್ನು 1992ರಲ್ಲಿ ಮಂಗಳೂರಿನಲ್ಲಿ ಸ್ಥಾಪಿಸಲಾಯಿತು. ಖ್ಯಾತ ಮೂಳೆರೋಗ ತಜ್ಞ ಡಾ. ಎಂ. ಶಾಂತರಾಮ ಶೆಟ್ಟಿ…

Read More

ಮೇ 17ರಿಂದ ಕದ್ರಿ ಉದ್ಯಾನವನದಲ್ಲಿ ರಾಜ್ಯ ಮಟ್ಟದ ಗೇರು ಮೇಳ …! ವೀಕ್ಷಣೆಗೆ ಬರುವ ಸಾರ್ವಜನಿಕರಿಗೆ ಉಚಿತ ಗೇರು ಗಿಡ ….. ?

ಮಂಗಳೂರು:ಕರ್ನಾಟಕ ಗೇರು ಅಭಿವೃದ್ಧಿ ನಿಗಮ ನಿಯಮಿತ ಹಾಗೂ ಕರ್ನಾಟಕ ಅರಣ್ಯ ಇಲಾಖೆ ಸಹಯೋಗದಲ್ಲಿ ‘ಕರ್ನಾಟಕ ಗೇರು ಮೇಳ ಮತ್ತು ಕಾರ್ಯಾಗಾರ-2026’ ಮೇ 17 ಮತ್ತು 18ರಂದು ನಗರದ ಕದ್ರಿ ಉದ್ಯಾನವನದಲ್ಲಿ ನಡೆಯಲಿದ್ದು ಮೇಳ ವೀಕ್ಷಣೆಗೆ ಬಂದ ಅಗತ್ಯ ಇರುವ ಸಾರ್ವಜನಿಕರಿಗೆ ಉಚಿತವಾಗಿ ಗೇರು ಗಿಡ ವಿತರಿಸಲಾಗುದೆಂದು ನಿಗಮದ ಅಧ್ಯಕ್ಷೆ ಮಮತಾ ಡಿ. ಗಟ್ಟಿ ತಿಳಿಸಿದರು. ತಮ್ಮ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 17ರಂದು ಬೆಳಿಗ್ಗೆ 11 ಗಂಟೆಗೆ ಸ್ಪೀಕರ್ ಯು.ಟಿ. ಖಾದರ್ ಗೇರು ಮೇಳವನ್ನು…

Read More

ಮೇ 17ರಿಂದ ವಿಶ್ವ ಕೊಂಕಣಿ ಸಮಾರೋಹ-2026

ವಿಶ್ವ ಕೊಂಕಣಿ ಕೇಂದ್ರ ವತಿಯಿಂದ ನಗರದ ಶಕ್ತಿನಗರದಲ್ಲಿರುವ ವಿಶ್ವ ಕೊಂಕಣಿ ಕೇಂದ್ರದಲ್ಲಿ ಮೇ 17 ಮತ್ತು 18ರಂದು ಎರಡು ದಿನಗಳ ‘ವಿಶ್ವ ಕೊಂಕಣಿ ಸಮಾರೋಹ-2026’ ಆಯೋಜಿಸಲಾಗಿದೆ ಎಂದು ಕೇಂದ್ರದ ಅಧ್ಯಕ್ಷ ಸಿ.ಎ. ನಂದಗೋಪಾಲ ಶೆಣೈ ತಿಳಿಸಿದ್ದಾರೆ. ನಗರದ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 17ರಂದು ಬೆಳಿಗ್ಗೆ ನವದೆಹಲಿಯ ಕೇಂದ್ರ ಸಾಹಿತ್ಯ ಅಕಾಡೆಮಿ ನೇತೃತ್ವದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಗೋವಾದ ಕಲೆ ಮತ್ತು ಸಂಸ್ಕೃತಿ ಪೋಷಕಿ ಹಾಗೂ ಶಿಕ್ಷಣ ತಜ್ಞೆ ಸುಲಕ್ಷಣಾ ಸಾವಂತ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ…

Read More

ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ನಾಲ್ಕು ಮಂದಿ ಕಾರ್ಮೆಲೈಟ್ ಗುರುಗಳಿಗೆ ಪವಿತ್ರ ಗುರುದೀಕ್ಷೆ

ಮಂಗಳೂರಿನ ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ 2026ರ ಮೇ 14ರಂದು ನಡೆದ ಭವ್ಯ ಸಮಾರಂಭದಲ್ಲಿ ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಅತೀ ವಂದನೀಯ ಡಾ. ಪೀಟರ್ ಪೌಲ್ ಸಲ್ಡಾನ್ಹಾ ಅವರು ನಾಲ್ವರು ಡಿಸ್ಕಾಲ್ಡ್ ಕಾರ್ಮೆಲೈಟ್ ಡೀಕನ್‌ಗಳಾದ ವಂ. ಆಲ್ವಿನ್ ಡಿಸೋಜಾ, ವಂ. ಲೋಯ್ ಜಾಕ್ಸನ್ ಕ್ರಾಸ್ತಾ, ವಂ. ಎಲ್ಸ್ಟನ್ ಮೊಂತೇರೊ ಮತ್ತು ವಂ.ಹಿಲರಿ ರೊಡ್ರಿಗಸ್ ಅವರಿಗೆ ಪವಿತ್ರ ಗುರುದೀಕ್ಷೆ ನೀಡಿದರು. ಈ ಸಂದರ್ಭದಲ್ಲಿ ಪ್ರವಚನ ನೀಡಿದ ಬಿಷಪ್ ಅವರು, ಗುರುತ್ವವು ಮಾನವಕುಲದ ರಕ್ಷಣೆಗಾಗಿ ತನ್ನನ್ನೇ ಅರ್ಪಿಸಿಕೊಂಡ ದೇವಕುರಿ ಯೇಸುಕ್ರಿಸ್ತರನ್ನು…

Read More

‘ಚುನ್ಯಾಚೊ ಫೊಂಡ್’ ಕೊಂಕಣಿ ಕವನ ಸಂಕಲನ ಬಿಡುಗಡೆ

ಮಂಗಳೂರು:ಖ್ಯಾತ ಪತ್ರಕರ್ತ ಹಾಗೂ ಸಾಹಿತಿ ರೇಮಂಡ್ ಡಿಕುನ್ಹಾ ತಾಕೊಡೆ ಅವರು ರಚಿಸಿರುವ ಕನ್ನಡ ಮತ್ತು ದೇವನಾಗರಿ ಲಿಪಿಯಲ್ಲಿನ ಕೊಂಕಣಿ ಕವನ ಸಂಕಲನ ‘ಚುನ್ಯಾಚೊ ಫೊಂಡ್’ ’ ಕೃತಿಯ ಬಿಡುಗಡೆ ಸಮಾರಂಭವು ಮಂಗಳೂರಿನ ನಗರದ ಪತ್ರಿಕಾಭವನದಲ್ಲಿ ನಡೆಯಿತು. ಕೃತಿಯನ್ನು ‘ಮೈಕಲ್ ಡಿಸೋಜಾ ವಿಷನ್ ಕೊಂಕಣಿ’ ಸಂಸ್ಥೆಯ ಸಂಸ್ಥಾಪಕ, ಅನಿವಾಸಿ ಭಾರತೀಯ ಉದ್ಯಮಿ ಹಾಗೂ ಸಮಾಜಸೇವಕರಾದ ಮೈಕಲ್ ಡಿಸೋಜಾ ಬಿಡುಗಡೆಗೊಳಿಸಿದರು. ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದ ಮೈಕಲ್ ಡಿಸೋಜಾ, ‘ಮೈಕಲ್ ಡಿಸೋಜಾ ವಿಷನ್ ಕೊಂಕಣಿ’ ಸಂಸ್ಥೆಯ ಮೂಲಕ ಮಾತೃಭಾಷೆಯಲ್ಲಿ ಕೃತಿ ಪ್ರಕಟಿಸುವ…

Read More

ಕಾಂಗ್ರೆಸ್ ನಿಂದ ಶೈಕ್ಷಣಿಕ ಕ್ಷೇತ್ರದಲ್ಲೂ ಒಡೆದು ಆಳುವ ನೀತಿ :- ಶಾಸಕ ಕಾಮತ್

ಶೈಕ್ಷಣಿಕ ಕೇಂದ್ರಗಳಲ್ಲಿ ಸಮಾನತೆ ಹಾಗೂ ಮಕ್ಕಳಲ್ಲಿ ಏಕತೆ ತರುವ ಉದ್ದೇಶದಿಂದ ಹಿಂದಿನ ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ಶಿಸ್ತುಬದ್ಧ ಸಮವಸ್ತ್ರ ನಿಯಮವನ್ನು ರಾಜ್ಯ ಕಾಂಗ್ರೆಸ್ ಸರ್ಕಾರವು ಹಿಂಪಡೆಯುವ ಮೂಲಕ ಶಾಲಾ-ಕಾಲೇಜುಗಳ ಶೈಕ್ಷಣಿಕ ವಾತಾವರಣವನ್ನು ಹಾಳುಗೆಡವಲು ಮುಂದಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ಆಕ್ರೋಶ ವ್ಯಕ್ತಪಡಿಸಿದರು. ಸಮವಸ್ತ್ರದ ಮೂಲ ಉದ್ದೇಶವೇ ವಿದ್ಯಾರ್ಥಿಗಳಲ್ಲಿ ಜಾತಿ-ಮತ-ಭೇದ ಮರೆಸಿ ಸಮಾನತೆಯ ಭಾವ ಮೂಡಿಸುವುದು. ಆದರೆ ಓಲೈಕೆ ರಾಜಕಾರಣಕ್ಕಾಗಿ ರಾಜ್ಯ ಸರ್ಕಾರವೇ, ಧರ್ಮದ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ವಿಭಜಿಸುತ್ತಿರುವುದು ಎಷ್ಟು ಸರಿ? ಈ ಹಿಂದೆ…

Read More

ಬನ್ನಡ್ಕ ಸರಣಿ ಅಪಘಾತಗಳಿಗೆ ಕಿಡಿಕಾರಿದ ಬಿಜೆಪಿ ಕಾರ್ಯಕರ್ತರು: ಸಂಸದ ಬ್ರಿಜೇಶ್ ಚೌಟ ವಿರುದ್ಧ ಆಕ್ರೋಶ

ಮಂಗಳೂರು :ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ವಿರುದ್ಧ ಕಾರ್ಯಕರ್ತರು ಗರಂ ಆದ ಘಟನೆ ನಡೆದಿದೆ.ಇದು‘ಇಂಥವರು ನಮ್ಮ ಜನಪ್ರತಿನಿಧಿಯಾಗಿದ್ದು ನಮ್ಮ ದುರಂತ ‘ ಎಂದು ಹೇಳುವಲ್ಲಿಗೆ ತಲುಪಿದೆ. ಬಿಜೆಪಿ ಮಂಡಲ ಉಪಾಧ್ಯಕ್ಷರೇ ಸಂಸದರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಸೋಶಿಯಲ್ ಮೀಡಿಯಾದಲ್ಲಿ ಅಸಮಾಧಾನದ ಪೋಸ್ಟ್ ಹರಿದಾಡತೊಡಗಿದೆ.ರಸ್ತೆ ಸಮಸ್ಯೆಗೆ ಪರಿಹಾರ ಕೇಳಲು ಹೋದ ಬಿಜೆಪಿ ಮುಖಂಡರಿಗೆ ಅಧಿಕಾರಿಗಳ ಎದುರು ಅವಮಾನ ಮಾಡಲಾಗಿದೆ ಎಂದು ಆರೋಪಿಸಲಾಗುತ್ತಿದೆ.ಇದು ಸಾಮಾಜಿಕ ಜಾಲತಾಣಗಳಲ್ಲಿ ಸಂಸದ ಬ್ರಿಜೇಶ್ ಚೌಟ ವಿರುದ್ಧ ಆಕ್ರೋಶದ ಕಿಚ್ಚು ಹರಡಲು ಪ್ರೇರಣೆ ನೀಡುತ್ತಿದೆ. ಮೂಲ್ಕಿ…

Read More

ಮಳೆಗೆ ಜೀವಂತಗೊಂಡ ನೇತ್ರಾವತಿ; ಎ.ಎಂ.ಆರ್ ಡ್ಯಾಂನಿಂದ ನೀರು ಬಿಡುಗಡೆ ಹಿನ್ನೆಲೆ ನದಿ ಭರ್ತಿ

ಬಂಟ್ವಾಳ: ಉರಿ ಬಿಸಿಲಿನ ತಾಪಕ್ಕೆ ಬತ್ತಿ ಹೋಗಿ ಕಲ್ಲು ಬಂಡೆಗಳು ಕಾಣಿಸುತ್ತಿದ್ದ ನೇತ್ರಾವತಿ ನದಿ ಇದೀಗ ಮತ್ತೆ ಜಲಾವೃತಗೊಂಡು ತುಂಬಿ ಹರಿಯುತ್ತಿರುವ ದೃಶ್ಯ ಜನರಲ್ಲಿ ನಿರಾಳತೆ ಮೂಡಿಸಿದೆ. ಕೆಲವು ವಾರಗಳ ಹಿಂದೆ ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ತೀವ್ರ ಕುಸಿತ ಕಂಡಿದ್ದು, ಒಳಹರಿವು ಕೂಡ ಕ್ಷೀಣವಾಗಿತ್ತು. ಇದರ ಪರಿಣಾಮ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಜನರಿಗೆ ಕುಡಿಯುವ ನೀರಿನ ಅಭಾವ ಎದುರಾಗುವ ಭೀತಿ ಉಂಟಾಗಿತ್ತು. ಆದರೆ ಕಳೆದ ಮೂರು–ನಾಲ್ಕು ದಿನಗಳಿಂದ ಘಟ್ಟ ಪ್ರದೇಶ ಹಾಗೂ ತಾಲೂಕಿನ ವಿವಿಧ…

Read More

ಮಂಗಳೂರು ವಿವಿಯಲ್ಲಿ ‘ಸಂಭ್ರಮ-2026’ ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ ಆಶ್ರಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ‘ಸಂಭ್ರಮ-2026’ ಸಾಂಸ್ಕೃತಿಕ ಸ್ಪರ್ಧೆಗೆ ಮಂಗಳವಾರ ಮಂಗಳ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಸಿನಿಮಾ ಹಾಗೂ ನಾಟಕ ಕಲಾವಿದ ಸತೀಶ್ ಬಂದಲೆ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವ ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳಾಗಿರುವುದು ಹೆಮ್ಮೆಯ ಸಂಗತಿ. ಸಾಂಸ್ಕೃತಿಕ ಕಾರ್ಯಕ್ರಮಗಳು ವ್ಯಕ್ತಿತ್ವ ವಿಕಸನಕ್ಕೆ ಹಾಗೂ ಜೀವನದ ಬೆಳವಣಿಗೆಗೆ ಪೂರಕವಾಗುತ್ತವೆ ಎಂದು ಹೇಳಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮಂಗಳೂರು ವಿವಿ ಕುಲಪತಿ…

Read More

ಸಿಟಿ ಸೆಂಟರ್‌ನಲ್ಲಿ ಮೂರು ದಿನಗಳ ಐತಿಹಾಸಿಕ ವಸ್ತು ಪ್ರದರ್ಶನ

ಮಂಗಳೂರು : ಸಿಟಿ ಸೆಂಟರ್ ಪ್ರಸ್ತುತಪಡಿಸುವ ದಕ್ಷಿಣ ಕನ್ನಡ ಜಿಲ್ಲಾ ಫಿಲಾಟೆಲಿಕ್ಸ್ ಮತ್ತು ನುಮಿಸ್ಮ್ಯಾಟಿಕ್ಸ್ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ಮೂರು ದಿನಗಳ ಅಪರೂಪದ “ವಿಂಟೇಜ್ ವೈಬ್ಸ್” ವಸ್ತು ಪ್ರದರ್ಶನವು ಮೇ 15ರಿಂದ 17ರವರೆಗೆ ಮಂಗಳೂರಿನ ಸಿಟಿ ಸೆಂಟರ್ ಮಾಲ್ ನ ನೆಲ ಅಂತಸ್ತಿನಲ್ಲಿ ನಡೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಫಿಲಾಟೆಲಿಕ್ಸ್ ಮತ್ತು ನುಮಿಸ್ಮ್ಯಾಟಿಕ್ಸ್ ಅಸೋಸಿಯೇಶನ್ ಅಧ್ಯಕ್ಷ ಪ್ರಭಾಕರ್ ಕಾಮತ್ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರದರ್ಶನವು ಪ್ರತಿದಿನ ಬೆಳಿಗ್ಗೆ 11 ಗಂಟೆಯಿಂದ ರಾತ್ರಿ…

Read More
error: Content is protected !!